ಮೈಸೂರು: ನಾಡಹಬ್ಬ ದಸರಾ ಆರಂಭವಾದ ದಿನದಿಂದ ಹಿಡಿದು ಸಂಪೂರ್ಣವಾಗಿ ಮುಗಿಯುವ ತನಕ ಪ್ರತಿನಿತ್ಯ ಕಾರ್ಯಕ್ರಮಗಳ ವಿವರ ಹಾಗೂ ಹೆಚ್ಚಿನ ಮಾಹಿತಿ ಪ್ರಸಾರ ಮಾಡುವ ಮೂಲಕ ದಸರಾ ಯಶಸ್ವಿಗೆ ಸಹಕರಿಸಿದ ಸುದ್ದಿ ಮಾಧ್ಯಗಳಿಗೆ ಜಿಲ್ಲಾಧಿಕಾರಿ ಜಿ.ಲಕ್ಷ್ಮಿಕಾಂತ ರೆಡ್ಡಿ ಅವರು ಅಭಿನಂದನೆ ಸಲ್ಲಿಸಿದ್ದಾರೆ.
ಮೈಸೂರು ದಸರಾದಲ್ಲಿ ಈ ಬಾರಿ ಅದ್ದೂರಿಯಾಗಿ ನೆರವೇರಿದ ಆಹಾರಮೇಳ, ಫಲಪುಷ್ಪ ಪ್ರದರ್ಶನ, ಯುವ ಸಂಭ್ರಮ, ಯುವ ದಸರಾ, ಚಲನಚಿತ್ರೋತ್ಸವ, ಕುಸ್ತಿ, ಯೋಗ, ಕವಿಗೋಷ್ಠಿ, ಅರಮನೆಯಲ್ಲಿನ ಸಾಂಸ್ಕೃತಿಕ ಕಾರ್ಯಕ್ರಮ ಹಾಗೂ ರಾಜ್ಯದಲ್ಲೇ ಮತ್ತು ಮೈಸೂರಿನ ದಸರಾದಲ್ಲಿ ಮೊದಲ ಬಾರಿಗೆ ನಡೆದ ಡ್ರೋಣ್ ಪ್ರದರ್ಶನ ಸೇರಿದಂತೆ ಎಲ್ಲ ಕಾರ್ಯಕ್ರಮಗಳಿಗೂ ಹೆಚ್ಚಿನ ಪ್ರಚಾರ ಮಾಡುವ ಮೂಲಕ ಎಲ್ಲ ಕಾರ್ಯಕ್ರಮಗಳಿಗೂ ಹೆಚ್ಚಿನ ಮೆರುಗು ನೀಡಿ ಕಾರ್ಯಕ್ರಮದ ಅದ್ಧೂರಿತನ ಹೆಚ್ಚಿಸಲು ಸಹಕರಿಸಿದ್ದಿರಿ. ಜೊತೆಗೆ ಜಿಲ್ಲಾಡಳಿತವು ದಸರಾ ಸಂದರ್ಭದಲ್ಲಿ ಆಯೋಜಿಸಿದ ಪ್ರತಿಯೊಂದು ಸಭೆ, ಸಮಾರಂಭಗಳಲ್ಲಿಯೂ ಭಾಗವಹಿಸಿ ತಾಳ್ಮೆಯಿಂದ ಜಿಲ್ಲಾಡಳಿತ ಹಾಗೂ ಎಲ್ಲಾ ಇಲಾಖೆಗಳ ಅಧಿಕಾರಿಗಳು ಮತ್ತು ದಸರಾ ಉಪಸಮಿತಿಗಳ ಜೊತೆ ಸಹಕರಿಸಿ ಕಾರ್ಯಕ್ರಮಗಳ ಯಶಸ್ವಿಗೆ ಎಲ್ಲಾ ಮಾಧ್ಯಮದವರ ಅಗತ್ಯ ಸಹಕಾರ ನೀಡಿದ್ದೀರಿ.
