ಮೈಸೂರು

ಕಾಲ್ತುಳಿತ ದುರಂತ ಪ್ರಕರಣ: ಪ್ರಚಾರ ಗೀಳಿನಿಂದಲೇ ಘಟನೆ ಸಂಭವಿಸಿದೆ ಎಂದ ಬಿಜೆಪಿ ನಾಯಕರು

ಮೈಸೂರು: ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕಾಲ್ತುಳಿತ ಪ್ರಕರಣ ಸಂಭವಿಸಲು ರಾಜ್ಯ ಸರ್ಕಾರವೇ ನೇರ ಕಾರಣ ಎಂದು ಶಾಸಕ ಶ್ರೀವತ್ಸ ಹಾಗೂ ಮಾಜಿ ಶಾಸಕ ಎಲ್.ನಾಗೇಂದ್ರ ಆರೋಪಿಸಿದ್ದಾರೆ.

ಈ ಕುರಿತು ಮೈಸೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಶಾಸಕ ಟಿ.ಎಸ್.ಶ್ರೀವತ್ಸ ಅವರು, ಬೆಂಗಳೂರಿನಲ್ಲಿ ನಡೆದ ಕಾಲ್ತುಳಿತ ಪ್ರಕರಣಕ್ಕೆ ಅಧಿಕಾರಿಗಳು ಹೊಣೆ ಎಂದು ಅವರನ್ನೇ ಸಸ್ಪೆಂಡ್ ಮಾಡಿದ್ದಾರೆ. ಅದೇ ಮೈಸೂರು ಮುಡಾ ಹಗರಣದಲ್ಲಿ ಅಧಿಕಾರಿಗಳ ಮೇಲೆ ಕ್ರಮ ಯಾಕಿಲ್ಲ? ಎಂದು ಪ್ರಶ್ನೆ ಮಾಡಿದರು. ಸಿಎಂ ಸಿದ್ದರಾಮಯ್ಯ ಅವರ ಲಾಭ ಹಾಗೂ ಅನುಕೂಲಕ್ಕೆ ತಕ್ಕಂತೆ ಅಧಿಕಾರ ದುರ್ಬಳಕೆ ಮಾಡ್ತಿದ್ದಾರೆ. ವಿಧಾನಸೌಧದ ಬಳಿ ಕಾರ್ಯಕ್ರಮ ಮಾಡಲು ಅನುಮತಿ ಕೊಟ್ಟೋರು ಯಾರು? ಇದಕ್ಕೆಲ್ಲಾ ನೇರ ಹೊಣೆ ಸಿಎಂ ಹಾಗೂ ಡಿಸಿಎಂ. ತಮ್ಮ ತಪ್ಪು ಮುಚ್ಚಿಕೊಳ್ಳಲು ಪೊಲೀಸ್ ಇಲಾಖೆಯನ್ನು ಬಲಿ ಪಶು ಮಾಡಿದ್ದಾರೆ ಎಂದು ಕಿಡಿಕಾರಿದರು.

ಇದೇ ವೇಳೆ ಮಾತನಾಡಿದ ಮಾಜಿ ಶಾಸಕ ಎಲ್.ನಾಗೇಂದ್ರ ಅವರು, ರಾಜ್ಯ ಸರ್ಕಾರ ಈ ಕಾರ್ಯಕ್ರಮದ ಮೂಲಕ ಅಮಾಯಕರನ್ನು ಬಲಿ ಪಡೆದುಕೊಂಡಿದೆ. ಪ್ರಚಾರದ ಗೀಳಿನಿಂದಲೇ ಈ ಘಟನೆ ಸಂಭವಿಸಿದೆ. ಪೊಲೀಸರು ಶಕ್ತಿ ಮೀರಿ ಕೆಲಸ ಮಾಡಿದ್ದಾರೆ. ಆದರೆ ಪ್ರಾಮಾಣಿಕ ಅಧಿಕಾರಿಗಳನ್ನು ಅಮಾನತು ಮಾಡಿರುವುದು ಒಳ್ಳೆಯ ಬೆಳವಣಿಗೆ ಅಲ್ಲ. ಸಿಎಂ ಸಿದ್ದರಾಮಯ್ಯರಿಗೆ ರಾಜ್ಯದ ಜನರ ಮೇಲೆ ಕಿಂಚಿತ್ತೂ ಗೌರವವಿಲ್ಲ. ಗೌರವವಿದ್ದರೆ ಈಗಲೇ ರಾಜೀನಾಮೆ ಕೊಟ್ಟು ಮನೆಗೆ ಹೋಗಿ ಎಂದು ಆಗ್ರಹಿಸಿದರು.

