ಮೈಸೂರು

ಮೈಸೂರಿನ ಪೂರ್ಣ ಚೇತನ ಶಾಲೆಯಲ್ಲಿ ನಿರ್ಮಾಣವಾಗಲಿದೆ ವಿದ್ಯಾರ್ಥಿಗಳ ಕನಸಿನ ಸ್ಮಾರ್ಟ್‌ ವಿಲೇಜ್‌

ಮೈಸೂರು: ಮೈಸೂರಿನ ಪೂರ್ಣ ಚೇತನ ಶಾಲೆಯಲ್ಲಿ ವಿದ್ಯಾರ್ಥಿಗಳ ಕನಸಿನ ಸ್ಮಾರ್ಟ್‌ ವಿಲೇಜ್‌ ನಿರ್ಮಾಣವಾಗಲಿದೆ.

ಈ ಕನಸಿನ ಹಳ್ಳಿಯಲ್ಲಿ ಬೀದಿ ದೀಪಗಳು ಸ್ವಯಂ ಚಾಲಿತವಾಗಿ ಕಾರ್ಯನಿರ್ವಹಿಸಲಿದ್ದು, ಹಳ್ಳಿಯ ರೈತ ತನ್ನ ಹೊಲದಲ್ಲಿನ ಬೆಳೆಗಳ ಬಗ್ಗೆ ಚಿಂತಿಸಬೇಕಿಲ್ಲ. ಏಕೆಂದರೆ ಇಲ್ಲಿನ ಹೊಲಗಳಿಗೆ ಲೇಸರ್‌ ಭದ್ರತಾ ಕವಚವಿದೆ. ಇಲ್ಲಿ ಯಾರಾದರೂ ಮದ್ಯಪಾನ ಮಾಡಿ ಬಂದರೆ, ಸ್ವಯಂ ಚಾಲಿತ ಸಾಧನ ಅದನ್ನು ಪತ್ತೆ ಹಚ್ಚುತ್ತದೆ.

ಇನ್ನು ಮೈಸೂರು ನಗರ ಸೇರಿದಂತೆ ಎಲ್ಲಾ ಹಳ್ಳಿ-ಪಟ್ಟಣಗಳ ಅತಿ ದೊಡ್ಡ ಸವಾಲು ತ್ಯಾಜ್ಯ ನಿರ್ವಹಣೆ. ಅದಕ್ಕೂ ಈ ಸ್ಮಾರ್ಟ್‌ ಹಳ್ಳಿಯಲ್ಲಿ ತಂತ್ರಜ್ಞಾನದ ಮೂಲಕ ಮಕ್ಕಳು ಪರಿಹಾರ ಒದಗಿಸಲಿದ್ದಾರೆ. ಈ ಹಳ್ಳಿಯಲ್ಲಿ ಕಸ-ತ್ಯಾಜ್ಯ ವಿಂಗಡಣೆ ಸಂಪೂರ್ಣ ಆಟೋಮ್ಯಾಟಿಕ್.‌ ಇಲ್ಲಿನ ಸ್ಮಾರ್ಟ್‌ ಕಸದ ಬುಟ್ಟಿಗಳು ಅಷ್ಟು ಸ್ಮಾರ್ಟ್‌ ಆಗಿದೆ. ಇನ್ನು ಹಳ್ಳಿಯಲ್ಲಿ ವಾಯುಮಾಲಿನ್ಯ ಉಂಟಾದರೆ ತಕ್ಷಣ ಹಳ್ಳಿಗರಿಗೆ ಎಚ್ಚರಿಕೆ ಸಂದೇಶ ಹೋಗುತ್ತದೆ. ಇನ್ನು ಹಳ್ಳಿ ಬದುಕಿನ ಅವಿಭಾಜ್ಯ ಅಂಗವಾದ ಪಶುಪಾಲನೆಯಲ್ಲಿ ಪಶುಗಳಿಗೆ ಮೇವು ನೀಡಿಕೆಯ ಕೆಲಸ ಸಂಪೂರ್ಣ ಆಟೋಮೇಟೆಡ್.‌ ರೈತರ ಹೊಲಕ್ಕೆ ಎಷ್ಟು ನೀರು ಬೇಕು, ಹೊಲದ ಮಣ್ಣಿನಲ್ಲಿ ನೀರಿನ ಅಂಶವಿದೆಯೇ ಹೀಗೆ ಎಲ್ಲವನ್ನೂ ಇಲ್ಲಿ ಸ್ಮಾರ್ಟ್‌ ಆಗಿ ನಿರ್ವಹಿಸಲಾಗುತ್ತದೆ.

