ನಂಜನಗೂಡು : ಪ್ರಿಯಕರನನ್ನು ಕರೆಸದಿದ್ದರೆ ಕಟ್ಟಡದಿಂದ ಹಾರಿ ಆತಮಹತ್ಯೆ ಮಾಡಿಕೊಳ್ಳುವುದಾಗಿ ಯುವತಿ ಒಬ್ಬಳು ಕಟ್ಟಡ ಏರಿ ನಿಂತ ಘಟನೆ ನಗರದ ಲಾಡ್ಜ್ ಒಂದರಲ್ಲಿ ನಡೆದಿದೆ.
ಇಂದು ಬೆಳಗ್ಗೆ ಪಟ್ಣಣದ ರಾಷ್ಟ್ರಪತಿ ರಸ್ತೆಯಲ್ಲಿರುವ ಹನಿಡ್ಯೂ ಲಾಡ್ಜ್ನಲ್ಲಿಯುವತಿ ಒಬ್ಬಳ ಆತ್ಮಹತ್ಯೆ ಹೈಡ್ರಾಮ ನಡೆದಿದೆ.
ಯುವತಿ ಬಿಹಾರಿ ಮೂಲದವಳಾಗಿದ್ದು, ಪಟ್ಟಣದ ಹೊರವಲಯದಲ್ಲಿರುವ ಏಶಿಯನ್ ಪೇಂಟ್ಸ್ನಲ್ಲಿ ಕಾರ್ಮಿಕನಾಗಿದ್ದ ಬೀಹಾರಿ ಮೂಲದ ಯುವಕನ್ನು ಪ್ರೀತಿಸುತ್ತಿದ್ದಳು ಎಂದು ತಿಳಿದು ಬಂದಿದೆ.
ಆತನನ್ನು ಭೇಟಿ ಮಾಡಲು ಬಿಹಾರದಿಂದ ಬಂದಿದ್ದ ಯುವತಿಗೆ, ತನ್ನ ಪ್ರಿಯತಮ ಹನಿಡ್ಯೂ ಲಾಡ್ಜ್ನಲ್ಲಿ ಇರುವುದು ತಿಳಿದುಬಂದಿದೆ.
ಅಲ್ಲಿ ಆತ ಇಲ್ಲದಿರುವುದನ್ನು ತಿಳಿದು ಆಕೆ ಬೇಸರದಿಂದ ಲಾಡ್ಜ್ ಮೇಲ್ಮಹಡಿಗೆ ತೆರಳಿ, ಯುವಕನನ್ನು ಕರೆಸದಿದ್ದರೆ ಕೆಳಗೆ ಹಾರಿ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಬೆದರಿಕೆ ಹಾಕಿದ್ದಾಳೆ. ಕೂಡಲೆ ಲಾಡ್ಜ್ನ ಮಾಲೀಕರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಸ್ಥಳಕ್ಕೆ ಆಗಮಿಸಿದ ಪೊಲೀಸ್ ಸಿಬ್ಬಂದಿ ಯುವತಿಯನ್ನು ರಕ್ಷಿಸಿ ವಶಕ್ಕೆ ಪಡೆದಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ನಂಜನಗೂಡು ಪಟ್ಟಣ ಪೊಲೀಸರು ತನಿಖೆ ನಡೆಸಿದ್ದಾರೆ.
ತಿ. ನರಸೀಪುರ: ತಾಲೂಕಿನ ಬನ್ನೂರು ಹೋಬಳಿಯ ಬಸವನಹಳ್ಳಿ ಗ್ರಾಮದ ಸಮೀಪದ ಮುಖ್ಯರಸ್ತೆಯಲ್ಲಿ ದ್ವಿಚಕ್ರ ವಾಹನ ಚಿರತೆಗೆ ಡಿಕ್ಕಿ ಹೊಡೆದ ಪರಿಣಾಮ…
ಅಮರಾವತಿ: ಜಗತ್ ಪ್ರಸಿದ್ಧ ತಿರುಪತಿ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಹಾಗೂ ಕಳಪೆ ಗುಣಮಟ್ಟದ ಪದಾರ್ಥಗಳು ಪತ್ತೆಯಾಗಿದೆ ಎಂದು ತೆಲುಗು…
ಮುಂಬೈ: ಬಾಲಿವುಡ್ನ ಭಾಯಿಜಾನ್ ಸಲ್ಮಾನ್ ಖಾನ್ ಅವರ ತಂದೆಗೆ ಬುರ್ಖಾ ಧರಿಸಿದ್ದ ಮಹಿಳೆ ಹಾಗೂ ಇನ್ನೊರ್ವ ವ್ಯಕ್ತಿ ಜೀವ ಬೆದರಿಕೆ…
ಬೆಂಗಳೂರು: ಗುತ್ತಿಗೆದಾರರೊಬ್ಬರಿಗೆ ಜಾತಿನಿಂದನೆ ಹಾಗೂ ಪ್ರಾಣ ಬೆದರಿಕೆ ಹಾಕಿದ ಪ್ರಕರಣದಲ್ಲಿ ಬೆಂಗಳೂರಿನ ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನಗೆ…
ಮಂಡ್ಯ: ಜಿಲ್ಲೆಯಲ್ಲಿ ಡಿಸೆಂಬರ್ 20, 21, 22 ರಂದು ನಡೆಯಲಿರುವ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ…
ಮೈಸೂರು: ರಾಜ್ಯ ಸರ್ಕಾರದ ಮಹತ್ವಕಾಂಕ್ಷೆ ಯೋಜನೆಗಳಲ್ಲಿ ಒಂದಾದ ಶಕ್ತಿಯೋಜನೆ ಫಲಾನುಭವಿಗಳ ಅಭಿಪ್ರಾಯ ಸಂಗ್ರಹಿಸಲು ಗ್ಯಾರಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷೆಯಾದ ಡಾ…