ಮೈಸೂರು

ಗುರಿ ದೊಡ್ಡದಾಗಿರಲಿ, ಪ್ರಯತ್ನ ನಿರಂತರವಾಗಿರಲಿ: ಡಾ.ಕೆ.ವಿ. ರಾಜೇಂದ್ರ

ಮೈಸೂರು: ಪ್ರಸ್ತುತ ನಾವು ಸ್ಪರ್ಧಾತ್ಮಕ ಯುಗದಲ್ಲಿ ಬದುಕುತ್ತಿದ್ದೇವೆ. ಇಲ್ಲಿ ಯಾವುದೇ ಸ್ಪರ್ಧಾತ್ಮಕ ಪರೀಕ್ಷಾರ್ಥಿಯೂ ಏನನ್ನೇ ಸಾಧಿಸಬೇಕಾದರೂ ಮೊದಲು ತನ್ನ ಗುರಿಯನ್ನು ದೊಡ್ಡದಾಗಿರಿಸಿಕೊಂಡು, ಅದರ ಕಡೆಗೆ ನಿರಂತರ ಪ್ರಯತ್ನ ಮಾಡಬೇಕು ಎಂದು ಜಿಲ್ಲಾಧಿಕಾರಿ ಡಾ.ಕೆ.ವಿ ರಾಜೇಂದ್ರ ಸಲಹೆ ನೀಡಿದರು.

ಇಂದು (ಮಾ.24) ಯುವರಾಜ ಕಾಲೇಜಿನ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಕೆ.ಎ.ಎಸ್ ಹುದ್ದೆಯ ಆಕಾಂಕ್ಷಿಗಳಿಗೆ ಉಚಿತ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು.

ಸ್ಪರ್ಧಾತ್ಮಕ ಜಗತ್ತಿನಲ್ಲಿ ಸ್ಪರ್ಧೆ ಸಾಮಾನ್ಯವಾಗಿದ್ದು, ಯುಪಿಎಸ್‌ಸಿ, ಕೆ.ಎ.ಎಸ್ ಹಾಗೂ ಇತರೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿಯಾಗಲು ಸಿಕ್ಕ ಅವಕಾಶಗಳನ್ನು ಸದುಯೋಗಪಡಿಸಿಕೊಳ್ಳಬೇಕು. ಪ್ರತಿಯೊಬ್ಬ ಪರೀಕ್ಷಾರ್ಥಿಗು ಕಠಿಣ ಪರಿಶ್ರಮ, ತಾಳ್ಮೆ, ಸಮಯ ಪ್ರಜ್ಞೆ , ಏಕಾಗ್ರತೆ ಎಂಬುದು ಬಹಳ ಮುಖ್ಯವಾಗಿದ್ದು, ಅದನ್ನು ಮೈಗೂಡಿಸಿಕೊಳ್ಳಬೇಕು ಎಂದರು.

ನಾವು ಪ್ರತಿನಿತ್ಯವೂ ಹೊಸ ಹೊಸದಾಗಿ ನೋಡಿದ, ಕೇಳಿದ ವಿಷಯಗಳನ್ನು ವೈಜ್ಞಾನಿಕವಾಗಿ ಯೋಚಿಸಿ ಅದರ ಬಗ್ಗೆ ತಿಳಿದುಕೊಳ್ಳಬೇಕು. ಯುದ್ಧಕಾಲದಲ್ಲಿ ಶಸ್ತ್ರಾಭ್ಯಾಸ ಮಾಡುವ ಬದಲು ಪರೀಕ್ಷೆಯನ್ನು ಎದುರಿಸುವಲ್ಲಿ ಆರಂಭದಿಂದಲೂ ಸತತ ಪ್ರಯತ್ನ ಮಾಡಬೇಕು ಎಂದರು.

ಪ್ರತಿನಿತ್ಯ ದಿನಪತ್ರಿಕೆಗಳು, ಪುಸ್ತಕಗಳು, ಕಾದಂಬರಿಗಳನ್ನು ಓದುವ ಹವ್ಯಾಸ ಮಾಡಿಕೊಳ್ಳಬೇಕು. ಸ್ಪರ್ಧಾರ್ಥಿಗಳೂ ಯಾವಾಗಲೂ ಐ.ಎ.ಎಸ್ ಐ.ಪಿ.ಎಸ್‌ನಂತಹ ದೊಡ್ಡ ಹುದ್ದೆಗಳಿಗೆ ಸೇರುವ ಆಸೆಯನ್ನು ಹೊಂದಿದ್ದು ಪ್ರಯತ್ನ ಮಾಡಿದ್ದಲ್ಲಿ ಕನಿಷ್ಠ ಪಕ್ಷ ಕೆ.ಎ.ಎಸ್ ಪರೀಕ್ಷೆಯಲ್ಲಿ ಉತ್ತೀರ್ಣರಾಗಿ ಸಮಾಜಕ್ಕೆ ಕೊಡುಗೆ ನೀಡಬಹುದು ಎಂದರು.

