ಮೈಸೂರು : ಆರ್ಸಿಬಿ ವಿಜಯೋತ್ಸವದ ರೋಡ್ ಶೋಗೆ ಸರ್ಕಾರ ಅನುಮತಿ ನಿರಾಕರಿಸಿತ್ತು. ಆಗ ಇದೇ ಬಿಜೆಪಿ ನಾಯಕರು ಸರ್ಕಾರದ ನಿರ್ಧಾರವನ್ನು ವಿರೋಧಿಸಿ ಎಕ್ಸ್ನಲ್ಲಿ ಪೋಸ್ಟ್ ಮಾಡಿದ್ದರು ಎಂದು ಸಿಎಂ ಸಿದ್ದರಾಮಯ್ಯ ಪೋಸ್ಟ್ ಅನ್ನು ಪ್ರದರ್ಶಿಸಿದರು.
ಖಾಸಗಿ ಕಾರ್ಯಕ್ರಮದಲ್ಲಿ ಭಾಗಿಯಾಗಲು ಭಾನುವಾರ ಸಂಜೆ ಮೈಸೂರಿಗೆ ಆಗಮಿಸಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಡಕಳ್ಳಿ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು.
ಆರ್ಸಿಬಿ ಕಾಲ್ತುಳಿತದಂತಹ ಪ್ರಕರಣ ಜರುಗಬಾರದಿತ್ತು. ನಾನು ಮುಖ್ಯಮಂತ್ರಿ ಆದಾಗಿನಿಂದ ಯಾವತ್ತೂ ಇಂತಹ ಪ್ರಕರಣ ಆಗಿರಲಿಲ್ಲ. ಈಗ ಆಗಿರುವುದು ನೋವಾಗಿದೆ. ಕೇವಲ ನನಗೆ ಮಾತ್ರವಲ್ಲ ಎಲ್ಲರಿಗೂ ನೋವಾಗಿದೆ. ಇದರಲ್ಲಿ ನಾವೇನು ತಪ್ಪು ಮಾಡಿಲ್ಲ. ಇದೀಗ ಬಿಜೆಪಿಯವರು ಪ್ರಕರಣಕ್ಕೆ ಬೇರೆ ಬಣ್ಣ ಹಚ್ಚುವ ಕೆಲಸ ಮಾಡಿದ್ದಾರೆ ಎಂದು ಹೇಳಿದರು.
ಆರ್ಸಿಬಿ ರೋಡ್ ಶೋಗೆ ಅನುಮತಿ ನಿರಾಕರಿಸಲಾಗಿತ್ತು. ಆಗ ಇದೇ ಬಿಜೆಪಿ ಮಂದಿ ರೋಡ್ ಶೋಗೆ ಅನುಮತಿ ನೀಡದ ಗೃಹ ಸಚಿವರನ್ನು ಅಸಮರ್ಥ ಎಂದು ಕರೆದಿದ್ದರು ಎಂದು ಅಂದು ಬಿಜೆಪಿ ನಾಯಕರು ಮಾಡಿದ್ದ ಟ್ವಿಟ್ ಮಾಡಿದ್ದನ್ನು ಪ್ರದರ್ಶಿಸಿದರು.
ಬೆಂಗಳೂರು : ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಗರಣದಲ್ಲಿ ದುರುಪಯೋಗವಾಗಿದೆ ಎಂದು ಹೇಳಲಾಗಿದ್ದ 187 ಕೋಟಿ ರೂಪಾಯಿ…
ಹನೂರು : ಅರಣ್ಯ ಇಲಾಖೆ ಸಿಬ್ಬಂದಿ ಗುಂಡಿಗೆ ಮೂವರು ಬಲಿ ಪ್ರಕರಣಕ್ಕೆ ದಿನಕ್ಕೊಂದು ಟ್ವಿಸ್ಟ್ ಸಿಗುತ್ತಿದೆ. ದನ ಹುಡುಕಲು ಹೋಗಿದ್ದವರ…
ಬೆಂಗಳೂರು: ಬೆಂಗಳೂರು ದಕ್ಷಿಣದ ದೊಡ್ಡೇರಿಯಲ್ಲಿ ಬೃಹತ್ ನಕಲಿ ಔಷಧ ಜಾಲ ಪತ್ತೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸರ್ಕಾರ ಈ ಪ್ರಕರಣವನ್ನು…
ಸದ್ದಿಲ್ಲದೆ ಕೈಗೊಂಡ ತೀರ್ಮಾನಕ್ಕೆ ಬೆಚ್ಚಿದ ರಿಯಲ್ ಎಸ್ಟೇಟ್ ಉದ್ಯಮಿಗಳು; ಮೂರು ಪಕ್ಷಗಳಲ್ಲೂ ತಳಮಳ ಕೆ.ಬಿ.ರಮೇಶನಾಯಕ ಮೈಸೂರು : ಕಳೆದ ಎರಡು…
ಮೊದಲಬಾರಿಗೆ ರಾಷ್ಟ್ರರಾಜಧಾನಿಯಿಂದ ಹೊರಗೆ ಆಯೋಜನೆ 72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭವು ಇದೇ ಮೊದಲ ಬಾರಿಗೆ ನವದೆಹಲಿಯಿಂದ…