ಮೈಸೂರು: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಪರಿವಾರ-ತಳವಾರ ಪದಗಳನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸಿದೆ. ಜೊತೆಗೆ ಮೀಸಲಾತಿ ಪ್ರಮಾಣವನ್ನು ಹೆಚ್ಚಿಸಿರುವ ಕಾರಣ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಯದುವೀರ್ ಕೃಷ್ಣದತ್ತಚಾಮರಾಜ ಒಡೆಯರ್ ಬೆಂಬಲಕ್ಕೆ ನಿಲ್ಲಲು ಬಿಜೆಪಿ ಎಸ್ಟಿ ಸಮಾವೇಶದಲ್ಲಿ ಒಮ್ಮತದಿಂದ ತೀರ್ಮಾನಿಸಲಾಯಿತು.
ನಗರದ ಲಕ್ಷ್ಮೀಪುರಂ ನೇರಂಬಳ್ಳಿ ಸಾವಿತ್ರಮ್ಮ ಕಲ್ಯಾಣಮಂಟಪದಲ್ಲಿ ಮೈಸೂರು ನಗರ ಮತ್ತು ಗ್ರಾಮಾಂತರ ಬಿಜೆಪಿ ಎಸ್ಟಿ ಮೋರ್ಚಾ ವತಿಯಿಂದ ಆಯೋಜಿಸಿದ್ದ ಪರಿಶಿಷ್ಟ ಪಂಗಡ ಮುನ್ನಡೆ ಸಮಾವೇಶದಲ್ಲಿ ಈ ತೀರ್ಮಾನ ಕೈಗೊಳ್ಳಲಾಯಿತು.
ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಮಾತನಾಡಿ ವಸತಿ ಶಾಲೆಗಳ ಅಭಿವೃದ್ಧಿ ಮತ್ತು ಗ್ರಾಮಗಳಲ್ಲಿ ಹಿಂದುಳಿದವರ ಅಭಿವೃದ್ಧಿಗಾಗಿ ಕೇಂದ್ರ ಸರ್ಕಾರವು ಹಲವು ಯೋಜನೆಗಳನ್ನು ಜಾರಿಗೆ ತಂದಿದೆ. ಮುದ್ರ ಯೋಜನೆ ಮುಖಾಂತರ ಹಲವರು ಪರಿಶಿಷ್ಟರು ಉದ್ಯಮಿಗಳಾಗಿದ್ದಾರೆ. ಜತೆಗೆ ಶೇ 50ಕ್ಕೂ ಹೆಚ್ಚು ಹಿಂದುಳಿದವರು ಯೋಜನೆಗಳ ಫಲಾನುಭವಿಗಳಾಗಿದ್ದಾರೆ ಎಂದು ಹೇಳಿದರು.
ಮೈಸೂರು ಅರಮನೆ ಮತ್ತು ನಾಯಕ ಸಮುದಾಯಕ್ಕೂ ಅವಿನಾಭಾವ ಸಂಬಂಧವಿದೆ. ಅರಮನೆಗೆ ಬೆಂಕಿ ಬಿದ್ದಾಗ ರಕ್ಷಸಿದ್ದು ನಾಯಕ ಸಮುದಾಯದವರೆಂದು ಗೊತ್ತಿದೆ. ಚಾಮುಂಡಿಬೆಟ್ಟದಲ್ಲಿ ತೇರು ಎಳೆಯುವವರು ನಾಯಕ ಸಮಾಜ. ಹಾಗಾಗಿ, ಈ ಸಮುದಾಯ ಇಟ್ಟಿರುವ ವಿಶ್ವಾಸವನ್ನು ಹೆಚ್ಚಿಸಲಾಗುವುದು ಎಂದರು.
ಷರತ್ತುಗಳ ಒಪ್ಪದ ಹೊರತು ಜಲಸಂಧಿ ತೆರೆಯಲ್ಲ; ಸ್ಪಷ್ಟನೆ ಟೆಹರಾನ್ : ಹಾರ್ಮುಜ್ ಜಲಸಂಧಿಯ ಮೇಲೆ ಅಮೆರಿಕ ಸಂಪೂರ್ಣ ನಿಯಂತ್ರಣ ಸಾಧಿಸಿದೆ…
ಎಲ್ಲ ಆಯಾಮಗಳಲ್ಲೂ ತನಿಖೆ ನಡೆಸಿ ವರದಿ ಸಲ್ಲಿಸಲು ಸೂಚನೆ ಬೆಂಗಳೂರು : ಇಲ್ಲಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮೇಲೆ…
ಹೊಸದಿಲ್ಲಿ: ಉತ್ತರಾಖಂಡದ ಹಲ್ದ್ವಾನಿಯಲ್ಲಿ ತಾವು ಭಾಷಣ ಮಾಡಿದ್ದ ರಾಮಲೀಲಾ ಮೈದಾನದ ವೇದಿಕೆಯಲ್ಲಿ ‘ಶ್ರೀರಾಮ ಸೇನಾ’ ಸಂಘಟನೆಯು ಶುದ್ಧೀಕರಣ (ಹವನ) ನಡೆಸಿದ್ದಕ್ಕೆ…
ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ಹರಿಸಬೇಕು ಎಂಬ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಖಂಡಿಸಿ ಹಾಗೂ…
ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…
ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…