ಎಷ್ಟೋ ಸ್ಪರ್ಧಾರ್ಥಿಗಳಲ್ಲಿ ಭಾಷೆಯ ಬಗ್ಗೆ ಗೊಂದಲಗಳಿವೆ. ಇಂಗ್ಲೀಷ್‌ನಲ್ಲೇ ಎಲ್ಲವೂ ಕಡ್ಡಾಯವಲ್ಲ ಪ್ರಾದೇಶಿಕ ಭಾಷೆಗಳಲ್ಲಿಯೂ ಸಹ ಪರೀಕ್ಷೆಗಳನ್ನು ತೆಗೆದುಕೊಳ್ಳಬಹುದು. ವಿವಿಧ ರೀತಿಯ ಹುದ್ದೆಗಳಿದ್ದರೂ ಸಹ ಪ್ರಶ್ನೆ ಪತ್ರಿಕೆಗಳ ಸ್ವರೂಪ ಒಂದೇ ಆಗಿರುತ್ತದೆ ಆದ್ದರಿಂದ ಪ್ರಚಲಿತ ವಿದ್ಯಮಾನಗಳು ಹಾಗೂ ಹಳೇ ವರ್ಷದ ಪ್ರಶ್ನೆ ಪತ್ರಿಕೆಗಳನ್ನು ಹೆಚ್ಚು ಮನನ ಮಾಡಿಕೊಳ್ಳಬೇಕು ಎಂದು ಮಾಹಿತಿ ನೀಡಿದರು.

ಮೈಸೂರು ಮಹಾನಗರ ಪಾಲಿಕೆಯ ಆಯುಕ್ತರಾದ ಡಾ. ಎನ್. ಎನ್. ಮಧು ಅವರು ಮಾತನಾಡಿ ಸಮಾಜಕ್ಕೆ ಅಧಿಕಾರಿಗಳ ಕೊಡುಗೆ ಹೆಚ್ಚಾಗಿದ್ದು, ಸ್ಪರ್ಧಾರ್ಥಿಗಳು ಶ್ರಮಪಟ್ಟು ನಿರಂತರವಾಗಿ ಓದುವ ಅಭ್ಯಾಸದಲ್ಲಿ ತೊಡಗಬೇಕು. ಕಠಿಣ ಪರಿಶ್ರಮ, ತಾಳ್ಮೆ ಪ್ರತಿ ಸ್ಪರ್ಧಾರ್ಥಿಗೂ ಅತ್ಯಂತ ಅವಶ್ಯಕವಾದುದು ಇವುಗಳನ್ನು ಸಾಧಿಸಿದ್ದೇ ಆದಲ್ಲಿ ಆತ ಯಶಸ್ಸು ಸಾಧಿಸಬಹುದು ಎಂದರು.

ನಿರಂತರ ಪ್ರಯತ್ನದಿಂದ ಯಶಸ್ಸು ಸಾಧಿಸಬಹುದು ಫೇಲ್ ಎಂಬುದು ಪಾಸ್ ಆಗುವ ಮೊದಲ ಹೆಜ್ಜೆ ಎಂದು ನಿರಂತರ ಪ್ರಯತ್ನ ಮಾಡಬೇಕು. ಆದಷ್ಟು ಸೆಲ್ಫ್ ಮೋಟಿವೇಟ್ ಮಾಡಿಕೊಳ್ಳಬೇಕು ಎಂದರು.

ಕಾರ್ಯಕ್ರಮದಲ್ಲಿ ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕರಾದ ಬಿ.ರಂಗೇಗೌಡ, ಮೈಸೂರು ವಿಶ್ವವಿದ್ಯಾನಿಲಯದ ಪಿ.ಎಂ.ಇ ಬೋರ್ಡ್ ನ ನಿರ್ದೇಶಕರಾದ ಪ್ರೊ.ಎನ್ ನಾಗರಾಜ್, ಮೈಸೂರು ವಿಶ್ವವಿದ್ಯಾನಿಲಯದ ಯು.ಸಿ. ಎಚ್ ನ ಸಂಯೋಜಕರಾದ ಪ್ರೋ . ಹಂಸವೇಣಿ, ಮೈಸೂರು ವಿಶ್ವವಿದ್ಯಾನಿಲಯದ ಸ್ಪರ್ಧಾ ಕೇಂದ್ರದ ಸಂಯೋಜಕರಾದ ಡಾ. ಸುರೇಶ್, ಯುವರಾಜ ಕಾಲೇಜಿನ ಪ್ರೊ. ದೇವಿಕಾ ಸೇರಿದಂತೆ ಇತರರು ಉಪಸ್ಥಿತರಿದ್ದರು.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ರಾಜೀನಾಮೆ ಸಂಬಂಧ ಯಾವುದೇ ಚರ್ಚೆ ನಡೆದಿಲ್ಲ: ಸಚಿವ ನಾಗೇಂದ್ರ

