ಮೈಸೂರು

ನಿರ್ಲಕ್ಷ್ಯ ತೋರುವ ಅಧಿಕಾರಿಗಳ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ : ಕೃಷಿ ಸಚಿವ ಚಲುವರಾಯಸ್ವಾಮಿ

ಮೈಸೂರು : ಕ್ಷೇತ್ರ ಭೇಟಿಯಲ್ಲಿ, ಯೋಜನೆಗಳ ಅನುಷ್ಠಾನದಲ್ಲಿ ನಿರ್ಲಕ್ಷ್ಯ, ಕರ್ತವ್ಯ ಲೋಪವೆಸಗುವ ಅಧಿಕಾರಿ ಸಿಬ್ಬಂದಿ ವಿರುದ್ದ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳುವುದಾಗಿ ಕೃಷಿ ಸಚಿವರಾದ ಎನ್ ಚಲುವರಾಯಸ್ವಾಮಿ ಎಚ್ಚರಿಕೆ ನೀಡಿದ್ದಾರೆ.

ಮೈಸೂರಿನ ನಾಗನಹಳ್ಳಿ ಜಿಲ್ಲಾ ಕೃಷಿ ತರಬೇತಿ ಕೇಂದ್ರದಲ್ಲಿ ಮೈಸೂರು ವಿಭಾಗ ಮಟ್ಟದ ಅಧಿಕಾರಿಗಳ ಪ್ರಗತಿ ಪರಿಶೀಲನಾ ಸಭೆ ನಡೆಸಿ ಮಾತನಾಡಿದ ಅವರು, ಇನ್ನಷ್ಟು ಕಾಳಜಿ ವಹಿಸಿ ಕೆಲಸ ಮಾಡುವಂತೆ ಸೂಚನೆ ನೀಡಿದರು.

ಬಿತ್ತನೆ ಬೀಜ ರಸಗೊಬ್ಬರ ಪೂರೈಕೆಯಲ್ಲಿ ಯಾವುದೇ ಕೊರತೆಯಾಗದಂತೆ ನಿಗಾ ವಹಿಸಿ. ಶೇ 100% ಬಿತ್ತನೆಯಾಗುವಂತೆ ನೋಡಿಕೊಳ್ಳಿ ಎಂದು ಅವರು ಹೇಳಿದರು.

ಭೂಮಿಯ ಫಲವತ್ತತೆ, ಪರಿಸರ ಸಂರಕ್ಷಣೆ ಹಾಗೂ ಮಾನವನ ಆರೋಗ್ಯದ ದೃಷ್ಟಿಯಿಂದ ರಾಸಾಯನಿಕ ಮತ್ತು ‌ಕೀಟನಾಶಕಗಳ ಬಳಕೆ ಕಡಿಮೆ ಮಾಡಲು ರೈತಾಪಿ ವರ್ಗದಲ್ಲಿ ಜಾಗೃತಿ ಮೂಡಿಸಿ ಎಂದು ಅವರು ನಿರ್ದೇಶನ ನೀಡಿದರು.

ರೈತರನ್ನು ಅನಗತ್ಯವಾಗಿ ಅಲೆದಾಡಿಸಬೇಡಿ: ಮಳೆ ಪರಿಸ್ಥಿತಿಗೆ ಅನುಗುಣವಾಗಿ ಪರ್ಯಾಯ ಬೆಳೆಗಳ ಬಗ್ಗೆಯೂ ಮಾರ್ಗದರ್ಶನ ನೀಡಿ‌, ಕೃಷಿ ಯಾಂತ್ರಿಕರಣ, ಕೃಷಿ ಭಾಗ್ಯ ಯೋಜನೆ ಜಾರಿ, ಸಾವಯವ ಕೃಷಿ, ಸಮಗ್ರ ಬೇಸಾಯದ ಬಗ್ಗೆ ಜಾಗೃತಿ ಮೂಡಿಸಲು ಆದ್ಯತೆ ನೀಡಿ ಎಂದ ಅವರು ಹೇಳಿದರು.

ಕೃಷಿ ವಿಶ್ವವಿದ್ಯಾಲಯಗಳ ಸಂಶೋಧನೆಗಳ ಫಲ ರೈತರಿಗೆ ತಲುಪಿಸುವಲ್ಲಿ ಆಸಕ್ತಿ ವಹಿಸಿ ಕೃಷಿ ಉತ್ಪನ್ನಗಳ ಮೌಲ್ಯವರ್ಧನೆಯ ಮಹತ್ವದ ಬಗ್ಗೆ ಅರಿವು ಮೂಡಿಸುವಂತೆ ಸಚಿವರು ತಿಳಿಸಿದರು.

ಕೃಷಿ ಆಯುಕ್ತರಾದ ವೈ.ಎಸ್ ಪಾಟೀಲ್ ನಿರ್ದೇಶಕರಾದ ಡಾ. ಜಿ.ಟಿ ಪುತ್ರ, ಜಲಾನಯನ ಅಭಿವೃದ್ಧಿ ಇಲಾಖೆ ನಿರ್ದೇಶಕರಾದ ಮಹಮದ್ ಪರವೇಜ ಬಂಥನಾಳ, ರಾಜ್ಯ ಬೀಜ ನಿಗಮದ ವ್ಯವಸ್ಥಾಪಕ ನಿರ್ದೇಶಕರಾದ ಅನುಪ್, ಬೀಜ ಪ್ರಮಾಣೀಕರಣ ಸಂಸ್ಥೆ ವ್ಯವಸ್ಥಾಪಕ ನಿರ್ದೇಶಕರಾದ ಡಾ ಸದಾನಂದ ಹಾಗೂ ಮೈಸೂರು, ಮಂಡ್ಯ, ಚಾಮರಾಜನಗರ, ಕೊಡಗು, ಹಾಸನ,ಚಿಕ್ಕಮಗಳೂರು, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಕೃಷಿ ಅಧಿಕಾರಿಗಳು  ಹಾಜರಿದ್ದರು.

