ಮೈಸೂರು : ಮಂಡ್ಯದಲ್ಲಿ ಸುಮಲತಾ ಅಂಬರೀಶ್ ಪ್ರಚಾರದ ಬಗ್ಗೆ ಪ್ರತಿಕ್ರಿಯೆ ನೀಡಿದ ಹೆಚ್.ಡಿ.ಕೆ , ಇನ್ನೂ ಮೂರು ದಿನ ಇದೆ ನೋಡೋಣ ಎಂದು ಮಾರ್ಮಿಕವಾಗಿ ನುಡಿದಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸುಮಲತಾ ಇಂದು ಮೈಸೂರಿನಲ್ಲಿ ಬಿಜೆಪಿ ಪರ ಪ್ರಚಾರ ನಡೆಸಲಿದ್ದಾರೆ. ಆದರೆ ಮಂಡ್ಯದಲ್ಲಿ ಇನ್ನೂ ಪ್ರಚಾರ ಕೈಗೊಂಡಿಲ್ಲ ಏಕೆ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಅವರು ಈಗ ಬಿಜೆಪಿ ಸೇರಿದ್ದಾರೆ. ಪಕ್ಷ ಹೇಳಿದ ಕಡೆಗಳಲ್ಲಿ ಪ್ರಚಾರ ಮಾಡುತ್ತಿದ್ದಾರೆ. ಇನ್ನು ಮೂರು ದಿನ ಇದೆ, ನೋಡೋಣ ಎಂದರು.
ಮುಂದುವರೆದಂತೆ, ಸುಮಲತಾ ನಮ್ಮಲ್ಲಿ ಕೂಡ ಬಂದು ಪ್ರಚಾರ ಮಾಡಬಹುದು. ಕೇವಲ ಹೇಳಿಕೆಗಳನ್ನು ನೀಡುವುದರಿಂದ ಏನೂ ಆಗುವುದಿಲ್ಲ. ಹೇಳಿಕೆ ಕೊಡದೆಯೂ ಬೆಂಬಲ ನೀಡಬಹುದು ಅಲ್ಲವೇ ಎಂದು ಪ್ರಶ್ನಿಸಿದರು.
ಈ ಬಗ್ಗೆ ಈಗಾಗೇ ಉತ್ತರ ನೀಡಿರುವ ಸಂಸದೆ ಸುಮಲತಾ ಅವರು, ಪಕ್ಷದ ನಾಯಕರು ಹೇಳಿದ ಕಡೆ ಪ್ರಚಾರ ಮಾಡಲಿದ್ದೇನೆ ಎಂದು ಸ್ಪಷ್ಟನೆ ನೀಡಿದ್ದರು.
ನಾನು ಕೇಳಲು ಸಾಧ್ಯವಿಲ್ಲ : ಇನ್ನು ಮಂಡ್ಯದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸ್ಟಾರ್ ಚಂದ್ರು ಪರ ದರ್ಶನ್ ಪ್ರಚಾರ ಮಾಡಿದ ಬಗ್ಗೆ ಉತ್ಅತರಿಸಿರುವ ಸುಮಲತಾ, ಅವರಿಗೆ ಇಷ್ಟವಾದವರ ಪರ ಪ್ರಚಾರ ನಡೆಸುತ್ತಾರೆ. ಅದನ್ನು ನಾನು ಕೇಳಲು ಸಾಧ್ಯವಿಲ್ಲ. ನಾನು ಪಕ್ಷ ಹೇಳಿದಂತೆ ನಡೆದುಕೊಳ್ಳುತ್ತೇನೆ ಎಂದಿದ್ದಾರೆ.
ಕೊಡಗು: ಸಿದ್ದಾಪುರ ವ್ಯಾಪ್ತಿಯ ಶಿಲ್ಪ ಎಸ್ಟೇಟ್ನಲ್ಲಿ ಕೆಲಸ ನಿರ್ವಹಿಸುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ಏಕಾಏಕಿ ದಾಳಿ ನಡೆಸಿದೆ. ಬಂಗಾಳ ಮೂಲದ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ಗುಂಡಿನ ದಾಳಿಗೆ ಬಲಿಯಾಗಿದ್ದ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಕಾವೇರಿ ವನ್ಯಜೀವಿ ಧಾಮ ವ್ಯಾಪ್ತಿಯಲ್ಲಿ ನಡೆದ ಎನ್ಕೌಂಟರ್ ಘಟನೆಯ…
ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಕಾವೇರಿ ವನ್ಯಜೀವಿಧಾಮದ ಹನೂರು ವಲಯದ ಶಾಗ್ಯ ಬೀಟ್ ವ್ಯಾಪ್ತಿಯ ಹೊಳೆಮುರಿ ದಟ್ಟಿ ಅರಣ್ಯ ಪ್ರದೇಶದಲ್ಲಿ…
ಅನ್ಬುರಾಜ್ ಅರಣ್ಯ ಇಲಾಖೆ ಮತ್ತೆ ತನ್ನ ಇತಿಹಾಸವನ್ನು ಹಿಂದಕ್ಕೆ ಕೊಂಡೊಯ್ಯುತ್ತಿರುವಂತೆ ಕಾಣುತ್ತಿದೆ. ಜನವಿರೋಧಿ ಧೋರಣೆಯನ್ನು ಅನುಸರಿಸಿ, ಅರಣ್ಯದ ಅಂಚಿನಲ್ಲಿ ವಾಸಿಸುವ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ರಾಜ್ಯ ಕಾಂಗ್ರೆಸ್ನಲ್ಲಿ ಪರ್ಯಾಯ ಶಕ್ತಿ ಕೇಂದ್ರ ತಲೆ ಎತ್ತುತ್ತದೆಯೇ? ಇಂತಹದೊಂದು ಪ್ರಶ್ನೆಗೆ ತಕ್ಷಣ ಉತ್ತರ…