ಮೈಸೂರು

ಮೈಸೂರಿನ ಪೂರ್ಣ ಚೇತನ ಶಾಲೆಯಲ್ಲಿ ನಿರ್ಮಾಣವಾಗಲಿದೆ ವಿದ್ಯಾರ್ಥಿಗಳ ಕನಸಿನ ಸ್ಮಾರ್ಟ್‌ ವಿಲೇಜ್‌

ಮೈಸೂರು: ಮೈಸೂರಿನ ಪೂರ್ಣ ಚೇತನ ಶಾಲೆಯಲ್ಲಿ ವಿದ್ಯಾರ್ಥಿಗಳ ಕನಸಿನ ಸ್ಮಾರ್ಟ್‌ ವಿಲೇಜ್‌ ನಿರ್ಮಾಣವಾಗಲಿದೆ.

ಈ ಕನಸಿನ ಹಳ್ಳಿಯಲ್ಲಿ ಬೀದಿ ದೀಪಗಳು ಸ್ವಯಂ ಚಾಲಿತವಾಗಿ ಕಾರ್ಯನಿರ್ವಹಿಸಲಿದ್ದು, ಹಳ್ಳಿಯ ರೈತ ತನ್ನ ಹೊಲದಲ್ಲಿನ ಬೆಳೆಗಳ ಬಗ್ಗೆ ಚಿಂತಿಸಬೇಕಿಲ್ಲ. ಏಕೆಂದರೆ ಇಲ್ಲಿನ ಹೊಲಗಳಿಗೆ ಲೇಸರ್‌ ಭದ್ರತಾ ಕವಚವಿದೆ. ಇಲ್ಲಿ ಯಾರಾದರೂ ಮದ್ಯಪಾನ ಮಾಡಿ ಬಂದರೆ, ಸ್ವಯಂ ಚಾಲಿತ ಸಾಧನ ಅದನ್ನು ಪತ್ತೆ ಹಚ್ಚುತ್ತದೆ.

ಇನ್ನು ಮೈಸೂರು ನಗರ ಸೇರಿದಂತೆ ಎಲ್ಲಾ ಹಳ್ಳಿ-ಪಟ್ಟಣಗಳ ಅತಿ ದೊಡ್ಡ ಸವಾಲು ತ್ಯಾಜ್ಯ ನಿರ್ವಹಣೆ. ಅದಕ್ಕೂ ಈ ಸ್ಮಾರ್ಟ್‌ ಹಳ್ಳಿಯಲ್ಲಿ ತಂತ್ರಜ್ಞಾನದ ಮೂಲಕ ಮಕ್ಕಳು ಪರಿಹಾರ ಒದಗಿಸಲಿದ್ದಾರೆ. ಈ ಹಳ್ಳಿಯಲ್ಲಿ ಕಸ-ತ್ಯಾಜ್ಯ ವಿಂಗಡಣೆ ಸಂಪೂರ್ಣ ಆಟೋಮ್ಯಾಟಿಕ್.‌ ಇಲ್ಲಿನ ಸ್ಮಾರ್ಟ್‌ ಕಸದ ಬುಟ್ಟಿಗಳು ಅಷ್ಟು ಸ್ಮಾರ್ಟ್‌ ಆಗಿದೆ. ಇನ್ನು ಹಳ್ಳಿಯಲ್ಲಿ ವಾಯುಮಾಲಿನ್ಯ ಉಂಟಾದರೆ ತಕ್ಷಣ ಹಳ್ಳಿಗರಿಗೆ ಎಚ್ಚರಿಕೆ ಸಂದೇಶ ಹೋಗುತ್ತದೆ. ಇನ್ನು ಹಳ್ಳಿ ಬದುಕಿನ ಅವಿಭಾಜ್ಯ ಅಂಗವಾದ ಪಶುಪಾಲನೆಯಲ್ಲಿ ಪಶುಗಳಿಗೆ ಮೇವು ನೀಡಿಕೆಯ ಕೆಲಸ ಸಂಪೂರ್ಣ ಆಟೋಮೇಟೆಡ್.‌ ರೈತರ ಹೊಲಕ್ಕೆ ಎಷ್ಟು ನೀರು ಬೇಕು, ಹೊಲದ ಮಣ್ಣಿನಲ್ಲಿ ನೀರಿನ ಅಂಶವಿದೆಯೇ ಹೀಗೆ ಎಲ್ಲವನ್ನೂ ಇಲ್ಲಿ ಸ್ಮಾರ್ಟ್‌ ಆಗಿ ನಿರ್ವಹಿಸಲಾಗುತ್ತದೆ.

ಇದೇ ಶನಿವಾರ ಮೈಸೂರು ನಗರದ ಹೊರವಲಯದಲ್ಲಿರುವ ಎಚ್.ಡಿ.ಕೋಟೆ ರಸ್ತೆಯ ಪೂರ್ಣ ಚೇತನ ಶಾಲೆಯಲ್ಲಿ 7ರಿಂದ 10ನೇ ತರಗತಿಯವರೆಗಿನ 136 ವಿದ್ಯಾರ್ಥಿಗಳನ್ನೊಳಗೊಂಡ 68 ತಂಡಗಳು ಈ ಪ್ರತಿಕೃತಿಯನ್ನು ಸೃಷ್ಟಿಸಲಿದ್ದಾರೆ.

