ಮೈಸೂರು

SSLC ಪಾಸ್‌ ಆದವರಿಗೆ ಡಿಪ್ಲೋಮಾ ಕೋರ್ಸ್‌ಗಳ ಅರ್ಜಿ ಆಹ್ವಾನ

ಮೈಸೂರು: 2024-25 ನೇ ಸಾಲಿನ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರದಲ್ಲಿ ಡಿಪ್ಲೋಮೊ ಪ್ರವೇಶಕ್ಕಾಗಿ ವಿವಿಧ ಕೋರ್ಸ್ಗಳಿಗೆ ಪ್ರವೇಶಾತಿಯನ್ನು ಪ್ರಾರಂಭ ಮಾಡಲಾಗಿದ್ದು, ಎಸ್.ಎಸ್.ಎಲ್.ಸಿ ಪಾಸಾದ ಅರ್ಹ ಅಭ್ಯರ್ಥಿಗಳಿಂದ ಆಫ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಎಸ್.ಎಸ್.ಎಲ್.ಸಿ ಪಾಸಾದ ಅಭ್ಯರ್ಥಿಗಳಿಗೆ ಡಿಪ್ಲೋಮೊ ಇನ್ ಟೂಲ್ ಅಂಡ್ ಡೈ ಮೇಕಿಂಗ್, ಡಿಪ್ಲೋಮೊ ಇನ್ ಪ್ರಿಶಿಷನ್ ಮ್ಯಾನುಫ್ಯಾಕ್ಚರಿಂಗ್, ಡಿಪ್ಲೋಮೊ ಇನ್ ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಶನ್ ಕೋರ್ಸ್ಗಳು ಲಭ್ಯವಿದ್ದು, 3 ವರ್ಷ ಹಾಗೂ ಕಡ್ಡಾಯ ಒಂದು ವರ್ಷದ ಇಂಟರ್ನ್ಶಿಪ್ ತರಬೇತಿಯನ್ನು ನೀಡಲಾಗುವುದು. ಅರ್ಜಿ ಸಲ್ಲಿಸಲು ಜುಲೈ 31 ಕೊನೆಯ ದಿನಾಂಕವಾಗಿದೆ.

ಹೆಚ್ಚಿನ ಮಾಹಿತಿಗಾಗಿ ಬೆಳಗೋಳ ಕೈಗಾರಿಕಾ ಪ್ರದೇಶದ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರದ ದೂ.ಸಂ: 821-2582750 ಹಾಗೂ ಸಹಾಯವಾಣಿ:155267, ಮೊ.ನಂ:9980557205, 8660139259, 9141630315, 9880068986 ಅಥವಾ ವೆಬ್‌ಸೈಟ್ https://gttc.karnataka.gov.in ಹಾಗೂ http://cetonline.karnataka.gov.in/kea ನ್ನು ಸಂರ್ಕಿಸಬಹುದು ಎಂದು ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರದ ಪ್ರಾಂಶುಪಾಲರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಓದುಗರ ಪತ್ರ | ಪಿಯುಸಿ ಪರೀಕ್ಷೆ ಫಲಿತಾಂಶ ಹೆಚ್ಚಳಕ್ಕೆ ಶ್ರಮಿಸಿ

ಈ ಸಾಲಿನಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆಗೆ ಸರ್ಕಾರಿ ಕಾಲೇಜುಗಳಿಂದ ಒಟ್ಟು 1.38 ಲಕ್ಷ ವಿದ್ಯಾರ್ಥಿಗಳು ಹಾಜರಾಗುತ್ತಿದ್ದಾರೆ, ಇವರಲ್ಲಿ 63,514 ವಿದ್ಯಾರ್ಥಿಗಳು…

6 mins ago

ಓದುಗರ ಪತ್ರ | ಹೆಚ್ಚುವರಿ ಆಂಬ್ಯುಲೆನ್ಸ್ ಸೌಲಭ್ಯ ಕಲ್ಪಿಸಿ

ಮೈಸೂರು ಜಿಲ್ಲೆಯ ಎಚ್‌.ಡಿ.ಕೋಟೆಯ ಸಾರ್ವಜನಿಕ ಆಸ್ಪತ್ರೆಯಲ್ಲಿ ಸಾಕಷ್ಟು ಆಂಬ್ಯುಲೆನ್ಸ್ ಸೌಲಭ್ಯವಿಲ್ಲದೆ ತುರ್ತು ಸಂದರ್ಭದಲ್ಲಿ ರೋಗಿಗಳನ್ನು ಜಿಲ್ಲಾ ಆಸ್ಪತ್ರೆಗೆ ಕರೆದೊಯ್ಯಲು ತೊಂದರೆಯಾಗಿದೆ.…

11 mins ago

ಬಿಜೆಪಿ- ಕಾಂಗ್ರೆಸ್ ನಡುವೆ ಏಕಿಷ್ಟು ದ್ವೇಷ?

ದೆಹಲಿ ಕಣ್ಣೋಟ ಶಿವಾಜಿ ಗಣೇಶನ್‌ ಸಂಸತ್ತಿನ ಎರಡು ವಾರಗಳ ಮೊದಲ ಹಂತದ ಬಜೆಟ್ ಅಧಿವೇಶನ ನಿಮುಗಿಯಿತು. ಮತ್ತೆ ಎರಡನೇ ಹಂತದ…

60 mins ago

ಇಂದಿನಿಂದ ಮಾ.13ರವರೆಗೆ ಕಪ್ಪಡಿ ಕ್ಷೇತ್ರದ ಜಾತ್ರೆ

• ರಾಜ್ಯದ ವಿವಿಧ ಕಡೆಗಳಿಂದ ಜನರ ಆಗಮನ • ಒಂದು ತಿಂಗಳ ಕಾಲ ನಡೆಯುವ ಜಾತ್ರಾ ಮಹೋತ್ಸವ ಭೇರ್ಯ ಮಹೇಶ್…

1 hour ago

ಹಾವಾಡಿಸುವ ಮುಬಾರಕನ ಬದುಕು ಪಾಡು

• ಅಕ್ಷತಾ ಮೂವತ್ತರ ಆಸುಪಾಸಿನ ಕಪ್ಪು ಜಾಕೆಟ್ ತೊಟ್ಟಿದ್ದ ಸ್ಪುರದ್ರೂಪಿ ಯುವಕ. ತನ್ನ ಹಿಪ್ಪಿ ಕೂದಲನ್ನು ಬೆರಳಿನಿಂದ ಸರಿಸಿ ಮತ್ತೆ…

2 hours ago

ಮೈಸೂರು ಮೈಸೂರಾಗಿಯೇ ಇರಲು ಏನು ಮಾಡಬೇಕು? ಏನು ಮಾಡಬಾರದು?

• ಚಿತ್ರ ಮತ್ತು ಬರಹ : ಸಿರಿ ಮೈಸೂರು ಮೈಸೂರಿನಿಂದ ಹೊರಗಿರುವ ಮೈಸೂರಿಗರು ಈಗಲೂ ಮೈಸೂರಿನಲ್ಲಿರುವ ಮೈಸೂರಿಗರಿಗೆ ಈ ಪಶ್ನೆ…

2 hours ago