Strict action against negligent official Chaluvarayaswamy
ಮೈಸೂರು : ಕ್ಷೇತ್ರ ಭೇಟಿಯಲ್ಲಿ, ಯೋಜನೆಗಳ ಅನುಷ್ಠಾನದಲ್ಲಿ ನಿರ್ಲಕ್ಷ್ಯ, ಕರ್ತವ್ಯ ಲೋಪವೆಸಗುವ ಅಧಿಕಾರಿ ಸಿಬ್ಬಂದಿ ವಿರುದ್ದ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳುವುದಾಗಿ ಕೃಷಿ ಸಚಿವರಾದ ಎನ್ ಚಲುವರಾಯಸ್ವಾಮಿ ಎಚ್ಚರಿಕೆ ನೀಡಿದ್ದಾರೆ.
ಮೈಸೂರಿನ ನಾಗನಹಳ್ಳಿ ಜಿಲ್ಲಾ ಕೃಷಿ ತರಬೇತಿ ಕೇಂದ್ರದಲ್ಲಿ ಮೈಸೂರು ವಿಭಾಗ ಮಟ್ಟದ ಅಧಿಕಾರಿಗಳ ಪ್ರಗತಿ ಪರಿಶೀಲನಾ ಸಭೆ ನಡೆಸಿ ಮಾತನಾಡಿದ ಅವರು, ಇನ್ನಷ್ಟು ಕಾಳಜಿ ವಹಿಸಿ ಕೆಲಸ ಮಾಡುವಂತೆ ಸೂಚನೆ ನೀಡಿದರು.
ಬಿತ್ತನೆ ಬೀಜ ರಸಗೊಬ್ಬರ ಪೂರೈಕೆಯಲ್ಲಿ ಯಾವುದೇ ಕೊರತೆಯಾಗದಂತೆ ನಿಗಾ ವಹಿಸಿ. ಶೇ 100% ಬಿತ್ತನೆಯಾಗುವಂತೆ ನೋಡಿಕೊಳ್ಳಿ ಎಂದು ಅವರು ಹೇಳಿದರು.
ಭೂಮಿಯ ಫಲವತ್ತತೆ, ಪರಿಸರ ಸಂರಕ್ಷಣೆ ಹಾಗೂ ಮಾನವನ ಆರೋಗ್ಯದ ದೃಷ್ಟಿಯಿಂದ ರಾಸಾಯನಿಕ ಮತ್ತು ಕೀಟನಾಶಕಗಳ ಬಳಕೆ ಕಡಿಮೆ ಮಾಡಲು ರೈತಾಪಿ ವರ್ಗದಲ್ಲಿ ಜಾಗೃತಿ ಮೂಡಿಸಿ ಎಂದು ಅವರು ನಿರ್ದೇಶನ ನೀಡಿದರು.
ರೈತರನ್ನು ಅನಗತ್ಯವಾಗಿ ಅಲೆದಾಡಿಸಬೇಡಿ: ಮಳೆ ಪರಿಸ್ಥಿತಿಗೆ ಅನುಗುಣವಾಗಿ ಪರ್ಯಾಯ ಬೆಳೆಗಳ ಬಗ್ಗೆಯೂ ಮಾರ್ಗದರ್ಶನ ನೀಡಿ, ಕೃಷಿ ಯಾಂತ್ರಿಕರಣ, ಕೃಷಿ ಭಾಗ್ಯ ಯೋಜನೆ ಜಾರಿ, ಸಾವಯವ ಕೃಷಿ, ಸಮಗ್ರ ಬೇಸಾಯದ ಬಗ್ಗೆ ಜಾಗೃತಿ ಮೂಡಿಸಲು ಆದ್ಯತೆ ನೀಡಿ ಎಂದ ಅವರು ಹೇಳಿದರು.
ಕೃಷಿ ವಿಶ್ವವಿದ್ಯಾಲಯಗಳ ಸಂಶೋಧನೆಗಳ ಫಲ ರೈತರಿಗೆ ತಲುಪಿಸುವಲ್ಲಿ ಆಸಕ್ತಿ ವಹಿಸಿ ಕೃಷಿ ಉತ್ಪನ್ನಗಳ ಮೌಲ್ಯವರ್ಧನೆಯ ಮಹತ್ವದ ಬಗ್ಗೆ ಅರಿವು ಮೂಡಿಸುವಂತೆ ಸಚಿವರು ತಿಳಿಸಿದರು.