ಇದೇ ಶನಿವಾರ ಮೈಸೂರು ನಗರದ ಹೊರವಲಯದಲ್ಲಿರುವ ಎಚ್.ಡಿ.ಕೋಟೆ ರಸ್ತೆಯ ಪೂರ್ಣ ಚೇತನ ಶಾಲೆಯಲ್ಲಿ 7ರಿಂದ 10ನೇ ತರಗತಿಯವರೆಗಿನ 136 ವಿದ್ಯಾರ್ಥಿಗಳನ್ನೊಳಗೊಂಡ 68 ತಂಡಗಳು ಈ ಪ್ರತಿಕೃತಿಯನ್ನು ಸೃಷ್ಟಿಸಲಿದ್ದಾರೆ.

68 ವಿಶಿಷ್ಟ ರೊಬೋಟಿಕ್‌ ಮಾದರಿಗಳನ್ನು ಅವರು ಇಲ್ಲಿ 16 ಗಂಟೆಗಳ ಅವಧಿಯಲ್ಲಿ ಸೃಷ್ಟಿಸಲಿದ್ದಾರೆ. ಈ ಯುವ ಬಾಲಪ್ರತಿಭೆಗಳು ಕೋಡಿಂಗ್‌, ರೋಬೋಟಿಕ್‌ ಹಾಗೂ ಕೃತಕ ಬುದ್ದಿಮತ್ತೆಯ ತಂತ್ರಜ್ಞಾನ ಬಳಸಿಕೊಂಡು ಅತ್ಯಾಧುನಿಕ, ಸುಸ್ಥಿರ ಸ್ಮಾರ್ಟ್‌ ಹಳ್ಳಿಯ ಕಲ್ಪನೆಯನ್ನು ಸಾಕಾರಗೊಳಿಸಲಿದ್ದಾರೆ.

ಇಲ್ಲಿ ಎಲ್ಲಾ ವಿದ್ಯಾರ್ಥಿಗಳು ರೂಪಿಸುವ ಎಲ್ಲಾ ಪ್ರತಿಕೃತಿಗಳು ಕೆಲಸ ಮಾಡುವಂತಾಗಿದ್ದು, ನಮ್ಮ ಹಳ್ಳಿಗಳ ಸಮಸ್ಯೆಗಳಿಗೆ ಪರಿಹಾರ ರೂಪದಲ್ಲಿವೆ. ವಿದ್ಯಾರ್ಥಿಗಳು ನಮ್ಮ ಹಳ್ಳಿಗಳ ಬದುಕನ್ನು ಇನ್ನಷ್ಟು ಸಬಲೀಕರಣಗೊಳಿಸುವ ನಿಟ್ಟಿನಲ್ಲಿ ಇಂತಹ ಪ್ರಯತ್ನ ನಡೆಸಲಿದ್ದಾರೆ.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಮಾನವ ಕಲಿಯಬೇಕಾದ ಬದುಕಿನ ಪಾಠಗಳು

ಶ್ರೇಯಸ್ ದೇವನೂರು ಇಂದು ವಿಶ್ವ ಆನೆ ದಿನಾಚರಣೆ  ಭೂಮಿಯ ಮೇಲಿರುವ ಜೀವಿಗಳಲ್ಲಿ ಆನೆ, ಅತಿ ದೊಡ್ಡ ಪ್ರಾಣಿ ಮಾತ್ರವಲ್ಲ ,…

