ಮೈಸೂರು

ಅರಣ್ಯ ರಕ್ಷಣೆಯಲ್ಲಿ ಸಿಬ್ಬಂದಿ ಪಾತ್ರ ಹಿರಿದು : ಅರಣ್ಯ ಸಚಿವ ಈಶ್ವರ ಖಂಡ್ರೆ

ಮೈಸೂರು : ಅರಣ್ಯ, ವನ್ಯಜೀವಿ ಸಂರಕ್ಷಣೆ ಮತ್ತು ಹಸಿರು ಸಂವರ್ಧನೆಯಲ್ಲಿ ಇಲಾಖೆಯ ಮುಂಚೂಣಿಗೆ ಸಿಬ್ಬಂದಿಯ ಪಾತ್ರ ಹಿರಿದು. ಅವರೆಲ್ಲರ ಶ್ರಮದಿಂದಲೇ ಇಂದು ರಾಜ್ಯದಲ್ಲಿ ಶೇ.21ರಷ್ಟು ಅರಣ್ಯ ಉಳಿದಿದೆ ಎಂದರೂ ತಪ್ಪಾಗಲಾರದು ಎಂದು ಅರಣ್ಯ ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ತಿಳಿಸಿದರು.

ಕೈಗಾರಿಕೆ ಇಲಾಖೆ ವ್ಯಾಪ್ತಿಯ ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತ (ಕೆ.ಎಸ್.ಡಿ.ಎಲ್) ಸಾಂಸ್ಥಿಕ ಜವಾಬ್ದಾರಿ ನೆರವಿನಿಂದ ಮೈಸೂರು ವಿಭಾಗದ ಅರಣ್ಯ ಇಲಾಖೆಯ ಮುಂಚೂಣಿ ಸಿಬ್ಬಂದಿಗೆ ಸುರಕ್ಷತಾ ಕಿಟ್ ವಿತರಿಸಿ ಮಾತನಾಡಿದ ಅವರು, ಅರಣ್ಯ ಒತ್ತುವರಿ ತಡೆಯುವಲ್ಲಿ, ಕಾಡ್ಗಿಚ್ಚು ನಂದಿಸುವಲ್ಲಿ ಹಾಗೂ ವನ್ಯಜೀವಿಗಳ ಕಳ್ಳಬೇಟೆ ತಡೆಯುವಲ್ಲಿ ಮುಂಚೂಣಿ ಸಿಬ್ಬಂದಿ ಮಾಡುತ್ತಿರುವ ಕಾರ್ಯ ಶ್ಲಾಘನಾರ್ಹವಾದದ್ದು ಎಂದರು.

ಹೀಗಾಗಿಯೇ ಹಗಲಿರುಳೆನ್ನದೆ, ಚಳಿ, ಮಳೆ ಗಾಳಿಯನ್ನು ಲೆಕ್ಕಿಸದೆ ಅರಣ್ಯ ಮತ್ತು ಅರಣ್ಯ ಸಂಪತ್ತು ಕಾಯುವ ಸಿಬ್ಬಂದಿಗೆ ವೇತನದ ಜೊತೆಗೆ ಆಹಾರಭತ್ಯೆ ನೀಡಲು ಮತ್ತು ಹೆಚ್ಚುವರಿಯಾಗಿ ಮಾಸಿಕ 2 ಸಾವಿರ ರೂ. ಅಪಾಯ ಭತ್ಯೆ (ರಿಸ್ಕ್ ಅಲೋಯನ್ಸ್) ನೀಡಲು ತಾವು ಸಚಿವರಾದ ಬಳಿಕ ಆದೇಶ ನೀಡಿದ್ದು, ಅದನ್ನು ಕಾರ್ಯಗತಗೊಳಿಸಲಾಗುತ್ತಿದೆ ಎಂದರು.

