ಮೈಸೂರು

ಯಶಸ್ವಿ ದಸರಾ: ಸುದ್ದಿ ಮಾಧ್ಯಮಗಳಿಗೆ ಜಿಲ್ಲಾಧಿಕಾರಿ ಅಭಿನಂದನೆ

ಮೈಸೂರು: ನಾಡಹಬ್ಬ ದಸರಾ ಆರಂಭವಾದ ದಿನದಿಂದ ಹಿಡಿದು ಸಂಪೂರ್ಣವಾಗಿ ಮುಗಿಯುವ ತನಕ ಪ್ರತಿನಿತ್ಯ ಕಾರ್ಯಕ್ರಮಗಳ ವಿವರ ಹಾಗೂ ಹೆಚ್ಚಿನ ಮಾಹಿತಿ  ಪ್ರಸಾರ ಮಾಡುವ ಮೂಲಕ ದಸರಾ ಯಶಸ್ವಿಗೆ ಸಹಕರಿಸಿದ ಸುದ್ದಿ ಮಾಧ್ಯಗಳಿಗೆ ಜಿಲ್ಲಾಧಿಕಾರಿ ಜಿ.ಲಕ್ಷ್ಮಿಕಾಂತ ರೆಡ್ಡಿ ಅವರು ಅಭಿನಂದನೆ ಸಲ್ಲಿಸಿದ್ದಾರೆ.

ಮೈಸೂರು ದಸರಾದಲ್ಲಿ ಈ ಬಾರಿ ಅದ್ದೂರಿಯಾಗಿ ನೆರವೇರಿದ ಆಹಾರಮೇಳ, ಫಲಪುಷ್ಪ ಪ್ರದರ್ಶನ, ಯುವ ಸಂಭ್ರಮ, ಯುವ ದಸರಾ, ಚಲನಚಿತ್ರೋತ್ಸವ, ಕುಸ್ತಿ, ಯೋಗ, ಕವಿಗೋಷ್ಠಿ, ಅರಮನೆಯಲ್ಲಿನ ಸಾಂಸ್ಕೃತಿಕ ಕಾರ್ಯಕ್ರಮ ಹಾಗೂ ರಾಜ್ಯದಲ್ಲೇ ಮತ್ತು ಮೈಸೂರಿನ ದಸರಾದಲ್ಲಿ ಮೊದಲ ಬಾರಿಗೆ ನಡೆದ ಡ್ರೋಣ್ ಪ್ರದರ್ಶನ ಸೇರಿದಂತೆ ಎಲ್ಲ ಕಾರ್ಯಕ್ರಮಗಳಿಗೂ ಹೆಚ್ಚಿನ ಪ್ರಚಾರ ಮಾಡುವ ಮೂಲಕ ಎಲ್ಲ ಕಾರ್ಯಕ್ರಮಗಳಿಗೂ ಹೆಚ್ಚಿನ ಮೆರುಗು ನೀಡಿ ಕಾರ್ಯಕ್ರಮದ ಅದ್ಧೂರಿತನ ಹೆಚ್ಚಿಸಲು ಸಹಕರಿಸಿದ್ದಿರಿ. ಜೊತೆಗೆ  ಜಿಲ್ಲಾಡಳಿತವು ದಸರಾ ಸಂದರ್ಭದಲ್ಲಿ ಆಯೋಜಿಸಿದ ಪ್ರತಿಯೊಂದು ಸಭೆ, ಸಮಾರಂಭಗಳಲ್ಲಿಯೂ ಭಾಗವಹಿಸಿ ತಾಳ್ಮೆಯಿಂದ ಜಿಲ್ಲಾಡಳಿತ ಹಾಗೂ ಎಲ್ಲಾ ಇಲಾಖೆಗಳ ಅಧಿಕಾರಿಗಳು ಮತ್ತು ದಸರಾ ಉಪಸಮಿತಿಗಳ ಜೊತೆ ಸಹಕರಿಸಿ ಕಾರ್ಯಕ್ರಮಗಳ ಯಶಸ್ವಿಗೆ ಎಲ್ಲಾ ಮಾಧ್ಯಮದವರ ಅಗತ್ಯ ಸಹಕಾರ ನೀಡಿದ್ದೀರಿ.

ಈ ನಿಟ್ಟಿನಲ್ಲಿ ಯಶಸ್ವಿಗೆ ಸಹಕರಿಸಿದ ಎಲ್ಲಾ ಮುದ್ರಣ ಮಾಧ್ಯಮ, ವಿದ್ಯುನ್ಮಾನ ಮಾಧ್ಯಮ ಹಾಗೂ ಛಾಯಾಗ್ರಾಹಕ ಮಿತ್ರರಿಗೆ ಜಿಲ್ಲಾಡಳಿತದ ಪರವಾಗಿ ಹಾಗೂ ಎಲ್ಲಾ ದಸರಾ ಉಪ ಸಮಿತಿಯ ಪರವಾಗಿ ಅಭಿನಂದನೆಗಳು ಸಲ್ಲಿಸುತ್ತೇನೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಗೃಹಲಕ್ಷ್ಮಿಗೆ ಜೀವಿತ ಪ್ರಮಾಣಪತ್ರ ಕಡ್ಡಾಯ : ಸಿಎಂ ಸೂಚನೆ

