ಶ್ರೀರಂಗಪಟ್ಟಣ: ಸಾರ್ವಜನಿಕ ಸಶ್ಮಾನಕ್ಕೆ ಹೋಗುವ ರಸ್ತೆಗೆ ರೈತನೋರ್ವ ಬೇಲಿ ಹಾಕಿದ್ದಕ್ಕೆ ಮೃತ ವ್ಯಕ್ತಿಯನ್ನು ರಸ್ತೆ ಮಧ್ಯೆಯಲ್ಲಿ ಅಂತ್ಯಕ್ರಿಯೆ ನಡೆದಿತ್ತು. ಈ ಘಟನೆ ಮಾಧ್ಯಮಗಳಲ್ಲಿ ವರದಿಯಾದ ಬೆನ್ನಲ್ಲೇ ಎಚ್ಚೆತ್ತುಕೊಂಡ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ತಾಲ್ಲೂಕಿನ ಹೆಬ್ಬಾಡಿಹುಂಡಿ ಗ್ರಾಮದ ಸ್ಮಶಾನ ರಸ್ತೆಗೆ ಅಡ್ಡಲಾಗಿ ರೈತನೋರ್ವ ತಂತಿ ಬೇಲಿ ಹಾಕಿಕೊಂಡಿದ್ದಕ್ಕೆ ಆಕ್ರೋಶಗೊಂಡ ಗ್ರಾಮಸ್ಥರು, ಸೋಮವಾರ ರಸ್ತೆ ಮಧ್ಯೆ ಮೃತ ಸತೀಶ್ ಎಂಬಾತನ ಅಂತ್ಯಕ್ರಿಯೆ ನೆರವೇರಿಸಿದ್ದರು.
ಈ ಘಟನೆಗೆ ಸಂಬಂಧಿಸಿದಂತೆ ಮಾಧ್ಯಮಗಳಲ್ಲಿ ವರದಿಯಾದ ಬೆನ್ನಲ್ಲೆ ಎಚ್ಚೆತ್ತ ತಾಲ್ಲೂಕು ಆಡಳಿತಾಧಿಕಾರಿ ಪರಶುರಾಮ್ ಸತ್ತಿ ಗೇರಿ ನೇತೃತ್ವದಲ್ಲಿ ಅಧಿಕಾರಿಗಳ ತಂಡ ಗ್ರಾಮಕ್ಕೆ ಭೇಟಿ ನೀಡಿ ರಸ್ತೆಗೆ ಬೇಲಿ ಹಾಕಿದ್ದ ರೈತ ಹಾಗು ಪಕ್ಕದ ರೈತ ನಿಂದ ತಲಾ 10-10 ಅಡಿ ಜಾಗವನ್ನು ಸ್ಮಶಾನದ ರಸ್ತೆಗೆ ಬಿಡಿಸಿ ಸಮಸ್ಯೆ ಬಗೆ ಹರಿಸಿದ್ದಾರೆ.
ಹುಣಸೂರು: ಕೂಲಿ ಕಾರ್ಮಿಕನ ಮೇಲೆ ಚಿರತೆ ದಾಳಿ ನಡೆಸಿ ತೀವ್ರವಾಗಿ ಗಾಯಗೊಳಿಸಿರುವ ಘಟನೆ ತಾಲ್ಲೂಕಿನ ಹನಗೋಡು ಹೋಬಳಿಯ ಕಣಗಾಲು ಗ್ರಾಮದ…
ಸರಗೂರು ತಾಲ್ಲೂಕಿನ ಕಾಳಿಹುಂಡಿ ಗ್ರಾಮದ ರಸ್ತೆ ಡಾಂಬರು ಕಾಣದೆ ಹಲವು ವರ್ಷಗಳೇ ಆಗಿವೆ. ಈ ರಸ್ತೆಯು ಹಳ್ಳಕೊಳ್ಳಗಳಿಂದ ಕೂಡಿದೆ. ಈ…
ಬೇಸಿಗೆ ಶುರುವಾಗಿರುವ ಹಿನ್ನೆಲೆಯಲ್ಲಿ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಸುಮಾರು ೩೪ ಸೆಲ್ಸಿಯಸ್ಗೂ ಹೆಚ್ಚು ಪ್ರಮಾಣದಲ್ಲಿ ಬಿಸಿಲಿನ ತಾಪ ಮಾನ ಏರಿಕೆಯಾಗಿರುವ…
ಮಂಜು ಕೋಟೆ ಕೋಟೆ: ರಾಜೇಂದ್ರ, ಸಿ.ವಿ.ನಾಗರಾಜು, ಯೋಗಾನರಸಿಂಹೇಗೌಡ, ಗುಂಡತ್ತೂರು ಪ್ರಕಾಶ್ ಪ್ರಬಲ ಆಕಾಂಕ್ಷಿಗಳು ಎಚ್.ಡಿ.ಕೋಟೆ: ಜಾ.ದಳ ತಾಲ್ಲೂಕು ಅಧ್ಯಕ್ಷರನ್ನು ನೇಮಕ…
ಪುರಸಭೆಯಿಂದ ಹಲವು ಕಡೆಗಳಲ್ಲಿ ಸಿಸಿಟಿವಿ ಅಳವಡಿಕೆ; ಸ್ವಚ್ಛ ಪಟ್ಟಣಕ್ಕೆ ಸಹಕರಿಸಲು ಮನವಿ ಗುಂಡ್ಲುಪೇಟೆ: ಪಟ್ಟಣದ ಕೆಲವೆಡೆ ಕಸ ಸುರಿಯದಂತೆ ಎಚ್ಚರಿಕೆ…
ಕೆ.ಬಿ.ರಮೇಶನಾಯಕ ಮೈಸೂರು: ಮಧ್ಯಪ್ರಾಚ್ಯ ದೇಶಗಳಲ್ಲಿ ನಡೆಯುತ್ತಿರುವ ಯುದ್ಧದಿಂದಾಗಿ ಭಾರತದ ಮೇಲೆ ದಿನದಿಂದ ದಿನಕ್ಕೆ ಅನಿಲ ಬಿಕ್ಕಟ್ಟು ಬಿಗಡಾಯಿಸುತ್ತಿದ್ದು, ವಾಣಿಜ್ಯ ಬಳಕೆಯ…