ಮೈಸೂರು

ದಸರಾ ಯಶಸ್ವಿಗೆ ಉಪಸಮಿತಿಗಳು ಉತ್ತಮ ಸಿದ್ಧತೆ ನಡೆಸಿ: ಸಚಿವ ಹೆಚ್‌ಸಿ ಮಹದೇವಪ್ಪ

ಸೆಪ್ಟೆಂಬರ್: ಈ ಬಾರಿ ದಸರಾ ಆಚರಣೆಯನ್ನು ಅದ್ದೂರಿಯಾಗಿಸಲು ಹೈ ಪವರ್ ಕಮಿಟಿಯಲ್ಲಿ ತೀರ್ಮಾನಿಸಿದ್ದು, ಈ ಸಂಬಂಧ 19 ಉಪಸಮಿತಿಗಳನ್ನು ರಚಿಸಿದ್ದು, ಸಮಿತಿಯ ಅಧಿಕಾರಿಗಳು ಅಗತ್ಯ ಸಿದ್ಧತೆಗಳನ್ನು ಮಾಡಿಕೊಂಡು ದಸರಾ ಆಚರಣೆಯನ್ನು ಯಶಸ್ವಿಗೊಳಿಸಿ ಎಂದು ಸಮಾಜ ಕಲ್ಯಾಣ ಇಲಾಖೆಯ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಹೆಚ್ ಸಿ ಮಹದೇವಪ್ಪ  ಹೇಳಿದರು.

ಬುಧುವಾರ ಅರಮನೆ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ದಸರಾ ಉಪಸಮಿತಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಎಲ್ಲಾ ಸಮಿತಿಯ ಅಧಿಕಾರಿಗಳು ಸೂಕ್ತ ತಯಾರಿ ಮಾಡಿಕೊಂಡು ಅಚ್ಚುಕಟ್ಟಾಗಿ ದಸರಾ ಆಚರಣೆ ಮಾಡಬೇಕು. ಸ್ತಬ್ಧ ಚಿತ್ರಗಳು ನಮ್ಮ ಸಂಸ್ಕೃತಿಯನ್ನು ಬಿಂಬಿಸುವಂತೆ ಇರಬೇಕು. ಜನರಿಗೆ ಸಾಮಾಜಿಕ ಸಂದೇಶ ಸಾರುವಂತೆ ಇರಬೇಕು. ಸಂವಿಧಾನದ ಸಂದೇಶ, ಪೂರ್ವ ಪೀಠಿಕೆಯ ಮಹತ್ವವನ್ನು ತಿಳಿಸುವ ಸ್ಥಬ್ದ ಚಿತ್ರ ತಯಾರಿಕೆಗೆ ಮಾಡಬೇಕು ಎಂದು ಸ್ಥಬ್ದ ಚಿತ್ರ ಉಪಸಮಿತಿಗೆ ತಿಳಿಸಿದರು.

ರೈತರು ದೇಶದ ಬೆನ್ನೆಲುಬು. ರೈತ ದಸರಾದಲ್ಲಿ ರೈತರಿಗೆ ಅನುಕೂಲವಾಗುವ ಕೃಷಿ ಸಾಧನ ಸಲಕರಣೆಗಳ ಪ್ರದರ್ಶನ ಏರ್ಪಡಿಸಬೇಕು. ಸಬ್ಸಿಡಿ ದರದಲ್ಲಿ ದೊರೆಯುವ ಆಧುನಿಕ ಕೃಷಿ ಸಲಕರಣೆಗಳ ಬಗ್ಗೆ ಮಾಹಿತಿ ಒದಗಿಸಬೇಕು. ಶುಂಠಿ ಬೆಳೆಯನ್ನು ಬೆಳೆಯಲು ರೈತರು ಭೂಮಿಯನ್ನು ಗುತ್ತಿಗೆಗೆ ನೀಡುತ್ತಿದ್ದು, ಶುಂಠಿ ಬೆಳೆಯನ್ನು ಬೆಳೆಯುವುದರಿಂದ ಮಣ್ಣಿನ ಫಲವತ್ತತೆ ಕಡಿಮೆ ಆಗಿ ಮುಂದಿನ ಒಂದೆರಡು ವರ್ಷ ಉತ್ತಮ ಬೆಳೆ ಬರುವುದಿಲ್ಲ. ಈ ಬಗ್ಗೆ ರೈತರಿಗೆ ಜಾಗೃತಿ ಮೂಡಿಸುವ ಬಗ್ಗೆ ಸ್ಥಬ್ದ ಚಿತ್ರಗಳಿರಬೇಕು ಎಂದರು.

