ಮೈಸೂರು: ರೋಟರಿ ಸೆಂಟ್ರಲ್ ಮೈಸೂರಿನ 2024- 25 ನೇ ಸಾಲಿನ ಪದಗ್ರಹಣ ಸಮಾರಂಭದಲ್ಲಿ ನೂತನ ಅಧ್ಯಕ್ಷರಾಗಿ ಸುಬ್ರಹ್ಮಣ್ಯ ಆರ್ ತಂತ್ರಿ ಪ್ರತಿಜ್ಞಾವಿಧಿ ಸ್ವೀಕರಿಸಿದರು.
ನಗರದ ಮೈಸೂರು ಬೆಂಗಳೂರು ರಸ್ತೆಯಲ್ಲಿರುವ ಪೈ ವಿಸ್ತ ಹೋಟೆಲ್ ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಅವರು ಪ್ರಮಾಣ ವಚನ ಸ್ವೀಕರಿಸಿದರು. ಜತೆಗೆ ಗೌರವಾಧ್ಯಕ್ಷರಾಗಿ ಸಮರ್ಥ್ ವೈದ್ಯ ಪ್ರತಿಜ್ಞಾವಿಧಿ ಸ್ವೀಕರಿಸಿದರು
ರಾಮಕೃಷ್ಣ ಆಶ್ರಮದ ಪೂಜ್ಯ ಸ್ವಾಮಿ ಯುಕ್ತಶ ನಂದಾಜಿ ಮಹಾರಾಜ ಮಾತನಾಡಿ, ವಿಶ್ವದಲ್ಲೇ ಪೋಲಿಯೋ ನಿರ್ಮೂಲನೆಯಲ್ಲಿ ಪ್ರಮುಖ ಪಾತ್ರ ವಹಿಸಿರುವ ರೋಟರಿ ಕ್ಲಬ್, ಸಾಮಾಜಿಕ ಸೇವಾ ಕಾರ್ಯಗಳು ಶ್ಲಾಘನೀಯ ಎಂದು ಹೇಳಿದರು
ಬಳಿಕ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿ ಮಾತನಡಿದ ಸುಬ್ರಹ್ಮಣ್ಯ ಆರ್ ತಂತ್ರಿ , ವಿಶ್ವದಲ್ಲೇ ಇರುವ ಲಕ್ಷಾಂತರ ರೋಟರಿ ಸದಸ್ಯರು ರೋಟರಿಗೆ ನೀಡುವ ಪ್ರತಿ ಪೈಸೆಯೂ ಸದ್ಬಳಿಕೆಯಾಗುತ್ತಿದ್ದು, ಸಮಾಜದ ವಿವಿಧ ಕಾರ್ಯಕ್ಕೆ ಉಪಯೋಗವಾಗುತ್ತಿದೆ. ಕಷ್ಟದಲ್ಲಿ ಇರುವವರಿಗೆ ಸಹಾಯ ಮಾಡಿದಾಗ ನಮಗೆ ಆತ್ಮತೃಪ್ತಿ ದೊರಕುತ್ತದೆ ಎಂದು ಹೇಳಿದರು.
ರೋಟರಿ ಪ್ರಧಾನ ಅಧಿಕಾರಿ ಸತೀಶ್ ಬೋಲಾರ್, ನಿಕಟ ಪೂರ್ವಾಧ್ಯಕ್ಷರಾದ ಎನ್ ಉಮೇಶ್, ರೋ ಸಹಾಯಕ ಗವರ್ನರ್ ಚೇತನ್ ವಿಶ್ವನಾಥ್, ನಿಕಟಪೂರ್ವ ಕಾರ್ಯದರ್ಶಿ ಪ್ರೇಮ್ ಸಾಗರ್, ಉಪಾಧ್ಯಕ್ಷ ವಿಜಯೇಂದ್ರ, ಎ.ಆರ್ ರವೀಂದ್ರ ಭಟ್, ಆಂಟೋನಿ ಮೋಸೆಸ್, ಅನಿಲ್ ಪದಕಿ, ಗುರುಪ್ರಸಾದ್, ಸಚ್ಚಿದಾನಂದ ಮೂರ್ತಿ, ಎಂಎಸ್ ಜಯಪ್ರಕಾಶ್, ಎಸ್ಆರ್ ಸ್ವಾಮಿ, ದಿನೇಶ್, ಅರುಣ್, ಜ್ಯೋತಿ ಅಶೋಕ್, ರಜನಿ, ವಿವೇಕ್ ಹಾಜರಿದ್ದರು.
ಹನೂರು : ನನ್ನ ವೈಯಕ್ತಿಕ ಜೀವನದಲ್ಲಿ ಇದೊಂದು ಅಮೋಘ ದಿನವಾಗಲಿದೆ ಇಂತಹ ವಿದ್ಯಾರ್ಥಿಗಳನ್ನು ಪಡೆದ ನಾವೇ ಧನ್ಯರು ಎಂದು ನಂಜನಗೂಡು…
ಹನೂರು: ಅಕ್ರಮ ನಾಡ ಬಂದೂಕು ಶೇಖರಣೆ ಮಾಡಿಟ್ಟುಕೊಂಡಿದ್ದ ವ್ಯಕ್ತಿಯನ್ನು ರಾಮಪುರ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಹನೂರು ತಾಲೂಕಿನ ಮಾರ್ಟಳ್ಳಿ ಗ್ರಾಮ…
ಹನೂರು: ತಾಲ್ಲೂಕಿನ ಕೌದಳ್ಳಿ ಗ್ರಾಮದ ನಾಯಕ ಸಮುದಾಯದ ಬಡಾವಣೆಯಲ್ಲಿ ನೂತನವಾಗಿ ಅಕ್ಕ ಮಾರಮ್ಮ ದೇವಸ್ಥಾನ ನಿರ್ಮಾಣ ಮಾಡಲು ಮಾಜಿ ಶಾಸಕ…
ತಮಿಳುನಾಡು: ತಮಿಳು ಸ್ಟಾರ್ ನಟ ಸಿದ್ಧಾರ್ಥ್ ಹಾಗೂ ಅದಿತಿ ರಾವ್ ಹೈದರಿ ಅವರಿಂದು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಅದಿತಿ ಹಾಗೂ…
ಕಲಬುರ್ಗಿ: ನಾಳೆ ಕಲ್ಯಾಣ ಕರ್ನಾಟಕ ಉತ್ಸವ ಕಾರ್ಯಕ್ರಮದ ಉದ್ಘಾಟನೆಗೆ ಸಿಎಂ ಸಿದ್ದರಾಮಯ್ಯ ಕಲಬುರ್ಗಿಗೆ ಆಗಮಿಸಲಿದ್ದಾರೆ ಎಂದು ಸಚಿವ ಪ್ರಿಯಾಂಕ್ ಖರ್ಗೆ…
ಬೆಂಗಳೂರು: ದೇಶದಲ್ಲಿ ಪ್ರಥಮ ಬಾರಿಗೆ ಮಂಕಿಪಾಕ್ಸ್ ಪ್ರಕರಣ ಖಚಿತಗೊಂಡ ಮೇಲೆ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಂತರಾಷ್ಟ್ರೀಯ ಪ್ರಯಾಣಿಕರಿಗೆ ಕಡ್ಡಾಯ…