ಮೈಸೂರು : ಆರ್ಸಿಬಿ ವಿಜಯೋತ್ಸವದ ರೋಡ್ ಶೋಗೆ ಸರ್ಕಾರ ಅನುಮತಿ ನಿರಾಕರಿಸಿತ್ತು. ಆಗ ಇದೇ ಬಿಜೆಪಿ ನಾಯಕರು ಸರ್ಕಾರದ ನಿರ್ಧಾರವನ್ನು ವಿರೋಧಿಸಿ ಎಕ್ಸ್ನಲ್ಲಿ ಪೋಸ್ಟ್ ಮಾಡಿದ್ದರು ಎಂದು ಸಿಎಂ ಸಿದ್ದರಾಮಯ್ಯ ಪೋಸ್ಟ್ ಅನ್ನು ಪ್ರದರ್ಶಿಸಿದರು.
ಖಾಸಗಿ ಕಾರ್ಯಕ್ರಮದಲ್ಲಿ ಭಾಗಿಯಾಗಲು ಭಾನುವಾರ ಸಂಜೆ ಮೈಸೂರಿಗೆ ಆಗಮಿಸಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಡಕಳ್ಳಿ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು.
ಆರ್ಸಿಬಿ ಕಾಲ್ತುಳಿತದಂತಹ ಪ್ರಕರಣ ಜರುಗಬಾರದಿತ್ತು. ನಾನು ಮುಖ್ಯಮಂತ್ರಿ ಆದಾಗಿನಿಂದ ಯಾವತ್ತೂ ಇಂತಹ ಪ್ರಕರಣ ಆಗಿರಲಿಲ್ಲ. ಈಗ ಆಗಿರುವುದು ನೋವಾಗಿದೆ. ಕೇವಲ ನನಗೆ ಮಾತ್ರವಲ್ಲ ಎಲ್ಲರಿಗೂ ನೋವಾಗಿದೆ. ಇದರಲ್ಲಿ ನಾವೇನು ತಪ್ಪು ಮಾಡಿಲ್ಲ. ಇದೀಗ ಬಿಜೆಪಿಯವರು ಪ್ರಕರಣಕ್ಕೆ ಬೇರೆ ಬಣ್ಣ ಹಚ್ಚುವ ಕೆಲಸ ಮಾಡಿದ್ದಾರೆ ಎಂದು ಹೇಳಿದರು.
ಆರ್ಸಿಬಿ ರೋಡ್ ಶೋಗೆ ಅನುಮತಿ ನಿರಾಕರಿಸಲಾಗಿತ್ತು. ಆಗ ಇದೇ ಬಿಜೆಪಿ ಮಂದಿ ರೋಡ್ ಶೋಗೆ ಅನುಮತಿ ನೀಡದ ಗೃಹ ಸಚಿವರನ್ನು ಅಸಮರ್ಥ ಎಂದು ಕರೆದಿದ್ದರು ಎಂದು ಅಂದು ಬಿಜೆಪಿ ನಾಯಕರು ಮಾಡಿದ್ದ ಟ್ವಿಟ್ ಮಾಡಿದ್ದನ್ನು ಪ್ರದರ್ಶಿಸಿದರು.
ಬೆಂಗಳೂರು: ಬಡವರ ಮತಗಳನ್ನು ತೆಗೆಯಲು ಎಸ್ಐಆರ್ ಮೂಲಕ ಸಂಚು ಮಾಡಲಾಗಿದೆ. ನಾವುಗಳು ಬಹಳ ಎಚ್ಚರಿಕೆಯಿಂದ ಇರಬೇಕು ಎಂದು ನಮ್ಮ ಪಕ್ಷದ…
ಬೆಂಗಳೂರು: ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ಗೆ ರಾಜ್ಯ ಸರ್ಕಾರ ರಿಲೀಫ್ ನೀಡಿದೆ. ವಾಟಾಳ್ ನಾಗರಾಜ್ ಮೇಲಿನ ಕೇಸ್ಗಳನ್ನು ಸರ್ಕಾರ ಹಿಂಪಡೆಯಲು…
ಬೆಂಗಳೂರು: ಕಾನೂನಾತ್ಮಕವಾಗಿ 52 ಪ್ರಕರಣಗಳನ್ನು ಹಿಂಪಡೆಯಬಹುದು ಎಂದು ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಮಾಡಲಾಗಿದೆ ಎಂದು ಗೃಹ ಸಚಿವ ಪರಮೇಶ್ವರ್…
ಶ್ರೀರಂಗಪಟ್ಟಣ: ಶ್ರೀರಂಗಪಟ್ಟಣದ ಪ್ರಸಿದ್ಧ ವೆಲ್ಲೆಸ್ಲಿ ಸೇತುವೆ ಆತ್ಮಹತ್ಯೆ ಹಾಟ್ಸ್ಪಾಟ್ ಆಗುತ್ತಿದ್ದು, ಸೇತುವೆ ಮೇಲಿಂದ ನದಿಗೆ ಧುಮುಕಿ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವವರ ಸಂಖ್ಯೆ…
ನವದೆಹಲಿ: ಆಫ್ರಿಕಾದ ಹಲವು ಭಾಗಗಳಲ್ಲಿ ಕೋವಿಡ್ಗಿಂತಲೂ ಡೆಡ್ಲಿಯಾದ ಎಬೋಲಾ ವೈರಸ್ ಹಾವಳಿ ಕಂಡುಬಂದಿರುವ ಹಿನ್ನೆಲೆಯಲ್ಲಿ ಭಾರತದಲ್ಲೂ ಕಟ್ಟೆಚ್ಚರಕ್ಕೆ ಆದೇಶ ನೀಡಲಾಗಿದೆ.…
ನವದೆಹಲಿ: ಕರ್ನಾಟಕ ನಾಲ್ಕು ಸೇರಿದಂತೆ 24 ರಾಜ್ಯಸಭಾ ಸ್ಥಾನಗಳಿಗೆ ಚುನಾವಣಾ ದಿನಾಂಕ ಘೋಷಣೆಯಾಗಿದೆ. ಮಲ್ಲಿಕಾರ್ಜುನ ಖರ್ಗೆ, ಎಚ್.ಡಿ.ದೇವೇಗೌಡ, ಈರಣ್ಣ ಕಡಾಡಿ,…