ಮೈಸೂರು: ಕೇಂದ್ರ ಸರ್ಕಾರದಿಂದ ಹೆಚ್ಚುವರಿ ಬರ ಪರಿಹಾರಕ್ಕಾಗಿ ರಾಜ್ಯ ಸರ್ಕಾರ ನ್ಯಾಯಾಲಯದಲ್ಲಿ ಹೋರಾಟ ಮುಂದುವರಿಸಬೇಕು ಎಂದು ರೈತ ಸಂಘದ ರಾಜ್ಯಾಧ್ಯಕ್ಷ ಬಡಗಲಪುರ ನಾಗೇಂದ್ರ ಒತ್ತಾಯಿಸಿದರು.
ಜಿಲ್ಲಾ ಪತ್ರಕರ್ತರ ಭವನದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯ ಸರ್ಕಾರ ಕೇಂದ್ರದ ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿ (ಎನ್ಡಿಆರ್ಎಫ್) ಮಾನದಂಡದ ಅಡಿಯಲ್ಲಿ ಸುಮಾರು ೧೮ ಸಾವಿರ ಕೋಟಿ ರೂ. ಬರ ಪರಿಹಾರ ನೀಡುವಂತೆ ಸುಪ್ರೀಂ ಕೋರ್ಟ್ ಮೊರೆ ಹೋಗಿತ್ತು. ಆದರೆ ಕೇಂದ್ರ ಸರ್ಕಾರ ೩,೪೫೪ ಕೋಟಿ ರೂ. ಬರ ಪರಿಹಾರ ಬಿಡುಗಡೆಗೊಳಿಸಿದ್ದು, ಭಿಕ್ಷೆ ರೂಪದಲ್ಲಿ ಪರಿಹಾರ ನೀಡಲಾಗಿದೆ. ಆದ್ದರಿಂದ, ರಾಜ್ಯ ಸರ್ಕಾರ ಕೇಂದ್ರದ ವಿರುದ್ಧ ನ್ಯಾಯಾಲಯದಲ್ಲಿನ ಹೋರಾಟ ಮುಂದುವರಿಸುವುದು ಅಗತ್ಯ ಎಂದರು.
ಬಿಜೆಪಿ ಸೋಲಿಸಿ-ರೈತರ ಉಳಿಸಿ ಅಭಿಯಾನ: ಕೇಂದ್ರದ ಬಿಜೆಪಿ ಸರ್ಕಾರದ ರೈತ ವಿರೋಧಿ ಧೋರಣೆ ಖಂಡಿಸಿ ರಾಜ್ಯ ರೈತ ಸಂಘದಿಂದ ಚುನಾವಣೆ ವೇಳೆ ಬಿಜೆಪಿ-ಜಾ.ದಳ ಮೈತ್ರಿ ಅಭ್ಯರ್ಥಿಗಳನ್ನು ಸೋಲಿಸಿ, ರೈತರನ್ನು ಉಳಿಸಿ ಎಂಬ ಅಭಿಯಾನ ಹಮ್ಮಿಕೊಂಡಿದ್ದು, ಇದರ ಅಂಗವಾಗಿ ಮೊದಲ ಹಂತದ ಚುನಾವಣೆ ವೇಳೆ ಸುಮಾರು ಶೇ.೪ರಷ್ಟು ರೈತರ ಮತಗಳು ಮೈತ್ರಿ ಪಕ್ಷ ವಿರುದ್ಧವಾಗಿ ಚಲಾವಣೆ ಆಗಿರುವ ಸಾಧ್ಯತೆ ಇದೆ. ಇದೇ ರೀತಿ ೨ನೇ ಹಂತದಲ್ಲಿಯೂ ಉತ್ತರ ಕರ್ನಾಟಕದಲ್ಲಿಯೂ ರೈತ ಸಂಘ ಅಭಿಯಾನ ಮುಂದುವರಿಸಲಿದೆ ಎಂದರು.
