ನಂಜನಗೂಡು: ತಾಲ್ಲೂಕಿನ ದೊಡ್ಡಕವಲಂದೆ ಗ್ರಾಮದಲ್ಲಿ ಚರಂಡಿಗಳು ಗಬ್ಬೆದ್ದು ನಾರುತ್ತಿದ್ದು, ಸಾಂಕ್ರಾಮಿಕ ರೋಗ ಹರಡುವ ಭೀತಿ ಎದುರಾಗಿದೆ.
ಈ ಹಿನ್ನೆಲೆಯಲ್ಲಿ ಗ್ರಾಮದ ಪಂಚಾಯಿತಿ ಸದಸ್ಯರು ಹಾಗೂ ಅಧಿಕಾರಿಗಳ ವಿರುದ್ಧ ಗ್ರಾಮಸ್ಥರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಆದಷ್ಟು ಬೇಗ ಚರಂಡಿಗಳಲ್ಲಿ ತುಂಬಿಕೊಂಡಿರುವ ತ್ಯಾಜ್ಯಗಳನ್ನು ತೆಗೆದು ಹಾಕುವಂತೆ ಮನವಿ ಮಾಡಿದ್ದಾರೆ.
ಇದನ್ನು ಓದಿ: ಮೈಸೂರು ಮುಡಾ ಹಗರಣ: ಅಕ್ರಮ ನಿವೇಶನ ಹಂಚಿಕೆಗೆ 22.47 ಕೋಟಿ ಲಂಚ ಪಡೆದಿದ್ದ ದಿನೇಶ್ ಕುಮಾರ್
ಈ ಬಗ್ಗೆ ಮಾತನಾಡಿರುವ ಗ್ರಾಮಸ್ಥರು, ದೊಡ್ಡಕವಲಂದೆ ಗ್ರಾಮದಲ್ಲಿ ಚರಂಡಿಗಳು ಕಸ ಕಡ್ಡಿಗಳಿಂದ ಕೊಳಚೆ ನೀರಿನಿಂದ ತುಂಬಿ ದುರ್ನಾತ ಬೀರುತ್ತಿವೆ. ಕಳೆದ ನಾಲ್ಕು ತಿಂಗಳಿಂದ ದೊಡ್ಡ ಕವಲಂದೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕಸ ವಿಲೇವಾರಿ ಮತ್ತು ಚರಂಡಿಯನ್ನು ಸ್ವಚ್ಛತೆ ಮಾಡಿಲ್ಲ. ಗ್ರಾಮ ಪಂಚಾಯತಿ ವ್ಯಾಪ್ತಿಯ ಗ್ರಾಮಗಳಾದ ದೊಡ್ಡಕವಲಂದೆ, ಗಟ್ಟವಾಡಿ, ಗಟ್ಟವಾಡಿಪುರ, ಹರಗನಪುರ, ಹೆಳವರಹುಂಡಿ, ಕೃಷ್ಣಾರಾಜಪುರ ಗ್ರಾಮಗಳಲ್ಲಿ ಚರಂಡಿಗಳನ್ನು ಸ್ವಚ್ಛಗೊಳಿಸದೆ ಚರಂಡಿಗಳೆಲ್ಲವೂ ತುಂಬಿ ತುಳುಕುತ್ತಿವೆ. ಆದ್ದರಿಂದ ನಾವೆಲ್ಲಾ ಮೂಗು ಮುಚ್ಚಿಕೊಂಡು ಓಡಾಡುವ ಪರಿಸ್ಥಿತಿ ಎದುರಾಗಿದೆ. ಈ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳು ಕೂಡಲೇ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.
ರಿಯಾಧ್: ಸೌದಿ ಅರಾಮ್ಕೊ ತೈಲ ಕಂಪನಿಗೆ ಸೇರಿದ ಹೆಲಿಕಾಪ್ಟರ್ ಅಪಘಾತಕ್ಕೀಡಾಗಿ ಕನಿಷ್ಠ 14 ಮಂದಿ ಸಾವನ್ನಪ್ಪಿದ್ದಾರೆ. ಸೌದಿ ಅರೇಬಿಯಾದ ರಾಸ್…
ಟಿ.ನರಸೀಪುರ: ಒಂದೇ ಕುಟುಂಬದ ಮೂವರು ಆತ್ಮಹತ್ಯೆಗೆ ಶರಣಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ತಾಲ್ಲೂಕಿನ ಕೆಂಪಯ್ಯನಹುಂಡಿ ಗ್ರಾಮಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ಭೇಟಿ…
ಮೈಸೂರು: ನಗರದ ಪ್ರಮುಖ ಎರಡು ಹೋಟೆಲ್ಗಳನ್ನು ಬಾಂಬ್ ಮೂಲಕ ಸ್ಛೋಟಿಸುವುದಾಗಿ ಇ-ಮೇಲ್ ಮೂಲಕ ವ್ಯಕ್ತಿಯೊಬ್ಬ ಬೆದರಿಕೆ ಒಡ್ಡಿದ್ದು, ಕೆಲಕಾಲ ಆತಂಕ…
ಹನೂರು: ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಯುವತಿಯೊಬ್ಬರಿಗೆ ಹಾವು ಕಚ್ಚಿದ ಪರಿಣಾಮ ಆಸ್ಪತ್ರೆಗೆ ದಾಖಲಾಗಿರುವ ಘಟನೆ ಅಜ್ಜೀಪುರ ಗ್ರಾಮದಲ್ಲಿ ನಡೆದಿದೆ.…
ಸರಗೂರು: ಮೈಸೂರು ಜಿಲ್ಲೆಯಲ್ಲಿ ಮತ್ತೆ ಹುಲಿ ಉಪಟಳ ಹೆಚ್ಚಾಗಿದ್ದು, ಹುಲಿ ದಾಳಿಗೆ ಕರುವೊಂದು ಬಲಿಯಾಗಿರುವ ಘಟನೆ ಸರಗೂರು ತಾಲ್ಲೂಕಿನ ಹೆಗ್ಗನೂರು…
ಟೆಹರಾನ್: ಮಧ್ಯಪ್ರಾಚ್ಯದಲ್ಲಿ ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಯ ನಡುವೆ ಇರಾನ್ ಮಿಲಿಟರಿ ಪಡೆಗಳು ಜಾಗತಿಕ ತೈಲ ಸಾಗಣೆಯ ಪ್ರಮುಖ ಮಾರ್ಗವಾದ…