ಮೈಸೂರು

ಎಸ್‌ಎಸ್‌ಎಲ್‌ಸಿ ಪರೀಕ್ಷೆ: ಸಾಧಕ ವಿದ್ಯಾರ್ಥಿಗಳಿಗೆ ಜಿಲ್ಲಾಧಿಕಾರಿಗಳಿಂದ ಸನ್ಮಾನ

ಮೈಸೂರು: ಇಂದು(ಮೇ.18) ಜಿಲ್ಲಾಡಳಿತದ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿಯ ನ್ಯಾಯಾಲಯದಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಜಿಲ್ಲೆಗೆ ಟಾಪ್ 10 ಸ್ಥಾನ ಪಡೆದು ಉತ್ತಮ ಸಾಧನೆಗೈದ ಮಕ್ಕಳನ್ನು ಜಿಲ್ಲಾಧಿಕಾರಿ ಡಾ ಕೆ.ವಿ ರಾಜೇಂದ್ರ ಸನ್ಮಾನಿಸಿದರು.

ಬಳಿಕ ಮಾತನಾಡಿ, ಎಸ್.ಎಸ್.ಎಲ್.ಸಿ ಎಂಬುದು ವಿದ್ಯಾರ್ಥಿ ಜೀವನದ ಪ್ರಮುಖ ಘಟ್ಟವಾಗಿದ್ದು, ಈ ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕಗಳನ್ನು ತೆಗೆದು ಸಾಧನೆ ಮಾಡಿದ್ದಾರೆ. ಈ ಯಶಸ್ಸು ನಿಮ್ಮ ಮುಂದಿನ ಗುರಿ ತಲುಪಲು ಸೇತುವೆಯಾಗಿ ಇನ್ನಷ್ಟು ಸಾಧನೆಯ ಗರಿ ನಿಮ್ಮ ಮೂಡಿಗೇರಲಿ ಎಂದು ವಿದ್ಯಾರ್ಥಿಗಳಿಗೆ ಹಾರೈಸಿದರು.

ಈ ಫಲಿತಾಂಶದಿಂದ ಮುಂದಿನ ದಿನಗಳಲ್ಲಿ ನಿಮ್ಮ ಮೇಲಿನ ನಿರೀಕ್ಷೆ ಹೆಚ್ಚಾಗಲಿದ್ದು, ಆ ಒತ್ತಡವನ್ನು ಧನಾತ್ಮಕವಾಗಿ ತೆಗೆದುಕೊಂಡು ಮುನ್ನಡೆಯಬೇಕು. ಹಂತ ಹಂತವಾಗಿ ನೋಡಿದಾಗ ಸ್ಪರ್ಧೆ ಹೆಚ್ಚಾಗಿದ್ದು, ಅದರಲ್ಲಿ ನಾವು ಏನು ಅಲ್ಲ ಎಂದೆಂನಿಸುತ್ತದೆ. ಹಾಗಾಗಿ ಮನಸ್ಸನ್ನು ಎಲ್ಲಿಯೂ ಕುಗ್ಗದಂತೆ ನೋಡಿಕೊಂಡು ಗುರಿಯತ್ತ ಸಾಗಬೇಕು. ನಿಮ್ಮ ಗುರಿ ಏನೆಂಬುದನ್ನು ಇಲ್ಲಿಯೇ ಅರಿತು ಅದರೊಂದಿಗೆ ಸಾಗಬೇಕಿದೆ ಎಂದರು.

ರ್ಯಾಂಕ್ ಬಂದ ಕೂಡಲೇ ಮುಂದಿನ ಭವಿಷ್ಯಕ್ಕೆ ಶ್ರಮ ಹಾಕುವುದನ್ನು ನಿಲ್ಲಿಸಬಾರದು. ಬದಲಾಗಿ ದಿನದಿಂದ ದಿನಕ್ಕೆ ಶ್ರಮ ದುಪ್ಪಟ್ಟಾಗಬೇಕು. ಸತತ ಪ್ರಯತ್ನದಿಂದ ಫಲಿತಾಂಶ ದೊರಕುವಂತೆ, ನಿಮ್ಮ ಸಾಧನೆ ಪೋಷಕರಿಗೆ ಹೆಮ್ಮೆ ತರಬೇಕು ಎಂದು ಕಿವಿ ಮಾತು ಹೇಳಿದರು.

