ಮೈಸೂರು

ಮೈಸೂರು: ಇತಿಹಾಸ ಪುಟ ಸೇರಿದ ಸ್ಟರ್ಲಿಂಗ್‌, ಸ್ಕೈಲೈನ್‌ ಚಿತ್ರ ಮಂದಿರಗಳು

ಮೈಸೂರು: ಇಲ್ಲಿನ ವಿದ್ಯಾರಣ್ಯಪುರಂನಲ್ಲಿರುವ ಸ್ಟರ್ಲಿಂಗ್‌ ಹಾಗೂ ಸ್ಕೈಲೈನ್‌ ಅವಳಿ ಚಿತ್ರಮಂದಿರವನ್ನು ನೆಲಸಮ ಮಾಡಲಾಗಿದ್ದು, ಇದೀಗ ಇವರೆಡು ಚಿತ್ರಮಂದಿರಗಳು ಇತಿಹಾಸದ ಪುಟ ಸೇರಿಕೊಂಡಿವೆ.

ಈ ಚಿತ್ರಮಂದಿಗಳಲ್ಲಿ ಹಾಲಿವುಡ್, ಬಾಲಿವುಡ್ ಸೇರಿದಂತೆ ಕನ್ನಡದ ಅನೇಕ ಜನಪ್ರಿಯಗಳು ಪ್ರದರ್ಶನ ಕಂಡಿದ್ದವು. ಅಲ್ಲದೇ ಹೆಸರಾಂತ ಟೈಟಾನಿಕ್, ಜುರಾಸಿಕ್ ಪಾರ್ಕ್ ಸೇರಿದಂತೆ ಜಾಕಿಚಾನ್ ನಟನೆಯ ಬಹುತೇಕ ಜನಪ್ರಿಯ ಇಂಗ್ಲಿಷ್ ಸಿನಿಮಾಗಳು ಸಹ ಈ ಅವಳಿ ಚಿತ್ರಮಂದಿರಗಳಲ್ಲಿ ಪ್ರದರ್ಶನ ಕಂಡಿದ್ದವು.

ಇನ್ನು ಅವಳಿ ಚಿತ್ರಮಂದಿರಗಳ ನೆಲಸಮವನ್ನು ಕಣ್ಣಾರೆ ಕಂಡ ಸಿನಿ ರಸಿಕರು ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ. ಆದರೆ ಕೋವಿಡ್ ಬಳಿಕ ಈ ಅವಳಿ ಚಿತ್ರಮಂದಿರ‌ಗಳು ಆರ್ಥಿಕ ಸಂಕಷ್ಟಕ್ಕೆ ಸಿಲುಕಿ ನಲುಗಿದ್ದವು. ದಿ‌ನ ಕಳೆದಂತೆ ಬಂದ್ ಆಗಿದ್ದ ಅವಳಿ ಚಿತ್ರಮಂದಿರವನ್ನ ಇದೀಗ ನೆಲಸಮ ಮಾಡಲಾಗಿದೆ.

ಈ ಹಿಂದೆ ಅಪೇರಾ, ಶಾಂತಲಾ, ತಿಬ್ಬಾದೇವಿ, ಗಣೇಶ, ರತ್ನ, ಒಲಂಪಿಯಾ ಹಾಗೂ ರಣಜಿತ್‌ ಚಿತ್ರ ಮಂದಿರಗಳನ್ನು ನೆಲಸಮ ಮಾಡಲಾಗಿತ್ತು. ಆಲ್ಲದೇ ಇತ್ತೀಚೆಗೆ ಲಕ್ಷ್ಮೀ ಮತ್ತು ಸರಸ್ವತಿ ಚಿತ್ರಮಂದಿರಗಳನ್ನು ನೆಲಸಮ ಮಾಡಲಾಗಿತ್ತು. ಅಂತೆಯೇ ಅವುಗಳ ಸಾಲಿಗೆ ಸ್ಟರ್ಲಿಂಗ್ ಮತ್ತು ಸ್ಕೈಲೈನ್ ಅವಳಿ ಚಿತ್ರಮಂದಿಗಳು ಸೇರಿದ್ದು ವಿಪರ್ಯಾಸ ಎನ್ನಬಹುದು.

