ಮೈಸೂರು

ದಸರಾ ಯಶಸ್ವಿಗೆ ಉಪಸಮಿತಿಗಳು ಉತ್ತಮ ಸಿದ್ಧತೆ ನಡೆಸಿ: ಸಚಿವ ಹೆಚ್‌ಸಿ ಮಹದೇವಪ್ಪ

ಸೆಪ್ಟೆಂಬರ್: ಈ ಬಾರಿ ದಸರಾ ಆಚರಣೆಯನ್ನು ಅದ್ದೂರಿಯಾಗಿಸಲು ಹೈ ಪವರ್ ಕಮಿಟಿಯಲ್ಲಿ ತೀರ್ಮಾನಿಸಿದ್ದು, ಈ ಸಂಬಂಧ 19 ಉಪಸಮಿತಿಗಳನ್ನು ರಚಿಸಿದ್ದು, ಸಮಿತಿಯ ಅಧಿಕಾರಿಗಳು ಅಗತ್ಯ ಸಿದ್ಧತೆಗಳನ್ನು ಮಾಡಿಕೊಂಡು ದಸರಾ ಆಚರಣೆಯನ್ನು ಯಶಸ್ವಿಗೊಳಿಸಿ ಎಂದು ಸಮಾಜ ಕಲ್ಯಾಣ ಇಲಾಖೆಯ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಹೆಚ್ ಸಿ ಮಹದೇವಪ್ಪ  ಹೇಳಿದರು.

ಬುಧುವಾರ ಅರಮನೆ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ದಸರಾ ಉಪಸಮಿತಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಎಲ್ಲಾ ಸಮಿತಿಯ ಅಧಿಕಾರಿಗಳು ಸೂಕ್ತ ತಯಾರಿ ಮಾಡಿಕೊಂಡು ಅಚ್ಚುಕಟ್ಟಾಗಿ ದಸರಾ ಆಚರಣೆ ಮಾಡಬೇಕು. ಸ್ತಬ್ಧ ಚಿತ್ರಗಳು ನಮ್ಮ ಸಂಸ್ಕೃತಿಯನ್ನು ಬಿಂಬಿಸುವಂತೆ ಇರಬೇಕು. ಜನರಿಗೆ ಸಾಮಾಜಿಕ ಸಂದೇಶ ಸಾರುವಂತೆ ಇರಬೇಕು. ಸಂವಿಧಾನದ ಸಂದೇಶ, ಪೂರ್ವ ಪೀಠಿಕೆಯ ಮಹತ್ವವನ್ನು ತಿಳಿಸುವ ಸ್ಥಬ್ದ ಚಿತ್ರ ತಯಾರಿಕೆಗೆ ಮಾಡಬೇಕು ಎಂದು ಸ್ಥಬ್ದ ಚಿತ್ರ ಉಪಸಮಿತಿಗೆ ತಿಳಿಸಿದರು.

ರೈತರು ದೇಶದ ಬೆನ್ನೆಲುಬು. ರೈತ ದಸರಾದಲ್ಲಿ ರೈತರಿಗೆ ಅನುಕೂಲವಾಗುವ ಕೃಷಿ ಸಾಧನ ಸಲಕರಣೆಗಳ ಪ್ರದರ್ಶನ ಏರ್ಪಡಿಸಬೇಕು. ಸಬ್ಸಿಡಿ ದರದಲ್ಲಿ ದೊರೆಯುವ ಆಧುನಿಕ ಕೃಷಿ ಸಲಕರಣೆಗಳ ಬಗ್ಗೆ ಮಾಹಿತಿ ಒದಗಿಸಬೇಕು. ಶುಂಠಿ ಬೆಳೆಯನ್ನು ಬೆಳೆಯಲು ರೈತರು ಭೂಮಿಯನ್ನು ಗುತ್ತಿಗೆಗೆ ನೀಡುತ್ತಿದ್ದು, ಶುಂಠಿ ಬೆಳೆಯನ್ನು ಬೆಳೆಯುವುದರಿಂದ ಮಣ್ಣಿನ ಫಲವತ್ತತೆ ಕಡಿಮೆ ಆಗಿ ಮುಂದಿನ ಒಂದೆರಡು ವರ್ಷ ಉತ್ತಮ ಬೆಳೆ ಬರುವುದಿಲ್ಲ. ಈ ಬಗ್ಗೆ ರೈತರಿಗೆ ಜಾಗೃತಿ ಮೂಡಿಸುವ ಬಗ್ಗೆ ಸ್ಥಬ್ದ ಚಿತ್ರಗಳಿರಬೇಕು ಎಂದರು.

