ಮೈಸೂರು

ಮೊದಲ ದಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಸುಸೂತ್ರ

ಮೈಸೂರು : ಎಸ್ಎಸ್ಎಲ್‌ಸಿ ಪರೀಕ್ಷೆಯು ಇಂದಿನಿಂದ ಆರಂಭವಾಗಿದೆ. ಮೈಸೂರು ನಗರ ಸೇರಿದಂತೆ 133 ಪರೀಕ್ಷಾ ಕೇಂದ್ರಗಳಲ್ಲೂ ಬಿಗಿ ಭದ್ರತೆ ಕೈಗೊಳ್ಳಲಾಗಿತ್ತು. ಮೊದಲ ದಿನದ ಪರೀಕ್ಷೆ ಸುಸೂತ್ರವಾಗಿ ನಡೆಯಿತು.

ಜಿಲ್ಲೆಯಲ್ಲಿ ಪರೀಕ್ಷೆಯ ಪ್ರವೇಶ ಪತ್ರಕ್ಕೆ ಸಂಬಂಧಪಟ್ಟಂತೆ ಎಲ್ಲಿಯೂ ಯಾವುದೇ ರೀತಿಯ ಗೊಂದಲಗಳು ಆಗಿಲ್ಲ. ಎಲ್ಲಿಯೂ ಯಾವುದೇ ರೀತಿಯಲ್ಲಿ ಪರೀಕ್ಷೆಯಲ್ಲಿ ನಕಲು ಮಾಡುವ ಮತ್ತು ಡಿಬಾರ್ ಪ್ರಕರಣಗಳು ನಡೆದಿಲ್ಲ. ಎಲ್ಲ ಕೇಂದ್ರಗಳಲ್ಲೂ ಕಟ್ಟುನಿಟ್ಟಾಗಿ ಪರೀಕ್ಷೆಗಳು ನಡೆದಿವೆ.

ಮೊದಲ ದಿನವೇ 3,35,969 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, ಅದರಲ್ಲಿ ಜಿಲ್ಲೆಯಲ್ಲಿ 19,989 ಮಂದಿ ಬಾಲಕರು ಮತ್ತು19,114 ಮಂದಿ ಬಾಲಕಿಯರೂ ಸೇರಿದಂತೆ ಒಟ್ಟು39,103 ವಿದ್ಯಾರ್ಥಿಗಳು ಪರೀಕ್ಷೆಗೆ ಹೆಸರು ನೋಂದಾಯಿಸಿಕೊಂಡಿದ್ದರು. ಮೊದಲ ದಿನದ ಪರೀಕ್ಷೆಯಲ್ಲಿ 420 ವಿದ್ಯಾರ್ಥಿಗಳು ಗೈರಾಗಿದ್ದಾರೆ.

ನಿಷೇಧಾಜ್ಞೆ ಜಾರಿ 

ನಗರ ಮತ್ತು ಜಿಲ್ಲೆಯ 133 ಪರೀಕ್ಷಾ ಕೇಂದ್ರಗಳ ಸುತ್ತಲೂ 200 ಮೀಟರ್ ವ್ಯಾಪ್ತಿ ಯಲ್ಲಿ ಭಾರತೀಯ ದಂಡ ಸಂಹಿತೆ 144ರ ಸೆಕ್ಷನ್ ಅನ್ವಯ ನಿಷೇಧಾಜ್ಞೆ ಜಾರಿ ಮಾಡಲಾಗಿತ್ತು. ಬೆಳಿಗ್ಗೆ 8 ಗಂಟೆಯಿಂದಲೇ ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರಗಳತ್ತ ವಿದ್ಯಾರ್ಥಿಗಳು ಧಾವಿಸಿದರು. ಕೆಲವರು ಕುಳಿತಲ್ಲಿ ಓದಿದ್ದನ್ನು ಮನವರಿಕೆ ಮಾಡಿಕೊಂಡರೆ ಮತ್ತೆ ಕೆಲವರು ತಮ್ಮ ಹಾಲ್ ಟಿಕೆಟ್ ಹಿಡಿದು ಕೊಠಡಿ ಸಂಖ್ಯೆ ಮತ್ತು ಕೂರುವ ಜಾಗವನ್ನು ಖಚಿತಪಡಿಸಿಕೊಳ್ಳುತ್ತಿದ್ದರು.

