ಮೈಸೂರು

ಸೆ.22 ಸೆ.25ರವರೆಗೆ ರಾಜ್ಯಮಟ್ಟದ ದಸರಾ ಕ್ರೀಡಾಕೂಟ

ಮೈಸೂರು : ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ 2025-26ನೇ ಸಾಲಿನ ದಸರಾ ಕ್ರೀಡಾಕೂಟ ಸ್ಪರ್ಧೆಗಳನ್ನು ಪುರುಷರು ಮತ್ತು ಮಹಿಳೆಯರಿಗಾಗಿ ತಾಲೂಕು, ಜಿಲ್ಲಾ ಮಟ್ಟದ ಸ್ಪರ್ಧೆಗಳನ್ನು ನಡೆಸಲಿದ್ದು, ರಾಜ್ಯ ಮಟ್ಟದ ಸ್ಪರ್ಧೆ ಸೆ.22 ರಿಂದ ಸೆ.25ರವರೆಗೆ ಆಯೋಜಿಸಲು ನಿರ್ಧರಿಸಲಾಗಿದೆ.

ನಗರದ ಚಾಮುಂಡಿ ವಿಹಾರ ಕ್ರೀಡಾಂಗಣದಲ್ಲಿ ನಡೆಸಲಾಗುವ ಕ್ರೀಡಾಕೂಟವನ್ನು ಬೆಂಗಳೂರು ನಗರ ವಿಭಾಗ, ಬೆಂಗಳೂರು ಗ್ರಾಮಾಂತರ ವಿಭಾಗ, ಮೈಸೂರು ವಿಭಾಗ, ಕಲ್ಬುರ್ಗಿ ವಿಭಾಗ, ಬೆಳಗಾವಿ ವಿಭಾಗ ಎಂಬ 5 ವಿಭಾಗಗಳಾಗಿ ವಿಂಗಡಿಸಿ ಕ್ರೀಡೆ ನಡೆಸಲಾಗುತ್ತದೆ. ವಿಭಾಗ ಮಟ್ಟದಲ್ಲಿ ಸ್ಪರ್ಧಿಸುವ ಕ್ರೀಡಾಪಟುಗಳ ಫಲಿತಾಂಶವನ್ನು ಮೈಸೂರು ಜಿಲ್ಲೆಯ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕರು ಹಾಗೂ ಬೆಂಗಳೂರು ಕೇಂದ್ರ ಕಚೇರಿ ಆಯುಕ್ತರಿಗೆ ಸೆ.15ರ ಒಳಗಾಗಿ ಇಲಾಖೆ ನೀಡಲಿರುವ ಪೋರ್ಟಲ್‌ನಲ್ಲಿ ಅಪ್‌ಲೋಡ್ ಮಾಡಲಾಗುವುದು.

ತಾಲೂಕು ಮಟ್ಟದ ದಸರಾ ಕ್ರೀಡಾ ಸ್ಪರ್ಧೆಗಳನ್ನು ಆ.28ರೊಳಗಾಗಿ, ಜಿಲ್ಲಾ ಮಟ್ಟದ ಸ್ಪರ್ಧೆಯನ್ನು ಸೆ.01ರೊಳಗೆ, ವಿಭಾಗ ಮಟ್ಟದ ಕ್ರೀಡಾ ಸ್ಪರ್ಧೆಯನ್ನು ಸೆ.10ರೊಳಗಾಗಿ ನೆಡಸಲಾಗುವುದು. ಕ್ರೀಡಾಕೂಟದಲ್ಲಿ ಮಹಿಳೆ ಮತ್ತು ಪುರುಷರಿಗಾಗಿ ಅಥ್ಲೆಟಿಕ್ ಸ್ಪರ್ಧೆ, ಈಜು, ವಿವಿಧ ಯೋಗ ಆಸನಗಳು, ವಿಭಾಗ ಮಟ್ಟದಲ್ಲಿ ಸ್ಪರ್ಧಿಸುವ ಕ್ರೀಡಾಪಟುಗಳ ಫಲಿತಾಂಶವನ್ನು ಮೈಸೂರು ಜಿಲ್ಲೆಯ ಯುವ ಸಬಲೀ ಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕರು ಹಾಗೂ ಬೆಂಗಳೂರು ಕೇಂದ್ರ ಕಚೇರಿ ಆಯುಕ್ತರಿಗೆ ಸೆ.೧೫ರೊಒಳಗಾಗಿ ಇಲಾಖೆ ನೀಡಲಿರುವ ಪೋರ್ಟಲ್‌ನಲ್ಲಿ ಅಪ್‌ಲೋಡ್ ಮಾಡಲಾಗುತ್ತದೆ.

ತಾಲ್ಲೂಕು ಮಟ್ಟದ ದಸರಾ ಕ್ರೀಡಾ ಸ್ಪರ್ಧೆಗಳನ್ನು ಆ.28ರೊಳಗಾಗಿ, ಜಿಲ್ಲಾಮಟ್ಟದ ಸ್ಪರ್ಧೆಯನ್ನು ಸೆ.೧ರೊಳಗೆ, ವಿಭಾಗ ಮಟ್ಟದ ಕ್ರೀಡಾ ಸ್ಪರ್ಧೆಯನ್ನು ಸೆ.೧೦ರೊಳಗಾಗಿ ನಡೆಸಲಾಗುವುದು. ಕ್ರೀಡಾಕೂಟ ದಲ್ಲಿ ಮಹಿಳೆ ಮತ್ತು ಪುರುಷರಿಗಾಗಿ ಅಥ್ಲೆಟಿಕ್ಸ್ ಸ್ಪರ್ಧೆ, ಈಜು, ವಿವಿಧ ಯೋಗಾಸನಗಳು, ಕಬಡ್ಡಿ, ವಾಲಿಬಾಲ್, ಬಾಸ್ಕೆಟ್‌ಬಾಲ್, ಕುಸ್ತಿ, ಫುಟ್‌ಬಾಲ್, ಖೋಖೋ, ಹಾಕಿ, ಬ್ಯಾಡ್ಮಿಂಟನ್ ಸೇರಿದಂತೆ ಇನ್ನೂ ಹಲವು ಕ್ರೀಡೆಗಳನ್ನು ಆಯೋಜಿಸಲಾಗುತ್ತದೆ.

