ಮೈಸೂರು

ಮುಖ್ಯಮಂತ್ರಿ ವಿರುದ್ಧ ಚಾರ್ಜ್‌ಶೀಟ್‌ ಹಾಕುವ ಎದೆಗಾರಿಕೆ ಲೋಕಾಯುಕ್ತಕ್ಕೆ ಇಲ್ಲ: ಶ್ರೀವತ್ಸ

ಮೈಸೂರು: ಲೋಕಾಯುಕ್ತ ಅಧಿಕಾರಿಗಳು ಎಷ್ಟೇ ಸಮರ್ಥರಿದ್ದರು, ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯದ ಮುಖ್ಯಮಂತ್ರಿಯನ್ನು ಎದುರಿಸಿಕೊಂಡು ಪ್ರಶ್ನಿಸಿ ಅವರ ವಿರುದ್ಧವೇ ಚಾರ್ಜ್‌ ಶೀಟ್‌ ಹಾಕುವಷ್ಟು ಎದೆಗಾರಿಕೆ ಲೋಕಾಯುಕ್ತಕ್ಕೆ ಇದೆ ಎಂಬಂತೆ ಅನ್ನಿಸಿಲ್ಲ ಎಂದು ಶಾಸಕ ಟಿ.ಎಸ್‌.ಶ್ರೀವತ್ಸ ತಿಳಿಸಿದ್ದಾರೆ.

ಮೈಸೂರಿನಲ್ಲಿ ಇಂದು(ಜನವರಿ.24) ಮುಡಾ ಪ್ರಕರಣದ ಬಗ್ಗೆ ಲೋಕಾಯುಕ್ತ ಅಧಿಕಾರಿಗಳು ವರದಿ ಸಲ್ಲಿಸುವ ಬಗ್ಗೆ ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ಈ ಹಗರಣದಲ್ಲಿ ಮುಖ್ಯಮುಂತ್ರಿಗಳ ಮೇಲೆ ದೋಷಾರೋಪ ಮಾಡಿ ಚಾರ್ಜ್‌ ಶೀಟ್‌ ಅನ್ನು ಲೋಕಾಯುಕ್ತದವರು ಹಾಕುತ್ತಾರೆಂದು ಅನ್ನಿಸಿರಲಿಲ್ಲ. ಈ ಹಿನ್ನೆಲೆಯಲ್ಲಿ ಸರ್ಕಾರದ ಅಧೀನ ಸಂಸ್ಥೆಯನ್ನು ಬಿಟ್ಟು, ಸಿಬಿಐ ತನಿಖೆಗೆ ಮುಡಾ ಹಗರಣವನ್ನು ವಹಿಸಬೇಕೆಂದು ಒತ್ತಾಯಿಸಿದ್ದೇವು ಎಂದರು.

ಲೋಕಾಯುಕ್ತ ಅಧಿಕಾರಿಗಳು ಅಪ್ಪಿತಪ್ಪಿ ಈ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಅವರಿಗೆ ಬಿ ರಿಪೋರ್ಟ್‌ ನೀಡಿದ್ದರೆ, ಮೈಸೂರು ಲೋಕಾಯುಕ್ತ ಸಂಸ್ಥೆಯ ಮೇಲೆ ಗೌರವ ಉಳಿಯುವುದಿಲ್ಲ. ಅಲ್ಲದೇ ಈ ವಿಚಾರದಲ್ಲಿ ನ್ಯಾಯಮೂರ್ತಿಗಳೇ ಕೆಲವು ಫೈಡಿಂಗ್‌ ಮಾಡಿಕೊಂಡಿರುವುದರಿಂದ ಅದನ್ನು ಕೋರ್ಟ್‌ನಲ್ಲಿ ನ್ಯಾಯಾಧೀಶರು ನೋಡಿಕೊಳ್ಳುತ್ತಾರೆ. ಜೊತೆಗೆ ಲೋಕಾಯುಕ್ತ ಸಂಸ್ಥೆಯ ಮೇಲೆ ಸಾರ್ವಜನಿಕರು ನಂಬಿಕೆ ಕಳೆದುಕೊಳ್ಳುತ್ತಾರೆ. ಹೀಗಾಗಿ ಲೋಕಾಯುಕ್ತ ಅಧಿಕಾರಿಗಳು ನ್ಯಾಯಯುತವಾಗಿ ತನಿಖೆ ನಡೆಸಿ ವರದಿ ಸಲ್ಲಿಸುತ್ತಾರೆಂಬ ವಿಶ್ವಾಸವಿದೆ ಎಂದು ಹೇಳಿದರು.

