ಮೈಸೂರು: ಲೋಕಾಯುಕ್ತ ಅಧಿಕಾರಿಗಳು ಎಷ್ಟೇ ಸಮರ್ಥರಿದ್ದರು, ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯದ ಮುಖ್ಯಮಂತ್ರಿಯನ್ನು ಎದುರಿಸಿಕೊಂಡು ಪ್ರಶ್ನಿಸಿ ಅವರ ವಿರುದ್ಧವೇ ಚಾರ್ಜ್ ಶೀಟ್ ಹಾಕುವಷ್ಟು ಎದೆಗಾರಿಕೆ ಲೋಕಾಯುಕ್ತಕ್ಕೆ ಇದೆ ಎಂಬಂತೆ ಅನ್ನಿಸಿಲ್ಲ ಎಂದು ಶಾಸಕ ಟಿ.ಎಸ್.ಶ್ರೀವತ್ಸ ತಿಳಿಸಿದ್ದಾರೆ.
ಮೈಸೂರಿನಲ್ಲಿ ಇಂದು(ಜನವರಿ.24) ಮುಡಾ ಪ್ರಕರಣದ ಬಗ್ಗೆ ಲೋಕಾಯುಕ್ತ ಅಧಿಕಾರಿಗಳು ವರದಿ ಸಲ್ಲಿಸುವ ಬಗ್ಗೆ ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ಈ ಹಗರಣದಲ್ಲಿ ಮುಖ್ಯಮುಂತ್ರಿಗಳ ಮೇಲೆ ದೋಷಾರೋಪ ಮಾಡಿ ಚಾರ್ಜ್ ಶೀಟ್ ಅನ್ನು ಲೋಕಾಯುಕ್ತದವರು ಹಾಕುತ್ತಾರೆಂದು ಅನ್ನಿಸಿರಲಿಲ್ಲ. ಈ ಹಿನ್ನೆಲೆಯಲ್ಲಿ ಸರ್ಕಾರದ ಅಧೀನ ಸಂಸ್ಥೆಯನ್ನು ಬಿಟ್ಟು, ಸಿಬಿಐ ತನಿಖೆಗೆ ಮುಡಾ ಹಗರಣವನ್ನು ವಹಿಸಬೇಕೆಂದು ಒತ್ತಾಯಿಸಿದ್ದೇವು ಎಂದರು.
ಲೋಕಾಯುಕ್ತ ಅಧಿಕಾರಿಗಳು ಅಪ್ಪಿತಪ್ಪಿ ಈ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಅವರಿಗೆ ಬಿ ರಿಪೋರ್ಟ್ ನೀಡಿದ್ದರೆ, ಮೈಸೂರು ಲೋಕಾಯುಕ್ತ ಸಂಸ್ಥೆಯ ಮೇಲೆ ಗೌರವ ಉಳಿಯುವುದಿಲ್ಲ. ಅಲ್ಲದೇ ಈ ವಿಚಾರದಲ್ಲಿ ನ್ಯಾಯಮೂರ್ತಿಗಳೇ ಕೆಲವು ಫೈಡಿಂಗ್ ಮಾಡಿಕೊಂಡಿರುವುದರಿಂದ ಅದನ್ನು ಕೋರ್ಟ್ನಲ್ಲಿ ನ್ಯಾಯಾಧೀಶರು ನೋಡಿಕೊಳ್ಳುತ್ತಾರೆ. ಜೊತೆಗೆ ಲೋಕಾಯುಕ್ತ ಸಂಸ್ಥೆಯ ಮೇಲೆ ಸಾರ್ವಜನಿಕರು ನಂಬಿಕೆ ಕಳೆದುಕೊಳ್ಳುತ್ತಾರೆ. ಹೀಗಾಗಿ ಲೋಕಾಯುಕ್ತ ಅಧಿಕಾರಿಗಳು ನ್ಯಾಯಯುತವಾಗಿ ತನಿಖೆ ನಡೆಸಿ ವರದಿ ಸಲ್ಲಿಸುತ್ತಾರೆಂಬ ವಿಶ್ವಾಸವಿದೆ ಎಂದು ಹೇಳಿದರು.
ಕೊಡಗು: ಸಾರ್ವಜನಿಕರಿಗೆ ಉಪಟಳ ನೀಡುತ್ತಿರುವ ಮೂರು ಗಂಡಾನೆಗಳನ್ನು ಸೆರೆ ಹಿಡಿಯಲು ಅರಣ್ಯ ಇಲಾಖೆ ಆದೇಶ ನೀಡಿದೆ. ಇಂದು ಬೆಳಿಗ್ಗೆ 10…
ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ನಡೆದ ಹನೂರು ಎನ್ಕೌಂಟರ್ ಬಗ್ಗೆ ಮೊದಲ ಬಾರಿಗೆ ಕಾವೇರಿ ವನ್ಯಧಾಮದ ACF ಮರಿಸ್ವಾಮಿ ಮಾಧ್ಯಮಗಳಿಗೆ ಪ್ರತಿಕ್ರಿಯೆ…
ದೇಶದ ಬಹುತೇಕ ರೈಲು ನಿಲ್ದಾಣದ ಫ್ಲಾಟ್ ಫಾರ್ಮ್ಗಳಲ್ಲಿ ಸಾರ್ವಜನಿಕರು ಕುಡಿಯುವ ವಾಟರ್ ಕೂಲರ್ಗಳಲ್ಲಿ, ಇ-ಕೊಲಿ ಬ್ಯಾಕ್ಟೀರಿಯಾ ಪತ್ತೆಯಾಗಿದೆ ಎಂದು ಕಂಟ್ರೋಲರ್…
ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಉನ್ನತ ಹುದ್ದೆಗಳಿಗೆ ತಜ್ಞರನ್ನು ಬಿಟ್ಟು ರಾಜಕೀಯ ವ್ಯಕ್ತಿಗಳನ್ನು ನೇಮಿಸುತ್ತಿರುವುದು ರಾಜ್ಯದ ಪರಿಸರ ಆಡಳಿತಕ್ಕೆ…
ದೇಶದ ೮೦ನೇ ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮದ ಕ್ಷಣಗಳಲ್ಲಿ, ವಿಶ್ವದ ಅತಿ ಎತ್ತರದ ಕಟ್ಟಡವಾದ ದುಬೈನ ‘ಬುರ್ಜ್ ಖಲೀಫಾ’ದಲ್ಲಿ ಭಾರತದ ತ್ರಿವರ್ಣ…
ದೆಹಲಿ ಕಣ್ಣೋಟ ಶಿವಾಜಿ ಗಣೇಶನ್ ಅವರ ವಾರದ ಅಂಕಣ ಸಂಸತ್ ಎಂದರೆ ಪ್ರಜಪ್ರಭುತ್ವದ ಮೌಲ್ಯಗಳನ್ನು ರಕ್ಷಿಸಿಕೊಂಡು ದೇಶದ ಸಮಸ್ಯೆಗಳು ಮತ್ತು…