ಹೆಚ್ಚಿನ ಮಾಹಿತಿಗಾಗಿ ಎಲ್ಲಾ ಜಿಲ್ಲೆಗಳ ಜಿಲ್ಲಾ ಅಧಿಕಾರಿಗಳು, ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು, ಬೆಂಗಳೂರು ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕರು ಹಾಗೂ ಬೆಂಗಳೂರು ಕರ್ನಾಟಕ ಕ್ರೀಡಾ ಪ್ರಾಧಿಕಾರದ ಮಹಾ ನಿರ್ದೇಶಕರನ್ನು ಸಂಪರ್ಕಿಸಬಹುದಾಗಿದೆ.

ಆಂದೋಲನ ಡೆಸ್ಕ್

Recent Posts

ರಾಮಕೃಷ್ಣ ಆಶ್ರಮದವರು ಕೊಟ್ಟ ಮಾತು ಉಳಿಸಿಕೊಳ್ಳಬೇಕಿತ್ತು

ಶತಮಾನದ ಹಿಂದೆ ಮೈಸೂರು ಸಂಸ್ಥಾನದ ಮಹಾರಾಣಿಯವರಾಗಿದ್ದ ಕೆಂಪನಂಜಮ್ಮಣ್ಣಿ ಅವರು ಮೈಸೂರಿನ ಹೆಣ್ಣುಮಕ್ಕಳಿಗಾಗಿ ಸ್ಥಾಪಿಸಿದ್ದ ‘ಮಹಾರಾಣಿಯವರ ಹೊಸ ಮಾದರಿ (ಎನ್‌ಟಿಎಂ) ಶಾಲೆ’…

47 mins ago

ಅರವತ್ತು ದಿನಗಳು ಕಳೆಯಿತು…ಫಲದ ನಿರೀಕ್ಷೆಯಲ್ಲಿ!

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ತೋಳ ಬಂತು ತೋಳ ಕತೆಯನ್ನು ನೆನಪಿಸುವಂತಿರುವ ರಾಜ್ಯ ಸಚಿವ ಸಂಪುಟ ವಿಸ್ತರಣೆ ಪ್ರಕ್ರಿಯೆ ಕಾಂಗ್ರೆಸ್…

51 mins ago

ಇಂದು ಕೊಡಗು ಜಿಲ್ಲೆಯಲ್ಲಿ ಕಕ್ಕಡ 18ರ ಸಂಭ್ರಮ

ನವೀನ್ ಡಿಸೋಜ ಮನೆಮನೆಗಳಲ್ಲಿ ಘಮಘಮಿಸಲಿದೆ ಮದ್ದುಸೊಪ್ಪಿನ ಖಾದ್ಯ; ವಿಭಿನ್ನ ಹಬ್ಬದಾಚರಣೆಗೆ ಜಿಲ್ಲೆಯಲ್ಲಿ ಸಿದ್ಧತೆ  ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಸೋಮವಾರ (ಆ.೩)ಕಕ್ಕಡ…

56 mins ago

ಸಾರ್ವಜನಿಕರ ಶೌಚಾಲಯಕ್ಕೆ ಬೇಕಿದೆ ಚಿಕಿತ್ಸೆ!

ಪಂ.ಪುಟ್ಟರಾಜ ಗವಾಯಿ ಕ್ರೀಡಾಂಗಣದಲ್ಲಿನ ಶೌಚಾಲಯದಲ್ಲಿ ಅಶುಚಿತ್ವ ತಾಂಡವ ಮೈಸೂರು: ವಾಯುವಿಹಾರಿಗಳು ಹಾಗೂ ಕ್ರೀಡಾಸಕ್ತರ ನೆಚ್ಚಿನ ತಾಣವಾಗಿರುವ ಪಂ.ಪುಟ್ಟರಾಜ ಗವಾಯಿ ಕ್ರೀಡಾಂಗಣದಲ್ಲಿ…

1 hour ago

ಗ್ರಾಪಂಗಳ ಅತ್ಯುತ್ತಮ ಕೆಲಸಕ್ಕೆ ಉತ್ತಮ ಪ್ರಶಸ್ತಿ

ಕೆ.ಬಿ.ರಮೇಶನಾಯಕ ಪ್ರಗತಿಯಲ್ಲಿ ಹಿಂದೆ ಬಿದ್ದಿರುವ ಗ್ರಾಪಂಗಳನ್ನು ಹುರಿದುಂಬಿಸಲು ಜಿಪಂ ಹೊಸ ಯೋಜನೆ ಪ್ರಶಸ್ತಿಗೆ ನಾಲ್ಕು ಕಾರ್ಯಸೂಚಿಯಲ್ಲಿ ಪ್ರಗತಿ ಸಾಧಿಸಿದ ಗ್ರಾಪಂಗಳ…

1 hour ago

ದ್ರಾಕ್ಷಿ ತೋಟ ನೋಡಲು ಮುಗಿಬಿದ್ದ ಜನರು

ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…

1 day ago