ಅರ್ಚನ ಎಸ್‌ ಎಸ್

Recent Posts

ರಾಮಕೃಷ್ಣ ಆಶ್ರಮದವರು ಕೊಟ್ಟ ಮಾತು ಉಳಿಸಿಕೊಳ್ಳಬೇಕಿತ್ತು

ಶತಮಾನದ ಹಿಂದೆ ಮೈಸೂರು ಸಂಸ್ಥಾನದ ಮಹಾರಾಣಿಯವರಾಗಿದ್ದ ಕೆಂಪನಂಜಮ್ಮಣ್ಣಿ ಅವರು ಮೈಸೂರಿನ ಹೆಣ್ಣುಮಕ್ಕಳಿಗಾಗಿ ಸ್ಥಾಪಿಸಿದ್ದ ‘ಮಹಾರಾಣಿಯವರ ಹೊಸ ಮಾದರಿ (ಎನ್‌ಟಿಎಂ) ಶಾಲೆ’…

8 hours ago

ಅರವತ್ತು ದಿನಗಳು ಕಳೆಯಿತು…ಫಲದ ನಿರೀಕ್ಷೆಯಲ್ಲಿ!

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ತೋಳ ಬಂತು ತೋಳ ಕತೆಯನ್ನು ನೆನಪಿಸುವಂತಿರುವ ರಾಜ್ಯ ಸಚಿವ ಸಂಪುಟ ವಿಸ್ತರಣೆ ಪ್ರಕ್ರಿಯೆ ಕಾಂಗ್ರೆಸ್…

8 hours ago

ಇಂದು ಕೊಡಗು ಜಿಲ್ಲೆಯಲ್ಲಿ ಕಕ್ಕಡ 18ರ ಸಂಭ್ರಮ

ನವೀನ್ ಡಿಸೋಜ ಮನೆಮನೆಗಳಲ್ಲಿ ಘಮಘಮಿಸಲಿದೆ ಮದ್ದುಸೊಪ್ಪಿನ ಖಾದ್ಯ; ವಿಭಿನ್ನ ಹಬ್ಬದಾಚರಣೆಗೆ ಜಿಲ್ಲೆಯಲ್ಲಿ ಸಿದ್ಧತೆ  ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಸೋಮವಾರ (ಆ.೩)ಕಕ್ಕಡ…

8 hours ago

ಸಾರ್ವಜನಿಕರ ಶೌಚಾಲಯಕ್ಕೆ ಬೇಕಿದೆ ಚಿಕಿತ್ಸೆ!

ಪಂ.ಪುಟ್ಟರಾಜ ಗವಾಯಿ ಕ್ರೀಡಾಂಗಣದಲ್ಲಿನ ಶೌಚಾಲಯದಲ್ಲಿ ಅಶುಚಿತ್ವ ತಾಂಡವ ಮೈಸೂರು: ವಾಯುವಿಹಾರಿಗಳು ಹಾಗೂ ಕ್ರೀಡಾಸಕ್ತರ ನೆಚ್ಚಿನ ತಾಣವಾಗಿರುವ ಪಂ.ಪುಟ್ಟರಾಜ ಗವಾಯಿ ಕ್ರೀಡಾಂಗಣದಲ್ಲಿ…

9 hours ago

ಗ್ರಾಪಂಗಳ ಅತ್ಯುತ್ತಮ ಕೆಲಸಕ್ಕೆ ಉತ್ತಮ ಪ್ರಶಸ್ತಿ

ಕೆ.ಬಿ.ರಮೇಶನಾಯಕ ಪ್ರಗತಿಯಲ್ಲಿ ಹಿಂದೆ ಬಿದ್ದಿರುವ ಗ್ರಾಪಂಗಳನ್ನು ಹುರಿದುಂಬಿಸಲು ಜಿಪಂ ಹೊಸ ಯೋಜನೆ ಪ್ರಶಸ್ತಿಗೆ ನಾಲ್ಕು ಕಾರ್ಯಸೂಚಿಯಲ್ಲಿ ಪ್ರಗತಿ ಸಾಧಿಸಿದ ಗ್ರಾಪಂಗಳ…

9 hours ago

ದ್ರಾಕ್ಷಿ ತೋಟ ನೋಡಲು ಮುಗಿಬಿದ್ದ ಜನರು

ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…

1 day ago