ಬೆಂಗಳೂರು : ಗೃಹಲಕ್ಷ್ಮೀ ಯೋಜನೆಯ ಫಲಾನುಭವಿಗಳು ಜೀವಿತ ಪ್ರಮಾಣಪತ್ರ ನೀಡುವುದನ್ನು ಕಡ್ಡಾಯಗೊಳಿಸುವ ಬಗ್ಗೆ ಪರಿಶೀಲಿಸಿ, ಕೂಡಲೇ ಕ್ರಮ ವಹಿಸುವಂತೆ ಸಿಎಂ…

18 mins ago

ವಿಜಯಪುರದ ಮಂಗಳೂರಿನಲ್ಲಿ ಖಾಸಗಿ ವಿಮಾನ ಪತನ: ಇಬ್ಬರಿಗೆ ಗಂಭೀರ ಗಾಯ

ವಿಜಯಪುರ: ಬಬಲೇಶ್ವರ ತಾಲ್ಲೂಕಿನ ಮಂಗಳೂರು ಗ್ರಾಮದಲ್ಲಿ ಜೆಟ್‌ ವಿಮಾನವೊಂದು ಪತನವಾಗಿ ಇಬ್ಬರಿಗೆ ಗಂಭೀರ ಗಾಯಗಳಾಗಿರುವ ಘಟನೆ ನಡೆದಿದೆ. ಕಲಬುರ್ಗಿಯಿಂದ ಬೆಳಗಾವಿಗೆ…

2 hours ago

ಕಳೆದ 4 ವರ್ಷದಲ್ಲಿ ಆನ್‌ಲೈನ್ ಬೆಟ್ಟಿಂಗ್ ದಂಧೆಗೆ 35 ಮಂದಿ ಬಲಿ

ಬೆಂಗಳೂರು: ರಾಜ್ಯದಲ್ಲಿ ಆನ್‌ಲೈನ್ ಬೆಟ್ಟಿಂಗ್ ಹಾವಳಿ ತೀವ್ರಗೊಂಡಿದೆ. ಕಳೆದ 4 ವರ್ಷದಲ್ಲಿ 35 ಮಂದಿ ಆನ್ ಲೈನ್ ಬೆಟ್ಟಿಂಗ್ ದಂಧೆಗೆ…

2 hours ago

ಮತ್ತೆರಡು ಸಮಾವೇಶ ಮಾಡಲು ಸಜ್ಜಾದ ಜೆಡಿಎಸ್‌: ಚುನಾವಣೆ ಗೆಲ್ಲಲು ರಣತಂತ್ರ

ಬೆಂಗಳೂರು: ಹಾಸನದಲ್ಲಿ ಇತ್ತೀಚೆಗೆ ನಡೆಸಿದ ಜೆಡಿಎಸ್ ಬೆಳ್ಳಿ ಮಹೋತ್ಸವದ ಮಾದರಿಯಲ್ಲಿ ರಾಜ್ಯದಲ್ಲಿ ಮತ್ತೆರಡು ಸಮಾವೇಶಗಳನ್ನು ಆಯೋಜಿಸಲು ಸಿದ್ಧತೆ ನಡೆಸಲಾಗಿದೆ. ಕಲ್ಯಾಣ…

2 hours ago

ನೆರೆಯ ರಾಜ್ಯಗಳಲ್ಲಿ ಹಕ್ಕಿಜ್ವರದ ಭೀತಿ: ರಾಜ್ಯದ ಗಡಿಭಾಗಗಳಲ್ಲಿ ಮುನ್ನೆಚ್ಚರಿಕೆ

ಬೆಂಗಳೂರು: ಬೇಸಿಗೆಗೂ ಮುನ್ನವೇ ಬಿಸಿಲಿನ ಬೇಗೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ನೆರೆಯ ರಾಜ್ಯಗಳಲ್ಲಿ ಹಕ್ಕಿಜ್ವರದ ಭೀತಿ ಎದುರಾಗಿದ್ದು, ರಾಜ್ಯದ ಗಡಿಭಾಗಗಳಲ್ಲಿ ಮುನ್ನೆಚ್ಚರಿಕೆ…

2 hours ago

ಕನಕಪುರದ ಕಾಡಂಚಿನ ಗ್ರಾಮದಲ್ಲಿ 40 ಕಾಡಾನೆಗಳ ಹಿಂಡು ಪ್ರತ್ಯಕ್ಷ

ರಾಮನಗರ: ಕನಕಪುರದಲ್ಲಿ ಕಾಡಾನೆ ಹಾವಳಿ ಮುಂದುವರಿದಿದ್ದು, ಕಾಡಂಚಿನ ಗ್ರಾಮದ ಬಳಿ ಸುಮಾರು 40 ಕಾಡಾನೆಗಳು ಕನಕಪುರ ತಾಲ್ಲೂಕಿನ ಕಾಡುಶಿವನಹಳ್ಳಿ ಬಳಿ…

4 hours ago