ವಿದ್ಯುತ್ ಸಂಪರ್ಕ ಶುಲ್ಕ ಹೆಚ್ಚಳಕ್ಕೆ ಖಂಡನೆ: ಬರಗಾಲದ ಕಾರಣ ಪಂಪ್ಸೆಟ್ ಆಧರಿಸಿ ಕೃಷಿ ಮಾಡುವವರಿಗೆ ಸಮರ್ಪಕ ವಿದ್ಯುತ್ ಸರಬರಾಜು ಮಾಡುತ್ತಿಲ್ಲ. ೨೮ ಸಾವಿರ ರೂ. ಇದ್ದ ವಿದ್ಯುತ್ ಸಂಪರ್ಕದ ಶುಲ್ಕವನ್ನು ಎರಡೂವರೆ ಲಕ್ಷ ರೂ.ಗೆ ಏರಿಸಲಾಗಿದೆ. ಈ ಬಗ್ಗೆ ಸರ್ಕಾರ ಕ್ರಮ ಕೈಗೊಳ್ಳಬೇಕು. ಇಲ್ಲದಿದ್ದರೆ, ಉಗ್ರ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಸಿದರು.
ರೈತ ಸಂಘದ ಪದಾಧಿಕಾರಿಗಳಾದ ನೇತ್ರಾವತಿ, ಹೊಸಕೋಟೆ ಬಸವರಾಜು, ಪಿ.ಮರಂಕಯ್ಯ, ಹೊಸೂರು ಕುಮಾರ್, ಕಲ್ಲಹಳ್ಳಿ ಜಯಣ್ಣ ಸುದ್ದಿಗೋಷ್ಠಿಯಲ್ಲಿ ಹಾಜರಿದ್ದರು.
ರಾಜ್ಯದಲ್ಲಿ ಅರುಣಾಚಲ ಪ್ರದೇಶ ಮತ್ತು ನಾಗಾಲ್ಯಾಂಡ್ನಂತಹ ದೂರದ ರಾಜ್ಯಗಳ ದಾಖಲೆಗಳನ್ನು ಬಳಸಿ ಬಸ್ಗಳ ನಕಲಿ ರಹ ದಾರಿ(ಪರ್ಮಿಟ್) ಪಡೆದು ಸರ್ಕಾರಕ್ಕೆ…
ಇತ್ತೀಚಿನ ದಿನಗಳಲ್ಲಿ ಸರ್ಕಾರಿ ಸ್ವಾಮ್ಯದ ಕೆಲವು ಬ್ಯಾಂಕ್ಗಳಲ್ಲಿ ಗ್ರಾಹಕರು ಅಡಮಾನ ಇಟ್ಟಿರುವ ಚಿನ್ನವನ್ನು ಬ್ಯಾಂಕ್ ಸಿಬ್ಬಂದಿಯೇ ದುರುಪಯೋಗಪಡಿಸಿಕೊಳ್ಳುತ್ತಿರುವ ಪ್ರಕರಣಗಳು ಮಾಧ್ಯಮಗಳಲ್ಲಿ…
ಮೈಸೂರಿನ ಕುವೆಂಪುನಗರ ವಿಶ್ವ ಮಾನವ ಜೋಡಿ ರಸ್ತೆಯ ಸಿ ಆಂಡ್ ಡಿ ಬ್ಲಾಕ್ನಲ್ಲಿರುವ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಸಾಕಷ್ಟು ಸಿಬ್ಬಂದಿ…
ಖಾಸಗಿ ಹಾಗೂ ಸರ್ಕಾರಿ ಬ್ಯಾಂಕುಗಳು ಈಗಲೂ ಉಳಿತಾಯ ಖಾತೆಯಲ್ಲಿ ಕನಿಷ್ಠ ಮೊತ್ತ ಇಲ್ಲ ಎಂಬ ಕಾರಣಕ್ಕೆ ದಂಡ ವಿದಿಸುತ್ತಿದ್ದು, ೨೦೨೪-೨೫ನೇ…
ಭೇರ್ಯ ಮಹೇಶ್ ಆದಿಶಕ್ತಿ ತೋಪಮ್ಮ ಟ್ರಸ್ಟ್ ಆಡಳಿತ ಮಂಡಳಿಯಿಂದ ಸಕಲ ಸಿದ್ಧತೆ; ಸಾವಿರಾರು ಮಂದಿ ಭೇಟಿ ನಿರೀಕ್ಷೆ ಕೆ.ಆರ್.ನಗರ: ಫೆಬ್ರವರಿ…
ಮಂಜು ಕೋಟೆ ಎಚ್.ಡಿ.ಕೋಟೆ: ಬಿಜೆಪಿ ಘಟಕದ ತಾಲ್ಲೂಕು ಅಧ್ಯಕ್ಷ ಹಿರೇಹಳ್ಳಿ ಶಂಭುಗೌಡ ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದು, ಅಧ್ಯಕ್ಷ ಸ್ಥಾನಕ್ಕೆ…