ಮೈಸೂರು

ಮೈಸೂರಿನ ಪೂರ್ಣ ಚೇತನ ಶಾಲೆಯಲ್ಲಿ ನಿರ್ಮಾಣವಾಗಲಿದೆ ವಿದ್ಯಾರ್ಥಿಗಳ ಕನಸಿನ ಸ್ಮಾರ್ಟ್‌ ವಿಲೇಜ್‌

ಮೈಸೂರು: ಮೈಸೂರಿನ ಪೂರ್ಣ ಚೇತನ ಶಾಲೆಯಲ್ಲಿ ವಿದ್ಯಾರ್ಥಿಗಳ ಕನಸಿನ ಸ್ಮಾರ್ಟ್‌ ವಿಲೇಜ್‌ ನಿರ್ಮಾಣವಾಗಲಿದೆ.

ಈ ಕನಸಿನ ಹಳ್ಳಿಯಲ್ಲಿ ಬೀದಿ ದೀಪಗಳು ಸ್ವಯಂ ಚಾಲಿತವಾಗಿ ಕಾರ್ಯನಿರ್ವಹಿಸಲಿದ್ದು, ಹಳ್ಳಿಯ ರೈತ ತನ್ನ ಹೊಲದಲ್ಲಿನ ಬೆಳೆಗಳ ಬಗ್ಗೆ ಚಿಂತಿಸಬೇಕಿಲ್ಲ. ಏಕೆಂದರೆ ಇಲ್ಲಿನ ಹೊಲಗಳಿಗೆ ಲೇಸರ್‌ ಭದ್ರತಾ ಕವಚವಿದೆ. ಇಲ್ಲಿ ಯಾರಾದರೂ ಮದ್ಯಪಾನ ಮಾಡಿ ಬಂದರೆ, ಸ್ವಯಂ ಚಾಲಿತ ಸಾಧನ ಅದನ್ನು ಪತ್ತೆ ಹಚ್ಚುತ್ತದೆ.

ಇನ್ನು ಮೈಸೂರು ನಗರ ಸೇರಿದಂತೆ ಎಲ್ಲಾ ಹಳ್ಳಿ-ಪಟ್ಟಣಗಳ ಅತಿ ದೊಡ್ಡ ಸವಾಲು ತ್ಯಾಜ್ಯ ನಿರ್ವಹಣೆ. ಅದಕ್ಕೂ ಈ ಸ್ಮಾರ್ಟ್‌ ಹಳ್ಳಿಯಲ್ಲಿ ತಂತ್ರಜ್ಞಾನದ ಮೂಲಕ ಮಕ್ಕಳು ಪರಿಹಾರ ಒದಗಿಸಲಿದ್ದಾರೆ. ಈ ಹಳ್ಳಿಯಲ್ಲಿ ಕಸ-ತ್ಯಾಜ್ಯ ವಿಂಗಡಣೆ ಸಂಪೂರ್ಣ ಆಟೋಮ್ಯಾಟಿಕ್.‌ ಇಲ್ಲಿನ ಸ್ಮಾರ್ಟ್‌ ಕಸದ ಬುಟ್ಟಿಗಳು ಅಷ್ಟು ಸ್ಮಾರ್ಟ್‌ ಆಗಿದೆ. ಇನ್ನು ಹಳ್ಳಿಯಲ್ಲಿ ವಾಯುಮಾಲಿನ್ಯ ಉಂಟಾದರೆ ತಕ್ಷಣ ಹಳ್ಳಿಗರಿಗೆ ಎಚ್ಚರಿಕೆ ಸಂದೇಶ ಹೋಗುತ್ತದೆ. ಇನ್ನು ಹಳ್ಳಿ ಬದುಕಿನ ಅವಿಭಾಜ್ಯ ಅಂಗವಾದ ಪಶುಪಾಲನೆಯಲ್ಲಿ ಪಶುಗಳಿಗೆ ಮೇವು ನೀಡಿಕೆಯ ಕೆಲಸ ಸಂಪೂರ್ಣ ಆಟೋಮೇಟೆಡ್.‌ ರೈತರ ಹೊಲಕ್ಕೆ ಎಷ್ಟು ನೀರು ಬೇಕು, ಹೊಲದ ಮಣ್ಣಿನಲ್ಲಿ ನೀರಿನ ಅಂಶವಿದೆಯೇ ಹೀಗೆ ಎಲ್ಲವನ್ನೂ ಇಲ್ಲಿ ಸ್ಮಾರ್ಟ್‌ ಆಗಿ ನಿರ್ವಹಿಸಲಾಗುತ್ತದೆ.

