ಮೈಸೂರು

ಅಲ್ಪಸಂಖ್ಯಾತರ ಸರಳ ವಿವಾಹಕ್ಕೆ ಸಹಾಯಧನ ಯೋಜನೆ : ಶಾಸಕ ತನ್ವೀರ್ ಸೇಠ್

ಮೈಸೂರು : ಆರ್ಥಿಕವಾಗಿ ಹಿಂದುಳಿದಿರುವ ಅಲ್ಪಸಂಖ್ಯಾತ ಸಮುದಾಯದವರ ಸರಳ ವಿವಾಹಕ್ಕೆ ಪ್ರತಿ ಜೋಡಿಗೆ 50,000/-ರೂ. ಸಹಾಯಧನ ನೀಡಲಾಗುವುದು ಎಂದು ನರಸಿಂಹರಾಜ ವಿಧಾನಸಭಾ ಕ್ಷೇತ್ರದ ಶಾಸಕರಾದ ತನ್ವೀರ್ ಸೇಠ್ ಅವರು ತಿಳಿಸಿದರು.

ಅವರು ಇಂದು ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಸರಳ ವಿವಾಹದ ಪ್ರೋತ್ಸಾಹಧನ ಕಾರ್ಯಕ್ರಮದ ಸಭೆಯ ಅಧ್ಯಕ್ಷತೆಯನ್ನು ವಹಿಸಿ ಅವರು ಮಾತನಾಡಿದರು. ಮೈಸೂರು ಜಿಲ್ಲೆಗೆ 150 ಗುರಿ ನಿಗಧಿ ಪಡಿಸಲಾಗಿದ್ದು, ಸರಳ ವಿವಾಹ ಯೋಜನೆಯನ್ನು ಅರ್ಹ ಫಲಾನುಭವಿಗಳನ್ನು ಗುರುತಿಸಬೇಕು ಎಂದರು.

ಅರ್ಜಿ ಸಲ್ಲಿಸುವ ಅಲ್ಪಸಂಖ್ಯಾತ ವಧುವಿಗೆ ಕನಿಷ್ಠ 18 ವರ್ಷದಿಂದ ಗರಿಷ್ಠ 42 ವರ್ಷಗಳು ಹಾಗೂ ವರನಿಗೆ ಕನಿಷ್ಠ 21 ವರ್ಷದಿಂದ ಗರಿಷ್ಠ 45 ವರ್ಷ ವಯಸ್ಸಾಗಿರಬೇಕು. ಯಾವುದೇ ಬಾಲ್ಯವಿವಾಹಕ್ಕೆ ಆಸ್ಪದ ಕೊಡದಂತೆ ಅಧಿಕಾರಿಗಳು ಎಚ್ಚರಿಕೆ ವಹಿಸಿ ಯೋಜನೆಯನ್ನು ಅನುಷ್ಠಾನಗೊಳಿಸಬೇಕು ಎಂದರು.

ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ಈ ಯೋಜನೆಗಾಗಿ ಫಲಾನುಭವಿಗಳನ್ನು ಗುರುತಿಸಲು ಹೆಚ್ಚಿನ ಶ್ರಮ ವಹಿಸಿ ಕೆಲಸ ನಿರ್ವಹಿಸಬೇಕು. ತಂದೆ ಅಥವಾ ತಾಯಿ ಇಲ್ಲದ ವಧುವನ್ನು ಗುರುತಿಸಿ ಸರಳ‌ ವಿವಾಹ ಯೋಜನೆಯ ಸವಲತ್ತು ಒದಗಿಸಿದರೆ ಯೋಜನೆ ಹೆಚ್ಚಿನ ಸಾರ್ಥಕತೆ ಪಡೆಯುತ್ತದೆ ಎಂದರು.

