ಮೈಸೂರು: ಭಾರತೀಯ ಸಂಸ್ಕೃತಿಯ ಮತ್ತು ಪರಂಪರೆಯ ಉಳಿವಿಗಾಗಿ ಹೋರಾಡುವ ಸಂದರ್ಭ ಎದುರಾಗಿದೆ ಎಂದು ಶಾಸಕ ಟಿಎಸ್ ಶ್ರೀವತ್ಸ ಹೇಳಿದರು.
ನಗರದ ಕುವೆಂಪು ನಗರದಲ್ಲಿರುವ ಶ್ರೀ ಮಾತಾ ವಿದ್ಯಾಸಂಸ್ಥೆಯಲ್ಲಿ ಪದ್ಮಶ್ರೀ ಹಾಗೂ ರವಿಶಂಕರ್ ಅವರ ಶಾಲೆಯ ಬೊಂಬೆ ಮನೆಗೆ ಭೇಟಿ ನೀಡಿ ಬೊಂಬೆಗಳನ್ನು ವೀಕ್ಷಿಸಿ ಬಳಿಕ ಮಾತನಾಡಿದ ಅವರು, ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳಿಗೆ ವಿಶೇಷ ಸ್ಥಾನಮಾನ ನೀಡಲಾಗಿದೆ. ಆದರೂ, ಇಂದಿನ ದಿನದಲ್ಲಿ ಯುವ ಜನತೆ ಸಂಸ್ಕೃತಿ ಹಾಗೂ ಪರಂಪರೆಯನ್ನು ಮರೆಯುತ್ತಿರುವುದು ವಿಪರ್ಯಾಸ ಎಂದು ಬೇಸರಿಸಿದರು.
ಹಬ್ಬಹರಿದಿನಗಳು ಪರಂಪರೆಯಿಂದ ವಿಶೇಷ ಸ್ಥಾನಮಾನ ಹೊಂದುವ ಮೂಲಕ ತನ್ನದೆಯಾದ ಹಿನ್ನೆಲೆ ಹೊಂದಿವೆ. ಅದರಲ್ಲಿ ದಸರಾ ಹಬ್ಬ ಬಹುದೊಡ್ಡ ಸಂಭ್ರಮವಾಗಿದೆ. ಈ ಹಬ್ಬದಲ್ಲಿ ದಸರಾ ಗೊಂಬೆಗಳನ್ನು ಕುರಿಸುವ ಮೂಲಕ ವಿಶೇಷವಾಗಿ ಸಾಂಸ್ಕೃತಿಕ ನಗರದಲ್ಲಿ ಆಚರಿಸುತ್ತಿರುವುದು ಸಂತಸ ತಂದಿದೆ ಎಂದರು.
ಪ್ರತಿಯೊಬ್ಬರು ಸಂಸ್ಕೃತಿ ಉಳಿಯುವಿಕೆಗಾಗಿ ಶ್ರಮಿಸಬೇಕು. ನಮ್ಮ ಸಂಪ್ರದಾಯ ಮತ್ತು ಧಾರ್ಮಿಕತೆಯ ರಕ್ಷಣೆಗಾಗಿ ಪ್ರತಿಯೊಬ್ಬ ಹಿಂದುಗಳು ಒಗ್ಗಟ್ಟಾಗಿ ಕಲೆತು ಮುಂದಿನ ಪೀಳಿಗೆಗೆ ಸಂರಕ್ಷಿಸಬೇಕು ಎಂದು ಕರೆ ನೀಡಿದರು.
ಮೈಸೂರು: ಮೈಸೂರಿನ ಎಲ್ಲಾ ಕೆರೆಗಳ ಸರ್ವೆ ನಡೆಸಿ, ಒತ್ತುವರಿ ತೆರವುಗೊಳಿಸುವಂತೆ ಮೈಸೂರು ಅಪರ ಜಿಲ್ಲಾಧಿಕಾರಿ ಡಾ.ಪಿ.ಶಿವರಾಜು ಅವರು ಅಧಿಕಾರಿಗಳಿಗೆ ಸೂಚನೆ…
ನವದೆಹಲಿ: ಭಾರತ ಸರ್ಕಾರವು ಚೀನಾದ ನಾಗರಿಕರಿಗೆ ಪ್ರವಾಸಿ ವೀಸಾಗಳನ್ನು ಪುನರಾರಂಭಿಸಲು ಸಿದ್ಧತೆ ನಡೆಸುತ್ತಿದೆ ಎಂಬ ಮಾಹಿತಿ ಲಭ್ಯವಾಗಿದೆ. ಗಾಲ್ವಾನ್ ಕಣಿವೆಯಲ್ಲಿ…
ಮುಂಬೈ: ಆರೋಗ್ಯ ಸಮಸ್ಯೆಯಿಂದ ಮುಂಬೈನ್ ಆಸ್ಪತ್ರೆಗೆ ದಾಖಲಾಗಿದ್ದ ಶರದ್ ಪವಾರ್ ಅವರನ್ನು ಇಂದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗಿದೆ. ಶರದ್ ಪವಾರ್…
ಅಮರಾವತಿ: ವ್ಯಕ್ತಿಯೊಬ್ಬ ಪತ್ನಿ ಹಾಗೂ ತಾಯಿಯನ್ನು ಕತ್ತು ಹಿಸುಕಿ ಕೊಂದು ಬಳಿಕ ಇಬ್ಬರು ಮಕ್ಕಳೊಂದಿಗೆ ರೈಲಿಗೆ ತಲೆಕೊಟ್ಟು ಆತ್ಮಹತ್ಯೆಗೆ ಶರಣಾದ…
ಮೈಸೂರು: ಇಲ್ಲಿನ ಚಲುವಾಂಬ ಆಸ್ಪತ್ರೆಯಲ್ಲಿ ಇರುವೆ ಕಚ್ಚಿ ಮಗು ಸಾವನ್ನಪ್ಪಿರುವ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಮಗುವಿನ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆಂದು…
ಹಾಸನ: ಮೂವರು ಇಟಿಎಫ್ ಸಿಬ್ಬಂದಿ ಮೇಲೆ ಕಾಡಾನೆ ದಾಳಿ ಮಾಡಿರುವ ಘಟನೆ ಬೇಲೂರು ತಾಲ್ಲೂಕಿನ ಚೀಕನಹಳ್ಳಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ…