ನಂಜನಗೂಡು : ಪ್ರಿಯಕರನನ್ನು ಕರೆಸದಿದ್ದರೆ ಕಟ್ಟಡದಿಂದ ಹಾರಿ ಆತಮಹತ್ಯೆ ಮಾಡಿಕೊಳ್ಳುವುದಾಗಿ ಯುವತಿ ಒಬ್ಬಳು ಕಟ್ಟಡ ಏರಿ ನಿಂತ ಘಟನೆ ನಗರದ ಲಾಡ್ಜ್ ಒಂದರಲ್ಲಿ ನಡೆದಿದೆ.
ಇಂದು ಬೆಳಗ್ಗೆ ಪಟ್ಣಣದ ರಾಷ್ಟ್ರಪತಿ ರಸ್ತೆಯಲ್ಲಿರುವ ಹನಿಡ್ಯೂ ಲಾಡ್ಜ್ನಲ್ಲಿಯುವತಿ ಒಬ್ಬಳ ಆತ್ಮಹತ್ಯೆ ಹೈಡ್ರಾಮ ನಡೆದಿದೆ.
ಯುವತಿ ಬಿಹಾರಿ ಮೂಲದವಳಾಗಿದ್ದು, ಪಟ್ಟಣದ ಹೊರವಲಯದಲ್ಲಿರುವ ಏಶಿಯನ್ ಪೇಂಟ್ಸ್ನಲ್ಲಿ ಕಾರ್ಮಿಕನಾಗಿದ್ದ ಬೀಹಾರಿ ಮೂಲದ ಯುವಕನ್ನು ಪ್ರೀತಿಸುತ್ತಿದ್ದಳು ಎಂದು ತಿಳಿದು ಬಂದಿದೆ.
ಆತನನ್ನು ಭೇಟಿ ಮಾಡಲು ಬಿಹಾರದಿಂದ ಬಂದಿದ್ದ ಯುವತಿಗೆ, ತನ್ನ ಪ್ರಿಯತಮ ಹನಿಡ್ಯೂ ಲಾಡ್ಜ್ನಲ್ಲಿ ಇರುವುದು ತಿಳಿದುಬಂದಿದೆ.
ಅಲ್ಲಿ ಆತ ಇಲ್ಲದಿರುವುದನ್ನು ತಿಳಿದು ಆಕೆ ಬೇಸರದಿಂದ ಲಾಡ್ಜ್ ಮೇಲ್ಮಹಡಿಗೆ ತೆರಳಿ, ಯುವಕನನ್ನು ಕರೆಸದಿದ್ದರೆ ಕೆಳಗೆ ಹಾರಿ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಬೆದರಿಕೆ ಹಾಕಿದ್ದಾಳೆ. ಕೂಡಲೆ ಲಾಡ್ಜ್ನ ಮಾಲೀಕರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಸ್ಥಳಕ್ಕೆ ಆಗಮಿಸಿದ ಪೊಲೀಸ್ ಸಿಬ್ಬಂದಿ ಯುವತಿಯನ್ನು ರಕ್ಷಿಸಿ ವಶಕ್ಕೆ ಪಡೆದಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ನಂಜನಗೂಡು ಪಟ್ಟಣ ಪೊಲೀಸರು ತನಿಖೆ ನಡೆಸಿದ್ದಾರೆ.
ಹೊಸದಿಲ್ಲಿ : ಸಾರ್ವಜನಿಕರ ಸಮ್ಮುಖದಲ್ಲಿ ಅಥವಾ ಸಾರ್ವಜನಿಕರ ವೀಕ್ಷಣೆಗೆ ಒಳಪಡುವ ಸ್ಥಳದಲ್ಲಿ ಜಾತಿ ನಿಂದನೆ ನಡೆದಿರುವುದು ಸಾಬೀತಾಗದಿದ್ದರೆ, ಅದನ್ನು ಪರಿಶಿಷ್ಟ…
ಬೆಂಗಳೂರು : ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಗರಣದಲ್ಲಿ ದುರುಪಯೋಗವಾಗಿದೆ ಎಂದು ಹೇಳಲಾಗಿದ್ದ 187 ಕೋಟಿ ರೂಪಾಯಿ…
ಹನೂರು : ಅರಣ್ಯ ಇಲಾಖೆ ಸಿಬ್ಬಂದಿ ಗುಂಡಿಗೆ ಮೂವರು ಬಲಿ ಪ್ರಕರಣಕ್ಕೆ ದಿನಕ್ಕೊಂದು ಟ್ವಿಸ್ಟ್ ಸಿಗುತ್ತಿದೆ. ದನ ಹುಡುಕಲು ಹೋಗಿದ್ದವರ…
ಬೆಂಗಳೂರು: ಬೆಂಗಳೂರು ದಕ್ಷಿಣದ ದೊಡ್ಡೇರಿಯಲ್ಲಿ ಬೃಹತ್ ನಕಲಿ ಔಷಧ ಜಾಲ ಪತ್ತೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸರ್ಕಾರ ಈ ಪ್ರಕರಣವನ್ನು…
ಸದ್ದಿಲ್ಲದೆ ಕೈಗೊಂಡ ತೀರ್ಮಾನಕ್ಕೆ ಬೆಚ್ಚಿದ ರಿಯಲ್ ಎಸ್ಟೇಟ್ ಉದ್ಯಮಿಗಳು; ಮೂರು ಪಕ್ಷಗಳಲ್ಲೂ ತಳಮಳ ಕೆ.ಬಿ.ರಮೇಶನಾಯಕ ಮೈಸೂರು : ಕಳೆದ ಎರಡು…
ಮೊದಲಬಾರಿಗೆ ರಾಷ್ಟ್ರರಾಜಧಾನಿಯಿಂದ ಹೊರಗೆ ಆಯೋಜನೆ 72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭವು ಇದೇ ಮೊದಲ ಬಾರಿಗೆ ನವದೆಹಲಿಯಿಂದ…