ಅರಣ್ಯ ಸಿಬ್ಬಂದಿಗೂ ಕ್ಯಾಂಟೀನ್
ಅರಣ್ಯ ಸಿಬ್ಬಂದಿಗೂ ಸಹ ಮಿಟಿಟರಿ ಮತ್ತು ಪೊಲೀಸ್ ಸಿಬ್ಬಂದಿಗೆ ಇರುವ ರೀತಿಯಲ್ಲೇ ಕ್ಯಾಂಟೀನ್ ಸೌಲಭ್ಯ ಕಲ್ಪಿಸಬೇಕು ಎಂಬ ಬೇಡಿಕೆ ಇದೆ. ಈ ಬಗ್ಗೆ ತಾವು ಈಗಾಗಲೇ ಮುಖ್ಯಮಂತ್ರಿಯವರಿಗೆ ಮನವಿ ಮಾಡಿದ್ದು, ಹಾಲಿ ಇರುವ ಪೊಲೀಸ್ ಕ್ಯಾಂಟೀನ್ ಸೌಲಭ್ಯವನ್ನು ಅರಣ್ಯ ಸಿಬ್ಬಂದಿಗೂ ವಿಸ್ತರಿಸಲು ಪ್ರಯತ್ನಿಸಲಾಗುವುದು ಎಂದರು.

ಕರ್ನಾಟಕದಲ್ಲಿ ಶ್ರೀಮಂತವಾದ ವನಪ್ರದೇಶ ಇದೆ. ಪಶ್ಚಿಮ ಘಟ್ಟಗಳು ಜೀವವೈವಿಧ್ಯತೆಯ ನೆಚ್ಚಿನ ತಾಣವಾಗಿದೆ. ಇದರ ಸಂರಕ್ಷಣೆ ಮತ್ತು ಸಂವರ್ಧನೆ ನಮ್ಮೆಲ್ಲರ ಜವಾಬ್ದಾರಿಯಾಗಿದೆ. ಇದನ್ನು ಕಾಪಾಡುವ ಕಾರ್ಯವನ್ನು ಮುಂಚೂಣಿ ಸಿಬ್ಬಂದಿ ಮಾಡುತ್ತಿದ್ದಾರೆ ಎಂದರು.

ಇಂದು ಮಾನವ ವನ್ಯಜೀವಿ ಸಂಘರ್ಷ ಹೆಚ್ಚಾಗುತ್ತಿದ್ದು, ಅರಣ್ಯ ಪ್ರದೇಶ ಕ್ಷೀಣಿಸುತ್ತಿದೆ. ಅರಣ್ಯ ವೃದ್ಧಿಸಲು ಸರ್ಕಾರ ಶ್ರಮಿಸುತ್ತಿದ್ದು, ಕಳೆದ 2 ವರ್ಷದಲ್ಲಿ 15 ಸಾವಿರ ಎಕರೆ ಜಮೀನನ್ನು ಹೊಸದಾಗಿ ಅರಣ್ಯ ಪ್ರದೇಶ ಎಂದು ಅಧಿಸೂಚನೆ ಮಾಡಲಾಗಿದೆ. ಬೆಂಗಳೂರಿನಲ್ಲಿ 4 ಸಾವಿರ ಕೋಟಿ ರೂ. ಬೆಲೆ ಬಾಳುವ 128 ಎಕರೆ ಸೇರಿದಂತೆ ರಾಜ್ಯದಾದ್ಯಂತ ಸಾವಿರಾರು ಕೋಟಿ ರೂ. ಬೆಲೆ ಬಾಳುವ 6 ಸಾವಿರ ಎಕರೆಗೂ ಹೆಚ್ಚು ಅರಣ್ಯ ಒತ್ತುವರಿ ತೆರವು ಮಾಡಲಾಗಿದೆ ಎಂದು ಈಶ್ವರ ಖಂಡ್ರೆ ತಿಳಿಸಿದರು.

2023-24 ಮತ್ತು 2024-25ರ ಸಾಲಿನಲ್ಲಿ ಒಟ್ಟು 120975 ಹೆಕ್ಟೇರ್ ಪ್ರದೇಶದಲ್ಲಿ ನೆಡುತೋಪು, 25 ಹೊಸ ವೃಕ್ಷೋದ್ಯಾನ ಮತ್ತು 35 ದೇವರ ಕಾಡು ನಿರ್ಮಾಣ ಮಾಡಲಾಗಿದೆ ಎಂದು ಹೇಳಿದರು.