ಆಂದೋಲನ ಡೆಸ್ಕ್

Recent Posts

ದಸರಾ ವೆಬ್‌ಸೈಟ್‌ ಲೋಕಾರ್ಪಣೆ : ಅ.11ರಿಂದ 21ರವರೆಗೆ ನಡೆಯಲಿರುವ ಕಾರ್ಯಕ್ರಮಗಳ ಮಾಹಿತಿ

ಮೈಸೂರು: ನಾಡಹಬ್ಬ ದಸರಾ ಮಹೋತ್ಸವದ ಅಂಗವಾಗಿ ನಡೆಯಲಿರುವ ಕಾರ್ಯಕ್ರಮಗಳನ್ನು ಜನರಿಗೆ ತಿಳಿಸಲು ಹಾಗೂ ಪ್ರವಾಸಿಗರಿಗೆ ಉಪಯುಕ್ತವಾದ ಮಾಹಿತಿ ಕೊಡಲು ದಸರಾ-೨೦೨೬ರ…

4 hours ago

ತಮಿಳುನಾಡಿಗೆ ಕಾವೇರಿ ನೀರು: 3 ಸಾವಿರ ಕ್ಯೂಸೆಕ್‌ಗೆ ಇಳಿಸಲು ರಾಜ್ಯ ಸರ್ಕಾರ ಮನವಿ

ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರ ಮತ್ತೆ ಮುನ್ನೆಲೆಗೆ ಬಂದಿದೆ. 6 ಸಾವಿರ ಕ್ಯೂಸೆಕ್‌ ನೀರನ್ನು 3 ಸಾವಿರ…

6 hours ago

ರಾಜ್ಯ ರಾಜಕೀಯದಲ್ಲಿ ಮತ್ತೊಂದು ಮಹತ್ವದ ಬೆಳವಣಿಗೆ: ಸೆಪ್ಟೆಂಬರ್.18 ರಿಂದ ಅಮಿತ್ ಶಾ 2 ದಿನ ರಾಜ್ಯ ಪ್ರವಾಸ ‌

ಹುಬ್ಬಳ್ಳಿ: ಸೆಪ್ಟೆಂಬರ್ 18ರಿಂದ ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜ್ಯದಲ್ಲಿ 2 ದಿನಗಳ ಪ್ರವಾಸ ಕೈಗೊಳ್ಳಲಿದ್ದಾರೆ. ಸೆಪ್ಟೆಂಬರ್ 18ರ…

6 hours ago

ರಾಮನಗುಡ್ಡ ಕೆರೆ ಭರ್ತಿ : ಕೋಡಿ ಬಿದ್ದು ಹರಿದ ನೀರು

ಮಹಾದೇಶ್. ಎಂ ಗೌಡ ಹನೂರು: ತಾಲ್ಲೂಕಿನ ಮಂಗಲ ಗ್ರಾಮದ ಹುಲುಸುಗುಡ್ಡೆ ಬಳಿ ಇರುವ ಐತಿಹಾಸಿಕ ರಾಮನಗುಡ್ಡ ಕೆರೆ ಸಂಪೂರ್ಣ ಭರ್ತಿಯಾಗಿ…

10 hours ago

ಓದುಗರ ಪತ್ರ: ಕೊನೆಗೊಳ್ಳಲಿ ಸಂಘರ್ಷ!

ಕೊನೆಗೊಳ್ಳಲಿ ಸಂಘರ್ಷ! ಯುದ್ಧವನು ಕೊನೆಗಾಣಿಸಲು ರಾಜತಾಂತ್ರಿಕ ಮಾತುಕತೆಯೇ ಉತ್ತಮವೆಂಬ ಭಾರತದ ನಿಲುವಿಗೆ ಬ್ರಿಕ್ಸ್ ನಾಯಕರು ಒಕ್ಕೊರಲಿನಿಂದ ಒಪ್ಪಿರುವುದು ಸ್ವಾಗತಾರ್ಹ! ಇದಲ್ಲವೇ…

15 hours ago

ಓದುಗರ ಪತ್ರ: ಚುರುಕಾಗಲಿ 6ರ ಪ್ಲಾಟ್ ಫಾರಂ ಟಿಕೆಟ್ ಕೌಂಟರ್

ಮೈಸೂರಿನ ನೈಋತ್ಯ ರೈಲ್ವೆಗೆ ಸೇರಿರುವ ಅಶೋಕ ಪುರಂ ರೈಲು ನಿಲ್ದಾಣದಲ್ಲಿ ಪ್ಲಾಟ್ ಫಾರಂ ೬ರ ಕಡೆ ರೈಲು ಪ್ರಯಾಣಿಕರಿಗೆ ಅನುಕೂಲವಾಗಲೆಂದು…

15 hours ago