ದಸರಾ ಕ್ರೀಡಾಕೂಟಕ್ಕೆ ರಾಜ್ಯದ ವಿವಿಧ ಭಾಗಗಳಿಂದ ಸ್ಪರ್ಧಿಗಳು ಭಾಗವಹಿಸುತ್ತಾರೆ. ಇವರಿಗೆ ಉತ್ತಮ ಊಟ ಹಾಗೂ ವಸತಿ ಸೌಲಭ್ಯ ಕಲ್ಪಿಸಬೇಕು. ದಸರಾ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ನಮ್ಮ ದೇಶದ ಸಂಸ್ಕೃತಿಯನ್ನು ಬಿಂಬಿಸುವ ಕಾರ್ಯಕ್ರಮಗಳನ್ನು ಹೆಚ್ಚು ಆಯೋಜಿಸಬೇಕು. ಜನಪದ ಕಲೆಗಳನ್ನು ಪ್ರದರ್ಶನ ಮಾಡಬೇಕು. ಕಲಾವಿದರಿಗೆ ಪಾರದರ್ಶಕವಾಗಿ ಅವಕಾಶ ಕಲ್ಪಿಸಬೇಕು. ಸ್ಥಳೀಯ ಕಲಾವಿದರಿಗೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಮಕ್ಕಳಿಗೆ ಚಿತ್ರ ಕಲಾ ಸ್ಪರ್ಧೆಗಳನ್ನು ಆಯೋಜನೆ ಮಾಡಬೇಕು. ಕರಕುಶಲ ವಸ್ತುಗಳ ಸ್ಪರ್ಧೆಯನ್ನು ಏರ್ಪಡಿಸಬೇಕು. ಕವಿಗೋಷ್ಠಿಯನ್ನು ವಿಶಿಷ್ಟ ರೀತಿಯಲ್ಲಿ ಆಯೋಜನೆ ಮಾಡಿ ಯುವ ಕವಿಗಳಿಗೆ ಆದ್ಯತೆ ನೀಡಬೇಕು. ಯೋಗ ದಸರಾದಲ್ಲಿ ಆರೋಗ್ಯಯುತ ಜೀವನಕ್ಕಾಗಿ ಯೋಗ ಎಂಬ ಅರಿವನ್ನು ಮೂಡಿಸುವ ಹಾಗೆ ಇರಬೇಕು. ಆಹಾರ ಮೇಳದಲ್ಲಿ ಸ್ವಚ್ಚತೆಯನ್ನು ಕಾಪಾಡಿಕೊಳ್ಳಬೇಕು. ಆರೋಗ್ಯಕರ ಗುಣಮಟ್ಟದ ತಿಂಡಿ ತಿನಿಸುಗಳ ಮರಾಟವಾಗಬೇಕು. ಮೈಸೂರು ನಗರದ ರಸ್ತೆಗಳ ಗುಂಡಿಗಳ ಮುಚ್ಚುವ ಕಾರ್ಯವನ್ನು ಸಂಬಂಧಿಸಿದ ಅಧಿಕಾರಿಗಳು ಮಾಡಬೇಕು ಎಂದು ತಿಳಿಸಿದರು.

ದಸರಾ ಚಲನಚಿತ್ರೋತ್ಸವದಲ್ಲಿ ಸಾಮಾಜಿಕ ಕಳಕಳಿಯುಳ್ಳ ಕಲಾತ್ಮಕ ಚಿತ್ರಗಳ ಪ್ರದರ್ಶನಕ್ಕೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ಸೂಚಿಸಿದರು.

ಈ ಸಂದರ್ಭದಲ್ಲಿ ವಿವಿಧ ಉಪಸಮಿತಿಗಳ ಉಪ ವಿಶೇಷಾಧಿಕಾರಿಗಳು ತಾವು ಕೈಗೊಂಡಿರುವ ಸಿದ್ಧತೆಗಳ ಬಗ್ಗೆ ಮಾಹಿತಿ ನೀಡಿದರು.

