ಮೈಸೂರು

ಗುರಿ ದೊಡ್ಡದಾಗಿರಲಿ, ಪ್ರಯತ್ನ ನಿರಂತರವಾಗಿರಲಿ: ಡಾ.ಕೆ.ವಿ. ರಾಜೇಂದ್ರ

ಮೈಸೂರು: ಪ್ರಸ್ತುತ ನಾವು ಸ್ಪರ್ಧಾತ್ಮಕ ಯುಗದಲ್ಲಿ ಬದುಕುತ್ತಿದ್ದೇವೆ. ಇಲ್ಲಿ ಯಾವುದೇ ಸ್ಪರ್ಧಾತ್ಮಕ ಪರೀಕ್ಷಾರ್ಥಿಯೂ ಏನನ್ನೇ ಸಾಧಿಸಬೇಕಾದರೂ ಮೊದಲು ತನ್ನ ಗುರಿಯನ್ನು ದೊಡ್ಡದಾಗಿರಿಸಿಕೊಂಡು, ಅದರ ಕಡೆಗೆ ನಿರಂತರ ಪ್ರಯತ್ನ ಮಾಡಬೇಕು ಎಂದು ಜಿಲ್ಲಾಧಿಕಾರಿ ಡಾ.ಕೆ.ವಿ ರಾಜೇಂದ್ರ ಸಲಹೆ ನೀಡಿದರು.

ಇಂದು (ಮಾ.24) ಯುವರಾಜ ಕಾಲೇಜಿನ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಕೆ.ಎ.ಎಸ್ ಹುದ್ದೆಯ ಆಕಾಂಕ್ಷಿಗಳಿಗೆ ಉಚಿತ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು.

ಸ್ಪರ್ಧಾತ್ಮಕ ಜಗತ್ತಿನಲ್ಲಿ ಸ್ಪರ್ಧೆ ಸಾಮಾನ್ಯವಾಗಿದ್ದು, ಯುಪಿಎಸ್‌ಸಿ, ಕೆ.ಎ.ಎಸ್ ಹಾಗೂ ಇತರೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿಯಾಗಲು ಸಿಕ್ಕ ಅವಕಾಶಗಳನ್ನು ಸದುಯೋಗಪಡಿಸಿಕೊಳ್ಳಬೇಕು. ಪ್ರತಿಯೊಬ್ಬ ಪರೀಕ್ಷಾರ್ಥಿಗು ಕಠಿಣ ಪರಿಶ್ರಮ, ತಾಳ್ಮೆ, ಸಮಯ ಪ್ರಜ್ಞೆ , ಏಕಾಗ್ರತೆ ಎಂಬುದು ಬಹಳ ಮುಖ್ಯವಾಗಿದ್ದು, ಅದನ್ನು ಮೈಗೂಡಿಸಿಕೊಳ್ಳಬೇಕು ಎಂದರು.

ನಾವು ಪ್ರತಿನಿತ್ಯವೂ ಹೊಸ ಹೊಸದಾಗಿ ನೋಡಿದ, ಕೇಳಿದ ವಿಷಯಗಳನ್ನು ವೈಜ್ಞಾನಿಕವಾಗಿ ಯೋಚಿಸಿ ಅದರ ಬಗ್ಗೆ ತಿಳಿದುಕೊಳ್ಳಬೇಕು. ಯುದ್ಧಕಾಲದಲ್ಲಿ ಶಸ್ತ್ರಾಭ್ಯಾಸ ಮಾಡುವ ಬದಲು ಪರೀಕ್ಷೆಯನ್ನು ಎದುರಿಸುವಲ್ಲಿ ಆರಂಭದಿಂದಲೂ ಸತತ ಪ್ರಯತ್ನ ಮಾಡಬೇಕು ಎಂದರು.

ಪ್ರತಿನಿತ್ಯ ದಿನಪತ್ರಿಕೆಗಳು, ಪುಸ್ತಕಗಳು, ಕಾದಂಬರಿಗಳನ್ನು ಓದುವ ಹವ್ಯಾಸ ಮಾಡಿಕೊಳ್ಳಬೇಕು. ಸ್ಪರ್ಧಾರ್ಥಿಗಳೂ ಯಾವಾಗಲೂ ಐ.ಎ.ಎಸ್ ಐ.ಪಿ.ಎಸ್‌ನಂತಹ ದೊಡ್ಡ ಹುದ್ದೆಗಳಿಗೆ ಸೇರುವ ಆಸೆಯನ್ನು ಹೊಂದಿದ್ದು ಪ್ರಯತ್ನ ಮಾಡಿದ್ದಲ್ಲಿ ಕನಿಷ್ಠ ಪಕ್ಷ ಕೆ.ಎ.ಎಸ್ ಪರೀಕ್ಷೆಯಲ್ಲಿ ಉತ್ತೀರ್ಣರಾಗಿ ಸಮಾಜಕ್ಕೆ ಕೊಡುಗೆ ನೀಡಬಹುದು ಎಂದರು.