ಕರ್ನಾಟಕ ಸಾಬೂನು ಮತ್ತು ಮಾರ್ಜಕ (ಕೆ.ಎಸ್.ಡಿ.ಎಲ್) ರಾಜ್ಯದಾದ್ಯಂತ 10 ಸಾವಿರ ಮುಂಚೂಣಿ ಅರಣ್ಯ ಸಿಬ್ಬಂದಿಗೆ ಬ್ಯಾಗ್, ಜರ್ಕೀನ್, ಶೂ, ನೀರಿನ ಬಾಟಲಿ ಇರುವ ಸುರಕ್ಷತಾ ಕಿಟ್ ನೀಡುತ್ತಿರುವುದನ್ನು ಪ್ರಶಂಶಿಸಿದ ಸಚಿವರು, ಇದಕ್ಕೆ ಕಾರಣೀಭೂತರಾದ ಮೂಲಸೌಕರ್ಯಾಭಿವೃದ್ಧಿ ಸಚಿವ ಎಂ.ಬಿ. ಪಾಟೀಲ್ ಹಾಗೂ ಕೆ.ಎಸ್. ಡಿ.ಎಲ್ ಅಧ್ಯಕ್ಷ ಸಿ.ಎಸ್.ನಾಡಗೌಡ ಅವರಿಗೆ ಧನ್ಯವಾದ ಅರ್ಪಿಸಿದರು.

ಶ್ರೀಗಂಧದ ನೀತಿ ಸರಳೀಕರಣ
ಕೆ.ಎಸ್.ಡಿ.ಎಲ್. ಶ್ರೀಗಂಧದ ಎಣ್ಣೆಯ ಅಗತ್ಯ ಪ್ರತಿಪಾದಿಸಿದ್ದಾರೆ. ರಾಜ್ಯದಲ್ಲಿ ರೈತರು ಕೂಡ ಶ್ರೀಗಂಧ ಬೆಳೆಯುತ್ತಿದ್ದಾರೆ. ಇವರಿಗೆ ಶ್ರೀಗಂಧ ಕಟಾವು ಮಾಡಲು, ಸಾಗಾಟ ಮಾಡಲು ಅನುವಾಗುವಂತೆ ಶೀಘ್ರವೇ ಶ್ರೀಗಂಧದ ನೀತಿ ಸರಳೀಕರಣ ಮಾಡಿ ಅಧಿಸೂಚನೆ ಹೊರಡಿಸಲಾಗುವುದು. ಅರಣ್ಯ ಇಲಾಖೆಯ ವತಿಯಿಂದ ನೆಡುತೋಪಿನಲ್ಲಿ ಶ್ರೀಗಂಧದ ಮರ ಬೆಳೆಸಲು ಕ್ರಮ ವಹಿಸಲಾಗುವುದು ಎಂದು ತಿಳಿಸಿದರು.

ಇಂದು ಜಾಗತಿಕ ತಾಪಮಾನ ಏರಿಕೆ ಮತ್ತು ಹವಾಮಾನ ಬದಲಾವಣೆಯಿಂದ ಒಂದು ತಿಂಗಳಲ್ಲಿ ಬೀಳಬೇಕಾದ ಮಳೆ ಒಂದೇ ವಾರದಲ್ಲಿ ಬೀಳುತ್ತಿದೆ, ಒಂದು ವಾರದ ಮಳೆ ಒಂದು ದಿನ ಬೀಳುತ್ತಿದ್ದು, ಅನಾಹುತ ಸೃಷ್ಟಿಸುತ್ತಿದೆ. ಹೀಗಾಗಿ ನಾವು ಹಸಿರು ಪ್ರದೇಶ ಹೆಚ್ಚಳಕ್ಕೆ ಒತ್ತುನೀಡಬೇಕು.

ಕಾರ್ಯಕ್ರಮದಲ್ಲಿ ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ್,ಶಾಸಕರಾದ ಯತೀಂದ್ರ ಸಿದ್ದರಾಮಯ್ಯ, ಕೆ.ಎಸ್.ಡಿ.ಎಲ್. ಅಧ್ಯಕ್ಷರಾದ ಸಿ.ಎಸ್.ನಾಡಗೌಡ, ಮುಖ್ಯ ವನ್ಯಜೀವಿ ಪರಿಪಾಲಕರು ಮತ್ತು ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಸುಭಾಷ್ ಮಲ್ಕಡೆ, ಎಪಿಸಿಸಿಎಫ್ ಕುಮಾರ್ ಪುಸ್ಕರ್, ವನ್ಯಜೀವಿ ಮಂಡಳಿ ಸದಸ್ಯ ಧ್ರುವ ಪಾಟೀಲ್ ಮತ್ತಿತರರು ಪಾಲ್ಗೊಂಡಿದ್ದರು.