ಇದೇ ಶನಿವಾರ ಮೈಸೂರು ನಗರದ ಹೊರವಲಯದಲ್ಲಿರುವ ಎಚ್.ಡಿ.ಕೋಟೆ ರಸ್ತೆಯ ಪೂರ್ಣ ಚೇತನ ಶಾಲೆಯಲ್ಲಿ 7ರಿಂದ 10ನೇ ತರಗತಿಯವರೆಗಿನ 136 ವಿದ್ಯಾರ್ಥಿಗಳನ್ನೊಳಗೊಂಡ 68 ತಂಡಗಳು ಈ ಪ್ರತಿಕೃತಿಯನ್ನು ಸೃಷ್ಟಿಸಲಿದ್ದಾರೆ.

68 ವಿಶಿಷ್ಟ ರೊಬೋಟಿಕ್‌ ಮಾದರಿಗಳನ್ನು ಅವರು ಇಲ್ಲಿ 16 ಗಂಟೆಗಳ ಅವಧಿಯಲ್ಲಿ ಸೃಷ್ಟಿಸಲಿದ್ದಾರೆ. ಈ ಯುವ ಬಾಲಪ್ರತಿಭೆಗಳು ಕೋಡಿಂಗ್‌, ರೋಬೋಟಿಕ್‌ ಹಾಗೂ ಕೃತಕ ಬುದ್ದಿಮತ್ತೆಯ ತಂತ್ರಜ್ಞಾನ ಬಳಸಿಕೊಂಡು ಅತ್ಯಾಧುನಿಕ, ಸುಸ್ಥಿರ ಸ್ಮಾರ್ಟ್‌ ಹಳ್ಳಿಯ ಕಲ್ಪನೆಯನ್ನು ಸಾಕಾರಗೊಳಿಸಲಿದ್ದಾರೆ.

ಇಲ್ಲಿ ಎಲ್ಲಾ ವಿದ್ಯಾರ್ಥಿಗಳು ರೂಪಿಸುವ ಎಲ್ಲಾ ಪ್ರತಿಕೃತಿಗಳು ಕೆಲಸ ಮಾಡುವಂತಾಗಿದ್ದು, ನಮ್ಮ ಹಳ್ಳಿಗಳ ಸಮಸ್ಯೆಗಳಿಗೆ ಪರಿಹಾರ ರೂಪದಲ್ಲಿವೆ. ವಿದ್ಯಾರ್ಥಿಗಳು ನಮ್ಮ ಹಳ್ಳಿಗಳ ಬದುಕನ್ನು ಇನ್ನಷ್ಟು ಸಬಲೀಕರಣಗೊಳಿಸುವ ನಿಟ್ಟಿನಲ್ಲಿ ಇಂತಹ ಪ್ರಯತ್ನ ನಡೆಸಲಿದ್ದಾರೆ.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಬಿಡದಿ ಟೌನ್‌ಶಿಪ್‌ ಡಿಪಿಆರ್‌ಗೆ ಸಿದ್ಧತೆ : 26 ಕೋಟಿ ರೂ. ವೆಚ್ಚದ ಟೆಂಡರ್ ಕರೆಯಲು ತೀರ್ಮಾನ

ಬೆಂಗಳೂರು : ಬಿಡದಿ ಟೌನ್‌ಶಿಪ್ ಯೋಜನೆ ರಾಜಕೀಯ ವಲಯದಲ್ಲಿ ತೀವ್ರ ಚರ್ಚೆ, ರೈತರ ಪ್ರತಿಭಟನೆ ಹಾಗೂ ಆರೋಪ-ಪ್ರತ್ಯಾರೋಪಗಳ ನಡುವೆಯೂ ಗ್ರೇಟರ್…

