ಮೈಸೂರು

ಯಶಸ್ವಿ ದಸರಾ: ಸುದ್ದಿ ಮಾಧ್ಯಮಗಳಿಗೆ ಜಿಲ್ಲಾಧಿಕಾರಿ ಅಭಿನಂದನೆ

ಮೈಸೂರು: ನಾಡಹಬ್ಬ ದಸರಾ ಆರಂಭವಾದ ದಿನದಿಂದ ಹಿಡಿದು ಸಂಪೂರ್ಣವಾಗಿ ಮುಗಿಯುವ ತನಕ ಪ್ರತಿನಿತ್ಯ ಕಾರ್ಯಕ್ರಮಗಳ ವಿವರ ಹಾಗೂ ಹೆಚ್ಚಿನ ಮಾಹಿತಿ  ಪ್ರಸಾರ ಮಾಡುವ ಮೂಲಕ ದಸರಾ ಯಶಸ್ವಿಗೆ ಸಹಕರಿಸಿದ ಸುದ್ದಿ ಮಾಧ್ಯಗಳಿಗೆ ಜಿಲ್ಲಾಧಿಕಾರಿ ಜಿ.ಲಕ್ಷ್ಮಿಕಾಂತ ರೆಡ್ಡಿ ಅವರು ಅಭಿನಂದನೆ ಸಲ್ಲಿಸಿದ್ದಾರೆ.

ಮೈಸೂರು ದಸರಾದಲ್ಲಿ ಈ ಬಾರಿ ಅದ್ದೂರಿಯಾಗಿ ನೆರವೇರಿದ ಆಹಾರಮೇಳ, ಫಲಪುಷ್ಪ ಪ್ರದರ್ಶನ, ಯುವ ಸಂಭ್ರಮ, ಯುವ ದಸರಾ, ಚಲನಚಿತ್ರೋತ್ಸವ, ಕುಸ್ತಿ, ಯೋಗ, ಕವಿಗೋಷ್ಠಿ, ಅರಮನೆಯಲ್ಲಿನ ಸಾಂಸ್ಕೃತಿಕ ಕಾರ್ಯಕ್ರಮ ಹಾಗೂ ರಾಜ್ಯದಲ್ಲೇ ಮತ್ತು ಮೈಸೂರಿನ ದಸರಾದಲ್ಲಿ ಮೊದಲ ಬಾರಿಗೆ ನಡೆದ ಡ್ರೋಣ್ ಪ್ರದರ್ಶನ ಸೇರಿದಂತೆ ಎಲ್ಲ ಕಾರ್ಯಕ್ರಮಗಳಿಗೂ ಹೆಚ್ಚಿನ ಪ್ರಚಾರ ಮಾಡುವ ಮೂಲಕ ಎಲ್ಲ ಕಾರ್ಯಕ್ರಮಗಳಿಗೂ ಹೆಚ್ಚಿನ ಮೆರುಗು ನೀಡಿ ಕಾರ್ಯಕ್ರಮದ ಅದ್ಧೂರಿತನ ಹೆಚ್ಚಿಸಲು ಸಹಕರಿಸಿದ್ದಿರಿ. ಜೊತೆಗೆ  ಜಿಲ್ಲಾಡಳಿತವು ದಸರಾ ಸಂದರ್ಭದಲ್ಲಿ ಆಯೋಜಿಸಿದ ಪ್ರತಿಯೊಂದು ಸಭೆ, ಸಮಾರಂಭಗಳಲ್ಲಿಯೂ ಭಾಗವಹಿಸಿ ತಾಳ್ಮೆಯಿಂದ ಜಿಲ್ಲಾಡಳಿತ ಹಾಗೂ ಎಲ್ಲಾ ಇಲಾಖೆಗಳ ಅಧಿಕಾರಿಗಳು ಮತ್ತು ದಸರಾ ಉಪಸಮಿತಿಗಳ ಜೊತೆ ಸಹಕರಿಸಿ ಕಾರ್ಯಕ್ರಮಗಳ ಯಶಸ್ವಿಗೆ ಎಲ್ಲಾ ಮಾಧ್ಯಮದವರ ಅಗತ್ಯ ಸಹಕಾರ ನೀಡಿದ್ದೀರಿ.