ಆಂದೋಲನ ಡೆಸ್ಕ್

Recent Posts

ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ : ಸಿಎಂ ಖಂಡನೆ, ಶಾಂತಿ-ಸೌಹಾರ್ದತೆಗೆ ಮನವಿ

ಬೆಂಗಳೂರು : ಬಾಗಲಕೋಟೆಯ ಹಳೆಯ ನಗರದಲ್ಲಿ ಚತ್ರಪತಿ ಶಿವಾಜಿ ಮಹಾರಾಜ್ ಜಯಂತಿ ಅಂಗವಾಗಿ ನಡೆದ ಭಾವಚಿತ್ರ ಮೆರವಣಿಗೆಯ ವೇಳೆ ನಡೆದ…

2 mins ago

ಮಡಿಕೇರಿ | ಟ್ರಾಕ್ಟರ್ ಮಗುಚಿ ಕಾರ್ಮಿಕ ಸಾವು

ಸಿದ್ದಾಪುರ : ವಾಹನ ಚಲಾಯಿಸುವ ಆಸೆಯಿಂದ ಟ್ರಾಕ್ಟರ್ ಚಲಾಯಿಸಿದ ಕಾರ್ಮಿಕ ನಿಯಂತ್ರಣ ತಪ್ಪಿ ಹಳ್ಳಕ್ಕೆ ಮಗುಚಿದ ಪರಿಣಾಮ ಸ್ಥಳದಲ್ಲೆ ಮೃತ…

16 mins ago

ಬುದನೂರು ಉತ್ಸವ | ಹೆಲಿಕಾಪ್ಟರ್‌ ಜಾಯ್‌ ರೈಡ್‌ಗೆ ಚಾಲನೆ

ಮಂಡ್ಯ : ಜಿಲ್ಲೆಯ ಯುವ ಜನತೆಗೆ ನಗರದ ಚಿತ್ರಣವನ್ನು ಪ್ರದರ್ಶಿಸುವ ನಿಟ್ಟಿನಲ್ಲಿ ಹೆಲಿಕಾಪ್ಟರ್‌ ಜಾಯ್‌ ರೈಡ್‌ಅನ್ನು ಆಯೋಜಿಸಲಗಿದ್ದು, ಮೂರು ದಿನಗಳ…

33 mins ago

ಟಾಕ್ಸಿಕ್ ಟೀಸರ್ ಬಿಡುಗಡೆ : ಡಬಲ್‌ ಲುಕ್‌ನಲ್ಲಿ ಅಬ್ಬರಿಸಿದ ರಾಕಿಂಗ್‌ ಸ್ಟಾರ್ ರಾಯ‌

ಬೆಂಗಳೂರು : ರಾಕಿಂಗ್ ಸ್ಟಾರ್ ಯಶ್ ಅಭಿನಯದ ಟಾಕ್ಸಿಕ್ ಚಿತ್ರದ ಟೀಸರ್ ಇಂದು(ಫೆ.20) ಬಿಡುಗಡೆಯಾಗಿದೆ. 2 ನಿಮಿಷಗಳ ಈ ಟೀಸರ್…

54 mins ago

ಓದುಗರ ಪತ್ರ: ಶಾಲಾ ದಾಖಲಾತಿ ವಯೋಮಿತಿ ಸಮಸ್ಯೆ ನಿವಾರಿಸಿ

ಮಕ್ಕಳನ್ನು ಒಂದನೇ ತರಗತಿಗೆ ಪ್ರಸಕ್ತ ಸಾಲಿಗೆ ದಾಖಲಿಸುವ ವಯೋಮಿತಿಯನ್ನು ಆರು ವರ್ಷಗಳಿಗೆ ನಿಗದಿಗೊಳಿಸಿ ಶಾಲಾ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ.…

5 hours ago

ಓದುಗರ ಪತ್ರ: ಡ್ರಗ್ಸ್ ಜಾಲ ಪತ್ತೆಗೆ ಡ್ರೋನ್ ಕಾರ್ಯಾಚರಣೆ ಶ್ಲಾಘನೀಯ

ಮೈಸೂರಿನಲ್ಲಿ ಸಮಾಜಘಾತುಕ ಶಕ್ತಿಗಳ ದುಷ್ಕೃತ್ಯ ಮತ್ತು ಡ್ರಗ್ಸ್ ಜಾಲ ಪ್ರಕರಣಗಳ ಪತ್ತೆಗೆ ಡ್ರೋನ್ ಕಾರ್ಯಾಚರಣೆ ನಡೆಸಲು ಮೈಸೂರು ನಗರ ಪೊಲೀಸರು…

5 hours ago