ಕೇವಲ ಓದಿಗಷ್ಟೇ ಸೀಮಿತವಾಗದೆ ಕ್ರೀಡೆ ಇನ್ನಿತರ ಚಟುವಟಿಕೆಗಳಲ್ಲಿ ಭಾಗವಹಿಸಬೇಕು. ಹಾಗಾಗಿ ಪ್ರತಿಯೊಬ್ಬರೂ ಓದಿನ ಜೊತೆಗೆ ಒಂದಲ್ಲ ಒಂದು ರೀತಿಯ ಇನ್ನಿತರ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುವುದು ಉತ್ತಮ ಎಂದು ತಿಳಿಸಿದರು.

ಬಾಬಾ ಸಾಹೇಬ್ ಅಂಬೇಡ್ಕರ್ ಅವರನ್ನು ಮಾದರಿಯನ್ನಾಗಿಸಿಕೊಂಡು ದೊಡ್ಡ ಮಟ್ಟದ ಯಶಸ್ಸನ್ನು ಸಾಧಿಸುವತ್ತಾ ನಿಮ್ಮ ಗುರಿ ಇರಲಿ. ವಿದ್ಯಾರ್ಥಿಗಳ ಜೀವನ ಎಂಬ ವಿಷಯಕ್ಕೆ ಬಂದರೆ ಪೋಷಕರ ಪಾತ್ರ ಬಹಳ ಮುಖ್ಯವಾಗಿದ್ದು ಅವರ ಹಾಗೂ-ಹೋಗುಗಳನ್ನು ಸದಾ ಗಮನಿಸುತ್ತಿರಬೇಕು. ಮಾರ್ಗ ಸೂಚಿಸಬೇಕು ಎಂದರು.

ಜಿಲ್ಲಾ ಪಂಚಾಯಿತಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ.ಎಂ ಗಾಯತ್ರಿ ಮಾತನಾಡಿ, ಪ್ರಮುಖ ಪರೀಕ್ಷೆಗಳಲ್ಲಿ ಅತ್ಯುತ್ತಮ ಅಂಕಗಳನ್ನು ಪಡೆದು ಉತ್ತೀರ್ಣರಾದಾಗ ನಮ್ಮ ಜವಾಬ್ದಾರಿಗಳು ಹೆಚ್ಚಾಗುತ್ತವೆ. ಅವುಗಳನ್ನು ಮನಗಂಡು ಯಶಸ್ವಿಯಾಗಿ ನಿರ್ವಹಿಸಬೇಕು ಎಂದು ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.

ಕಾರ್ಯಕ್ರಮದಲ್ಲಿ ಡಿಡಿಪಿಐ ಪಾಂಡು ಸೇರಿದಂತೆ ಜಿಲ್ಲಾ ಮಟ್ಟದಲ್ಲಿ ಅತ್ಯುತ್ತಮ 10 ಸ್ಥಾನ ಪಡೆದ ವಿದ್ಯಾರ್ಥಿಗಳು ಹಾಗೂ ಅವರ ಪೋಷಕರು ಉಪಸ್ಥಿತರಿದ್ದರು.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ನೇಪಾಳ | ನೂತನ ಪ್ರಧಾನಿಯಾಗಿ ಅಧಿಕಾರ ಸ್ವೀಕರಿಸಿದ ಜೆನ್‌ಝೀಗಳ ಹೀರೋ ಬಾಲೇಂದ್ರ

ಕಠ್ಮಂಡು : ನೇಪಾಳದ ರಾಷ್ಟ್ರೀಯ ಸ್ವತಂತ್ರ ಪಕ್ಷದ ಹಿರಿಯ ನಾಯಕ ಬಾಲೇಂದ್ರ ಶಾ ಅವರು ದೇಶದ ನೂತನ ಪ್ರಧಾನಿಯಾಗಿ ಇಂದು(ಮಾರ್ಚ್‌.27)…

