ಮೈಸೂರು

ಅಲ್ಪಸಂಖ್ಯಾತರ ಸರಳ ವಿವಾಹಕ್ಕೆ ಸಹಾಯಧನ ಯೋಜನೆ : ಶಾಸಕ ತನ್ವೀರ್ ಸೇಠ್

ಮೈಸೂರು : ಆರ್ಥಿಕವಾಗಿ ಹಿಂದುಳಿದಿರುವ ಅಲ್ಪಸಂಖ್ಯಾತ ಸಮುದಾಯದವರ ಸರಳ ವಿವಾಹಕ್ಕೆ ಪ್ರತಿ ಜೋಡಿಗೆ 50,000/-ರೂ. ಸಹಾಯಧನ ನೀಡಲಾಗುವುದು ಎಂದು ನರಸಿಂಹರಾಜ ವಿಧಾನಸಭಾ ಕ್ಷೇತ್ರದ ಶಾಸಕರಾದ ತನ್ವೀರ್ ಸೇಠ್ ಅವರು ತಿಳಿಸಿದರು.

ಅವರು ಇಂದು ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಸರಳ ವಿವಾಹದ ಪ್ರೋತ್ಸಾಹಧನ ಕಾರ್ಯಕ್ರಮದ ಸಭೆಯ ಅಧ್ಯಕ್ಷತೆಯನ್ನು ವಹಿಸಿ ಅವರು ಮಾತನಾಡಿದರು. ಮೈಸೂರು ಜಿಲ್ಲೆಗೆ 150 ಗುರಿ ನಿಗಧಿ ಪಡಿಸಲಾಗಿದ್ದು, ಸರಳ ವಿವಾಹ ಯೋಜನೆಯನ್ನು ಅರ್ಹ ಫಲಾನುಭವಿಗಳನ್ನು ಗುರುತಿಸಬೇಕು ಎಂದರು.

ಅರ್ಜಿ ಸಲ್ಲಿಸುವ ಅಲ್ಪಸಂಖ್ಯಾತ ವಧುವಿಗೆ ಕನಿಷ್ಠ 18 ವರ್ಷದಿಂದ ಗರಿಷ್ಠ 42 ವರ್ಷಗಳು ಹಾಗೂ ವರನಿಗೆ ಕನಿಷ್ಠ 21 ವರ್ಷದಿಂದ ಗರಿಷ್ಠ 45 ವರ್ಷ ವಯಸ್ಸಾಗಿರಬೇಕು. ಯಾವುದೇ ಬಾಲ್ಯವಿವಾಹಕ್ಕೆ ಆಸ್ಪದ ಕೊಡದಂತೆ ಅಧಿಕಾರಿಗಳು ಎಚ್ಚರಿಕೆ ವಹಿಸಿ ಯೋಜನೆಯನ್ನು ಅನುಷ್ಠಾನಗೊಳಿಸಬೇಕು ಎಂದರು.

ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ಈ ಯೋಜನೆಗಾಗಿ ಫಲಾನುಭವಿಗಳನ್ನು ಗುರುತಿಸಲು ಹೆಚ್ಚಿನ ಶ್ರಮ ವಹಿಸಿ ಕೆಲಸ ನಿರ್ವಹಿಸಬೇಕು. ತಂದೆ ಅಥವಾ ತಾಯಿ ಇಲ್ಲದ ವಧುವನ್ನು ಗುರುತಿಸಿ ಸರಳ‌ ವಿವಾಹ ಯೋಜನೆಯ ಸವಲತ್ತು ಒದಗಿಸಿದರೆ ಯೋಜನೆ ಹೆಚ್ಚಿನ ಸಾರ್ಥಕತೆ ಪಡೆಯುತ್ತದೆ ಎಂದರು.

