ಮೈಸೂರು

ಮೈಸೂರಿನ ಪೂರ್ಣ ಚೇತನ ಶಾಲೆಯಲ್ಲಿ ನಿರ್ಮಾಣವಾಗಲಿದೆ ವಿದ್ಯಾರ್ಥಿಗಳ ಕನಸಿನ ಸ್ಮಾರ್ಟ್‌ ವಿಲೇಜ್‌

ಮೈಸೂರು: ಮೈಸೂರಿನ ಪೂರ್ಣ ಚೇತನ ಶಾಲೆಯಲ್ಲಿ ವಿದ್ಯಾರ್ಥಿಗಳ ಕನಸಿನ ಸ್ಮಾರ್ಟ್‌ ವಿಲೇಜ್‌ ನಿರ್ಮಾಣವಾಗಲಿದೆ.

ಈ ಕನಸಿನ ಹಳ್ಳಿಯಲ್ಲಿ ಬೀದಿ ದೀಪಗಳು ಸ್ವಯಂ ಚಾಲಿತವಾಗಿ ಕಾರ್ಯನಿರ್ವಹಿಸಲಿದ್ದು, ಹಳ್ಳಿಯ ರೈತ ತನ್ನ ಹೊಲದಲ್ಲಿನ ಬೆಳೆಗಳ ಬಗ್ಗೆ ಚಿಂತಿಸಬೇಕಿಲ್ಲ. ಏಕೆಂದರೆ ಇಲ್ಲಿನ ಹೊಲಗಳಿಗೆ ಲೇಸರ್‌ ಭದ್ರತಾ ಕವಚವಿದೆ. ಇಲ್ಲಿ ಯಾರಾದರೂ ಮದ್ಯಪಾನ ಮಾಡಿ ಬಂದರೆ, ಸ್ವಯಂ ಚಾಲಿತ ಸಾಧನ ಅದನ್ನು ಪತ್ತೆ ಹಚ್ಚುತ್ತದೆ.

ಇನ್ನು ಮೈಸೂರು ನಗರ ಸೇರಿದಂತೆ ಎಲ್ಲಾ ಹಳ್ಳಿ-ಪಟ್ಟಣಗಳ ಅತಿ ದೊಡ್ಡ ಸವಾಲು ತ್ಯಾಜ್ಯ ನಿರ್ವಹಣೆ. ಅದಕ್ಕೂ ಈ ಸ್ಮಾರ್ಟ್‌ ಹಳ್ಳಿಯಲ್ಲಿ ತಂತ್ರಜ್ಞಾನದ ಮೂಲಕ ಮಕ್ಕಳು ಪರಿಹಾರ ಒದಗಿಸಲಿದ್ದಾರೆ. ಈ ಹಳ್ಳಿಯಲ್ಲಿ ಕಸ-ತ್ಯಾಜ್ಯ ವಿಂಗಡಣೆ ಸಂಪೂರ್ಣ ಆಟೋಮ್ಯಾಟಿಕ್.‌ ಇಲ್ಲಿನ ಸ್ಮಾರ್ಟ್‌ ಕಸದ ಬುಟ್ಟಿಗಳು ಅಷ್ಟು ಸ್ಮಾರ್ಟ್‌ ಆಗಿದೆ. ಇನ್ನು ಹಳ್ಳಿಯಲ್ಲಿ ವಾಯುಮಾಲಿನ್ಯ ಉಂಟಾದರೆ ತಕ್ಷಣ ಹಳ್ಳಿಗರಿಗೆ ಎಚ್ಚರಿಕೆ ಸಂದೇಶ ಹೋಗುತ್ತದೆ. ಇನ್ನು ಹಳ್ಳಿ ಬದುಕಿನ ಅವಿಭಾಜ್ಯ ಅಂಗವಾದ ಪಶುಪಾಲನೆಯಲ್ಲಿ ಪಶುಗಳಿಗೆ ಮೇವು ನೀಡಿಕೆಯ ಕೆಲಸ ಸಂಪೂರ್ಣ ಆಟೋಮೇಟೆಡ್.‌ ರೈತರ ಹೊಲಕ್ಕೆ ಎಷ್ಟು ನೀರು ಬೇಕು, ಹೊಲದ ಮಣ್ಣಿನಲ್ಲಿ ನೀರಿನ ಅಂಶವಿದೆಯೇ ಹೀಗೆ ಎಲ್ಲವನ್ನೂ ಇಲ್ಲಿ ಸ್ಮಾರ್ಟ್‌ ಆಗಿ ನಿರ್ವಹಿಸಲಾಗುತ್ತದೆ.

