ಮೈಸೂರು

ಚಾಮುಂಡಿ ಬೆಟ್ಟದಲ್ಲಿ ಕಠಿಣ ಕ್ರಮ : ಇನ್ಮುಂದೆ ಮಾಡುವಂತಿಲ್ಲ ರೀಲ್ಸ್‌, ವಿಡಿಯೋ….

ಮೈಸೂರು : ಚಾಮುಂಡೇಶ್ವರಿ ದೇವಾಲಯದಲ್ಲಿ ಉತ್ಸವಮೂರ್ತಿ ಸಮೀಪ, ಗರ್ಭಗುಡಿ ಮತ್ತು ಪ್ರಾಂಗಣದಲ್ಲಿ ಮೊಬೈಲ್ ಹಾಗೂ ಕ್ಯಾಮೆರಾದಲ್ಲಿ ಛಾಯಾಚಿತ್ರ ತೆಗೆಯುವುದು ಮತ್ತು ರೀಲ್ಸ್ ಮಾಡುವುದನ್ನು ನಿಷೇಧಿಸಲಾಗಿದೆ.

ಈ ನಿಯಮವನ್ನು ಉಲ್ಲಂಘನೆ ಮಾಡಿದಲ್ಲಿ ಮೊಬೈಲ್ ಮತ್ತು ಕ್ಯಾಮೆರಾಗಳನ್ನು ಶಾಶ್ವತವಾಗಿ ವಶಪಡಿಸಿಕೊಳ್ಳಲಾಗುವುದು. ಇನ್ನು ಮುಂದೆ ಪ್ರಾಧಿಕಾರದ ವತಿಯಿಂದ ಉತ್ಸವ ಮೂರ್ತಿಯ ಫೋಟೋ ಹಾಗೂ ವೀಡಿಯೋ ಚಿತ್ರೀಕರಿಸಿ ಸಾರ್ವಜನಿಕವಾಗಿ ಸಾಮಾಜಿಕ ಜಾಲತಾಣದಲ್ಲಿ ಪ್ರಸಾರ ಮಾಡಲಾಗುವುದು ಎಂದು ಜಿಲ್ಲಾಧಿಕಾರಿ ಲಕ್ಷ್ಮಿಕಾಂತ ರೆಡ್ಡಿ ಅವರು ಬುಧವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು.

ಪ್ರಸಾದ ವಿತರಣೆ ಜಾಗ ಬದಲು
ಪ್ರತಿ ವರ್ಷ ಮಲ್ಟಿ ಲೆವಲ್ ಪಾರ್ಕಿಂಗ್ ಜಾಗದಲ್ಲಿ ಅನ್ನಸಂತರ್ಪಣೆ ಹಾಗೂ ಪ್ರಸಾದ ವಿತರಣೆ ಕಾರ್ಯ ನಡೆಯುತ್ತಿತ್ತು. ಈ ಬಾರಿ ಅರಣ್ಯ ಮಾಹಿತಿ ಭವನದ ಆವರಣವನ್ನು ಈ ಕಾರ್ಯಕ್ಕೆ ಬಳಸಿಕೊಳ್ಳಲಾಗುತ್ತಿದೆ. ಮೊದಲ ಶುಕ್ರವಾರ ಪ್ರಾಧಿಕಾರದ ವತಿಯಿಂದಲೇ ಅನ್ನ ಸಂತರ್ಪಣೆ ಕಾರ್ಯ ನಡೆಯುತ್ತಿದೆ. ಮುಂದಿನ ಶುಕ್ರವಾರಗಳಲ್ಲಿ ಸಂಘ-ಸಂಸ್ಥೆಗಳು, ಸೇವಾರ್ಥದಾರರನ್ನು ಒಳಗೊಳ್ಳಿಸಿಕೊಳ್ಳುವ ಆಲೋಚನೆ ಇದೆ ಎಂದು ಹೇಳಿದರು.

