ಮೈಸೂರು

ಮೈಸೂರು: ಇತಿಹಾಸ ಪುಟ ಸೇರಿದ ಸ್ಟರ್ಲಿಂಗ್‌, ಸ್ಕೈಲೈನ್‌ ಚಿತ್ರ ಮಂದಿರಗಳು

ಮೈಸೂರು: ಇಲ್ಲಿನ ವಿದ್ಯಾರಣ್ಯಪುರಂನಲ್ಲಿರುವ ಸ್ಟರ್ಲಿಂಗ್‌ ಹಾಗೂ ಸ್ಕೈಲೈನ್‌ ಅವಳಿ ಚಿತ್ರಮಂದಿರವನ್ನು ನೆಲಸಮ ಮಾಡಲಾಗಿದ್ದು, ಇದೀಗ ಇವರೆಡು ಚಿತ್ರಮಂದಿರಗಳು ಇತಿಹಾಸದ ಪುಟ ಸೇರಿಕೊಂಡಿವೆ.

ಈ ಚಿತ್ರಮಂದಿಗಳಲ್ಲಿ ಹಾಲಿವುಡ್, ಬಾಲಿವುಡ್ ಸೇರಿದಂತೆ ಕನ್ನಡದ ಅನೇಕ ಜನಪ್ರಿಯಗಳು ಪ್ರದರ್ಶನ ಕಂಡಿದ್ದವು. ಅಲ್ಲದೇ ಹೆಸರಾಂತ ಟೈಟಾನಿಕ್, ಜುರಾಸಿಕ್ ಪಾರ್ಕ್ ಸೇರಿದಂತೆ ಜಾಕಿಚಾನ್ ನಟನೆಯ ಬಹುತೇಕ ಜನಪ್ರಿಯ ಇಂಗ್ಲಿಷ್ ಸಿನಿಮಾಗಳು ಸಹ ಈ ಅವಳಿ ಚಿತ್ರಮಂದಿರಗಳಲ್ಲಿ ಪ್ರದರ್ಶನ ಕಂಡಿದ್ದವು.

ಇನ್ನು ಅವಳಿ ಚಿತ್ರಮಂದಿರಗಳ ನೆಲಸಮವನ್ನು ಕಣ್ಣಾರೆ ಕಂಡ ಸಿನಿ ರಸಿಕರು ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ. ಆದರೆ ಕೋವಿಡ್ ಬಳಿಕ ಈ ಅವಳಿ ಚಿತ್ರಮಂದಿರ‌ಗಳು ಆರ್ಥಿಕ ಸಂಕಷ್ಟಕ್ಕೆ ಸಿಲುಕಿ ನಲುಗಿದ್ದವು. ದಿ‌ನ ಕಳೆದಂತೆ ಬಂದ್ ಆಗಿದ್ದ ಅವಳಿ ಚಿತ್ರಮಂದಿರವನ್ನ ಇದೀಗ ನೆಲಸಮ ಮಾಡಲಾಗಿದೆ.

ಈ ಹಿಂದೆ ಅಪೇರಾ, ಶಾಂತಲಾ, ತಿಬ್ಬಾದೇವಿ, ಗಣೇಶ, ರತ್ನ, ಒಲಂಪಿಯಾ ಹಾಗೂ ರಣಜಿತ್‌ ಚಿತ್ರ ಮಂದಿರಗಳನ್ನು ನೆಲಸಮ ಮಾಡಲಾಗಿತ್ತು. ಆಲ್ಲದೇ ಇತ್ತೀಚೆಗೆ ಲಕ್ಷ್ಮೀ ಮತ್ತು ಸರಸ್ವತಿ ಚಿತ್ರಮಂದಿರಗಳನ್ನು ನೆಲಸಮ ಮಾಡಲಾಗಿತ್ತು. ಅಂತೆಯೇ ಅವುಗಳ ಸಾಲಿಗೆ ಸ್ಟರ್ಲಿಂಗ್ ಮತ್ತು ಸ್ಕೈಲೈನ್ ಅವಳಿ ಚಿತ್ರಮಂದಿಗಳು ಸೇರಿದ್ದು ವಿಪರ್ಯಾಸ ಎನ್ನಬಹುದು.