ಸಭೆಯಲ್ಲಿ ಜಿಲ್ಲಾಧಿಕಾರಿ ಜಿ.ಲಕ್ಷ್ಮೀಕಾಂತ ರೆಡ್ಡಿ, ನಗರ ಪೊಲೀಸ್ ಆಯುಕ್ತರಾದ ಸೀಮಾ ಲಾಟ್ಕರ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ ಎಂ ಗಾಯತ್ರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿಷ್ಣುವರ್ಧನ್, ಅಪರ ಜಿಲ್ಲಾಧಿಕಾರಿ ಡಾ. ಪಿ. ಶಿವರಾಜು, ಉಪಸಮಿತಿಗಳ ಅಧಿಕಾರಿಗಳು ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ʼವಿದ್ಯಾವಂತರು ಸಮುದಾಯಕ್ಕೆ ಆಸರೆಯಾಗಬೇಕುʼ

  ಈ ನಡೆ ಶೋಷಿತ ಸಮುದಾಯಗಳ ಪ್ರಗತಿಗೆ ಸಹಕಾರಿ -ಟಿ.ಕೆ.ಹರೀಶ್ ಶಿಕ್ಷಣ ಕೇವಲ ವೈಯಕ್ತಿಕ ಬೆಳವಣಿಗೆಗೆ ಮಾತ್ರ ಸೀಮಿತವಾಗಿರಬಾರದು. ಅದು…

4 hours ago

ಗಾಂಧಿ ಅಭಿಯಾನ ಅರಿವಿನ ಯಾನ | ಶಿಕ್ಷಣವೇ ದೇಶ ಕಟ್ಟುವ ಹಾದಿ ಎಂದು ತಿಳಿದಿದ್ದ ದೇಶಪಾಂಡೆಯವರು

ಡಾ.ಎಂ.ಡಿ.ಉಮೇಶ್‌, ಉಪನ್ಯಾಸಕರು, ಗಾಂಧಿ ಅಧ್ಯಯನ ಕೇಂದ್ರ, ಮೈಸೂರು ವಿ.ವಿ ಬೆಳಗಾವಿ ಜಿಲ್ಲೆಯ ಹುದಲಿ ಗ್ರಾಮದಲ್ಲಿ ಬಾಲ ಕೃಷ್ಣ ಮತ್ತು ರಾಧಾಬಾಯಿ…

7 hours ago

ಗಾಂಧಿ ಅಭಿಯಾನ ಅರಿವಿನ ಯಾನ | ಇಂಗ್ಲೆಂಡಿನಲ್ಲಿ ಶಾಕಾಹಾರದ ದಿನಗಳು

ಡಾಕ್ಟರ್ ಮೆಹತಾ ಮತ್ತು ನಾನು ಅವರ ಮಿತ್ರನ ಮನೆಗೆ ಹೋದೆವು. ಅವರು ನನ್ನ ವಿಷಯದಲ್ಲಿ ತುಂಬಾ ಕರುಣೆ ಮತ್ತು ಆದರವುಳ್ಳವರಾಗಿದ್ದರು.…

7 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜುಲೈ 18 ಶನಿವಾರ

7 hours ago

ನಂಜನಗೂಡು | ಹಾಡಹಗಲೇ ಸ್ಕೂಟಿಯಲ್ಲಿದ್ದ ಹಣ ಕಳವು

ನಂಜನಗೂಡು : ಹಾಡಾ ಹಗಲೇ ಜನನಿಬಿಡ ಪ್ರದೇಶದಲ್ಲಿ ನಿಲ್ಲಿಸಿದ್ದ ಸ್ಕೂಟಿಯಿಂದ ಹಣ ಕದ್ದ ಘಟನೆ ಪಟ್ಟಣದ ಮಿನಿ ವಿಧಾನಸೌಧದ ಬಳಿ…

20 hours ago

ಮೈಸೂರು ದಸರಾ ವಸ್ತುಪ್ರದರ್ಶನಕ್ಕೆ ಜಾಗತಿಕ ಸ್ಪರ್ಶ : ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ

ಮೈಸೂರು : ದಸರಾ ವಸ್ತು ಪ್ರದರ್ಶನವನ್ನು ಜಾಗತಿಕ ಮಟ್ಟದಲ್ಲಿ ಮತ್ತಷ್ಟು ಆಕರ್ಷಣೀಯವಾಗಿಸಲು ಕರ್ನಾಟಕ ಪ್ರದರ್ಶನ ಪ್ರಾಧಿಕಾರವು ವಸ್ತು ಪ್ರದರ್ಶನ ಆವರಣವನ್ನು…

22 hours ago