ಮೈಸೂರು: ಭಾರತೀಯ ಸಂಸ್ಕೃತಿಯ ಮತ್ತು ಪರಂಪರೆಯ ಉಳಿವಿಗಾಗಿ ಹೋರಾಡುವ ಸಂದರ್ಭ ಎದುರಾಗಿದೆ ಎಂದು ಶಾಸಕ ಟಿಎಸ್ ಶ್ರೀವತ್ಸ ಹೇಳಿದರು.
ನಗರದ ಕುವೆಂಪು ನಗರದಲ್ಲಿರುವ ಶ್ರೀ ಮಾತಾ ವಿದ್ಯಾಸಂಸ್ಥೆಯಲ್ಲಿ ಪದ್ಮಶ್ರೀ ಹಾಗೂ ರವಿಶಂಕರ್ ಅವರ ಶಾಲೆಯ ಬೊಂಬೆ ಮನೆಗೆ ಭೇಟಿ ನೀಡಿ ಬೊಂಬೆಗಳನ್ನು ವೀಕ್ಷಿಸಿ ಬಳಿಕ ಮಾತನಾಡಿದ ಅವರು, ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳಿಗೆ ವಿಶೇಷ ಸ್ಥಾನಮಾನ ನೀಡಲಾಗಿದೆ. ಆದರೂ, ಇಂದಿನ ದಿನದಲ್ಲಿ ಯುವ ಜನತೆ ಸಂಸ್ಕೃತಿ ಹಾಗೂ ಪರಂಪರೆಯನ್ನು ಮರೆಯುತ್ತಿರುವುದು ವಿಪರ್ಯಾಸ ಎಂದು ಬೇಸರಿಸಿದರು.
ಹಬ್ಬಹರಿದಿನಗಳು ಪರಂಪರೆಯಿಂದ ವಿಶೇಷ ಸ್ಥಾನಮಾನ ಹೊಂದುವ ಮೂಲಕ ತನ್ನದೆಯಾದ ಹಿನ್ನೆಲೆ ಹೊಂದಿವೆ. ಅದರಲ್ಲಿ ದಸರಾ ಹಬ್ಬ ಬಹುದೊಡ್ಡ ಸಂಭ್ರಮವಾಗಿದೆ. ಈ ಹಬ್ಬದಲ್ಲಿ ದಸರಾ ಗೊಂಬೆಗಳನ್ನು ಕುರಿಸುವ ಮೂಲಕ ವಿಶೇಷವಾಗಿ ಸಾಂಸ್ಕೃತಿಕ ನಗರದಲ್ಲಿ ಆಚರಿಸುತ್ತಿರುವುದು ಸಂತಸ ತಂದಿದೆ ಎಂದರು.
ಪ್ರತಿಯೊಬ್ಬರು ಸಂಸ್ಕೃತಿ ಉಳಿಯುವಿಕೆಗಾಗಿ ಶ್ರಮಿಸಬೇಕು. ನಮ್ಮ ಸಂಪ್ರದಾಯ ಮತ್ತು ಧಾರ್ಮಿಕತೆಯ ರಕ್ಷಣೆಗಾಗಿ ಪ್ರತಿಯೊಬ್ಬ ಹಿಂದುಗಳು ಒಗ್ಗಟ್ಟಾಗಿ ಕಲೆತು ಮುಂದಿನ ಪೀಳಿಗೆಗೆ ಸಂರಕ್ಷಿಸಬೇಕು ಎಂದು ಕರೆ ನೀಡಿದರು.
ಗಾಂಧೀಜಿಯವರ ಜೀವನವೇ ತೆರೆದ ಪುಸ್ತಕ: ಇಡೀ ವಿಶ್ವವೇ ಗಾಂಧೀಜಿಯವರ ಅಹಿಂಸೆ ಮತ್ತು ಸತ್ಯಾಗ್ರಹಗಳನ್ನು ಗೌರವಿಸುತ್ತದೆ. ಗಾಂಧಿಯವರು ತಮ್ಮ ಶಾಲಾ ದಿನಗಳಲ್ಲಿಯೇ…
ಡಾ.ಟಿ.ಮಂಜು ಸತ್ತಿಗೆಹುಂಡಿ, ಉಪನ್ಯಾಸಕರು, ಗಾಂಧಿ ಅಧ್ಯಯನ ಕೇಂದ್ರ, ಗಾಂಧಿ ಭವನ, ಮೈಸೂರು ವಿಶ್ವವಿದ್ಯಾಲಯ ಭಾರತದ ಸ್ವಾತಂತ್ರ್ಯ ಚಳವಳಿಗೆ ಕಾಲೇಜು ವಿದ್ಯಾರ್ಥಿಗಳು,…
ನನ್ನ ಆರು ಏಳನೆಯ ವಯಸ್ಸಿನಿಂದ ಹದಿನಾರನೆಯ ವಯಸ್ಸಿನವರೆಗೆ ಪಾಠಶಾಲೆಯಲ್ಲಿ ವಿದ್ಯೆಯನ್ನು ಕಲಿತೆ. ಆದರೆ ಸ್ಕೂಲಿನಲ್ಲಿ ನನಗೆ ಯಾವ ಧಾರ್ಮಿಕ ಶಿಕ್ಷಣವೂ…
ನವೀನ್ ಡಿಸೋಜ ಮಡಿಕೇರಿ: ಜೂ.೨೮ರಿಂದ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮ ನಡೆಯಲಿದ್ದು, ಕೊಡಗು ಜಿಲ್ಲೆಯಲ್ಲಿಯೂ ಅಗತ್ಯ ಸಿದ್ಧತೆಯನ್ನು ಮಾಡಿಕೊಳ್ಳಲಾಗಿದೆ. ಜಿಲ್ಲೆಯಲ್ಲಿ…
ದಿನೇಶ್ ಕುಮಾರ್ ಹೆಚ್.ಎಸ್. ಅಗ್ನಿ ಅವಘಡದ ಬಳಿಕ ಎಚ್ಚೆತ್ತ ಅಧಿಕಾರಿಗಳು ಮೈಸೂರು: ನಗರದ ದಟ್ಟಗಳ್ಳಿಯ ಮಾರಾ ರೆಸ್ಟೋ ಬಾರ್ನಲ್ಲಿ ನಡೆದ…
ನೀಟ್ -ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆಯಾದ ಹಿನ್ನೆಲೆಯಲ್ಲಿ ಇದೇ ಜೂನ್ ೨೧ ರಂದು ಮರು ಪರೀಕ್ಷೆ ನಡೆಯಲಿದೆ. ವಂಚನೆ ಜಾಲ…