ಮೈಸೂರು: ಲೋಕಾಯುಕ್ತ ಅಧಿಕಾರಿಗಳು ಎಷ್ಟೇ ಸಮರ್ಥರಿದ್ದರು, ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯದ ಮುಖ್ಯಮಂತ್ರಿಯನ್ನು ಎದುರಿಸಿಕೊಂಡು ಪ್ರಶ್ನಿಸಿ ಅವರ ವಿರುದ್ಧವೇ ಚಾರ್ಜ್ ಶೀಟ್ ಹಾಕುವಷ್ಟು ಎದೆಗಾರಿಕೆ ಲೋಕಾಯುಕ್ತಕ್ಕೆ ಇದೆ ಎಂಬಂತೆ ಅನ್ನಿಸಿಲ್ಲ ಎಂದು ಶಾಸಕ ಟಿ.ಎಸ್.ಶ್ರೀವತ್ಸ ತಿಳಿಸಿದ್ದಾರೆ.
ಮೈಸೂರಿನಲ್ಲಿ ಇಂದು(ಜನವರಿ.24) ಮುಡಾ ಪ್ರಕರಣದ ಬಗ್ಗೆ ಲೋಕಾಯುಕ್ತ ಅಧಿಕಾರಿಗಳು ವರದಿ ಸಲ್ಲಿಸುವ ಬಗ್ಗೆ ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ಈ ಹಗರಣದಲ್ಲಿ ಮುಖ್ಯಮುಂತ್ರಿಗಳ ಮೇಲೆ ದೋಷಾರೋಪ ಮಾಡಿ ಚಾರ್ಜ್ ಶೀಟ್ ಅನ್ನು ಲೋಕಾಯುಕ್ತದವರು ಹಾಕುತ್ತಾರೆಂದು ಅನ್ನಿಸಿರಲಿಲ್ಲ. ಈ ಹಿನ್ನೆಲೆಯಲ್ಲಿ ಸರ್ಕಾರದ ಅಧೀನ ಸಂಸ್ಥೆಯನ್ನು ಬಿಟ್ಟು, ಸಿಬಿಐ ತನಿಖೆಗೆ ಮುಡಾ ಹಗರಣವನ್ನು ವಹಿಸಬೇಕೆಂದು ಒತ್ತಾಯಿಸಿದ್ದೇವು ಎಂದರು.
ಲೋಕಾಯುಕ್ತ ಅಧಿಕಾರಿಗಳು ಅಪ್ಪಿತಪ್ಪಿ ಈ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಅವರಿಗೆ ಬಿ ರಿಪೋರ್ಟ್ ನೀಡಿದ್ದರೆ, ಮೈಸೂರು ಲೋಕಾಯುಕ್ತ ಸಂಸ್ಥೆಯ ಮೇಲೆ ಗೌರವ ಉಳಿಯುವುದಿಲ್ಲ. ಅಲ್ಲದೇ ಈ ವಿಚಾರದಲ್ಲಿ ನ್ಯಾಯಮೂರ್ತಿಗಳೇ ಕೆಲವು ಫೈಡಿಂಗ್ ಮಾಡಿಕೊಂಡಿರುವುದರಿಂದ ಅದನ್ನು ಕೋರ್ಟ್ನಲ್ಲಿ ನ್ಯಾಯಾಧೀಶರು ನೋಡಿಕೊಳ್ಳುತ್ತಾರೆ. ಜೊತೆಗೆ ಲೋಕಾಯುಕ್ತ ಸಂಸ್ಥೆಯ ಮೇಲೆ ಸಾರ್ವಜನಿಕರು ನಂಬಿಕೆ ಕಳೆದುಕೊಳ್ಳುತ್ತಾರೆ. ಹೀಗಾಗಿ ಲೋಕಾಯುಕ್ತ ಅಧಿಕಾರಿಗಳು ನ್ಯಾಯಯುತವಾಗಿ ತನಿಖೆ ನಡೆಸಿ ವರದಿ ಸಲ್ಲಿಸುತ್ತಾರೆಂಬ ವಿಶ್ವಾಸವಿದೆ ಎಂದು ಹೇಳಿದರು.
ನಂಜನಗೂಡು : ಜಮೀನಿನ ಪೋಡಿ ಹಾಗೂ ದುರಸ್ತಿಪಡಿಸಲು ಲಂಚ ಪಡೆಯುತ್ತಿದ್ದ ಸರ್ವೆಯರ್ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ವರದಿಯಾಗಿದೆ. ತಾಲ್ಲೂಕಿನ…
ಶ್ರೀರಂಗಪಟ್ಟಣ : ಅನೈತಿಕ ಸಂಬಂಧದ ಶಂಕೆಯಿಂದ ಪತಿಯೇ ಪತ್ನಿಯನ್ನು ಹತ್ಯೆ ಮಾಡಿರುವ ಘಟನೆ ತಾಲ್ಲೂಕಿನ ಆಲಗೂಡು ಗ್ರಾಮದಲ್ಲಿ ನಡೆದಿದೆ. ಗ್ರಾಮದ…
ರಾಮನಗರ: ಕಲ್ಲು ಕ್ವಾರಿಯಲ್ಲಿ ಬಂಡೆ ಕುಸಿದು 7 ಮಂದಿ ಕಾರ್ಮಿಕರು ಸಾವನ್ನಪ್ಪಿರುವ ಘಟನೆ ಬೆಂಗಳೂರು ದಕ್ಷಿಣ ತಾಲ್ಲೂಕಿನ ಮಾದಾಪಟ್ಟಣ ಬಳಿ…
ಮಡಿಕೇರಿ: ಕೊಡಗು ಜಿಲ್ಲೆಯಾದ್ಯಂತ ಕಳೆದ ಎರಡು ದಿನಗಳಿಂದ ಸಾಧಾರಣ ಮಳೆಯಾಗುತ್ತಿರುವ ಪರಿಣಾಮ ಹಾರಂಗಿ ಜಲಾಶಯಕ್ಕೆ ಒಳಹರಿವಿನ ಪ್ರಮಾಣ ಹೆಚ್ಚಾಗಿದೆ. ಜಲಾಶಯಕ್ಕೆ…
ಮಂಡ್ಯ ಜಿಲ್ಲೆಯ ಮುತ್ತತ್ತಿಯಲ್ಲಿ ಕಾವೇರಿ ನದಿ ನೀರಿಗೆ ಇಳಿದು ಸೆಲ್ಛಿ ತೆಗೆದುಕೊಳ್ಳಲು ಹೋದ ಒಂದೇ ಕುಟುಂಬದ ನಾಲ್ವರು ಹಾಗೂ ಕಾರು…
ಚಿಕ್ಕಬಳ್ಳಾಪುರ ಶಾಸಕರಾದ ಪ್ರದೀಪ್ ಈಶ್ವರ್ ಅವರ ಮೇಲೆ ಜಾ.ದಳ ಕಾರ್ಯಕರ್ತರೊಬ್ಬರು ಚಪ್ಪಲಿಯನ್ನು ಎಸೆದಿದ್ದು, ಈಗಾಗಲೇ ಆ ಕಾರ್ಯಕರ್ತನನ್ನು ಪೊಲೀಸರು ಬಂಧಿಸಿದ್ದಾರೆ.…