ಬೆಂಗಳೂರು: ರಾಜೀನಾಮೆಗೆ ಸಂಬಂಧಿಸಿದ ಯಾವುದೇ ಚರ್ಚೆ ನಡೆದಿಲ್ಲ. ನನ್ನ ರಾಜೀನಾಮೆ ಬಗ್ಗೆ ಕೇಳಿಬರುತ್ತಿರುವ ವರದಿಗಳು ಸಂಪೂರ್ಣವಾಗಿ ಸತ್ಯಕ್ಕೆ ದೂರವಾಗಿವೆ ಎಂದು ಸಚಿವ…

1 hour ago

ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ 2026: ಗಜಪಯಣಕ್ಕೆ ವಿದ್ಯುಕ್ತ ಚಾಲನೆ

ಹುಣಸೂರು: ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವ 2026ರ ದಸರಾ ಗಜಪಯಣಕ್ಕೆ ಇಂದು ಅದ್ಧೂರಿ ಚಾಲನೆ ದೊರೆತಿದೆ. ಮೈಸೂರು ಜಿಲ್ಲಾ…

3 hours ago

ಓದುಗರ ಪತ್ರ: ಕಾವೇರಿ ನದಿ ನೀರಿನ ವಿವಾದಕ್ಕೆ ಮಾತುಕತೆಯೇ ಮದ್ದು

ತಮಿಳುನಾಡಿಗೆ ಮುಂದಿನ ಹದಿನೈದು ದಿನಗಳ ಕಾಲ ನಿತ್ಯ ಒಂಬತ್ತು ಸಾವಿರ ಕ್ಯುಸೆಕ್ಸ್ ಕಾವೇರಿ ನದಿ ನೀರು ಹರಿಸಬೇಕಾಗಿರುವುದು ಅಘಾತಕಾರಿ ಸಂಗತಿಯಾಗಿದೆ.…

4 hours ago

ಓದುಗರ ಪತ್ರ: ಈ ‘ಎರಡು’ ಸಮಸ್ಯೆಗಳಿಗೆ ಪರಿಹಾರ ಸಿಗಬೇಕು

ಮೈಸೂರು ನಗರವು ‘ಸ್ವಚ್ಛ ನಗರಿ’, ‘ಸಾಂಸ್ಕೃತಿಕ ನಗರಿ’ ಮತ್ತು ‘ಪಾರಂಪರಿಕನಗರಿ’ ಎಂದೇ ಖ್ಯಾತವಾಗಿದೆ. ಆದರೆ, ಇತ್ತೀಚಿನ ದಿನಗಳಲ್ಲಿ ಈ ಹೆಮ್ಮೆಯ…

4 hours ago

ಓದುಗರ ಪತ್ರ: ಸ್ಥಳ ಶುದ್ಧೀಕರಣಕ್ಕಿಂತ ಮನ ಶುದ್ಧೀಕರಣವಾಗಲಿ

ಎಐಸಿಸಿ ಅಧ್ಯಕ್ಷರು ಹಾಗೂ ಕಾಂಗ್ರೆಸ್ ಹಿರಿಯ ಮುಖಂಡರಾದ, ಮಲ್ಲಿಕಾರ್ಜುನ ಖರ್ಗೆ ಅವರು ಉತ್ತರಖಂಡದ ಹಲ್ದ್ವಾನಿಯದಲ್ಲಿ ಭಾಷಣ ಮಾಡಿದ ಸ್ಥಳವನ್ನು ಶುದ್ಧೀಕರಣ…

4 hours ago

ಮಳೆ ಕೊರತೆಯ ನಡುವೆಯೂ ಕೃಷಿಗೆ ಆತಂಕವಿಲ್ಲ

ನವೀನ್ ಡಿಸೋಜ ಕೊಡಗಿನಲ್ಲಿ ಇಲ್ಲಿಯವರೆಗೆ ಶೇ.೩೭ರಷ್ಟು ಮಳೆ ಕೊರತೆ; ಭರದಿಂದ ಸಾಗಿದ ಬಿತ್ತನೆ ಕಾರ್ಯ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ವಾಡಿಕೆಗಿಂತ…

8 hours ago