ಇದನ್ನು ಓದಿ: ಮಂಡ್ಯ : ಜಿಲ್ಲೆಗೆ ಎರಡೂವರೆ ವರ್ಷದಲ್ಲಿ 10 ಸಾವಿರ ಕೋಟಿ ಅನುದಾನ : ಸಚಿವ ಚಲುವರಾಯಸ್ವಾಮಿ

ಅಲ್ಪಸಂಖ್ಯಾತ ಸಮುದಾಯದಡಿ ಬರುವ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ದ, ಸಿಖ್ ಹಾಗೂ ಪಾರ್ಸಿ ಅವರಿಗೆ ಸರಳ ವಿವಾಹ ಯೋಜನೆಯಡಿ ಗುರಿ ನಿಗದಿ ಮಾಡಿ ಅರ್ಜಿ ಆಹ್ವಾನಿಸಿ ಹೆಚ್ಚಿನ ಪ್ರಚಾರ ನೀಡಿ ಕೆಲವು ಸಮುದಾಯದಿಂದ ಅರ್ಜಿ ಬರದೇ ಇದ್ದಲ್ಲಿ ನಂತರ ಬೇರೆ ಸಮುದಾಯಕ್ಕೆ ಹೆಚ್ಚುವರಿಯಾಗಿ ನೀಡುವುದು ಉತ್ತಮ ಎಂದರು.

ಸರಳ ವಿವಾಹ ಯೋಜನೆಯಡಿ ಅರ್ಜಿ ಸ್ವೀಕೃತಿಯಾದ ನಂತರ ವಧು ಹಾಗೂ ವರ ನೀಡಿರುವ ವಯಸ್ಸಿನ ದಾಖಲಾತಿಗಳನ್ನು ಪರಿಶೀಲಿಸಿ ಹಾಗೂ ಅವರು ವಾಸವಿರುವ ಸ್ಥಳ ಭೀಟಿ ಮಾಡಿ ವರನಿಗೆ ಜೀವಂತ ಪತ್ನಿ ಹಾಗೂ ವಧುವಿಗೆ ಜೀವಂತ ಪತಿ ಇಲ್ಲದಿರುವುದನ್ನು ಖಾತ್ರಿ ಪಡಿಸಿಕೊಂಡು ನಂತರ ಯೋಜನೆಯ ಸೌಲಭ್ಯ ಒದಗಿಸಿಕೊಡಿ ಎಂದರು.

ಜಿಲ್ಲಾಧಿಕಾರಿ ಲಕ್ಷ್ಮೀಕಾಂತ ರೆಡ್ಡಿ ಜಿ ಅವರು ಮಾತನಾಡಿ ವಯೋಮಿತಿಯ ಬಗ್ಗೆ ಪರಿಶೀಲಿಸುವಾಗ ಕಡ್ಡಾಯವಾಗಿ ಎಸ್.ಎಸ್.ಎಲ್.ಸಿ ಅಂಕಪಟ್ಟಿ ಅಥವಾ ಜನನ ಪ್ರಮಾಣ ಪತ್ರದ ಮೂಲಕ ಮಾಡಿ. ವಿವಾಹದ ನೊಂದಣಿಗೆ ನೊಂದಣಾಧಿಕಾರಿಗಳ ಕಚೇರಿಯೊಂದಿಗೆ ಸಮನ್ವಯ ಸಾಧಿಸಿ ವಿವಾಹದ ಸಂದರ್ಭದಲ್ಲಿ ನೊಂದಣಿಗೆ ಕ್ರಮ ಕೈಗೊಳ್ಳಿ ಎಂದರು.

ಸಭೆಯಲ್ಲಿ ಮೈಸೂರು ಮಹಾನಗರ ಪಾಲಿಕೆಯ ಆಯುಕ್ತರಾದ ಶೇಖ್ ತನ್ವೀರ್ ಅಸೀಫ್, ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ಶಿಲ್ಪ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಹಾಯಕ ನಿರ್ದೇಶಕಿ ಎಸ್.ಹೆಚ್ ನಿರ್ಮಲಾ ಅವರು ಸೇರಿದಂತೆ ಜಿಲ್ಲಾ ಮಟ್ಟದ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

ಆಂದೋಲನ ಡೆಸ್ಕ್

Recent Posts

ಹನೂರು: ಏಕಕಾಲದಲ್ಲೇ ಕಾಣಿಸಿಕೊಂಡ ಎರಡು ಚಿರತೆಗಳು

ಹನೂರು: ತಾಲೂಕಿನ ಲೊಕ್ಕನಹಳ್ಳಿ ಹೋಬಳಿ ವ್ಯಾಪ್ತಿಯ ಮಲೆ ಮಹದೇಶ್ವರ ಅರಣ್ಯ ಪ್ರದೇಶ ವ್ಯಾಪ್ತಿಯ ಬಳಗುಡ್ಡ ಬಿಟ್ ವ್ಯಾಪ್ತಿಯಲ್ಲಿ ಏಕಕಾಲಕ್ಕೆ ಎರಡು…