 

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಓದುಗರ ಪತ್ರ: ಮಾನಸ ಗಂಗೋತ್ರಿಯಲ್ಲಿ ಇಂದಿರಾ ಕ್ಯಾಂಟೀನ್ ಆರಂಭಿಸಿ

ಮೈಸೂರು ವಿಶ್ವವಿದ್ಯಾನಿಲಯದ ಮಾನಸ ಗಂಗೋತ್ರಿಯಲ್ಲಿ ಸಾವಿರಾರು ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. ವಿವಿಯ ಆವರಣದಲ್ಲಿ ವಿದ್ಯಾರ್ಥಿ ನಿಲಯಗಳ ವ್ಯವಸ್ಥೆಯೂ ಇದೆ. ಸ್ಥಳೀಯ…

3 hours ago

ಓದುಗರ ಪತ್ರ: ಶಾಂತಿ, ಸೌಹಾರ್ದ ಸಭೆಗಳು ಹೆಚ್ಚು ಹೆಚ್ಚು ನಡೆಯಲಿ

ಇತ್ತೀಚಿನ ದಿನಗಳಲ್ಲಿ ಅಲ್ಲಲ್ಲಿ ಜಾತಿ ಸಂಘರ್ಷ, ಧರ್ಮ ಸಂಘರ್ಷ, ಜನಾಂಗೀಯ ಸಂಘರ್ಷಗಳು ನಡೆಯುತ್ತಲೇ ಇವೆ. ‘ಸರ್ವ ಜನಾಂಗದ ಶಾಂತಿಯ ತೋಟ’…

3 hours ago

ಓದುಗರ ಪತ್ರ: ಶ್ರೇಷ್ಠ ಕಾರ್ಮಿಕ ಧುರೀಣ ಅನಂತ ಸುಬ್ಬರಾವ್

ಹಿರಿಯ ಕಾರ್ಮಿಕ ಧುರೀಣ, ಕಮ್ಯುನಿಸ್ಟ್ ಪಕ್ಷದ ಹಿರಿಯ ನಾಯಕ ಅನಂತ ಸುಬ್ಬರಾವ್ ಕಳೆದ ಸುಮಾರು ೪-೫ ದಶಕಗಳಿಂದ ಕಾರ್ಮಿಕ ಚಳವಳಿಗಳಲ್ಲಿ…

3 hours ago

ಬಾಪೂಜಿ ನೆನಪಲ್ಲಿ; ಖಾದಿ ಕೇಂದ್ರದ ಅಂಗಳದಲ್ಲಿ…

ಕೆ.ಎಸ್. ಚಂದ್ರಶೇಖರ್ ಮೂರ್ತಿ ದುಸ್ಥಿತಿಯಲ್ಲಿ ದೇಶದ ಪ್ರಪ್ರಥಮ ತಗಡೂರು ಖಾದಿ ಕೇಂದ್ರ  ಜ.೩೦, ೧೯೪೮ರಂದು ಅಹಿಂಸಾ ಪ್ರತಿಪಾದಕ, ಸ್ವಾತಂತ್ರ್ಯ ಹೋರಾಟಗಾರ…

3 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ: ನಿರ್ಮಾಪಕರ ಸಂಘ, ವಾಣಿಜ್ಯ ಮಂಡಳಿ ಚುನಾವಣೆ, ಚಿತ್ರನಗರಿ, ಒಟಿಟಿ ವರ್ತಮಾನ

ಹೊಸ ವರ್ಷದಲ್ಲಿ ಕನ್ನಡ ಚಿತ್ರರಂಗದ ಚಟುವಟಿಕೆಗಳು ಗರಿಗೆದರಿವೆ. ಒಂದೆಡೆ ನಿರ್ಮಾಪಕರ ಸಂಘ ಮತ್ತು ಚಲನಚಿತ್ರ ವಾಣಿಜ್ಯ ಮಂಡಳಿಗಳ ಚುನಾವಣೆಯ ಬಿರುಸು,…

3 hours ago

ಚಳಿ ಇರುವಾಗಲೇ ದಿನಕ್ಕೊಂದು ‘ಅಗ್ನಿ ಕರೆ’

ಚಾಮರಾಜನಗರ: ಚಳಿ ಇನ್ನೂ ದೂರ ಸರಿದಿಲ್ಲ. ಆದರೂ ಬಿಸಿಲು ಬೆವರು ಹರಿಯುವ ಮಟ್ಟಿಗೆ ಸುಡುತ್ತಿದೆ. ನೆಲ ದಿನೇ ದಿನೇ ಕಾದ…

3 hours ago