ಮೈಸೂರು

ಅಂದಿನ ಮುಡಾ ಆಯುಕ್ತರನ್ನು ಬದಲಾಯಿಸುವಂತೆ ಸರ್ಕಾರಕ್ಕೆ ಹೇಳಿದ್ದೆ: ಎಸ್‌ಟಿಎಸ್

ಮೈಸೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ 50:50 ಅನುಪಾತದಲ್ಲಿ ಸೈಟು ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಜಿಲ್ಲಾ ಉಸ್ತುವಾರಿ ಸಚಿವ ಎಸ್‌.ಟಿ ಸೋಮಶೇಖರ್‌ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ್ದಾರೆ.

ಮುಡಾದಲ್ಲಿ ಸೈಟ್‌ ಹಂಚಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿ ಮೀಟಿಂಗ್‌ ನಲ್ಲೂ ಶಾಸಕರ ಫೈಲ್‌ಗಳೇ ಇರುತ್ತಿದ್ದವು. ಆದರೆ ಅದ್ಯಾವುದು ಚರ್ಚೆಯಾಗದೇ ಹೊರಹೋಗುತ್ತಿದ್ದವು. ಅಲ್ಲಿನ ಬಹುತೇಕ ವಿಷಯಗಳು ಶಾಸಕರಿಗೆ ಸಂಬಂಧಿಸಿದ್ದಾಗಿವೆ ಎಂದು ಸ್ಪೋಟಕ ಮಾಹಿತಿ ಹೊರಹಾಕಿದ್ದಾರೆ.

ಮುಡಾ ಇರುವುದು ಜನಸಾಮಾನ್ಯರ ಅಭಿವೃದ್ಧಿಗಾಗಿ ಆದರೆ ಇಲ್ಲಿ ಆಗುತ್ತಿರುವುದೇ ಬೇರೆ. ಮುಡಾ ಬೋರ್ಡ್‌ನಲ್ಲಿನ ವ್ಯವಸ್ಥೆ ಬದಲಾಗಬೇಕಿದೆ ಎಂದು ಅಭಿಪ್ರಾಯಪಟ್ಟರು.

ಇನ್ನು 50:50 ಅನುಪಾತದಲ್ಲಿ ಸೈಟು ಹಂಚಿಕೆ ವಿಚಾರದಲ್ಲಿ ಜಿಲ್ಲಾ ಉಸ್ತುವಾರಿಗಳ ಗಮನಕ್ಕೆ ತರುತ್ತಿರಲಿಲ್ಲ. ಆಯುಕ್ತರು ಯಾವುದೇ ಸಭೆ ಮಾಡದೇ ಸೈಟ್‌ಗಳನ್ನು ಹಂಚಿದ್ದಾರೆ. ಯಾವುದೇ ಉನ್ನತಮಟ್ಟದ ಚರ್ಚೆ ಇಲ್ಲದೆಯೇ ಮುಡಾ ಸೈಟ್‌ಗಳನ್ನು ಹಂಚಲಾಗಿದ್ದು, ಹಿಂದಿನ ಆಯುಕ್ತರನ್ನು ಬದಲಾಯಿಸುವಂತೆ ಸರ್ಕಾರಕ್ಕೆ ಮನವಿ ಮಾಡಿದ್ದೆ ಎಂದರು.

ಇನ್ನು ಮುಡಾ ಅಧಿಕಾರಿ ಜಾತಿಯ ಪ್ರಭಾವದಿಂದ ಅಲ್ಲಿಯೇ ಉಳಿಯುವಂತೆ ಆಯಿತು. ಅಂದೇ ಸರ್ಕಾರ ಸೂಕ್ತ ಕ್ರಮ ಕೈಗೊಂಡಿದ್ದರೇ ಈ ಎಲ್ಲಾ ಹಗರಣಗಳು ಸರಿದೂಗುತ್ತಿದ್ದವೇನೋ ಎಂದು ಅವರು ಹೇಳಿದರು.

