ಮೈಸೂರು: ಇದೇ ಮಾರ್ಚ್.21 ರಿಂದ ರಾಜ್ಯಾದ್ಯಂತ ಎಸ್ಎಸ್ಎಲ್ಸಿ ಪರೀಕ್ಷೆ ಪ್ರಾರಂಭವಾಗಲಿದ್ದು, ಜಿಲ್ಲಾಡಳಿತವೂ ಮೈಸೂರು ಜಿಲ್ಲೆಯಾದ್ಯಂತ ಸುಗಮವಾಗಿ ಪರೀಕ್ಷೆ ನಡೆಸಲು ಭರದ ಸಿದ್ಧತೆ ಮಾಡಿಕೊಂಡಿದೆ ಎಂದು ಜಿಲ್ಲಾ ಶಾಲಾ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಎಸ್.ಟಿ ಜವರೇಗೌಡ ತಿಳಿಸಿದರು.
ನಗರದ ಡಿಡಿಪಿಐ ಆಫೀಸ್ನಲ್ಲಿ ಇಂದು(ಮಾರ್ಚ್.18) ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಈ ಜಿಲ್ಲೆಯಲ್ಲಿ ನಡೆಯುವ ಎಸ್ಎಸ್ಎಲ್ಸಿ ಪರೀಕ್ಷೆಗೆ ದಿನಗಣನೆ ಆರಂಭವಾಗಿದ್ದು, ಮಾರ್ಚ್.21 ರಿಂದ ಏಪ್ರಿಲ್.4 ರವರೆಗೂ ಎಸ್ಎಸ್ಎಲ್ಸಿ ಪರೀಕ್ಷೆ ನಡೆಯಲಿದೆ. ಇನ್ನು ಜಿಲ್ಲೆಯಾದ್ಯಂತ 133 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ ಎಂದು ಹೇಳಿದರು.
ಈ ಬಾರಿ ಎಸ್ಎಸ್ಎಲ್ಸಿ ಪರೀಕ್ಷೆಯನ್ನು ಒಟ್ಟು ವಿದ್ಯಾರ್ಥಿಗಳ ಸಂಖ್ಯೆ 39103 ವಿದ್ಯಾರ್ಥಿಗಳು ಬರೆಯುತ್ತಿದ್ದಾರೆ. ಅದರಲ್ಲಿ ವಿದ್ಯಾರ್ಥಿ 19,114 ಇದ್ದರೆ, ವಿದ್ಯಾರ್ಥಿನಿಯರು 18,970 ಮಂದಿ ಇದ್ದಾರೆ. ಆದರೆ ಪರೀಕ್ಷಾ ಅಕ್ರಮ ತಡೆಯಲು ವೆಬ್ ಕಾಸ್ಟಿಂಗ್ ಕಣ್ಗಾವಲು ಇರಲಿದ್ದು, ಎಲ್ಲಾ ಪರೀಕ್ಷಾ ಕೇಂದ್ರಗಳಲ್ಲಿ ಸಿಸಿ ಕ್ಯಾಮೆರಾಗಳನ್ನು ಅಳವಡಿಸಲಾಗಿದೆ ಎಂದು ಮಾಹಿತಿ ನೀಡಿದರು.
ಇನ್ನು ಬೇಸಿಗೆ ಹಿನ್ನಲೆ ಪರೀಕ್ಷೆಗೆ ಬರುವ ವಿದ್ಯಾರ್ಥಿಗಳಿಗೆ ಪರೀಕ್ಷಾ ಕೇಂದ್ರಗಳಲ್ಲಿ ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಮಾಡಲಾಗಿದೆ ಎಂದರು.
ಬೆಂಗಳೂರು : ಮುಂಗಾರು ಮಳೆ ಕೊರತೆ ಮತ್ತು ಕಾವೇರಿ ಜಲಾನಯನ ಪ್ರದೇಶದಲ್ಲಿ ಜಲಾಶಯಗಳಿಗೆ ನಿರೀಕ್ಷಿತ ಪ್ರಮಾಣದಲ್ಲಿ ನೀರು ಹರಿದುಬಾರದ ಹಿನ್ನೆಲೆಯಲ್ಲಿ,…
ಮೈಸೂರು: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ವತಿಯಿಂದ ಮುಖ್ಯಮಂತ್ರಿಯವರು ಯುವ ಶಕ್ತಿ ರಾಷ್ಟ್ರ ಶಕ್ತಿ ಎಂಬ ಶೀರ್ಷಿಕೆಯಡಿ ಭಾರತ್…
ಮೈಸೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ (MDA) ನಿಯಮಗಳನ್ನು ಉಲ್ಲಂಘಿಸಿ ಮಾಡಲಾಗಿರುವ 50:50 ಬದಲಿ ನಿವೇಶನಗಳ ಹಂಚಿಕೆಗೆ ಸಂಬಂಧಿಸಿದಂತೆ ಏಕಸದಸ್ಯ…
ಬೆಂಗಳೂರು : ಹನೂರು ಶೂಟೌಟ್ ಪ್ರಕರಣದ ಬಗ್ಗೆ ಕೂಲಂಕಷ ತನಿಖೆ ನಡೆಯುತ್ತಿದ್ದು, ತನಿಖೆ ಬಳಿಕ ಪ್ರತಿಕ್ರಿಯೆ ನೀಡುತ್ತೇವೆ ಎಂದು ಸಿಎಂ…
ಬೆಂಗಳೂರು : ಆರು ಬಾರಿ ಚಿನ್ನದಂಬಾರಿ ಹೊತ್ತ 60 ವರ್ಷದ ಕ್ಯಾಪ್ಟನ್ ಅರ್ಜುನ ಆನೆಗೆ ಈ ಬಾರಿ ದಸರಾ ಜಂಬೂಸವಾರಿಯಲ್ಲಿ…
ಬೆಂಗಳೂರು: ಹನೂರು ಶೂಟೌಟ್ ಪ್ರಕರಣದ ಬಗ್ಗೆ ಕೂಲಂಕಷ ತನಿಖೆ ನಡೆಯುತ್ತಿದ್ದು, ತನಿಖೆ ಬಳಿಕ ಪ್ರತಿಕ್ರಿಯೆ ನೀಡುತ್ತೇವೆ ಎಂದು ಸಿಎಂ ಡಿ…