2 hours ago

ನಾಳೆಯೊಳಗೆ ಪ್ರಯಾಣಿಕರಿಗೆ ಮರುಪಾವತಿ ಮಾಡಿ: ಇಂಡಿಗೋ ಏರ್‌ಲೈನ್ಸ್‌ಗೆ ಗಡುವು ನೀಡಿದ ಕೇಂದ್ರ ಸರ್ಕಾರ

ನವದೆಹಲಿ: ನಾಗರಿಕ ವಿಮಾನಯಾನ ಸಚಿವಾಲಯವು ಇಂಡಿಗೋದ ಬಾಕಿ ಇರುವ ಎಲ್ಲಾ ಪ್ರಯಾಣಿಕರ ಮರುಪಾವತಿಗಳನ್ನು ವಿಳಂಬವಿಲ್ಲದೇ ಪಾವತಿಸಲು ಆದೇಶಿಸಿದೆ. ರದ್ದಾದ ಅಥವಾ…

2 hours ago

ಡಿ.ಕೆ.ಶಿವಕುಮಾರ್‌ ಸಂಪುಟದಲ್ಲಿ ನನಗೆ ಸಚಿವ ಸ್ಥಾನ ಬೇಡ: ಮಾಜಿ ಸಚಿವ ಕೆ.ಎನ್.ರಾಜಣ್ಣ

ತುಮಕೂರು: ರಾಜ್ಯದಲ್ಲಿ ಸಿಎಂ ಸ್ಥಾನ ಬದಲಾವಣೆ ಚರ್ಚೆ ಬೆನ್ನಲ್ಲೇ ಮಾಜಿ ಸಚಿವ ಕೆ.ಎನ್.ರಾಜಣ್ಣ ಮಹತ್ವದ ಹೇಳಿಕೆ ಕೊಟ್ಟಿದ್ದಾರೆ. ಈ ಕುರಿತು…

2 hours ago

ನನ್ನನ್ನು ಹೆದರಿಸ್ತೀನಿ ಅಂದ್ರೆ ಅದು ಸಾಧ್ಯವಿಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್‌ ಪ್ರತಿಕ್ರಿಯೆ

ಹಾಸನ: ನ್ಯಾಷನಲ್‌ ಹೆರಾಲ್ಡ್‌ ಪ್ರಕರಣದಲ್ಲಿ ದೆಹಲಿ ಪೊಲೀಸರು ನೋಟಿಸ್‌ ಕೊಟ್ಟ ವಿಚಾರಕ್ಕೆ ಡಿಸಿಎಂ ಡಿ.ಕೆ.ಶಿವಕುಮಾರ್‌ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು…

3 hours ago

ಹೇಮಾವತಿ ಜಲಾಶಯದ ಬಳಿ ಉದ್ಯಾನವನ ನಿರ್ಮಿಸಲು ಸಿಎಂ ಸಿದ್ದರಾಮಯ್ಯ ಭರವಸೆ

ಹಾಸನ: ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಒಂದು ವರ್ಷದೊಳಗೆ ಎಲ್ಲ ಗ್ಯಾರಂಟಿ ಯೋಜನೆಗಳನ್ನು ಯಶಸ್ವಿಯಾಗಿ ಜಾರಿಗೊಳಿಸಿದ್ದು, ಕರ್ನಾಟಕದ ಇತಿಹಾಸದಲ್ಲಿಯೇ ಕಾಂಗ್ರೆಸ್…

3 hours ago

ಮೈಸೂರು| ಜಮೀನಿನಲ್ಲಿ ಭಾರೀ ಗಾತ್ರದ ಹೆಬ್ಬಾವು ಪತ್ತೆ

ನಂಜನಗೂಡು: ಜಮೀನಿನಲ್ಲಿ ಭಾರೀ ಗಾತ್ರದ ಹೆಬ್ಬಾವು ಪತ್ತೆಯಾಗಿದ್ದು, ಅರಣ್ಯ ಇಲಾಖೆ ಸಿಬ್ಬಂದಿಗಳು ರಕ್ಷಿಸಿ ಸುರಕ್ಷಿತ ಪ್ರದೇಶಕ್ಕೆ ಬಿಟ್ಟಿದ್ದಾರೆ. ಜಿಲ್ಲೆಯ ನಂಜನಗೂಡು…

4 hours ago