ಈ ನಿಟ್ಟಿನಲ್ಲಿ ಯಶಸ್ವಿಗೆ ಸಹಕರಿಸಿದ ಎಲ್ಲಾ ಮುದ್ರಣ ಮಾಧ್ಯಮ, ವಿದ್ಯುನ್ಮಾನ ಮಾಧ್ಯಮ ಹಾಗೂ ಛಾಯಾಗ್ರಾಹಕ ಮಿತ್ರರಿಗೆ ಜಿಲ್ಲಾಡಳಿತದ ಪರವಾಗಿ ಹಾಗೂ ಎಲ್ಲಾ ದಸರಾ ಉಪ ಸಮಿತಿಯ ಪರವಾಗಿ ಅಭಿನಂದನೆಗಳು ಸಲ್ಲಿಸುತ್ತೇನೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಮೈಸೂರು ದಸರಾ | ಯುವ ಸಂಭ್ರಮ ಉದ್ಘಾಟನೆಗೆ ವಿಜಯಪ್ರಕಾಶ್‌

ಮೈಸೂರು : ದಸರಾ ಮಹೋತ್ಸವಕ್ಕೆ ಆರಂಭದ ಮುನ್ನುಡಿಯಂತಿರುವ ಯುವ ಸಂಭ್ರಮಕ್ಕೆ ಈ ಬಾರಿ ಮೈಸೂರಿನ ಮನೆ ಮಗ ಖ್ಯಾತ ಗಾಯಕ…

9 hours ago

ಕೊಡಗು: ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ

ಕೊಡಗು: ಜಿಲ್ಲೆಯ ನೆಲ್ಯಹುದಿಕೇರಿ ಸಮೀಪದ ಅತ್ತಿಮಂಗಲದಲ್ಲಿ ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ ನಡೆಸಿದೆ. ಸ್ಕೂಟರ್‌ನಲ್ಲಿ ತೆರಳುತ್ತಿದ್ದ 60…

15 hours ago

ಓದುಗರ ಪತ್ರ: ಗ್ರಹಣ..!

ಗ್ರಹಣ..! ಸೂರ್ಯ-ಚಂದ್ರರ ನಡುವೆ ಭೂಮಿ ಬಂದರೆ ಚಂದ್ರ ಗ್ರಹಣ ! ಭಾರತ-ರಷ್ಯಾ ನಡುವೆ ಅಮೆರಿಕ ಬಂದರೆ ‘ಸುಂಕ ’ ಗ್ರಹಣ…

18 hours ago

ಓದುಗರ ಪತ್ರ: ಪೆಟ್ರೋಲ್ ಬಂಕ್‌ಗಳಲ್ಲಿ ಮೋಸ: ಗರಿಷ್ಟ ಕ್ರಮ ಕೈಗೊಳ್ಳಲಿ

ರಾಜ್ಯದ ೮೦೫ ಪೆಟ್ರೋಲ್ ಬಂಕ್‌ಗಳ ತಪಾಸಣೆಯಲ್ಲಿ ಬರೋಬ್ಬರಿ ೭೬೮ ಬಂಕ್‌ಗಳಲ್ಲಿ (ಶೇ. ೮೫ ರಷ್ಟು) ಅಳತೆಯಲ್ಲಿ ಮೋಸ ಕಂಡುಬಂದಿರುವುದು ಸಾರ್ವಜನಿಕರಿಗೆ…

19 hours ago

ಓದುಗರ ಪತ್ರ: ಉದ್ಯೋಗ ಸೃಷ್ಟಿ : ಫ್ಲಿಪ್‌ಕಾರ್ಟ್ ನಡೆ ಸ್ವಾಗತಾರ್ಹ

ಒಂದು ಕಡೆ ಒರಾಕಲನಂತಹ ಕಂಪೆನಿಗಳು ತಮ್ಮ ನೌಕರರನ್ನು ಯಾವುದೇ ಮುನ್ಸೂಚನೆ ನೀಡದೇ ಕೇವಲ ಒಂದೇ ಒಂದು ಇ ಮೇಲ್ ಸಂದೇಶದ…

19 hours ago

ಸುಗಮ ಸಂಗೀತದ ಅದ್ಬುತ ಗಾಯಕ ಮಡಿಕೇರಿ ನಾಗೇಂದ್ರ

ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…

22 hours ago