3 hours ago

ದುಬಾರೆ ದುರಂತ ಬಳಿಕ ಎಚ್ಚೆತ್ತ ರಾಜ್ಯ ಸರ್ಕಾರ ; ಆನೆ ಶಿಬಿರಗಳಿಗೆ ಹೊಸ ನಿಯಮ

ಬೆಂಗಳೂರು : ರಾಜ್ಯದ ಆನೆ ಶಿಬಿರಗಳು, ಸೆರೆಯಲ್ಲಿರುವ ಆನೆಗಳ ಕೇಂದ್ರಗಳು ಹಾಗೂ ಸಾರ್ವಜನಿಕ ವೀಕ್ಷಣಾ ಕೇಂದ್ರಗಳಿಗೆ ಕರ್ನಾಟಕ ಅರಣ್ಯ ಇಲಾಖೆ…

4 hours ago

ಬಿಡದಿ ಟೌನ್‌ಶಿಪ್: ಪೋಸ್ಟರ್ ಸಮರ

ಬೆಂಗಳೂರು : ಬಿಡದಿ ಟೌನ್‌ಶಿಪ್ ವಿಚಾರದಲ್ಲಿ ಆಡಳಿತಾರೂಢ ಕಾಂಗ್ರೆಸ್ ಪ್ರತಿಪಕ್ಷಗಳಾದ ಬಿಜೆಪಿ ಮತ್ತು ಜಾ.ದಳ ನಡುವಿನ ವಾಕ್ ಸಮರ ತಾರಕಕ್ಕೇರಿದೆ.…

5 hours ago

UGC NET | ಪ್ರವೇಶ ಪತ್ರ ಬಿಡುಗಡೆ

ಹೊಸದಿಲ್ಲಿ : ರಾಷ್ಟ್ರೀಯ ಪರೀಕ್ಷಾ ಸಂಸ್ಥೆ ಯುಜಿಸಿ ನೆಟ್ ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳಿಗಾಗಿ ಪ್ರವೇಶ ಪತ್ರಗಳನ್ನು ಬುಧವಾರ ಅಧಿಕೃತವಾಗಿ ಬಿಡುಗಡೆ…

6 hours ago

ಧರ್ಮಸ್ಥಳ ಪ್ರಕರಣದಲ್ಲಿ ಪ್ರಕಾಶ್‌ ರಾಜ್‌ ಹೆಸರು: ನಟ ಏನಂದ್ರು ಗೊತ್ತಾ?

ಬೆಂಗಳೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಪ್ರಕರಣದಲ್ಲಿ ತಮ್ಮ ಹೆಸರನ್ನು ಕೆಲವರು ಅನಗತ್ಯವಾಗಿ ಉಲ್ಲೇಖಿಸುತ್ತಿದ್ದಾರೆ. ನಾನು ಯಾವುದೇ ರೀತಿಯ ತಪ್ಪು ಮಾಡಿಲ್ಲ.…

10 hours ago

ನೀಟ್‌ ವಿದ್ಯಾರ್ಥಿಗಳಿಗೆ ಪ್ರಯಾಣದಲ್ಲಿ 50% ರಿಯಾಯಿತಿ: ಯುಪಿ ಸಿಎಂ ಯೋಗಿ ಆದಿತ್ಯನಾಥ್‌ ಆದೇಶ

ಲಕ್ನೋ: ಜೂನ್.‌21ರಂದು ನಡೆಯಲಿರುವ ನೀಟ್-ಯುಜಿ ಮರುಪರೀಕ್ಷೆಗೆ ಹಾಜರಾಗುವ ಎಲ್ಲಾ ವಿದ್ಯಾರ್ಥಿಗಳ ಬಸ್‌ ಪ್ರಯಾಣದ ದರದಲ್ಲಿ ಶೇ.50ರಷ್ಟು ರಿಯಾಯಿತಿ ನೀಡುವುದಾಗಿ ಉತ್ತರ…

13 hours ago