ಎಷ್ಟೋ ಸ್ಪರ್ಧಾರ್ಥಿಗಳಲ್ಲಿ ಭಾಷೆಯ ಬಗ್ಗೆ ಗೊಂದಲಗಳಿವೆ. ಇಂಗ್ಲೀಷ್‌ನಲ್ಲೇ ಎಲ್ಲವೂ ಕಡ್ಡಾಯವಲ್ಲ ಪ್ರಾದೇಶಿಕ ಭಾಷೆಗಳಲ್ಲಿಯೂ ಸಹ ಪರೀಕ್ಷೆಗಳನ್ನು ತೆಗೆದುಕೊಳ್ಳಬಹುದು. ವಿವಿಧ ರೀತಿಯ ಹುದ್ದೆಗಳಿದ್ದರೂ ಸಹ ಪ್ರಶ್ನೆ ಪತ್ರಿಕೆಗಳ ಸ್ವರೂಪ ಒಂದೇ ಆಗಿರುತ್ತದೆ ಆದ್ದರಿಂದ ಪ್ರಚಲಿತ ವಿದ್ಯಮಾನಗಳು ಹಾಗೂ ಹಳೇ ವರ್ಷದ ಪ್ರಶ್ನೆ ಪತ್ರಿಕೆಗಳನ್ನು ಹೆಚ್ಚು ಮನನ ಮಾಡಿಕೊಳ್ಳಬೇಕು ಎಂದು ಮಾಹಿತಿ ನೀಡಿದರು.

ಮೈಸೂರು ಮಹಾನಗರ ಪಾಲಿಕೆಯ ಆಯುಕ್ತರಾದ ಡಾ. ಎನ್. ಎನ್. ಮಧು ಅವರು ಮಾತನಾಡಿ ಸಮಾಜಕ್ಕೆ ಅಧಿಕಾರಿಗಳ ಕೊಡುಗೆ ಹೆಚ್ಚಾಗಿದ್ದು, ಸ್ಪರ್ಧಾರ್ಥಿಗಳು ಶ್ರಮಪಟ್ಟು ನಿರಂತರವಾಗಿ ಓದುವ ಅಭ್ಯಾಸದಲ್ಲಿ ತೊಡಗಬೇಕು. ಕಠಿಣ ಪರಿಶ್ರಮ, ತಾಳ್ಮೆ ಪ್ರತಿ ಸ್ಪರ್ಧಾರ್ಥಿಗೂ ಅತ್ಯಂತ ಅವಶ್ಯಕವಾದುದು ಇವುಗಳನ್ನು ಸಾಧಿಸಿದ್ದೇ ಆದಲ್ಲಿ ಆತ ಯಶಸ್ಸು ಸಾಧಿಸಬಹುದು ಎಂದರು.

ನಿರಂತರ ಪ್ರಯತ್ನದಿಂದ ಯಶಸ್ಸು ಸಾಧಿಸಬಹುದು ಫೇಲ್ ಎಂಬುದು ಪಾಸ್ ಆಗುವ ಮೊದಲ ಹೆಜ್ಜೆ ಎಂದು ನಿರಂತರ ಪ್ರಯತ್ನ ಮಾಡಬೇಕು. ಆದಷ್ಟು ಸೆಲ್ಫ್ ಮೋಟಿವೇಟ್ ಮಾಡಿಕೊಳ್ಳಬೇಕು ಎಂದರು.

ಕಾರ್ಯಕ್ರಮದಲ್ಲಿ ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕರಾದ ಬಿ.ರಂಗೇಗೌಡ, ಮೈಸೂರು ವಿಶ್ವವಿದ್ಯಾನಿಲಯದ ಪಿ.ಎಂ.ಇ ಬೋರ್ಡ್ ನ ನಿರ್ದೇಶಕರಾದ ಪ್ರೊ.ಎನ್ ನಾಗರಾಜ್, ಮೈಸೂರು ವಿಶ್ವವಿದ್ಯಾನಿಲಯದ ಯು.ಸಿ. ಎಚ್ ನ ಸಂಯೋಜಕರಾದ ಪ್ರೋ . ಹಂಸವೇಣಿ, ಮೈಸೂರು ವಿಶ್ವವಿದ್ಯಾನಿಲಯದ ಸ್ಪರ್ಧಾ ಕೇಂದ್ರದ ಸಂಯೋಜಕರಾದ ಡಾ. ಸುರೇಶ್, ಯುವರಾಜ ಕಾಲೇಜಿನ ಪ್ರೊ. ದೇವಿಕಾ ಸೇರಿದಂತೆ ಇತರರು ಉಪಸ್ಥಿತರಿದ್ದರು.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ನಾಳೆಯಿಂದ ಐಪಿಎಲ್‌ ಶುರು : ಅಧಿಕಾರಿಗಳ ಜತೆ ಸಿಎಸ್‌ ಸುದೀರ್ಘ ಸಭೆ

