ಮೈಸೂರು: ಭಾರತೀಯ ಸಂಸ್ಕೃತಿಯ ಮತ್ತು ಪರಂಪರೆಯ ಉಳಿವಿಗಾಗಿ ಹೋರಾಡುವ ಸಂದರ್ಭ ಎದುರಾಗಿದೆ ಎಂದು ಶಾಸಕ ಟಿಎಸ್ ಶ್ರೀವತ್ಸ ಹೇಳಿದರು.
ನಗರದ ಕುವೆಂಪು ನಗರದಲ್ಲಿರುವ ಶ್ರೀ ಮಾತಾ ವಿದ್ಯಾಸಂಸ್ಥೆಯಲ್ಲಿ ಪದ್ಮಶ್ರೀ ಹಾಗೂ ರವಿಶಂಕರ್ ಅವರ ಶಾಲೆಯ ಬೊಂಬೆ ಮನೆಗೆ ಭೇಟಿ ನೀಡಿ ಬೊಂಬೆಗಳನ್ನು ವೀಕ್ಷಿಸಿ ಬಳಿಕ ಮಾತನಾಡಿದ ಅವರು, ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳಿಗೆ ವಿಶೇಷ ಸ್ಥಾನಮಾನ ನೀಡಲಾಗಿದೆ. ಆದರೂ, ಇಂದಿನ ದಿನದಲ್ಲಿ ಯುವ ಜನತೆ ಸಂಸ್ಕೃತಿ ಹಾಗೂ ಪರಂಪರೆಯನ್ನು ಮರೆಯುತ್ತಿರುವುದು ವಿಪರ್ಯಾಸ ಎಂದು ಬೇಸರಿಸಿದರು.
ಹಬ್ಬಹರಿದಿನಗಳು ಪರಂಪರೆಯಿಂದ ವಿಶೇಷ ಸ್ಥಾನಮಾನ ಹೊಂದುವ ಮೂಲಕ ತನ್ನದೆಯಾದ ಹಿನ್ನೆಲೆ ಹೊಂದಿವೆ. ಅದರಲ್ಲಿ ದಸರಾ ಹಬ್ಬ ಬಹುದೊಡ್ಡ ಸಂಭ್ರಮವಾಗಿದೆ. ಈ ಹಬ್ಬದಲ್ಲಿ ದಸರಾ ಗೊಂಬೆಗಳನ್ನು ಕುರಿಸುವ ಮೂಲಕ ವಿಶೇಷವಾಗಿ ಸಾಂಸ್ಕೃತಿಕ ನಗರದಲ್ಲಿ ಆಚರಿಸುತ್ತಿರುವುದು ಸಂತಸ ತಂದಿದೆ ಎಂದರು.
ಪ್ರತಿಯೊಬ್ಬರು ಸಂಸ್ಕೃತಿ ಉಳಿಯುವಿಕೆಗಾಗಿ ಶ್ರಮಿಸಬೇಕು. ನಮ್ಮ ಸಂಪ್ರದಾಯ ಮತ್ತು ಧಾರ್ಮಿಕತೆಯ ರಕ್ಷಣೆಗಾಗಿ ಪ್ರತಿಯೊಬ್ಬ ಹಿಂದುಗಳು ಒಗ್ಗಟ್ಟಾಗಿ ಕಲೆತು ಮುಂದಿನ ಪೀಳಿಗೆಗೆ ಸಂರಕ್ಷಿಸಬೇಕು ಎಂದು ಕರೆ ನೀಡಿದರು.
ಮೈಸೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಫೈಲ್ಗಳು ಮುಡಾ ಕಚೇರಿಯಲ್ಲಿರುವುದಕ್ಕಿಂತ ಸಚಿವ ಭೈರತಿ ಸುರೇಶ್ ಮನೆಯಲ್ಲೇ ಅಧಿಕವಾಗಿವೆ ಎಂದು ಶಾಸಕ ಟಿ.ಎಸ್.ಶ್ರೀವತ್ಸ…
ಮಂಡ್ಯ: ಮುಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಸರ್ಕಾರಿ ಭೂಮಿಯನ್ನು ಲಪಾಟಾಯಿಸಿದ್ದಾರೆ, ಅದಕ್ಕೆ ಆ ನಿವೇಶನಗಳನ್ನು ವಾಪಾಸ್ಸು ಮಾಡಿದ್ದಾರೆ ಎಂದು ಕೇಂದ್ರ…
ಬೆಂಗಳೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ಅಧಿಕಾರಿಗಳು ಇಂದು (ಅಕ್ಟೋಬರ್.18) ಮೂರು ಕಡೆಗಳಲ್ಲಿ ದಾಳಿ ನಡೆಸಿದ್ದು, ಈ ದಾಳಿಯು ಸಂಪೂರ್ಣವಾಗಿ…
ಬೆಂಗಳೂರು: ಮುಡಾ ಕೇಸ್ ಮುಚ್ಚಿ ಹಾಕುವಲ್ಲಿ ಸರ್ಕಾರಕ್ಕೆ ಲೋಕಾಯುಕ್ತ ಸಹಾಯ ಮಾಡುತ್ತದೆ ಎಂಬ ಶಂಕೆ ಇದೆ. ಹೀಗಾಗಿ ಮುಡಾ ಪ್ರಕರಣವನ್ನು…
ಹೊಸದಿಲ್ಲಿ: ಆತ್ಯಾಚಾರ ಸಂತ್ರಸ್ತೆಯ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಭವಾನಿ ರೇವಣ್ಣಗೆ ಹೈಕೋರ್ಟ್ನಿಂದ ಜಾಮೀನು ಮಂಜೂರು ಮಾಡಲಾಗಿತ್ತು. ಇದನ್ನು ಪ್ರಶ್ನಿಸಿ ಎಸ್ಐಟಿ…
ಮೈಸೂರು: ಮುಡಾದಲ್ಲಿ ಹಗರಣ ನಡೆದಿದೆ ಎಂದು ಆರ್ಐಟಿ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಇ.ಡಿ.ಗೆ ದೂರು ನೀಡಿದ್ದರು. ಈ ದೂರಿನ ಆಧಾರದ…