ಮೈಸೂರು

ಮೈಸೂರು: ಇತಿಹಾಸ ಪುಟ ಸೇರಿದ ಸ್ಟರ್ಲಿಂಗ್‌, ಸ್ಕೈಲೈನ್‌ ಚಿತ್ರ ಮಂದಿರಗಳು

ಮೈಸೂರು: ಇಲ್ಲಿನ ವಿದ್ಯಾರಣ್ಯಪುರಂನಲ್ಲಿರುವ ಸ್ಟರ್ಲಿಂಗ್‌ ಹಾಗೂ ಸ್ಕೈಲೈನ್‌ ಅವಳಿ ಚಿತ್ರಮಂದಿರವನ್ನು ನೆಲಸಮ ಮಾಡಲಾಗಿದ್ದು, ಇದೀಗ ಇವರೆಡು ಚಿತ್ರಮಂದಿರಗಳು ಇತಿಹಾಸದ ಪುಟ ಸೇರಿಕೊಂಡಿವೆ.

ಈ ಚಿತ್ರಮಂದಿಗಳಲ್ಲಿ ಹಾಲಿವುಡ್, ಬಾಲಿವುಡ್ ಸೇರಿದಂತೆ ಕನ್ನಡದ ಅನೇಕ ಜನಪ್ರಿಯಗಳು ಪ್ರದರ್ಶನ ಕಂಡಿದ್ದವು. ಅಲ್ಲದೇ ಹೆಸರಾಂತ ಟೈಟಾನಿಕ್, ಜುರಾಸಿಕ್ ಪಾರ್ಕ್ ಸೇರಿದಂತೆ ಜಾಕಿಚಾನ್ ನಟನೆಯ ಬಹುತೇಕ ಜನಪ್ರಿಯ ಇಂಗ್ಲಿಷ್ ಸಿನಿಮಾಗಳು ಸಹ ಈ ಅವಳಿ ಚಿತ್ರಮಂದಿರಗಳಲ್ಲಿ ಪ್ರದರ್ಶನ ಕಂಡಿದ್ದವು.

ಇನ್ನು ಅವಳಿ ಚಿತ್ರಮಂದಿರಗಳ ನೆಲಸಮವನ್ನು ಕಣ್ಣಾರೆ ಕಂಡ ಸಿನಿ ರಸಿಕರು ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ. ಆದರೆ ಕೋವಿಡ್ ಬಳಿಕ ಈ ಅವಳಿ ಚಿತ್ರಮಂದಿರ‌ಗಳು ಆರ್ಥಿಕ ಸಂಕಷ್ಟಕ್ಕೆ ಸಿಲುಕಿ ನಲುಗಿದ್ದವು. ದಿ‌ನ ಕಳೆದಂತೆ ಬಂದ್ ಆಗಿದ್ದ ಅವಳಿ ಚಿತ್ರಮಂದಿರವನ್ನ ಇದೀಗ ನೆಲಸಮ ಮಾಡಲಾಗಿದೆ.

ಈ ಹಿಂದೆ ಅಪೇರಾ, ಶಾಂತಲಾ, ತಿಬ್ಬಾದೇವಿ, ಗಣೇಶ, ರತ್ನ, ಒಲಂಪಿಯಾ ಹಾಗೂ ರಣಜಿತ್‌ ಚಿತ್ರ ಮಂದಿರಗಳನ್ನು ನೆಲಸಮ ಮಾಡಲಾಗಿತ್ತು. ಆಲ್ಲದೇ ಇತ್ತೀಚೆಗೆ ಲಕ್ಷ್ಮೀ ಮತ್ತು ಸರಸ್ವತಿ ಚಿತ್ರಮಂದಿರಗಳನ್ನು ನೆಲಸಮ ಮಾಡಲಾಗಿತ್ತು. ಅಂತೆಯೇ ಅವುಗಳ ಸಾಲಿಗೆ ಸ್ಟರ್ಲಿಂಗ್ ಮತ್ತು ಸ್ಕೈಲೈನ್ ಅವಳಿ ಚಿತ್ರಮಂದಿಗಳು ಸೇರಿದ್ದು ವಿಪರ್ಯಾಸ ಎನ್ನಬಹುದು.