68 ವಿಶಿಷ್ಟ ರೊಬೋಟಿಕ್‌ ಮಾದರಿಗಳನ್ನು ಅವರು ಇಲ್ಲಿ 16 ಗಂಟೆಗಳ ಅವಧಿಯಲ್ಲಿ ಸೃಷ್ಟಿಸಲಿದ್ದಾರೆ. ಈ ಯುವ ಬಾಲಪ್ರತಿಭೆಗಳು ಕೋಡಿಂಗ್‌, ರೋಬೋಟಿಕ್‌ ಹಾಗೂ ಕೃತಕ ಬುದ್ದಿಮತ್ತೆಯ ತಂತ್ರಜ್ಞಾನ ಬಳಸಿಕೊಂಡು ಅತ್ಯಾಧುನಿಕ, ಸುಸ್ಥಿರ ಸ್ಮಾರ್ಟ್‌ ಹಳ್ಳಿಯ ಕಲ್ಪನೆಯನ್ನು ಸಾಕಾರಗೊಳಿಸಲಿದ್ದಾರೆ.

ಇಲ್ಲಿ ಎಲ್ಲಾ ವಿದ್ಯಾರ್ಥಿಗಳು ರೂಪಿಸುವ ಎಲ್ಲಾ ಪ್ರತಿಕೃತಿಗಳು ಕೆಲಸ ಮಾಡುವಂತಾಗಿದ್ದು, ನಮ್ಮ ಹಳ್ಳಿಗಳ ಸಮಸ್ಯೆಗಳಿಗೆ ಪರಿಹಾರ ರೂಪದಲ್ಲಿವೆ. ವಿದ್ಯಾರ್ಥಿಗಳು ನಮ್ಮ ಹಳ್ಳಿಗಳ ಬದುಕನ್ನು ಇನ್ನಷ್ಟು ಸಬಲೀಕರಣಗೊಳಿಸುವ ನಿಟ್ಟಿನಲ್ಲಿ ಇಂತಹ ಪ್ರಯತ್ನ ನಡೆಸಲಿದ್ದಾರೆ.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ದ್ವಿತೀಯ ಪಿಯುಸಿ ಫಲಿತಾಂಶ: ಇದೊಂದು ಐತಿಹಾಸಿಕ ದಿನ ಎಂದ ಮಧು ಬಂಗಾರಪ್ಪ

ಬೆಂಗಳೂರು: ಈ ಬಾರಿ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ 5.46,698 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, ಕರ್ನಾಟಕಕ್ಕೆ ಮೊದಲ ಬಾರಿ ಶೇ.86.48ರಷ್ಟು ಫಲಿತಾಂಶ ಬಂದಿದೆ…

10 hours ago

ಎರಡು ಕ್ಷೇತ್ರಗಳ ಉಪಚುನಾವಣೆ ಮತದಾನ ಮುಕ್ತಾಯ: ವೋಟಿಂಗ್‌ ಪ್ರಮಾಣವೆಷ್ಟು.?

ದಾವಣಗೆರೆ/ಬಾಗಲಕೋಟೆ: ರಾಜ್ಯದ ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಇಂದು ಮತದಾನ ನಡೆದಿದ್ದು, ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.…

11 hours ago

ಚಾಮುಂಡಿಬೆಟ್ಟದಲ್ಲಿ ನಡೆಯುತ್ತಿದ್ದ ಕಾಮಗಾರಿಗಳಿಗೆ ಹೈಕೋರ್ಟ್‌ ತಡೆಯಾಜ್ಞೆ

ಬೆಂಗಳೂರು: ನಾಡಿನ ಅಧಿದೇವತೆ ನೆಲೆಸಿರುವ ಮೈಸೂರಿನ ಚಾಮುಂಡಿಬೆಟ್ಟದಲ್ಲಿ ಕೇಂದ್ರ ಸರ್ಕಾರದ ಅನುದಾನದಡಿ ನಡೆಯುತ್ತಿದ್ದ ಕಾಮಗಾರಿಗಳಿಗೆ ಹೈಕೋರ್ಟ್‌ ತಡೆಯಾಜ್ಞೆ ನೀಡಿದೆ. ಹೈಕೋರ್ಟ್‌…

11 hours ago

ಬೆಂಗಳೂರಿನಲ್ಲಿ ಮುಂದಿನ ಮೂರು ದಿನ ಬಿಸಿ ಗಾಳಿ ಎಚ್ಚರಿಕೆ

ಬೆಂಗಳೂರು: ನಗರದಲ್ಲಿ ಮುಂದಿನ ಮೂರು ದಿನಗಳ ಕಾಲ ಅಧಿಕ ಉಷ್ಣಾಂಶ ದಾಖಲಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಬಿಸಿ…

11 hours ago

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಗೆದ್ದರೆ ಆರು ಗ್ಯಾರಂಟಿ ಜಾರಿ: ಪ್ರಧಾನಿ ನರೇಂದ್ರ ಮೋದಿ

ಕೋಲ್ಕತ್ತಾ: ಪಶ್ಚಿಮ ಬಂಗಾಳ ಚುನಾವಣೆಯಲ್ಲಿ ಬಿಜೆಪಿ ಗೆದ್ದರೆ ಜನರಿಗೆ ಆರು ಗ್ಯಾರಂಟಿಗಳನ್ನು ನೀಡುತ್ತೇವೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.…

11 hours ago

ಭಾರತ ತಲುಪಿದ ಗ್ರೀನ್‌ ಆಶಾ: 15,000 ಟನ್‌ ಎಲ್‌ಪಿಜಿ ಹೊತ್ತು ತಂದ ನೌಕೆ

ಮುಂಬೈ: ಪಶ್ಚಿಮ ಏಷ್ಯಾ ಸಂಘರ್ಷದ ಮಧ್ಯೆ ಭಾರತದ ಧ್ವಜ ಹೊಂದಿರುವ 15,400 ಟನ್‌ ಎಲ್‌ಪಿಜಿ ಹೊತ್ತ ಟ್ಯಾಂಕರ್‌ ಹಾರ್ಮುಜ್‌ ಜಲಸಂಧಿಯನ್ನು…

11 hours ago