ಅರ್ಚನ ಎಸ್‌ ಎಸ್

Recent Posts

ಹನೂರು| ಕೆಎಸ್‌ಆರ್‌ಟಿಸಿ ಬಸ್‌ ಹಾಗೂ ಬೈಕ್‌ ನಡುವೆ ಅಪಘಾತ: ಇಬ್ಬರು ಸಾವು

ಮಹಾದೇಶ್‌ ಎಂ ಗೌಡ  ಹನೂರು: ಕೆಎಸ್‌ಆರ್‌ಟಿಸಿ ಬಸ್ ಹಾಗೂ ದ್ವಿಚಕ್ರ ವಾಹನ ನಡುವೆ ಅಪಘಾತ ಸಂಭವಿಸಿ ದ್ವಿಚಕ್ರ ವಾಹನ ಸವಾರರಿಬ್ಬರೂ…

6 hours ago

ಹನೂರು: ಟ್ರ್ಯಾಕ್ಟರ್‌ಗೆ ದ್ವಿಚಕ್ರ ವಾಹನ ಡಿಕ್ಕಿ: ಸವಾರ ಸಾವು

ಮಹಾದೇಶ್‌ ಎಂ ಗೌಡ  ಹನೂರು: ದ್ವಿಚಕ್ರ ವಾಹನ ಸವಾರ ಟ್ರ್ಯಾಕ್ಟರ್‌ಗೆ ಡಿಕ್ಕಿ ಹೊಡೆದ ಪರಿಣಾಮ ತೀವ್ರ ಗಾಯಗೊಂಡು ಮೃತಪಟ್ಟಿರುವ ಘಟನೆ…

6 hours ago

ಮೈಸೂರು ಏರ್‌ಪೋರ್ಟ್‌ನಲ್ಲಿ ಸಿಎಂ, ಡಿಸಿಎಂ ಜೊತೆ ರಾಹುಲ್‌ ಗಾಂಧಿ ಮಾತುಕತೆ

ಮೈಸೂರು: ಮೈಸೂರಿನ ಮಂಡಕಳ್ಳಿ ವಿಮಾನ ನಿಲ್ದಾಣದಲ್ಲಿ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರು ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್‌…

9 hours ago

ರಾಮಾಪುರ ರಸ್ತೆಯಲ್ಲಿ ನಿತ್ಯ ಗಜರಾಜನ‌ ಎಂಟ್ರಿ: ವಾಹನ ಸವಾರರಿಗೆ ಢವಢವ

ಮಹಾದೇಶ್‌ ಎಂ ಗೌಡ ಹನೂರು: ಅಂತರ ರಾಜ್ಯ ನೆರೆಯ ತಮಿಳುನಾಡಿಗೆ ಸಂಪರ್ಕ ಕಲ್ಪಿಸುವ ರಾಮಾಪುರ ರಸ್ತೆಯಲ್ಲಿ ನಿತ್ಯ ಗಜರಾಜ ಎಂಟ್ರಿ…

9 hours ago

ಎಂ.ಲಕ್ಷ್ಮಣ್‌ ವಿರುದ್ಧ ಪೊಲೀಸ್‌ ಮಹಾನಿರ್ದೇಶಕರಿಗೆ ದೂರು ನೀಡಿದ ಶಾಸಕ ಶ್ರೀವತ್ಸ

ಬೆಂಗಳೂರು: ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರ ಚಿತಾವಣೆಯಿಂದ ಬಳ್ಳಾರಿಯಲ್ಲಿ ಕಾಂಗ್ರೆಸ್‌ ಕಾರ್ಯಕರ್ತನ ಹೆಣ ಬಿದ್ದಿದೆ ಎಂದು ಹೇಳಿಕೆ…

10 hours ago

ನಾಯಕತ್ವ ಬದಲಾವಣೆ ಚರ್ಚೆಗೆ ಹೈಕಮಾಂಡ್‌ ಸ್ಪಷ್ಟನೆ ನೀಡಲಿ: ಮಾಜಿ ಸಚಿವ ಕೆ.ಎನ್.ರಾಜಣ್ಣ

ಬೆಂಗಳೂರು: ನಾಯಕತ್ವ ಬದಲಾವಣೆ ಚರ್ಚೆಗೆ ಹೈಕಮಾಂಡ್‌ ಸ್ಪಷ್ಟನೆ ಕೊಡಬೇಕು ಎಂದು ಮಾಜಿ ಸಚಿವ ಕೆ.ಎನ್.ರಾಜಣ್ಣ ಒತ್ತಾಯಿಸಿದ್ದಾರೆ. ಜನವರಿ.16ಕ್ಕೆ ಸಿಹಿಸುದ್ದಿ ಬರಲಿದೆ…

10 hours ago