ದಸರಾ ಕ್ರೀಡಾಕೂಟಕ್ಕೆ ರಾಜ್ಯದ ವಿವಿಧ ಭಾಗಗಳಿಂದ ಸ್ಪರ್ಧಿಗಳು ಭಾಗವಹಿಸುತ್ತಾರೆ. ಇವರಿಗೆ ಉತ್ತಮ ಊಟ ಹಾಗೂ ವಸತಿ ಸೌಲಭ್ಯ ಕಲ್ಪಿಸಬೇಕು. ದಸರಾ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ನಮ್ಮ ದೇಶದ ಸಂಸ್ಕೃತಿಯನ್ನು ಬಿಂಬಿಸುವ ಕಾರ್ಯಕ್ರಮಗಳನ್ನು ಹೆಚ್ಚು ಆಯೋಜಿಸಬೇಕು. ಜನಪದ ಕಲೆಗಳನ್ನು ಪ್ರದರ್ಶನ ಮಾಡಬೇಕು. ಕಲಾವಿದರಿಗೆ ಪಾರದರ್ಶಕವಾಗಿ ಅವಕಾಶ ಕಲ್ಪಿಸಬೇಕು. ಸ್ಥಳೀಯ ಕಲಾವಿದರಿಗೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಮಕ್ಕಳಿಗೆ ಚಿತ್ರ ಕಲಾ ಸ್ಪರ್ಧೆಗಳನ್ನು ಆಯೋಜನೆ ಮಾಡಬೇಕು. ಕರಕುಶಲ ವಸ್ತುಗಳ ಸ್ಪರ್ಧೆಯನ್ನು ಏರ್ಪಡಿಸಬೇಕು. ಕವಿಗೋಷ್ಠಿಯನ್ನು ವಿಶಿಷ್ಟ ರೀತಿಯಲ್ಲಿ ಆಯೋಜನೆ ಮಾಡಿ ಯುವ ಕವಿಗಳಿಗೆ ಆದ್ಯತೆ ನೀಡಬೇಕು. ಯೋಗ ದಸರಾದಲ್ಲಿ ಆರೋಗ್ಯಯುತ ಜೀವನಕ್ಕಾಗಿ ಯೋಗ ಎಂಬ ಅರಿವನ್ನು ಮೂಡಿಸುವ ಹಾಗೆ ಇರಬೇಕು. ಆಹಾರ ಮೇಳದಲ್ಲಿ ಸ್ವಚ್ಚತೆಯನ್ನು ಕಾಪಾಡಿಕೊಳ್ಳಬೇಕು. ಆರೋಗ್ಯಕರ ಗುಣಮಟ್ಟದ ತಿಂಡಿ ತಿನಿಸುಗಳ ಮರಾಟವಾಗಬೇಕು. ಮೈಸೂರು ನಗರದ ರಸ್ತೆಗಳ ಗುಂಡಿಗಳ ಮುಚ್ಚುವ ಕಾರ್ಯವನ್ನು ಸಂಬಂಧಿಸಿದ ಅಧಿಕಾರಿಗಳು ಮಾಡಬೇಕು ಎಂದು ತಿಳಿಸಿದರು.

ದಸರಾ ಚಲನಚಿತ್ರೋತ್ಸವದಲ್ಲಿ ಸಾಮಾಜಿಕ ಕಳಕಳಿಯುಳ್ಳ ಕಲಾತ್ಮಕ ಚಿತ್ರಗಳ ಪ್ರದರ್ಶನಕ್ಕೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ಸೂಚಿಸಿದರು.

ಈ ಸಂದರ್ಭದಲ್ಲಿ ವಿವಿಧ ಉಪಸಮಿತಿಗಳ ಉಪ ವಿಶೇಷಾಧಿಕಾರಿಗಳು ತಾವು ಕೈಗೊಂಡಿರುವ ಸಿದ್ಧತೆಗಳ ಬಗ್ಗೆ ಮಾಹಿತಿ ನೀಡಿದರು.