ಇದೇ ಶನಿವಾರ ಮೈಸೂರು ನಗರದ ಹೊರವಲಯದಲ್ಲಿರುವ ಎಚ್.ಡಿ.ಕೋಟೆ ರಸ್ತೆಯ ಪೂರ್ಣ ಚೇತನ ಶಾಲೆಯಲ್ಲಿ 7ರಿಂದ 10ನೇ ತರಗತಿಯವರೆಗಿನ 136 ವಿದ್ಯಾರ್ಥಿಗಳನ್ನೊಳಗೊಂಡ 68 ತಂಡಗಳು ಈ ಪ್ರತಿಕೃತಿಯನ್ನು ಸೃಷ್ಟಿಸಲಿದ್ದಾರೆ.

68 ವಿಶಿಷ್ಟ ರೊಬೋಟಿಕ್‌ ಮಾದರಿಗಳನ್ನು ಅವರು ಇಲ್ಲಿ 16 ಗಂಟೆಗಳ ಅವಧಿಯಲ್ಲಿ ಸೃಷ್ಟಿಸಲಿದ್ದಾರೆ. ಈ ಯುವ ಬಾಲಪ್ರತಿಭೆಗಳು ಕೋಡಿಂಗ್‌, ರೋಬೋಟಿಕ್‌ ಹಾಗೂ ಕೃತಕ ಬುದ್ದಿಮತ್ತೆಯ ತಂತ್ರಜ್ಞಾನ ಬಳಸಿಕೊಂಡು ಅತ್ಯಾಧುನಿಕ, ಸುಸ್ಥಿರ ಸ್ಮಾರ್ಟ್‌ ಹಳ್ಳಿಯ ಕಲ್ಪನೆಯನ್ನು ಸಾಕಾರಗೊಳಿಸಲಿದ್ದಾರೆ.

ಇಲ್ಲಿ ಎಲ್ಲಾ ವಿದ್ಯಾರ್ಥಿಗಳು ರೂಪಿಸುವ ಎಲ್ಲಾ ಪ್ರತಿಕೃತಿಗಳು ಕೆಲಸ ಮಾಡುವಂತಾಗಿದ್ದು, ನಮ್ಮ ಹಳ್ಳಿಗಳ ಸಮಸ್ಯೆಗಳಿಗೆ ಪರಿಹಾರ ರೂಪದಲ್ಲಿವೆ. ವಿದ್ಯಾರ್ಥಿಗಳು ನಮ್ಮ ಹಳ್ಳಿಗಳ ಬದುಕನ್ನು ಇನ್ನಷ್ಟು ಸಬಲೀಕರಣಗೊಳಿಸುವ ನಿಟ್ಟಿನಲ್ಲಿ ಇಂತಹ ಪ್ರಯತ್ನ ನಡೆಸಲಿದ್ದಾರೆ.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಹಸುಗಳಿಗೆ ಮಾರಕ ರೋಗ : ರೈತರಲ್ಲಿ ತೀವ್ರ ಆತಂಕ

