ಮೈಸೂರು

ಸರ್ಕಾರದ ಯೋಜನೆಯನ್ನು ಯಶಸ್ವಿಯಾಗಿ ಜಾರಿಗೊಳಿಸಿ: ಡಾ.ಹೆಚ್.ಸಿ.ಮಹದೇವಪ್ಪ

ಮೈಸೂರು: ರಾಜ್ಯದ ಅಭಿವೃದ್ಧಿಯ ನೊಗ ಹೊತ್ತಿರುವ ನಾವೆಲ್ಲರೂ ಜವಬ್ದಾರಿಯುತ ಸ್ಥಾನದಲ್ಲಿದ್ದೇವೆ. ಸರ್ಕಾರದ ಯೋಜನೆಗಳನ್ನು ಯಶಸ್ವಿಯಾಗಿ ಜಾರಿಗೊಳಿಸಿ ದೇಶದಲ್ಲೇ ಕರ್ನಾಟಕ ರಾಜ್ಯ ಮಾದರಿಯಾಗುವಂತೆ ರಾಜ್ಯದ ಅಭಿವೃದ್ಧಿಗೆ ಹೆಚ್ಚಿನ ಶ್ರಮವಹಿಸಿ ಕೆಲಸ ಮಾಡಬೇಕಿದೆ ಎಂದು ಸಮಾಜ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿರಾದ ಡಾ.ಹೆಚ್.ಸಿ.ಮಹದೇವಪ್ಪ ಹೇಳಿದರು.

ಇಂದು ನಗರದ ಧನ್ವಂತರಿ ರಸ್ತೆಯಲ್ಲಿರುವ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಜಿಲ್ಲಾ ಸಂಘದ ನವೀಕೃತ ಕಟ್ಟಡವನ್ನು ಸೋಮವಾರ ಉದ್ಘಾಟಿಸಿ ಮಾತನಾಡಿದ ಅವರು, ನಮ್ಮ ಜವಬ್ದಾರಿ ಮತ್ತು ಹೊಣೆಗಾರಿಕೆಯನ್ನು ಜನರ ಹಕ್ಕು ಮತ್ತು ರಕ್ಷಣೆಗೆ ಸಮರ್ಪಿಸಬೇಕಿದೆ ಎಂದು ತಿಳಿಸಿದರು.

ಸಂವಿಧಾನದ ಅಡಿಯಲ್ಲಿ ಕೆಲಸ ಮಾಡುತ್ತಿರುವ ನಾವೆಲ್ಲರೂ ಸಂವಿಧಾನದ ಆಶಯಕ್ಕೆ ಅನುಗುಣವಾಗಿ ನಡೆದುಕೊಳ್ಳಬೇಕು. ಸಾಮಾನ್ಯ ಜನರ ಏಳಿಗೆಗೆ ದುಡಿಯಬೇಕು. ಕಾನೂನಿನ್ವಯ ಕೆಲಸ ಮಾಡುವ ಮೂಲಕ ಯಾವಾಗಲೂ ಜನಪರವಾಗಿರಬೇಕು ಎಂದು ಕರೆ ನೀಡಿದರು.

ಬಸವಣ್ಣನ ಕಾಲದಿಂದಲೂ ಪ್ರಜಾಪ್ರಭುತ್ವ ಜಾರಿಯಲ್ಲಿದೆ. ಜನರಿಂದ, ಜನರಿಗಾಗಿ, ಜನರಿಗೋಸ್ಕರ ಆಡಳಿತ ನಡೆಸುವುದು ಪ್ರಜಾಪ್ರಭುತ್ವದ ಆಶಯ. ಜನರ ಭವಿಷ್ಯವನ್ನು ಉಜ್ವಗೊಳಿಸುವಲ್ಲಿ ಪ್ರಜಾಪ್ರಭುತ್ವದ ನಾಲ್ಕು ಆಧಾರ ಸ್ತಂಭಗಳ ಕರ್ತವ್ಯ ಮಹತ್ವದ್ದಾಗಿದೆ. ಅದರಲ್ಲಿ ಜನಪರವಾದ ಕಾಯ್ದೆಗಳನ್ನು ಅನುಷ್ಠಾನ ಮಾಡುವಲ್ಲಿ ಕಾರ್ಯಾಂಗದ ಕರ್ತವ್ಯವು ಹಿರಿದಾಗಿದೆ ಎಂದರು.