ಇದನ್ನು ಓದಿ: ಮಂಡ್ಯ : ಜಿಲ್ಲೆಗೆ ಎರಡೂವರೆ ವರ್ಷದಲ್ಲಿ 10 ಸಾವಿರ ಕೋಟಿ ಅನುದಾನ : ಸಚಿವ ಚಲುವರಾಯಸ್ವಾಮಿ

ಅಲ್ಪಸಂಖ್ಯಾತ ಸಮುದಾಯದಡಿ ಬರುವ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ದ, ಸಿಖ್ ಹಾಗೂ ಪಾರ್ಸಿ ಅವರಿಗೆ ಸರಳ ವಿವಾಹ ಯೋಜನೆಯಡಿ ಗುರಿ ನಿಗದಿ ಮಾಡಿ ಅರ್ಜಿ ಆಹ್ವಾನಿಸಿ ಹೆಚ್ಚಿನ ಪ್ರಚಾರ ನೀಡಿ ಕೆಲವು ಸಮುದಾಯದಿಂದ ಅರ್ಜಿ ಬರದೇ ಇದ್ದಲ್ಲಿ ನಂತರ ಬೇರೆ ಸಮುದಾಯಕ್ಕೆ ಹೆಚ್ಚುವರಿಯಾಗಿ ನೀಡುವುದು ಉತ್ತಮ ಎಂದರು.

ಸರಳ ವಿವಾಹ ಯೋಜನೆಯಡಿ ಅರ್ಜಿ ಸ್ವೀಕೃತಿಯಾದ ನಂತರ ವಧು ಹಾಗೂ ವರ ನೀಡಿರುವ ವಯಸ್ಸಿನ ದಾಖಲಾತಿಗಳನ್ನು ಪರಿಶೀಲಿಸಿ ಹಾಗೂ ಅವರು ವಾಸವಿರುವ ಸ್ಥಳ ಭೀಟಿ ಮಾಡಿ ವರನಿಗೆ ಜೀವಂತ ಪತ್ನಿ ಹಾಗೂ ವಧುವಿಗೆ ಜೀವಂತ ಪತಿ ಇಲ್ಲದಿರುವುದನ್ನು ಖಾತ್ರಿ ಪಡಿಸಿಕೊಂಡು ನಂತರ ಯೋಜನೆಯ ಸೌಲಭ್ಯ ಒದಗಿಸಿಕೊಡಿ ಎಂದರು.

ಜಿಲ್ಲಾಧಿಕಾರಿ ಲಕ್ಷ್ಮೀಕಾಂತ ರೆಡ್ಡಿ ಜಿ ಅವರು ಮಾತನಾಡಿ ವಯೋಮಿತಿಯ ಬಗ್ಗೆ ಪರಿಶೀಲಿಸುವಾಗ ಕಡ್ಡಾಯವಾಗಿ ಎಸ್.ಎಸ್.ಎಲ್.ಸಿ ಅಂಕಪಟ್ಟಿ ಅಥವಾ ಜನನ ಪ್ರಮಾಣ ಪತ್ರದ ಮೂಲಕ ಮಾಡಿ. ವಿವಾಹದ ನೊಂದಣಿಗೆ ನೊಂದಣಾಧಿಕಾರಿಗಳ ಕಚೇರಿಯೊಂದಿಗೆ ಸಮನ್ವಯ ಸಾಧಿಸಿ ವಿವಾಹದ ಸಂದರ್ಭದಲ್ಲಿ ನೊಂದಣಿಗೆ ಕ್ರಮ ಕೈಗೊಳ್ಳಿ ಎಂದರು.

ಸಭೆಯಲ್ಲಿ ಮೈಸೂರು ಮಹಾನಗರ ಪಾಲಿಕೆಯ ಆಯುಕ್ತರಾದ ಶೇಖ್ ತನ್ವೀರ್ ಅಸೀಫ್, ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ಶಿಲ್ಪ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಹಾಯಕ ನಿರ್ದೇಶಕಿ ಎಸ್.ಹೆಚ್ ನಿರ್ಮಲಾ ಅವರು ಸೇರಿದಂತೆ ಜಿಲ್ಲಾ ಮಟ್ಟದ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

ಆಂದೋಲನ ಡೆಸ್ಕ್

Recent Posts

ಗಗನಯಾತ್ರಿ ಸುನಿತಾ ವಿಲಿಯಮ್ಸ್‌ ನಿವೃತ್ತಿ ಘೋಷಣೆ

ಕೇಪ್‌ ಕೆನವೆರೆಲ್:‌ ಅಂತರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿ 9 ತಿಂಗಳ ಕಾಲ ಸುದೀರ್ಘ ಕಾಲದ ಅನುಭವ ಹೊಂದಿರುವ ಸುನಿತಾ ವಿಲಿಯಮ್ಸ್‌ ನಿವೃತ್ತರಾಗಿದ್ದಾರೆ.…