ಮುಡಾದಲ್ಲಿ ನನ್ನ ಹೆಸರಿನಲ್ಲಿ ಅಥವಾ ಬೇನಾಮಿ ಹೆಸರಿನಲ್ಲಿ ಒಂದೇ ಒಂದು ನಿವೇಶನ ಮಂಜೂರಾಗದ್ದಲ್ಲಿ ನನ್ನ ಶಾಸಕನ ಸ್ಥಾನಕ್ಕೆ ರಾಜೀನಾಮೆ ನೀಡತ್ತೇನೆ. ನಾನು ನನಗಾಗಲಿ, ಬೇರೆಯವರಿಗಾಗಲಿ ಒತ್ತಡ ಹೇರಿ ನಿವೇಶನ ಕೊಡಿಸಿಲ್ಲ. ಈ ಮುಡಾ ಅಕ್ರಮದಲ್ಲಿ ನನ್ನ ಹೆಸರು ತರಬೇಡಿ ಎಂದು ತಿಳಿಸಿದರು.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

‘ಅಂಕಲ್ ಚೋಕ್’ ಕಟ್ಟಿದ ಬಿದಿರಿನ ಮಾಯಾಲೋಕ

ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…

1 hour ago

ಮುಚ್ಚುತ್ತಿರುವ ಚಿತ್ರಮಂದಿರ

ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…

1 hour ago

ಅಳಿಯ ಅಲ್ಲ, ಮಗಳ ಗಂಡ!

ಸುರೇಶ ಕಂಜರ್ಪಣೆ ದೆಹಲಿಯ ಯುವ ಜನಾಂಗದ ಪ್ರತಿಭಟನೆ ದೇಶದ ಗಮನ ಸೆಳೆದಿದೆ. ಎಲ್ಲ ಚಳವಳಿಗಳ ಆರಂಭಿಕ ಶಂಕೆ, ಆತಂಕಗಳನ್ನು ಮೀರಿ…

1 hour ago

ವಿರಾಜಪೇಟೆ: ರಸ್ತೆಯುದ್ದಕ್ಕೂ ಗುಂಡಿಗಳದ್ದೇ ಪಾರಮ್ಯ

ಕಾಂಗೀರ ಬೋಪಣ್ಣ ವಿರಾಜಪೇಟೆ: ತಾಲ್ಲೂಕಿನಲ್ಲಿನ ಮುಖ್ಯರಸ್ತೆಗಳು ವಾಹನಗಳು ಸಂಚರಿಸಲಾರದಷ್ಟು ಹಾಳಾಗಿದ್ದು, ವಾಹನ ಸವಾರರು ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಆದರೆ, ಈ…

1 hour ago

ಇದು ಅಂತ್ಯವಲ್ಲ-ಹೊಸ ಆರಂಭ

ರೇಣುಕಾ ನಿಡುಗುಂದಿ ಜಂತರ್ ಮಂತರ್‌ನಲ್ಲಿ ಹೋರಾಟ ನಡೆಸುತ್ತಿದ್ದ ವಿದ್ಯಾರ್ಥಿಗಳಿಗೆ ಇಂದು ತಾತ್ಕಾಲಿಕ ನೈತಿಕ ಗೆಲುವು ದೊರೆತಿದೆ. ಕೇಂದ್ರ ಶಿಕ್ಷಣ ಸಚಿವ…

1 hour ago

ಎಸ್‌ಐಆರ್ ಅರ್ಜಿ; ಅನಿವಾರ್ಯ ಮರ್ಜಿ

ಚಿರಂಜೀವಿ ಸಿ ಹುಲ್ಲಹಳ್ಳಿ ಗ್ರಾಮೀಣ ಭಾಗಗಳಲ್ಲಿ ಸಮಸ್ಯೆ ಇನ್ನಷ್ಟು ಗಂಭೀರವಾಗಿದೆ. ಹಲವು ಗ್ರಾಮಗಳಲ್ಲಿ ಎಸ್‌ಐಆರ್ ಪ್ರಕ್ರಿಯೆ ಕುರಿತು ಸಮರ್ಪಕ ಜಾಗೃತಿಯೇ…

1 hour ago