ಈ ನಿಟ್ಟಿನಲ್ಲಿ ಯಶಸ್ವಿಗೆ ಸಹಕರಿಸಿದ ಎಲ್ಲಾ ಮುದ್ರಣ ಮಾಧ್ಯಮ, ವಿದ್ಯುನ್ಮಾನ ಮಾಧ್ಯಮ ಹಾಗೂ ಛಾಯಾಗ್ರಾಹಕ ಮಿತ್ರರಿಗೆ ಜಿಲ್ಲಾಡಳಿತದ ಪರವಾಗಿ ಹಾಗೂ ಎಲ್ಲಾ ದಸರಾ ಉಪ ಸಮಿತಿಯ ಪರವಾಗಿ ಅಭಿನಂದನೆಗಳು ಸಲ್ಲಿಸುತ್ತೇನೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ರಾಜ್ಯದ ಬಹಳಷ್ಟು ಜನರು ಆನ್ಲೈನ್ -ಆಫ್ಲೈನ್ ಮೂಲಕ ನೋಂದಣಿ ಮಾಡಿಸುವ ಮೂಲಕ ಎಸ್ಐಆರ್ ಪ್ರಕ್ರಿಯೆಯಲ್ಲಿ ಪಾಲ್ಗೊಂಡಿದ್ದಾರೆ. ಆದರೆ ಅನೇಕರಲ್ಲಿ ಗೊಂದಲ…
ಕನ್ನಡ ಒಗ್ಗಟ್ಟು ಕಾವೇರಿಯ ಹೆಸರಲ್ಲಿ ಕಂಡಿದೆ ಕನ್ನಡ ನಾಯಕರ ಒಗ್ಗಟ್ಟು ಆಳುವವರ ಜೊತೆ ಕೈ ಜೋಡಿಸಿದರೆ ಬಿಡಿಸಲಿವೆ ಹಲವು ಬಿಕ್ಕಟ್ಟು…
ರಾಜಕಾರಣದ ಸರಕು! ‘ನೀರಿಗಾಗಿ ತಮಿಳುನಾಡು ಸುಪ್ರೀಂಗೆ ಮೊರೆ!’ ನೀರಿzಗ ಹರಿಸಿದೆ ಕರ್ನಾಟಕ ಯಥೇಚ್ಛ ನೀರನು ಸಮುದ್ರ ತುಳುಕುವಷ್ಟು ಇಲ್ಲದಾಗ ಹರಿಸುವುದೆಂತು…
ರಾಜ್ಯದಲ್ಲಿ ದಿನೇ ದಿನೇ ಏರುತ್ತಿರುವ ಅಕ್ಕಿ ಬೆಲೆ ಸಾಮಾನ್ಯ ಜನರ ನಿದ್ದೆಗೆಡಿಸಿದೆ. ತುಂಗಭದ್ರಾ ಜಲಾಶಯದ ಗೇಟ್ ರಿಪೇರಿಯಿಂದಾಗಿ ಸುಮಾರು ೭…
ಸಿ.ಹರಕುಮಾರ್, ಲೇಖಕ ಜನರ ನೆಮ್ಮದಿ ಕಸಿದುಕೊಂಡವರು, ನೆಮ್ಮದಿಯಿಂದಿರಲು ಸಾಧ್ಯವೆ? ಸತ್ಯದ ಪ್ರತಿಪಾದನೆ ಆ ಕ್ಷಣಕ್ಕೆ ಇಷ್ಟವಾಗದಿರಬಹುದು, ಶತ್ರುಗಳನ್ನು ಹುಟ್ಟುಹಾಕಬಹುದು, ಜೀರ್ಣಿಸಿಕೊಳ್ಳಲು…
ಪಂಜುಗಂಗೊಳ್ಳಿ ಅವರ ವಾರದ ಅಂಕಣ ಬಾಲಕಾರ್ಮಿಕರಿಗಾಗಿ ಏಕಲವ್ಯ ಟ್ರಸ್ಟ್ ಸ್ಥಾಪನೆ ಛತ್ತೀಸ್ಘಡದ ಭಿಲಾಯ್ಯ ವಿವೇಕ್ ಶಂಗಾರಿಯ ತಾಯಿ ತೀರಿಕೊಂಡಾಗ ಅವನಿಗೆ…