2 hours ago

ವೈರಮುಡಿ ಬ್ರಹ್ಮೋತ್ಸವಕ್ಕೆ 2 ಲಕ್ಷಕ್ಕೂ ಹೆಚ್ಚು ಭಕ್ತಾಧಿಗಳು ಭಾಗಿ : ಜಿಲ್ಲಾಧಿಕಾರಿ

ಮಂಡ್ಯ : ವೈರಮುಡಿ ಬ್ರಹ್ಮೋತ್ಸವಕ್ಕೆ ಆಗಮಿಸುವ ಭಕ್ತಾದಿಗಳ ಶಾಂತಿ ಮತ್ತು ಕಾನೂನು ಸುವ್ಯವಸ್ಥೆ ಪಾಲನೆ ಹಾಗೂ ಭದ್ರತೆಗಾಗಿ ಸೂಕ್ತ ಕ್ರಮಗಳನ್ನು…

3 hours ago

ವಾಯುಪಡೆ ಅರಣ್ಯಭೂಮಿ ಮರುವಶಕ್ಕೆ ಪ್ರಕ್ರಿಯೆ : ಈಶ್ವರ ಖಂಡ್ರೆ

ಬೆಂಗಳೂರು : ಬೆಂಗಳೂರು ಉತ್ತರ ತಾಲ್ಲೂಕು ಜಾರಕಬಂಡೆ ಶ್ರೀಗಂಧದ ಕಾವಲ್‌ನಲ್ಲಿ ವಾಯುಪಡೆಯ ವಶದಲ್ಲಿರುವ 444 ಎಕರೆ ಅರಣ್ಯಭೂಮಿಯ ಮರು ವಶಕ್ಕೆ…

3 hours ago

ರಾಜ್ಯದಲ್ಲಿ ದ್ವಿಭಾಷಾ ಸೂತ್ರ ಜಾರಿಗೆ ಚಿಂತನೆ

ಬೆಂಗಳೂರು : ವಿದ್ಯಾರ್ಥಿಗಳಿಗೆ ಹಿಂದಿ ಪಾಸ್‌ ಕಡ್ಡಾಯ ಮಾಡದಂತೆ ಕನ್ನಡಪರ ಸಂಘಟನೆಗಳಿಂದ ಒತ್ತಾಯ ಕೇಳಿಬಂದ ಬೆನ್ನಲ್ಲೇ ರಾಜ್ಯದಲ್ಲಿ ದ್ವಿಭಾಷಾ ಸೂತ್ರ…

3 hours ago

ವಾಯುಪಡೆ ಅರಣ್ಯಭೂಮಿ ಮರುವಶಕ್ಕೆ ಪ್ರಕ್ರಿಯೆ : ಈಶ್ವರ ಖಂಡ್ರೆ

ಬೆಂಗಳೂರು : ಬೆಂಗಳೂರು ಉತ್ತರ ತಾಲ್ಲೂಕು ಜಾರಕಬಂಡೆ ಶ್ರೀಗಂಧದ ಕಾವಲ್‌ನಲ್ಲಿ ವಾಯುಪಡೆಯ ವಶದಲ್ಲಿರುವ 444 ಎಕರೆ ಅರಣ್ಯಭೂಮಿಯ ಮರು ವಶಕ್ಕೆ…

4 hours ago

ಪೆಟ್ರೋಲ್‌,ಡೀಸೆಲ್‌ ಬೆಲೆ ಏರಿಕೆ ಆತಂಕದ ನಡುವೆ ಗುಡ್‌ ನ್ಯೂಸ್‌ ನೀಡಿದ ಕೇಂದ್ರ

ಹೊಸದಿಲ್ಲಿ : ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಸಂಘರ್ಷದಿಂದಾಗಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆಯ ಆತಂಕ ಸೃಷ್ಠಿಯಾಗಿರುವ ನಡುವೆ ಕೇಂದ್ರ…

4 hours ago