ಅಭಿವೃದ್ಧಿಯ ಕೇಂದ್ರ ಬಿಂದು ಸರ್ಕಾರಿ ನೌಕರರಾಗಿದ್ದಾರೆ. ಸರ್ಕಾರದ ಅಭಿವೃದ್ಧಿ ಯೋಜನೆಗಳು ಪರಿಣಾಮಕಾರಿಯಾಗಿ ಜಾರಿಯಾಗಲು ನೌಕಕರ ಶ್ರಮ ಬಹಳಷ್ಟಿದೆ. ನೌಕರರ ಸಮಸ್ಯೆಗಳನ್ನು ಸರ್ಕಾರವು ಗಂಭೀರವಾಗಿ ಪರಿಗಣಿಸಿ ಕಾಲಕಾಲಕ್ಕೆ ಸೂಕ್ತ ಪರಿಹಾರ ಮಾರ್ಗಗಳನ್ನು ಅನುಸರಿಸುತ್ತಾ ಬಂದಿದೆ ಎಂದು ಹೇಳಿದರು.

ಶಾಸಕ ಹರೀಶ್ ಗೌಡ ಮಾತನಾಡಿ, ನಮ್ಮ ಸರ್ಕಾರವು 7ನೇ ವೇತನ ಆಯೋಗ ಜಾರಿಗೆ ಮಾಡಿದೆ. ಸರ್ಕಾರಿ ನೌಕರರ ಹಿತ ಕಾಪಾಡುವಲ್ಲಿ ನಮ್ಮ ಸರ್ಕಾರಕ್ಕೆ ಬದ್ಧತೆ ಇದೆ‌. ಸಂಘಕ್ಕೆ ಅಗತ್ಯವಿರುವ ಎಲ್ಲಾ ರೀತಿಯ ಸಹಾಯ ಮತ್ತು ಸಹಕಾರ ನೀಡಲಾಗುವುದು ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಶಾಸಕ ಶ್ರೀವತ್ಸ, ವಿಧಾನ ಪರಿಷತ್ ಸದಸ್ಯ ಡಾ.ಡಿ.ತಿಮ್ಮಯ್ಯ, ಸಿ.ಎನ್.ಮಂಜೇಗೌಡ, ಅರಪ ಜಿಲ್ಲಾಧಿಕಾರಿ ಪಿ.ಶಿವರಾಜು, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರಿ, ಜಿಲ್ಲಾ ಸಂಘದ ಜಿಲ್ಲಾಧ್ಯಕ್ಷ ಗೋವಿಂದರಾಜು ಸೇರಿದಂತೆ ರಾಜ್ಯ ಹಾಗೂ ಜಿಲ್ಲಾ ಸಂಘದ ಉಪಾಧ್ಯಕ್ಷರು, ಪದಾಧಿಕಾರಿಗಳು ಉಪಸ್ಥಿತರಿದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ನೀಟ್‌ ಪ್ರತಿಭಟನಾಕಾರರ ವಿರುದ್ಧದ ಎಫ್‌ಐಆರ್‌ ರದ್ದು: ಸೆ.5ರ ಪ್ರತಿಭಟನೆ ಹಿಂಪಡೆದ ಸಿಜೆಪಿ