ಸಭೆಯಲ್ಲಿ ಜಿಲ್ಲಾಧಿಕಾರಿ ಜಿ.ಲಕ್ಷ್ಮೀಕಾಂತ ರೆಡ್ಡಿ, ನಗರ ಪೊಲೀಸ್ ಆಯುಕ್ತರಾದ ಸೀಮಾ ಲಾಟ್ಕರ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ ಎಂ ಗಾಯತ್ರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿಷ್ಣುವರ್ಧನ್, ಅಪರ ಜಿಲ್ಲಾಧಿಕಾರಿ ಡಾ. ಪಿ. ಶಿವರಾಜು, ಉಪಸಮಿತಿಗಳ ಅಧಿಕಾರಿಗಳು ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ನೀಟ್‌ ಪ್ರತಿಭಟನಾಕಾರರ ವಿರುದ್ಧದ ಎಫ್‌ಐಆರ್‌ ರದ್ದು: ಸೆ.5ರ ಪ್ರತಿಭಟನೆ ಹಿಂಪಡೆದ ಸಿಜೆಪಿ

ನವದೆಹಲಿ: ಸೆಪ್ಟೆಂಬರ್‌ 5ರಂದು ದೆಹಲಿಯಲ್ಲಿ ಹಮ್ಮಿಕೊಳ್ಳಲಾಗಿದ್ದ ಪ್ರತಿಭಟನಾ ಮೆರವಣಿಗೆಯನ್ನು ಹಿಂಪಡೆಯಲಾಗಿದೆ ಎಂದು ಕಾಕ್ರೋಚ್ ಜನತಾ ಪಾರ್ಟಿ (CJP) ಸುಪ್ರೀಂ ಕೋರ್ಟ್‌ಗೆ…

6 hours ago

ನೀಟ್‌ ಪ್ರತಿಭಟನಾಕಾರರ ವಿರುದ್ಧದ ಎಫ್‌ಐಆರ್‌ ರದ್ದು

ನವದೆಹಲಿ: ನೀಟ್‌ ಪ್ರಶ್ನೆಪತ್ರಿಕೆ ಸೋರಿಕೆ ಖಂಡಿಸಿ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಫ್‌ಐಆರ್‌ ಅನ್ನು ಸುಪ್ರೀಂಕೋರ್ಟ್‌ ರದ್ದುಪಡಿಸಿದೆ. ಜುಲೈನಲ್ಲಿ…

7 hours ago

ನೇಪಾಳ ಪ್ರವಾಹ | ಮೃತರ ಸಂಖ್ಯೆ 939ಕ್ಕೆ ಏರಿಕೆ, ಇನ್ನೂ ಸುಮಾರು 4,000 ಜನ ಕಣ್ಮರೆ

ಕಠ್ಮಂಡು: ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ ಮುಂದುವರಿದಿದ್ದು, ಮೃತರ ಸಂಖ್ಯೆ 939ಕ್ಕೆ ಏರಿಕೆಯಾಗಿದೆ. ಇನ್ನೂ ಸುಮಾರು 4 ಸಾವಿರ ಜನರು…

8 hours ago

ಮಡಿಕೇರಿ: ಕೆರೆಗೆ ಹಾರಿ ತಾಯಿ ಮಗಳು ಆತ್ಮಹತ್ಯೆ

ಮಡಿಕೇರಿ: ತಲಕಾವೇರಿ ಸಮೀಪದ ತಣ್ಣಿಮಾನಿ ಗ್ರಾಮದಲ್ಲಿ ತಾಯಿ ಮತ್ತು ಮಗಳು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ನಡೆದಿದೆ.…

8 hours ago

ಮಡಿಕೇರಿ: ಭಾರೀ ಮಳೆಗೆ ಬೆಟ್ಟದಲ್ಲಿ ಜಾರಿನಿಂತ ಬೃಹತ್‌ ಕಲ್ಲುಬಂಡೆ!

ಮಡಿಕೇರಿ: ಕೊಡಗಿನಲ್ಲಿ ಭಾರೀ ಮಳೆಗೆ ಬೆಟ್ಟದಲ್ಲಿ ಜಾರಿನಿಂತ ಬೃಹತ್‌ ಕಲ್ಲುಬಂಡೆ ಆತಂಕ ಮೂಡಿಸಿದೆ. ಮಡಿಕೇರಿ ತಾಲೂಕಿನ ಕುಂದಚೇರಿ ಗ್ರಾಮದ ಪೊಲಮಾನಿ…

8 hours ago

ಓದುಗರ ಪತ್ರ: ನೀರು ಸೋರಿಕೆ ತಡೆಗಟ್ಟಿ

ಮೈಸೂರಿನ ಚಾಮರಾಜ ಮೊಹದ ಸೋನಾರ್ ಬೀದಿಯಲ್ಲಿ ಸಾರ್ವಜನಿಕ ನಲ್ಲಿಗೆ ಸಂಪರ್ಕ ಕಲ್ಪಿಸುವ ಪೈಪ್ ಪಡೆದುಹೋಗಿದ್ದು, ಕುಡಿಯುವ ನೀರು ಚರಂಡಿ ಪಾಲಾಗುತ್ತಿದೆ.…

16 hours ago