ಕೃಷಿ ಆಯುಕ್ತರಾದ ವೈ.ಎಸ್ ಪಾಟೀಲ್ ನಿರ್ದೇಶಕರಾದ ಡಾ. ಜಿ.ಟಿ ಪುತ್ರ, ಜಲಾನಯನ ಅಭಿವೃದ್ಧಿ ಇಲಾಖೆ ನಿರ್ದೇಶಕರಾದ ಮಹಮದ್ ಪರವೇಜ ಬಂಥನಾಳ, ರಾಜ್ಯ ಬೀಜ ನಿಗಮದ ವ್ಯವಸ್ಥಾಪಕ ನಿರ್ದೇಶಕರಾದ ಅನುಪ್, ಬೀಜ ಪ್ರಮಾಣೀಕರಣ ಸಂಸ್ಥೆ ವ್ಯವಸ್ಥಾಪಕ ನಿರ್ದೇಶಕರಾದ ಡಾ ಸದಾನಂದ ಹಾಗೂ ಮೈಸೂರು, ಮಂಡ್ಯ, ಚಾಮರಾಜನಗರ, ಕೊಡಗು, ಹಾಸನ,ಚಿಕ್ಕಮಗಳೂರು, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಕೃಷಿ ಅಧಿಕಾರಿಗಳು ಹಾಜರಿದ್ದರು.
ಮೈಸೂರು: ನಾಡಹಬ್ಬ ದಸರಾ ಮಹೋತ್ಸವದ ಅಂಗವಾಗಿ ನಡೆಯಲಿರುವ ಕಾರ್ಯಕ್ರಮಗಳನ್ನು ಜನರಿಗೆ ತಿಳಿಸಲು ಹಾಗೂ ಪ್ರವಾಸಿಗರಿಗೆ ಉಪಯುಕ್ತವಾದ ಮಾಹಿತಿ ಕೊಡಲು ದಸರಾ-೨೦೨೬ರ…
ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರ ಮತ್ತೆ ಮುನ್ನೆಲೆಗೆ ಬಂದಿದೆ. 6 ಸಾವಿರ ಕ್ಯೂಸೆಕ್ ನೀರನ್ನು 3 ಸಾವಿರ…
ಹುಬ್ಬಳ್ಳಿ: ಸೆಪ್ಟೆಂಬರ್ 18ರಿಂದ ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜ್ಯದಲ್ಲಿ 2 ದಿನಗಳ ಪ್ರವಾಸ ಕೈಗೊಳ್ಳಲಿದ್ದಾರೆ. ಸೆಪ್ಟೆಂಬರ್ 18ರ…
ಮಹಾದೇಶ್. ಎಂ ಗೌಡ ಹನೂರು: ತಾಲ್ಲೂಕಿನ ಮಂಗಲ ಗ್ರಾಮದ ಹುಲುಸುಗುಡ್ಡೆ ಬಳಿ ಇರುವ ಐತಿಹಾಸಿಕ ರಾಮನಗುಡ್ಡ ಕೆರೆ ಸಂಪೂರ್ಣ ಭರ್ತಿಯಾಗಿ…
ಕೊನೆಗೊಳ್ಳಲಿ ಸಂಘರ್ಷ! ಯುದ್ಧವನು ಕೊನೆಗಾಣಿಸಲು ರಾಜತಾಂತ್ರಿಕ ಮಾತುಕತೆಯೇ ಉತ್ತಮವೆಂಬ ಭಾರತದ ನಿಲುವಿಗೆ ಬ್ರಿಕ್ಸ್ ನಾಯಕರು ಒಕ್ಕೊರಲಿನಿಂದ ಒಪ್ಪಿರುವುದು ಸ್ವಾಗತಾರ್ಹ! ಇದಲ್ಲವೇ…
ಮೈಸೂರಿನ ನೈಋತ್ಯ ರೈಲ್ವೆಗೆ ಸೇರಿರುವ ಅಶೋಕ ಪುರಂ ರೈಲು ನಿಲ್ದಾಣದಲ್ಲಿ ಪ್ಲಾಟ್ ಫಾರಂ ೬ರ ಕಡೆ ರೈಲು ಪ್ರಯಾಣಿಕರಿಗೆ ಅನುಕೂಲವಾಗಲೆಂದು…