ನವದೆಹಲಿ: ಸೆಪ್ಟೆಂಬರ್‌ 5ರಂದು ದೆಹಲಿಯಲ್ಲಿ ಹಮ್ಮಿಕೊಳ್ಳಲಾಗಿದ್ದ ಪ್ರತಿಭಟನಾ ಮೆರವಣಿಗೆಯನ್ನು ಹಿಂಪಡೆಯಲಾಗಿದೆ ಎಂದು ಕಾಕ್ರೋಚ್ ಜನತಾ ಪಾರ್ಟಿ (CJP) ಸುಪ್ರೀಂ ಕೋರ್ಟ್‌ಗೆ…

5 hours ago

ನೀಟ್‌ ಪ್ರತಿಭಟನಾಕಾರರ ವಿರುದ್ಧದ ಎಫ್‌ಐಆರ್‌ ರದ್ದು

ನವದೆಹಲಿ: ನೀಟ್‌ ಪ್ರಶ್ನೆಪತ್ರಿಕೆ ಸೋರಿಕೆ ಖಂಡಿಸಿ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಫ್‌ಐಆರ್‌ ಅನ್ನು ಸುಪ್ರೀಂಕೋರ್ಟ್‌ ರದ್ದುಪಡಿಸಿದೆ. ಜುಲೈನಲ್ಲಿ…

6 hours ago

ನೇಪಾಳ ಪ್ರವಾಹ | ಮೃತರ ಸಂಖ್ಯೆ 939ಕ್ಕೆ ಏರಿಕೆ, ಇನ್ನೂ ಸುಮಾರು 4,000 ಜನ ಕಣ್ಮರೆ

ಕಠ್ಮಂಡು: ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ ಮುಂದುವರಿದಿದ್ದು, ಮೃತರ ಸಂಖ್ಯೆ 939ಕ್ಕೆ ಏರಿಕೆಯಾಗಿದೆ. ಇನ್ನೂ ಸುಮಾರು 4 ಸಾವಿರ ಜನರು…

7 hours ago

ಮಡಿಕೇರಿ: ಕೆರೆಗೆ ಹಾರಿ ತಾಯಿ ಮಗಳು ಆತ್ಮಹತ್ಯೆ

ಮಡಿಕೇರಿ: ತಲಕಾವೇರಿ ಸಮೀಪದ ತಣ್ಣಿಮಾನಿ ಗ್ರಾಮದಲ್ಲಿ ತಾಯಿ ಮತ್ತು ಮಗಳು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ನಡೆದಿದೆ.…

7 hours ago

ಮಡಿಕೇರಿ: ಭಾರೀ ಮಳೆಗೆ ಬೆಟ್ಟದಲ್ಲಿ ಜಾರಿನಿಂತ ಬೃಹತ್‌ ಕಲ್ಲುಬಂಡೆ!

ಮಡಿಕೇರಿ: ಕೊಡಗಿನಲ್ಲಿ ಭಾರೀ ಮಳೆಗೆ ಬೆಟ್ಟದಲ್ಲಿ ಜಾರಿನಿಂತ ಬೃಹತ್‌ ಕಲ್ಲುಬಂಡೆ ಆತಂಕ ಮೂಡಿಸಿದೆ. ಮಡಿಕೇರಿ ತಾಲೂಕಿನ ಕುಂದಚೇರಿ ಗ್ರಾಮದ ಪೊಲಮಾನಿ…

7 hours ago

ಓದುಗರ ಪತ್ರ: ನೀರು ಸೋರಿಕೆ ತಡೆಗಟ್ಟಿ

ಮೈಸೂರಿನ ಚಾಮರಾಜ ಮೊಹದ ಸೋನಾರ್ ಬೀದಿಯಲ್ಲಿ ಸಾರ್ವಜನಿಕ ನಲ್ಲಿಗೆ ಸಂಪರ್ಕ ಕಲ್ಪಿಸುವ ಪೈಪ್ ಪಡೆದುಹೋಗಿದ್ದು, ಕುಡಿಯುವ ನೀರು ಚರಂಡಿ ಪಾಲಾಗುತ್ತಿದೆ.…

15 hours ago