ಮೈಸೂರು: ರೋಟರಿ ಸೆಂಟ್ರಲ್ ಮೈಸೂರಿನ 2024- 25 ನೇ ಸಾಲಿನ ಪದಗ್ರಹಣ ಸಮಾರಂಭದಲ್ಲಿ ನೂತನ ಅಧ್ಯಕ್ಷರಾಗಿ ಸುಬ್ರಹ್ಮಣ್ಯ ಆರ್ ತಂತ್ರಿ ಪ್ರತಿಜ್ಞಾವಿಧಿ ಸ್ವೀಕರಿಸಿದರು.
ನಗರದ ಮೈಸೂರು ಬೆಂಗಳೂರು ರಸ್ತೆಯಲ್ಲಿರುವ ಪೈ ವಿಸ್ತ ಹೋಟೆಲ್ ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಅವರು ಪ್ರಮಾಣ ವಚನ ಸ್ವೀಕರಿಸಿದರು. ಜತೆಗೆ ಗೌರವಾಧ್ಯಕ್ಷರಾಗಿ ಸಮರ್ಥ್ ವೈದ್ಯ ಪ್ರತಿಜ್ಞಾವಿಧಿ ಸ್ವೀಕರಿಸಿದರು
ರಾಮಕೃಷ್ಣ ಆಶ್ರಮದ ಪೂಜ್ಯ ಸ್ವಾಮಿ ಯುಕ್ತಶ ನಂದಾಜಿ ಮಹಾರಾಜ ಮಾತನಾಡಿ, ವಿಶ್ವದಲ್ಲೇ ಪೋಲಿಯೋ ನಿರ್ಮೂಲನೆಯಲ್ಲಿ ಪ್ರಮುಖ ಪಾತ್ರ ವಹಿಸಿರುವ ರೋಟರಿ ಕ್ಲಬ್, ಸಾಮಾಜಿಕ ಸೇವಾ ಕಾರ್ಯಗಳು ಶ್ಲಾಘನೀಯ ಎಂದು ಹೇಳಿದರು
ಬಳಿಕ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿ ಮಾತನಡಿದ ಸುಬ್ರಹ್ಮಣ್ಯ ಆರ್ ತಂತ್ರಿ , ವಿಶ್ವದಲ್ಲೇ ಇರುವ ಲಕ್ಷಾಂತರ ರೋಟರಿ ಸದಸ್ಯರು ರೋಟರಿಗೆ ನೀಡುವ ಪ್ರತಿ ಪೈಸೆಯೂ ಸದ್ಬಳಿಕೆಯಾಗುತ್ತಿದ್ದು, ಸಮಾಜದ ವಿವಿಧ ಕಾರ್ಯಕ್ಕೆ ಉಪಯೋಗವಾಗುತ್ತಿದೆ. ಕಷ್ಟದಲ್ಲಿ ಇರುವವರಿಗೆ ಸಹಾಯ ಮಾಡಿದಾಗ ನಮಗೆ ಆತ್ಮತೃಪ್ತಿ ದೊರಕುತ್ತದೆ ಎಂದು ಹೇಳಿದರು.
ರೋಟರಿ ಪ್ರಧಾನ ಅಧಿಕಾರಿ ಸತೀಶ್ ಬೋಲಾರ್, ನಿಕಟ ಪೂರ್ವಾಧ್ಯಕ್ಷರಾದ ಎನ್ ಉಮೇಶ್, ರೋ ಸಹಾಯಕ ಗವರ್ನರ್ ಚೇತನ್ ವಿಶ್ವನಾಥ್, ನಿಕಟಪೂರ್ವ ಕಾರ್ಯದರ್ಶಿ ಪ್ರೇಮ್ ಸಾಗರ್, ಉಪಾಧ್ಯಕ್ಷ ವಿಜಯೇಂದ್ರ, ಎ.ಆರ್ ರವೀಂದ್ರ ಭಟ್, ಆಂಟೋನಿ ಮೋಸೆಸ್, ಅನಿಲ್ ಪದಕಿ, ಗುರುಪ್ರಸಾದ್, ಸಚ್ಚಿದಾನಂದ ಮೂರ್ತಿ, ಎಂಎಸ್ ಜಯಪ್ರಕಾಶ್, ಎಸ್ಆರ್ ಸ್ವಾಮಿ, ದಿನೇಶ್, ಅರುಣ್, ಜ್ಯೋತಿ ಅಶೋಕ್, ರಜನಿ, ವಿವೇಕ್ ಹಾಜರಿದ್ದರು.
ಬೆಂಗಳೂರು: ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆಗೆ ನಿಂದನೆ ಹಾಗೂ ಜೀವಬೆದರಿಕೆ ಹಾಕಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಪಿಸಿಸಿ, ಕಾಂಗ್ರೆಸ್ ಮುಖಂಡ…
ದಾವಣಗೆರೆ: ಬಿಜೆಪಿಗೆ ಮರಳುವಂತೆ ಕಾರ್ಯಕರ್ತರು ಒತ್ತಾಯಿಸುತ್ತಿದ್ದಾರೆ ಎಂದು ಬಿಜೆಪಿಯಿಂದ ಉಚ್ಛಾಟನೆಗೊಂಡಿರುವ ಕೆ.ಎಸ್.ಈಶ್ವರಪ್ಪ ಹೇಳಿದ್ದಾರೆ. ಈ ಕುರಿತು ದಾವಣಗೆರೆಯಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ…
ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನ ಐತಿಹಾಸಿಕ ದೇವಸ್ಥಾನ ಗವಿ ಗಂಗಾಧರೇಶ್ವರ ದೇವಾಲಯದಲ್ಲಿ ಮಕರ ಸಂಕ್ರಮಣದ ಶುಭ ಸಂದರ್ಭದಲ್ಲಿ ವಿಸ್ಮಯವೊಂದು ನಡೆದಿದೆ.…
ಬೆಂಗಳೂರು: ಬೆಸ್ಕಾಂ ಸೇರಿದಂತೆ ಕೆಪಿಟಿಸಿಎಲ್ನ ವಿವಿಧ ವಿಭಾಗಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಆರು ನೂರಕ್ಕೂ ಹೆಚ್ಚು ವಿಕಲಚೇತನ ಉದ್ಯೋಗಿಗಳು ಬಿಡದಿಯ ತಮ್ಮ…
ನವದೆಹಲಿ: ಸೇನಾ ದಿನದ ಅಂಗವಾಗಿ ಇಂದು ಭಾರತೀಯ ಸೇನೆಯು ಹೊಸ ವಿಡಿಯೋವನ್ನು ಬಿಡುಗಡೆ ಮಾಡಿದೆ. ಇದರಲ್ಲಿ ಕಳೆದ ವರ್ಷ ನಡೆದ…
ಜನನಾಯಗನ್ ಚಿತ್ರವನ್ನು ಮುಂದೂಡಿದ್ದಕ್ಕೆ ಸಂಬಂಧಿಸಿದಂತೆ ಸಿಬಿಎಫ್ಸಿ ಅನುಮತಿ ಕೋರಿ ಕೆವಿಎನ್ ಪ್ರೊಡಕ್ಷನ್ಸ್ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್ ಇಂದು ವಜಾಗೊಳಿಸಿದೆ. ಸೆನ್ಸಾರ್…