ಅರ್ಚನ ಎಸ್‌ ಎಸ್

Recent Posts

ಬನ್ನೇರುಘಟ್ಟ ಉದ್ಯಾನಕ್ಕೆ ಹೊಸ ಅತಿಥಿಯ ಆಗಮನ: ಮುದ್ದಾದ ಮರಿಗೆ ಜನ್ಮ ನೀಡಿದ ನೀರಾನೆ

ಬೆಂಗಳೂರು: ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ನೀರಾನೆಯೊಂದು ಮುದ್ದಾದ ಮರಿಗೆ ಜನ್ಮ ನೀಡಿದೆ. ಉದ್ಯಾನದಲ್ಲಿದ್ದ 17 ವರ್ಷ ವಯಸ್ಸಿನ ದಶ್ಯ ಎಂಬ…

6 hours ago

‘ಬಿಡದಿ ಟೌನ್‌ಶಿಪ್ ವಿರುದ್ಧ ಕಾನೂನು ಹೋರಾಟ’: ಕೇಂದ್ರ ಬೃಹತ್ ಕೈಗಾರಿಕಾ ಖಾತೆ ಸಚಿವ ಎಚ್‌ಡಿಕೆ ಘೋಷಣೆ

ಬೆಂಗಳೂರು: ರೈತರ ತೀವ್ರ ವಿರೋಧದ ನಡುವೆ ಅಂತಿಮ ಅಧಿಸೂಚನೆ ಹೊರಡಿಸಿ ಬಿಡದಿ ಟೌನ್‌ಶಿಪ್ ಮಾಡಲು ಹೊರಟಿರುವ ರಾಜ್ಯ ಸರ್ಕಾರದ ವಿರುದ್ಧ…

6 hours ago

ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆ ನಿಲ್ಲಿಸಲ್ಲ: ಸಿಎಂ ಡಿ.ಕೆ.ಶಿವಕುಮಾರ್‌ ಸ್ಪಷ್ಟನೆ

ಬೆಂಗಳೂರು: ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಯನ್ನು ನಿಲ್ಲಿಸಲ್ಲ ಎಂದು ಸಿಎಂ ಡಿ.ಕೆ.ಶಿವಕುಮಾರ್‌ ಸ್ಪಷ್ಟನೆ ನೀಡಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ…

7 hours ago

ರಾಜ್ಯದಲ್ಲಿ ಮುಂದಿನ 7 ದಿನಗಳ ಕಾಲ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಮುಂದಿನ ಏಳು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೋಲಾರ, ಹಾಸನ,…

9 hours ago

ಓದುಗರ ಪತ್ರ: ‘ಮನೆಗೊಂದು ಗ್ರಂಥಾಲಯ’ ಯೋಜನೆ ಯಶಸ್ವಿಯಾಗಲಿ

‘ಮನೆಗೊಂದು ಗ್ರಂಥಾಲಯ’ ಹೆಸರಿನಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರವು ವಿಶಿಷ್ಟ ಯೋಜನೆಯೊಂದನ್ನು ಪ್ರಾರಂಭ ಮಾಡಿರುವುದು ಶ್ಲಾಘನೀಯ. ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ…

12 hours ago

ಓದುಗರ ಪತ್ರ: ವಿದ್ಯಾರ್ಥಿ ಬಸ್ ಪಾಸ್ ದೂರ ಮಿತಿ ಹೆಚ್ಚಿಸಲಿ

ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಿದ ಬಳಿಕ ರಾಜ್ಯದ ಶಾಲಾ -ಕಾಲೇಜುಗಳ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವುದಾಗಿ…

12 hours ago