ಬೆಂಗಳೂರು : ನಾಳೆಯಿಂದ ಐಪಿಎಲ್ ಪಂದ್ಯಾವಳಿಗಳು ಆರಂಭವಾಗಲಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರು ಸಂಬಂಧಪಟ್ಟ…

7 hours ago

ಮದ್ದೂರು ಬಳಿ ಭೀಕರ ಅಪಘಾತ : 14 ಶಾಲಾ ಮಕ್ಕಳು ಸೇರಿದಂತೆ 20 ಮಂದಿಗೆ ಗಾಯ

ಮದ್ದೂರು : ಖಾಸಗಿ ಶಾಲೆ ಬಸ್ ಮತ್ತು ಖಾಸಗಿ ಬಸ್ ನಡುವೆ ಅಪಘಾತ ಸಂಭವಿಸಿ, 14 ವಿದ್ಯಾರ್ಥಿಗಳ ಜತೆಗೆ 6…

7 hours ago

ಮಹದೇಶ್ವರ ಬೆಟ್ಟ | 23 ದಿನದಲ್ಲಿ 2 ಕೋಟಿ ಒಡೆಯನಾದ ಮಾದಪ್ಪ

ಹನೂರು : ತಾಲ್ಲೂಕಿನ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಬುಧವಾರ ನಡೆದ ಹುಂಡಿ ಹಣ ಎಣಿಕೆಯಲ್ಲಿ ಈ ಬಾರಿ…

8 hours ago

ಜನಪರ ಆಡಳಿತ ನೀಡುವಲ್ಲಿ ಸರ್ಕಾರ ವಿಫಲ : ನಿಖಿಲ್‌ ಕಿಡಿ

ಎಚ್.ಡಿ.ಕೋಟೆ : ರಾಜ್ಯದಲ್ಲಿ ಜಾತ್ಯತೀತ ಜನತಾದಳ-ಬಿಜೆಪಿಯ ಮೈತ್ರಿಯ ಸರ್ಕಾರ ಅಧಿಕಾರಕ್ಕೆ ಬಂದು ಜನಪರ ಆಡಳಿತ ನೀಡುವ ದಿನಗಳು ಹತ್ತಿರವಾಗುತ್ತಿವೆ ಎಂದು…

8 hours ago

ದಾವಣಗೆರೆ ದಕ್ಷಿಣ ಉಪಚುನಾವಣೆ : ಕಣದಿಂದ ಹಿಂದೆ ಸರಿದ ಬಂಡಾಯ ಅಭ್ಯರ್ಥಿ ಸಾದಿಕ್‌

ಬೆಂಗಳೂರು : ದಾವಣಗೆರೆ ಉಪಚುನಾವಣೆಗೆ ಸ್ವತಂತ್ರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದ ಸಾದಿಕ್ ಪೈಲ್ವಾನ್ ತಾವು ಕಣದಿಂದ ಹಿಂದೆ ಸರಿದಿರುವುದಾಗಿ ಘೋಷಿಸಿದ್ದಾರೆ.…

8 hours ago

SSLC | ಪರೀಕ್ಷೆ ಅಂಕ 625ರ ಬದಲಿಗೆ 525ಕ್ಕೆ ಇಳಿಕೆ ; ಲೆಕ್ಕಕ್ಕಿಲ್ಲ ತೃತೀಯ ಭಾಷೆ

ಬೆಂಗಳೂರು : ಕರ್ನಾಟಕದ ಶೈಕ್ಷಣಿಕ ಇತಿಹಾಸದಲ್ಲಿ ರಾಜ್ಯ ಸರ್ಕಾರವು ಅತ್ಯಂತ ಮಹತ್ವದ ತೀರ್ಮಾನವೊಂದನ್ನು ಕೈಗೊಂಡಿದ್ದು, ಎಸ್‌ಎಸ್‌ಎಲ್‌ಸಿ ಪರೀಕ್ಷಾ ಪದ್ಧತಿಯಲ್ಲಿ ಆಮೂಲಾಗ್ರ…

8 hours ago