14 mins ago

ಹನೂರು| ಪಾದಯಾತ್ರೆ ಮಾಡುವ ವೇಳೆ ಚಿರತೆ ದಾಳಿ: ವ್ಯಕ್ತಿ ಸಾವು

ಮಹಾದೇಶ್‌ ಎಂ ಗೌಡ ಹನೂರು: ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟಕ್ಕೆ ಪಾದಯಾತ್ರೆಯ ಮೂಲಕ ತೆರಳುತ್ತಿದ್ದ ಪಾದಯಾತ್ರಿಕನ ಮೇಲೆ ದಾಳಿ…

25 mins ago

ತೆಂಗಿನ ಮರದಿಂದ ಬಿದ್ದು ನರಳಾಡಿದ ಯುವಕನನ್ನು ಕೆರೆಯಲ್ಲಿ ಮುಳುಗಿಸಿ ಕೊಂದ ಸ್ನೇಹಿತರು

ರಾಮನಗರ: ತೆಂಗಿನ ಮರ ಹತ್ತಿ ಕೆಳಗೆ ಬಿದ್ದ ಸ್ನೇಹಿತನನ್ನು ಕೆರೆಯಲ್ಲಿ ಮುಳುಗಿಸಿ ಹತ್ಯೆ ಮಾಡಿದ ಘಟನೆ ಬೆಂಗಳೂರು ದಕ್ಷಿಣ ಜಿಲ್ಲೆ…

48 mins ago

ಭಣಗುಡುತ್ತಿದ್ದ ರಾಮನಗುಡ್ಡ ಕೆರೆಗೆ ಜೀವಕಳೆ: 30 ವರ್ಷಗಳ ಬಳಿಕ ರೈತರ ಮೊಗದಲ್ಲಿ ಹರ್ಷ

ಮಹಾದೇಶ್‌ ಎಂ ಗೌಡ ಹನೂರು: ಮಳೆಯನ್ನೇ ಆಶ್ರಯಿಸಿ ಬೆಳೆಯಬೇಕಿದ್ದ ಸ್ಥಿತಿ, ಕುಸಿಯುತ್ತಿರುವ ಅಂತರ್ಜಲದಿಂದ ಪಡಿಪಟಾಲು ಪಡುತ್ತಿದ್ದ ರೈತರ ಕಷ್ಟ ಕೊನೆಗೂ…

1 hour ago

ಪಂಜುಗಂಗೊಳ್ಳಿ ಅವರ ವಾರದ ಅಂಕಣ: ಎವ್ಗನ್ ಬಾವ್ಚಾರ್ ಎಂಬ ಕಣ್ಣಿಲ್ಲದ ಫೋಟೋಗ್ರಾಫರ್!

ಪಂಜು ಗಂಗೊಳ್ಳಿ  ನೂರಾರು ಜನ ವಿಶೇಷಚೇತನರಿಗೆ ಫೋಟೋಗ್ರಫಿ ತರಬೇತಿ ಎವ್ಗನ್ ಬಾವ್ಚಾರ್ ೧೯೪೬ರಲ್ಲಿ ಸ್ಲೊವೇನಿಯಾ (ಆಗ ಯುಗೊಸ್ಲೇವಿಯಾ)ದಲ್ಲಿ ಹುಟ್ಟಿದರು. ಏಳು…

5 hours ago

ಓದುಗರ ಪತ್ರ: ಕಳ್ಳಸಾಗಣೆ ಕಪಿಮುಷ್ಟಿಯಲ್ಲಿ ದೇಶದ ಆರ್ಥಿಕತೆ

ಇತ್ತೀಚಿನ ಅಂಕಿಅಂಶಗಳ ಪ್ರಕಾರ, ಭಾರತದಲ್ಲಿ ಅಕ್ರಮ ಸಿಗರೇಟ್ ಮಾರುಕಟ್ಟೆಯು ವಾರ್ಷಿಕವಾಗಿ ಸುಮಾರು ರೂ.೧೫,೦೦೦ ಕೋಟಿಗೂ ಅಧಿಕ ನಷ್ಟವನ್ನು ಸರ್ಕಾರಕ್ಕೆ ಉಂಟುಮಾಡುತ್ತಿದೆ.…

5 hours ago