ಮೈಸೂರು

ಮೈಸೂರು: ಇತಿಹಾಸ ಪುಟ ಸೇರಿದ ಸ್ಟರ್ಲಿಂಗ್‌, ಸ್ಕೈಲೈನ್‌ ಚಿತ್ರ ಮಂದಿರಗಳು

ಮೈಸೂರು: ಇಲ್ಲಿನ ವಿದ್ಯಾರಣ್ಯಪುರಂನಲ್ಲಿರುವ ಸ್ಟರ್ಲಿಂಗ್‌ ಹಾಗೂ ಸ್ಕೈಲೈನ್‌ ಅವಳಿ ಚಿತ್ರಮಂದಿರವನ್ನು ನೆಲಸಮ ಮಾಡಲಾಗಿದ್ದು, ಇದೀಗ ಇವರೆಡು ಚಿತ್ರಮಂದಿರಗಳು ಇತಿಹಾಸದ ಪುಟ ಸೇರಿಕೊಂಡಿವೆ.

ಈ ಚಿತ್ರಮಂದಿಗಳಲ್ಲಿ ಹಾಲಿವುಡ್, ಬಾಲಿವುಡ್ ಸೇರಿದಂತೆ ಕನ್ನಡದ ಅನೇಕ ಜನಪ್ರಿಯಗಳು ಪ್ರದರ್ಶನ ಕಂಡಿದ್ದವು. ಅಲ್ಲದೇ ಹೆಸರಾಂತ ಟೈಟಾನಿಕ್, ಜುರಾಸಿಕ್ ಪಾರ್ಕ್ ಸೇರಿದಂತೆ ಜಾಕಿಚಾನ್ ನಟನೆಯ ಬಹುತೇಕ ಜನಪ್ರಿಯ ಇಂಗ್ಲಿಷ್ ಸಿನಿಮಾಗಳು ಸಹ ಈ ಅವಳಿ ಚಿತ್ರಮಂದಿರಗಳಲ್ಲಿ ಪ್ರದರ್ಶನ ಕಂಡಿದ್ದವು.

ಇನ್ನು ಅವಳಿ ಚಿತ್ರಮಂದಿರಗಳ ನೆಲಸಮವನ್ನು ಕಣ್ಣಾರೆ ಕಂಡ ಸಿನಿ ರಸಿಕರು ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ. ಆದರೆ ಕೋವಿಡ್ ಬಳಿಕ ಈ ಅವಳಿ ಚಿತ್ರಮಂದಿರ‌ಗಳು ಆರ್ಥಿಕ ಸಂಕಷ್ಟಕ್ಕೆ ಸಿಲುಕಿ ನಲುಗಿದ್ದವು. ದಿ‌ನ ಕಳೆದಂತೆ ಬಂದ್ ಆಗಿದ್ದ ಅವಳಿ ಚಿತ್ರಮಂದಿರವನ್ನ ಇದೀಗ ನೆಲಸಮ ಮಾಡಲಾಗಿದೆ.

ಈ ಹಿಂದೆ ಅಪೇರಾ, ಶಾಂತಲಾ, ತಿಬ್ಬಾದೇವಿ, ಗಣೇಶ, ರತ್ನ, ಒಲಂಪಿಯಾ ಹಾಗೂ ರಣಜಿತ್‌ ಚಿತ್ರ ಮಂದಿರಗಳನ್ನು ನೆಲಸಮ ಮಾಡಲಾಗಿತ್ತು. ಆಲ್ಲದೇ ಇತ್ತೀಚೆಗೆ ಲಕ್ಷ್ಮೀ ಮತ್ತು ಸರಸ್ವತಿ ಚಿತ್ರಮಂದಿರಗಳನ್ನು ನೆಲಸಮ ಮಾಡಲಾಗಿತ್ತು. ಅಂತೆಯೇ ಅವುಗಳ ಸಾಲಿಗೆ ಸ್ಟರ್ಲಿಂಗ್ ಮತ್ತು ಸ್ಕೈಲೈನ್ ಅವಳಿ ಚಿತ್ರಮಂದಿಗಳು ಸೇರಿದ್ದು ವಿಪರ್ಯಾಸ ಎನ್ನಬಹುದು.