ಆಂದೋಲನ ಡೆಸ್ಕ್

Recent Posts

ಮುಖ್ಯಮಂತ್ರಿಯಾಗಿ ಮೊದಲ ಬಾರಿಗೆ ಧ್ವಜಾರೋಹಣ ನೆರವೇರಿಸಿದ ಡಿಕೆಶಿ

ಬೆಂಗಳೂರು: 80ನೇ ಸ್ವಾತಂತ್ರ್ಯೋತ್ಸವದ ಪ್ರಯುಕ್ತ ಸಿಎಂ ಡಿ.ಕೆ.ಶಿವಕುಮಾರ್‌ ಅವರು ಸಿಎಂ ಆದ ಮೊದಲ ಬಾರಿಗೆ ಧ್ವಜಾರೋಹಣ ನೆರವೇರಿಸಿದರು. ಸದಾಶಿವನಗರದಲ್ಲಿರುವ ತಮ್ಮ…

53 mins ago

80ನೇ ಸ್ವಾತಂತ್ರ್ಯೋತ್ಸವದ ಸಂಭ್ರಮ: ಧ್ವಜಾರೋಹಣ ನೆರವೇರಿಸಿದ ಪ್ರಧಾನಿ ಮೋದಿ

ನವದೆಹಲಿ: ದೇಶದಾದ್ಯಂತ ಇಂದು 80ನೇ ಸ್ವಾತಂತ್ರ್ಯೋತ್ಸವನ್ನು ಸಂಭ್ರಮದಿಂದ ಆಚರಿಸಲಾಗುತ್ತಿದ್ದು, ಇದರ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಕೆಂಪುಕೋಟೆಯಲ್ಲಿ ಧ್ವಜಾರೋಹಣ…

2 hours ago

ಓದುಗರ ಪತ್ರ: ಮಹಿಳಾ ಸಿಬ್ಬಂದಿ ಲಂಚದ ಮಸಿ ಅಂಟಿಸಿಕೊಳ್ಳದಂತೆ ಎಚ್ಚರ ವಹಿಸಬೇಕು

ಪ್ರಾಮಾಣಿಕತೆ, ದಕ್ಷತೆ ವಿಷಯ ಬಂದಾಗ ಹೆಂಗಸರಿಗೆ ಸಿಗುವ ‘ಅಂಕ’ ಸ್ವಲ್ಪ ಹೆಚ್ಚೆ ಎಂಬ ಭಾವನೆ ಈ ಹಿಂದಿನಿಂದಲೂ ಇದೆ. ಅದೇ…

2 hours ago

ಓದುಗರ ಪತ್ರ: ಅಡಕೆ ಬೆಳೆಗಾರರ ಹಿತವೂ ಮುಖ್ಯವಲ್ಲವೇ?

ರಾಜ್ಯ ಸರ್ಕಾರವು ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ಗುಟ್ಕಾ ಹಾಗೂ ಪಾನ್ ಮಸಾಲಾ ಉತ್ಪನ್ನಗಳ ತಯಾರಿಕೆ ಮತ್ತು ಮಾರಾಟದ ಮೇಲೆ ಒಂದು…

2 hours ago

ಓದುಗರ ಪತ್ರ: ಈ ಬಾರಿಯ ದಸರಾ ಉದ್ಘಾಟನೆಗೆ ಹೆಚ್.ಡಿ.ದೇವೇಗೌಡರನ್ನು ಆಯ್ಕೆಮಾಡಲಿ

ಪ್ರತಿ ವರ್ಷ ವಿಶ್ವ ವಿಖ್ಯಾತ ನಾಡಹಬ್ಬ ದಸರಾ ಬಹು ವಿಜೃಂಭಣೆಯಿಂದ ಮೈಸೂರಿನಲ್ಲಿ ಹತ್ತು ದಿನಗಳ ಕಾಲ ನಡೆಯುತ್ತದೆ. ಈ ಕಾರ್ಯಕ್ರಮಕ್ಕೆ…

2 hours ago

ಮೈಸೂರು ಸ್ವಚ್ಛವಾಗಿಡಲು ಜನರಿಗೆ ಕೆಲ ಅಭ್ಯಾಸ ಅಗತ್ಯ

ಟಿ.ಕೆ.ಹರೀಶ್ ಮನೆ ಮುಂದಿನ ರಸ್ತೆಯ ಕಸ ವಿಲೇವಾರಿಗೆ ನಾಗರಿಕರು ಜಾಗೃತರಾಗಬೇಕು ಮೈಸೂರು ಎಂದರೆ ಕೇವಲ ಒಂದು ನಗರವಲ್ಲ. ಅದು ಕರ್ನಾಟಕದ…

2 hours ago