ನಾಪೋಕ್ಲು : ನಾಪೋಕ್ಲು ಭಾಗದ ಪಾಲೂರು ಗ್ರಾಮ ಹಾಗೂ ಸುತ್ತಮುತ್ತಲ ಪ್ರದೇಶಗಳಲ್ಲಿ ಆರೋಗ್ಯವಂತ ಹಸುಗಳ ಕಾಲುಗಳು ಕ್ರಮೇಣ ಕೃಶಗೊಂಡು ದುರ್ಬಲಗೊಳ್ಳುತ್ತಿದ್ದು,…

18 mins ago

ನಾಳೆ,ನಾಡಿದ್ದು ಮೈಸೂರಿನ ಈ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ

ಮೈಸೂರು : ವಿ.ವಿ ಮೊಹಲ್ಲಾ ಉಪವಿಭಾಗ ವ್ಯಾಪ್ತಿಯಲ್ಲಿ ಭೂಗತ ಕೇಬಲ್ ಅಳವಡಿಸುವ ಕೆಲಸದ ನಿಮಿತ್ತ ಫೆ.6 ಮತ್ತು 7 ರಂದು…

52 mins ago

ಮಾಲೂರು ವಿಧಾನಸಭಾ ಕ್ಷೇತ್ರದ ಮತ ಮರು ಎಣಿಕೆ : ನಂಜೇಗೌಡ ವಿನ್ನರ್‌ ಎಂದ ಸುಪ್ರೀಂ

ಬೆಂಗಳೂರು : ಕೋಲಾರ ಜಿಲ್ಲೆ, ಮಾಲೂರು ವಿಧಾನಸಭಾ ಕ್ಷೇತ್ರದ ಮರು ಮತ ಎಣಿಕೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಕೆಎನ್ ನಂಜೇಗೌಡ ಅವರು…

57 mins ago

ರತ್ನಪುರಿ | ನಾಳೆಯಿಂದ ಹಿಂದೂ ಮುಸ್ಲಿಂ ಭಾವೈಕ್ಯತೆ ಜಾತ್ರೆ

ಹುಣಸೂರು : ರಾಜ್ಯದಲ್ಲೇ ಜಾನುವಾರುಗಳ ಪ್ರಮುಖ ಜಾತ್ರೆಯಲ್ಲೊಂದಾದ ಹುಣಸೂರು ತಾಲೂಕಿನ ರತ್ನಪುರಿ(ದರ್ಗ)ಯಲ್ಲಿ ಹಿಂದೂ-ಮುಸ್ಲಿಮರ ಭಾವೈಕ್ಯತೆ ಮೆರೆವ ಶ್ರೀ ಅಂಜನೇಯ ಸ್ವಾಮಿಯ…

1 hour ago

ಚಾ.ನಗರ | ವಿವಿಧ ಗ್ರಾ.ಪಂಚಾಯ್ತಿಗಳಿಗೆ ಸಿಇಒ ದೀಢಿರ್‌ ಭೇಟಿ

ಚಾಮರಾಜನಗರ : ತಾಲ್ಲೂಕಿನ ವಿವಿಧ ಗ್ರಾಮ ಪಂಚಾಯಿತಿಗಳಿಗೆ ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮೋನಾ ರೋತ್ ಅವರು ದೀಢಿರ್‌ಭೇಟಿ ನೀಡಿ, ವಿವಿಧ…

1 hour ago

ಚಿರತೆ ಸೆರೆ | ನಿಟ್ಟುಸಿರು ಬಿಟ್ಟ ಗ್ರಾಮಸ್ಥರು

ಮೈಸೂರು : ಅರಣ್ಯ ಇಲಾಖೆ ಇರಿಸಿದ ಬೋನಿನಲ್ಲಿ ನಾಲ್ಕು ವರ್ಷದ ಗಂಡು ಚಿರತೆ ಸೆರೆಯಾಗಿದೆ. ಸರಗೂರು ತಾಲ್ಲೂಕಿನ ಎನ್.ಬೆಳತ್ತೂರು ಹಳೆ…

1 hour ago