ಆಂದೋಲನ ಡೆಸ್ಕ್

Recent Posts

ಹೋಟೆಲ್,ರೆಸ್ಟೋರೆಂಟ್‌ಗಳ ಮೇಲೆ ಮುಂದುವರೆದ ದಾಳಿ

ಬೆಂಗಳೂರು ನಂತರ ಮೈಸೂರು, ಮಂಗಳೂರಿನಲ್ಲೂ ಕಾರ್ಯಾಚರಣೆ ಬೆಂಗಳೂರು : ರಾಜ್ಯದಲ್ಲಿ ಆಹಾರದ ಗುಣಮಟ್ಟ ಮತ್ತು ನೈರ್ಮಲ್ಯದ ಕುರಿತು ಸಾರ್ವಜನಿಕರಿಂದ ಹೆಚ್ಚುತ್ತಿರುವ…

6 hours ago

ನಂ.ಗೂಡು | ಮತ್ತೆ ಕಳಚಿ ಬೀಳುತ್ತಿರುವ ಸೇತುವೆಯ ಸೀಲಿಂಗ್ ಕಾಂಕ್ರೀಟ್

ಮೂರೂ ದಿನಗಳಿಂದಲೂ ಸೇತುವೆಯತ್ತ ಮುಖ ಮಾಡದ ರೈಲ್ವೆ ಇಲಾಖೆ ನಂಜನಗೂಡು : ಮಹಾತ್ಮಾಗಾಂಧಿ ಶತಾಬ್ಧಿ ರಸ್ತೆಗೆ ನಿರ್ಮಿಸಿರುವ ರೈಲ್ವೆ ಕೆಳ…

9 hours ago

ರಾವಣನ ಪಾತ್ರವನ್ನ ನನಗಿಂತ ಉತ್ತಮವಾಗಿ ಯಾರೂ ಮಾಡಲು ಸಾಧ್ಯವಿಲ್ಲ : ಯಶ್

ಮುಂಬೈ : ‘ಟಾಕ್ಸಿಕ್’ ಮತ್ತು ‘ರಾಮಾಯಣ’ ಸಿನಿಮಾಗಳ ಕೆಲಸಗಳಲ್ಲಿ ನಿರತರಾಗಿರುವ ಯಶ್, ‘ರಾಮಾಯಣ’ ಸಿನಿಮಾದಲ್ಲಿ ಕೇವಲ ಸಹ-ನಿರ್ಮಾಪಕರಾಗಿ ಮಾತ್ರವಲ್ಲದೆ ʻರಾವಣʼನ…

9 hours ago

ರಾಜ್ಯಗಳಿಗೆ ನೀಡುವ ವಿಪತ್ತು ಪರಿಹಾರದಲ್ಲೂ ಕೇಂದ್ರದಿಂದ ವಂಚನೆ : ಸಿಎಜಿ ವರದಿ

ಬೆಂಗಳೂರು : ಭೂಕುಸಿತ, ಬರದಂತಹ ಭೀಕರ ಪ್ರಕೃತಿ ವಿಕೋಪಗಳಿಂದ ಕಂಗಾಲಾಗಿರುವ ರಾಜ್ಯಗಳಿಗೆ ಕೇಂದ್ರ ಸರ್ಕಾರದಿಂದ ಸಿಗಬೇಕಾದ ವಿಪತ್ತು ಪರಿಹಾರ ಅನುದಾನದಲ್ಲಿ…

10 hours ago

ಶಾಸಕರ ಭರವಸೆ ಬಳಿಕ ಪ್ರತಿಭಟನೆ ಹಿಂಪಡೆತ : ಮೃತರ ಕುಟುಂಬಕ್ಕೆ ತಲಾ ₹15 ಲಕ್ಷ ಪರಿಹಾರ

ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ದಾಳಿಗೆ ಮೃತಪಟ್ಟ ಕುಟುಂಬಗಳಿಗೆ ಸರ್ಕಾರಿ ಉದ್ಯೋಗ, ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಹಾಗೂ ಸೂಕ್ತ…

13 hours ago

ವಾರಣಾಸಿ ಏರ್‌ಫೋರ್ಟ್‌ | ಶಸ್ತ್ರಾಸ್ತ್ರ ತಪಾಸಣೆ ವೇಳೆ ಆಕಸ್ಮಿಕ ಗುಂಡಿನ ದಾಳಿ ; ಇಬ್ಬರಿಗೆ ಗಾಯ

ವಾರಣಾಸಿ : ವಾರಣಾಸಿಯ ಲಾಲ್ ಬಹದ್ದೂರ್ ಶಾಸ್ತ್ರಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ಬೆಳಿಗ್ಗೆ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಶಸ್ತ್ರಾಸ್ತ್ರ ತಪಾಸಣೆಯ…

13 hours ago