ಅರ್ಚನ ಎಸ್‌ ಎಸ್

Recent Posts

ರಸ್ತೆ ಕಾಮಗಾರಿ ಪರಿಶೀಲನೆ ನಡೆಸಿದ ಶಾಸಕ ಎಂ.ಆರ್.ಮಂಜುನಾಥ್‌

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು  ಹನೂರು: ಪಟ್ಟಣದಿಂದ ಬಂಡಳ್ಳಿ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ಕಾಮಗಾರಿ ಪ್ರಗತಿಯಲ್ಲಿರುವುದರಿಂದ…

10 seconds ago

ಪ್ರಧಾನಿ ನರೇಂದ್ರ ಮೋದಿ ಮತ್ತೊಂದು ದಾಖಲೆ: ಏನದು ಗೊತ್ತಾ?

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಭಾರತದಲ್ಲಿ ಅತಿ ಹೆಚ್ಚು ಕಾಲ ಸರ್ಕಾರದ ಮುಖ್ಯಸ್ಥರಾದ ದಾಖಲೆ ಬರೆದಿದ್ದಾರೆ. ಈ ಮೂಲಕ ಸಿಕ್ಕಿಂನ…

2 hours ago

ಏಪ್ರಿಲ್.‌1ರಂದು ಸಿದ್ದಗಂಗಾ ಮಠಕ್ಕೆ ರಾಷ್ಟ್ರಪತಿ ದ್ರೌಪತಿ ಮುರ್ಮು ಭೇಟಿ

ತುಮಕೂರು: ಏಪ್ರಿಲ್.‌1ರಂದು ತುಮಕೂರಿನ ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಭೇಟಿ ನೀಡಲಿದ್ದಾರೆ. ರಾಷ್ಟ್ರಪತಿ ದ್ರೌಪತಿ ಮುರ್ಮು ಅವರು…

2 hours ago

ರಂಗೇರಿದ ಉಪಚುನಾವಣೆ ಕಣ: ಸಮರ್ಥ್‌ ಮಲ್ಲಿಕಾರ್ಜುನ್‌, ಉಮೇಶ್‌ ಮೇಟಿಗೆ ಕಾಂಗ್ರೆಸ್‌ ಟಿಕೆಟ್‌

ಬೆಂಗಳೂರು: ಏಪ್ರಿಲ್‌.9ರಂದು ನಡೆಯಲಿರುವ ದಾವಣಗೆರೆ ಹಾಗೂ ಬಾಗಲಕೋಟೆ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ಕಾಂಗ್ರೆಸ್‌ ಅಭ್ಯರ್ಥಿಗಳ ಹೆಸರನ್ನು ಘೋಷಣೆ ಮಾಡಲಾಗಿದೆ. ಬಾಗಲಕೋಟೆ…

2 hours ago

ಅಮೇರಿಕಾದ ಅಕ್ಕ ವಿಶ್ವ ಕನ್ನಡ ಸಮ್ಮೇಳನ ರಾಯಭಾರಿಯಾಗಿ ನಟ ರಿಷಬ್‌ ಶೆಟ್ಟಿ ಆಯ್ಕೆ

ಬೆಂಗಳೂರು: ಅಮೇರಿಕಾದಲ್ಲಿರುವ ಕನ್ನಡಿಗರ ಅತಿ ದೊಡ್ಡ ಸಾಂಸ್ಕೃತಿಕ ಸಂಭ್ರಮವಾಗಿರುವ ಅಕ್ಕ ವಿಶ್ವ ಕನ್ನಡ ಸಮ್ಮೇಳನ ರಾಯಭಾರಿಯಾಗಿ ನಟ ರಿಷಬ್‌ ಶೆಟ್ಟಿ…

3 hours ago

ಹಾರ್ಮುಜ್‌ ಜಲಸಂಧಿ ಸಂಪೂರ್ಣ ಓಪನ್‌ ಮಾಡಿ: ಇರಾನ್‌ಗೆ 48 ಗಂಟೆಗಳ ಗಡುವು ನೀಡಿದ ಟೊನಾಲ್ಡ್‌ ಟ್ರಂಪ್‌

ವಾಷಿಂಗ್ಟನ್:‌ ಹಾರ್ಮುಜ್‌ ಜಲಸಂಧಿಯನ್ನು 48 ಗಂಟೆಯೊಳಗೆ ಸಂಪೂರ್ಣ ಓಪನ್‌ ಮಾಡಬೇಕು ಎಂದು ಇರಾನ್‌ಗೆ ಅಮೇರಿಕಾ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಗಡುವು…

3 hours ago