5 hours ago

ಸಾವಿರಾರು ಹೆರಿಗೆ ಮಾಡಿಸಿದ ಫ್ಲಾರೆನ್ಸ್ ನೈಟಿಂಗೇಲ್ ಗೀತಾ ‘ಮಾ’

ಪಂಜುಗಂಗೊಳ್ಳಿ ಅವರ ವಾರದ ಅಂಕಣ  ಕಡು ಬಡತನದ ಕುಟುಂಬದಿಂದ ಬಂದ ಶುಶ್ರೂಷಕಿ ಪ. ಬಂಗಾಳದ ಗೀತಾ ಕಾರ್ಮಕಾರ್ ನರ್ಸಿಂಗ್ ತರಬೇತಿ…

6 hours ago

ಸಿದ್ದರಾಮಯ್ಯ ಸಿದ್ಧಾಂತದ ಹೋರಾಟಕ್ಕೆ ಅಂತ್ಯವೆಂಬುದೇ ಇಲ್ಲ

ಆರ್.ಟಿ.ವಿಠ್ಠಲಮೂರ್ತಿ ಕರ್ನಾಟಕದ ರಾಜಕೀಯ ಚರಿತ್ರೆಯಲ್ಲಿ ಹೊಸ ಮೈಲಿಗಲ್ಲಾಗಿ ದಾಖಲಾಗಿರುವ ಸಿದ್ದರಾಮಯ್ಯ ಅವರೀಗ ಮತ್ತೊಂದು ಪಯಣಕ್ಕೆ ಸಜ್ಜಾಗಬೇಕಿದೆ. ಇನ್ನು ಚುನಾವಣೆಗಳಲ್ಲಿ ಸ್ಪರ್ಧಿಸುವು…

6 hours ago

ಕಣ್ಮನ ಸೆಳೆಯುತ್ತಿದೆ ಮಲ್ಲಳ್ಳಿ ಜಲಪಾತ!

ಲಕ್ಷ್ಮೀಕಾಂತ್ ಕೊಮಾರಪ್ಪ ಪ್ರಾಕೃತಿಕ ಸೌಂದರ್ಯಕ್ಕೆ ಮಾರುಹೋಗುತ್ತಿರುವ ಪ್ರವಾಸಿಗರು ಸೋಮವಾರಪೇಟೆ: ಎತ್ತ ನೋಡಿದರೂ ಅಚ್ಚಹಸಿರಿನ ಕಾಡು ಸುಂದರ ಪ್ರಕೃತಿಯ ಸೊಬಗು... ನಿಮಿಷಕ್ಕೊಮ್ಮೆ…

6 hours ago

ಓದುಗರ ಪತ್ರ: ಸ್ಥಾನ…ಮಾನ !

ಸ್ಥಾನ...ಮಾನ ! ಅಳೆದೂ ಸುರಿದು ಅಲ್ಲಿಂದಿಲ್ಲಿಗೆ ಓಡಾಡಿ ಕೊಟ್ಟೂ ಕೊಡಲಾಗದೆ ಬಿಟ್ಟೂ ಇರಲಾಗದೆ ಉಳಿಸಿಕೊಂಡಿರುವುದು ಒಂದೇ ಒಂದು ಮಂತ್ರಿ ಸ್ಥಾನ…

6 hours ago

ಓದುಗರ ಪತ್ರ: ಸಚಿವ ಸ್ಥಾನ: ಹಿರಿಯರ ನಿರ್ಲಕ್ಷ್ಯ ಸರಿಯಲ್ಲ

ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ನೇತೃತ್ವದ ಮಂತ್ರಿಮಂಡಲ ವಿಸ್ತರಣೆಯಾಗಿ ೨೦ ಸ್ಥಾನಗಳ ಪೈಕಿ ೧೯ ಶಾಸಕರು ಸಚಿವರಾಗಿ ಪ್ರಮಾಣವಚನ ಸ್ವೀಕಾರ…

6 hours ago