ಅರ್ಚನ ಎಸ್‌ ಎಸ್

Recent Posts

ಕೆಮಿಕಲ್‌ ಫ್ಯಾಕ್ಟರಿಯಲ್ಲಿ ಸ್ಫೋಟ: ಮಹಿಳೆಯರು ಸೇರಿ 15 ಕಾರ್ಮಿಕರು ದುರ್ಮರಣ

ನಾಗ್ಪುರ: ಕೆಮಿಕಲ್‌ ಫ್ಯಾಕ್ಟರಿಯಲ್ಲಿ ಸಂಭವಿಸಿದ ಭೀಕರ ಸ್ಫೋಟದಿಂದಾಗಿ ಮಹಿಳೆಯರು ಸೇರಿದಂತೆ 15 ಕಾರ್ಮಿಕರು ಸಾವನ್ನಪ್ಪಿರುವ ಘಟನೆ ಮಹಾರಾಷ್ಟ್ರದ ನಾಗ್ಪರ ಜಿಲ್ಲೆಯಲ್ಲಿ…

4 mins ago

ಯುವಜನತೆಯು ಡ್ರಗ್ಸ್ ಮತ್ತು ಮಾದಕ ವಸ್ತುಗಳಿಗೆ ಬಲಿಯಾಗದಿರಿ: ಜಿಲ್ಲಾಧಿಕಾರಿ ಡಾ.ಕುಮಾರ

ಮಂಡ್ಯ: ಯುವಜನರು ಮಾದಕ ವ್ಯಸನದಿಂದ ದೂರವಿದ್ದರೆ ಆರೋಗ್ಯವಂತ ಸಮಾಜ ನಿರ್ಮಿಸಬಹುದು. ಯುವಜನತೆಯು ಮಾದಕ ವಸ್ತುಗಳಿಗೆ ಬಲಿಯಾಗದೆ ಅದರಿಂದ ದೂರವಿರಬೇಕು ಎಂದು…

31 mins ago

ಹನೂರು| ಶಿರಗೋಡು ಗ್ರಾಮದಲ್ಲಿ ಅದ್ಧೂರಿಯಾಗಿ ಜರುಗಿದ ಶ್ರೀ ಲಕ್ಷ್ಮೀ ವೆಂಕಟೇಶ್ವರ ರಥೋತ್ಸವ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲೂಕಿನ ಶಿರಗೋಡು ಗ್ರಾಮದ ಶ್ರೀ ಲಕ್ಷ್ಮಿ ವೆಂಕಟೇಶ್ವರ ದೇವಾಲಯದಲ್ಲಿ ರಥೋತ್ಸವ ಭಾನುವಾರ ಬೆಳಿಗ್ಗೆ…

2 hours ago

ಇರಾನ್ ಇಸ್ರೇಲ್ ಸಂಘರ್ಷ ತೈಲ ಬೆಲೆ ಚಿನ್ನದ ಬೆಲೆ ಏರಿಕೆ ..?

ಟೆಹರಾನ್‌: ಇರಾನ್ ಮೇಲೆ ಇಸ್ರೇಲ್ ಅಮೆರಿಕ ಜಂಟಿಯಾಗಿ ದಾಳಿ ನಡೆಸಿದ ಪರಿಣಾಮ ಇದೀಗ ಇರಾನ್ ಕೂಡ ಪ್ರತೀಕಾರವಾಗಿ ಇಸ್ರೇಲ್ ಅಮೆರಿಕಾ…

3 hours ago

ಕೊಡಗು| ಬೆಟ್ಟತ್ತೂರು ಬಳಿ ಆನೆ ದಾಳಿಗೆ ವಿದ್ಯಾರ್ಥಿನಿ ಬಲಿ

ಕೊಡಗು: ಆನೆ ದಾಳಿಗೆ ವಿದ್ಯಾರ್ಥಿನಿ ಬಲಿಯಾಗಿರುವ ಘಟನೆ ಕೊಡಗಿನಲ್ಲಿ ನಡೆದಿದೆ. ಮದೆ ಬೆಟ್ಟತ್ತೂರು ಗ್ರಾಮದ ಗಿರೀಶ್‌ ಎಂಬುವವರ ಪುತ್ರಿ ಪೂಜಾ…

3 hours ago

ಕಾಂಗ್ರೆಸ್‌ಗೆ ಹೆಚ್ಚಿನ ಸೀಟು ಇಲ್ಲ: ಡಿಎಂಕೆ ಸ್ಪಷ್ಟ ಸಂದೇಶ

ತಮಿಳುನಾಡು: ತಮಿಳುನಾಡು ವಿಧಾನಸಭಾ ಚುನಾವಣೆ 2026ರ ಸೀಟು ಹಂಚಿಕೆ ಮಾತುಕತೆ ಆರಂಭವಾಗಿದೆ. ಜಾತ್ಯಾತೀತ ಪ್ರಗತಿಪರ ಮೈತ್ರಿಕೂಟದ ಪಕ್ಷಗಳಿಗೆ ಸೀಟು ಹಂಚಿಕೆ…

3 hours ago