ಮೈಸೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ 50:50 ಅನುಪಾತದಲ್ಲಿ ಸೈಟು ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ ಸೋಮಶೇಖರ್ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ್ದಾರೆ.
ಮುಡಾದಲ್ಲಿ ಸೈಟ್ ಹಂಚಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿ ಮೀಟಿಂಗ್ ನಲ್ಲೂ ಶಾಸಕರ ಫೈಲ್ಗಳೇ ಇರುತ್ತಿದ್ದವು. ಆದರೆ ಅದ್ಯಾವುದು ಚರ್ಚೆಯಾಗದೇ ಹೊರಹೋಗುತ್ತಿದ್ದವು. ಅಲ್ಲಿನ ಬಹುತೇಕ ವಿಷಯಗಳು ಶಾಸಕರಿಗೆ ಸಂಬಂಧಿಸಿದ್ದಾಗಿವೆ ಎಂದು ಸ್ಪೋಟಕ ಮಾಹಿತಿ ಹೊರಹಾಕಿದ್ದಾರೆ.
ಮುಡಾ ಇರುವುದು ಜನಸಾಮಾನ್ಯರ ಅಭಿವೃದ್ಧಿಗಾಗಿ ಆದರೆ ಇಲ್ಲಿ ಆಗುತ್ತಿರುವುದೇ ಬೇರೆ. ಮುಡಾ ಬೋರ್ಡ್ನಲ್ಲಿನ ವ್ಯವಸ್ಥೆ ಬದಲಾಗಬೇಕಿದೆ ಎಂದು ಅಭಿಪ್ರಾಯಪಟ್ಟರು.
ಇನ್ನು 50:50 ಅನುಪಾತದಲ್ಲಿ ಸೈಟು ಹಂಚಿಕೆ ವಿಚಾರದಲ್ಲಿ ಜಿಲ್ಲಾ ಉಸ್ತುವಾರಿಗಳ ಗಮನಕ್ಕೆ ತರುತ್ತಿರಲಿಲ್ಲ. ಆಯುಕ್ತರು ಯಾವುದೇ ಸಭೆ ಮಾಡದೇ ಸೈಟ್ಗಳನ್ನು ಹಂಚಿದ್ದಾರೆ. ಯಾವುದೇ ಉನ್ನತಮಟ್ಟದ ಚರ್ಚೆ ಇಲ್ಲದೆಯೇ ಮುಡಾ ಸೈಟ್ಗಳನ್ನು ಹಂಚಲಾಗಿದ್ದು, ಹಿಂದಿನ ಆಯುಕ್ತರನ್ನು ಬದಲಾಯಿಸುವಂತೆ ಸರ್ಕಾರಕ್ಕೆ ಮನವಿ ಮಾಡಿದ್ದೆ ಎಂದರು.
ಇನ್ನು ಮುಡಾ ಅಧಿಕಾರಿ ಜಾತಿಯ ಪ್ರಭಾವದಿಂದ ಅಲ್ಲಿಯೇ ಉಳಿಯುವಂತೆ ಆಯಿತು. ಅಂದೇ ಸರ್ಕಾರ ಸೂಕ್ತ ಕ್ರಮ ಕೈಗೊಂಡಿದ್ದರೇ ಈ ಎಲ್ಲಾ ಹಗರಣಗಳು ಸರಿದೂಗುತ್ತಿದ್ದವೇನೋ ಎಂದು ಅವರು ಹೇಳಿದರು.
ಮುಡಾದಲ್ಲಿ ನನ್ನ ಹೆಸರಿನಲ್ಲಿ ಅಥವಾ ಬೇನಾಮಿ ಹೆಸರಿನಲ್ಲಿ ಒಂದೇ ಒಂದು ನಿವೇಶನ ಮಂಜೂರಾಗದ್ದಲ್ಲಿ ನನ್ನ ಶಾಸಕನ ಸ್ಥಾನಕ್ಕೆ ರಾಜೀನಾಮೆ ನೀಡತ್ತೇನೆ. ನಾನು ನನಗಾಗಲಿ, ಬೇರೆಯವರಿಗಾಗಲಿ ಒತ್ತಡ ಹೇರಿ ನಿವೇಶನ ಕೊಡಿಸಿಲ್ಲ. ಈ ಮುಡಾ ಅಕ್ರಮದಲ್ಲಿ ನನ್ನ ಹೆಸರು ತರಬೇಡಿ ಎಂದು ತಿಳಿಸಿದರು.
ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…
ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…
ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…
ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…
ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…