ಮೈಸೂರು : ಮಂಡ್ಯದಲ್ಲಿ ಸುಮಲತಾ ಅಂಬರೀಶ್ ಪ್ರಚಾರದ ಬಗ್ಗೆ ಪ್ರತಿಕ್ರಿಯೆ ನೀಡಿದ ಹೆಚ್.ಡಿ.ಕೆ , ಇನ್ನೂ ಮೂರು ದಿನ ಇದೆ ನೋಡೋಣ ಎಂದು ಮಾರ್ಮಿಕವಾಗಿ ನುಡಿದಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸುಮಲತಾ ಇಂದು ಮೈಸೂರಿನಲ್ಲಿ ಬಿಜೆಪಿ ಪರ ಪ್ರಚಾರ ನಡೆಸಲಿದ್ದಾರೆ. ಆದರೆ ಮಂಡ್ಯದಲ್ಲಿ ಇನ್ನೂ ಪ್ರಚಾರ ಕೈಗೊಂಡಿಲ್ಲ ಏಕೆ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಅವರು ಈಗ ಬಿಜೆಪಿ ಸೇರಿದ್ದಾರೆ. ಪಕ್ಷ ಹೇಳಿದ ಕಡೆಗಳಲ್ಲಿ ಪ್ರಚಾರ ಮಾಡುತ್ತಿದ್ದಾರೆ. ಇನ್ನು ಮೂರು ದಿನ ಇದೆ, ನೋಡೋಣ ಎಂದರು.
ಮುಂದುವರೆದಂತೆ, ಸುಮಲತಾ ನಮ್ಮಲ್ಲಿ ಕೂಡ ಬಂದು ಪ್ರಚಾರ ಮಾಡಬಹುದು. ಕೇವಲ ಹೇಳಿಕೆಗಳನ್ನು ನೀಡುವುದರಿಂದ ಏನೂ ಆಗುವುದಿಲ್ಲ. ಹೇಳಿಕೆ ಕೊಡದೆಯೂ ಬೆಂಬಲ ನೀಡಬಹುದು ಅಲ್ಲವೇ ಎಂದು ಪ್ರಶ್ನಿಸಿದರು.
ಈ ಬಗ್ಗೆ ಈಗಾಗೇ ಉತ್ತರ ನೀಡಿರುವ ಸಂಸದೆ ಸುಮಲತಾ ಅವರು, ಪಕ್ಷದ ನಾಯಕರು ಹೇಳಿದ ಕಡೆ ಪ್ರಚಾರ ಮಾಡಲಿದ್ದೇನೆ ಎಂದು ಸ್ಪಷ್ಟನೆ ನೀಡಿದ್ದರು.
ನಾನು ಕೇಳಲು ಸಾಧ್ಯವಿಲ್ಲ : ಇನ್ನು ಮಂಡ್ಯದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸ್ಟಾರ್ ಚಂದ್ರು ಪರ ದರ್ಶನ್ ಪ್ರಚಾರ ಮಾಡಿದ ಬಗ್ಗೆ ಉತ್ಅತರಿಸಿರುವ ಸುಮಲತಾ, ಅವರಿಗೆ ಇಷ್ಟವಾದವರ ಪರ ಪ್ರಚಾರ ನಡೆಸುತ್ತಾರೆ. ಅದನ್ನು ನಾನು ಕೇಳಲು ಸಾಧ್ಯವಿಲ್ಲ. ನಾನು ಪಕ್ಷ ಹೇಳಿದಂತೆ ನಡೆದುಕೊಳ್ಳುತ್ತೇನೆ ಎಂದಿದ್ದಾರೆ.
ಶ್ರೀರಂಗಪಟ್ಟಣ : ಅನೈತಿಕ ಸಂಬಂಧದ ಶಂಕೆಯಿಂದ ಪತಿಯೇ ಪತ್ನಿಯನ್ನು ಹತ್ಯೆ ಮಾಡಿರುವ ಘಟನೆ ತಾಲ್ಲೂಕಿನ ಆಲಗೂಡು ಗ್ರಾಮದಲ್ಲಿ ನಡೆದಿದೆ. ಗ್ರಾಮದ…
ರಾಮನಗರ: ಕಲ್ಲು ಕ್ವಾರಿಯಲ್ಲಿ ಬಂಡೆ ಕುಸಿದು 7 ಮಂದಿ ಕಾರ್ಮಿಕರು ಸಾವನ್ನಪ್ಪಿರುವ ಘಟನೆ ಬೆಂಗಳೂರು ದಕ್ಷಿಣ ತಾಲ್ಲೂಕಿನ ಮಾದಾಪಟ್ಟಣ ಬಳಿ…
ಮಡಿಕೇರಿ: ಕೊಡಗು ಜಿಲ್ಲೆಯಾದ್ಯಂತ ಕಳೆದ ಎರಡು ದಿನಗಳಿಂದ ಸಾಧಾರಣ ಮಳೆಯಾಗುತ್ತಿರುವ ಪರಿಣಾಮ ಹಾರಂಗಿ ಜಲಾಶಯಕ್ಕೆ ಒಳಹರಿವಿನ ಪ್ರಮಾಣ ಹೆಚ್ಚಾಗಿದೆ. ಜಲಾಶಯಕ್ಕೆ…
ಮಂಡ್ಯ ಜಿಲ್ಲೆಯ ಮುತ್ತತ್ತಿಯಲ್ಲಿ ಕಾವೇರಿ ನದಿ ನೀರಿಗೆ ಇಳಿದು ಸೆಲ್ಛಿ ತೆಗೆದುಕೊಳ್ಳಲು ಹೋದ ಒಂದೇ ಕುಟುಂಬದ ನಾಲ್ವರು ಹಾಗೂ ಕಾರು…
ಚಿಕ್ಕಬಳ್ಳಾಪುರ ಶಾಸಕರಾದ ಪ್ರದೀಪ್ ಈಶ್ವರ್ ಅವರ ಮೇಲೆ ಜಾ.ದಳ ಕಾರ್ಯಕರ್ತರೊಬ್ಬರು ಚಪ್ಪಲಿಯನ್ನು ಎಸೆದಿದ್ದು, ಈಗಾಗಲೇ ಆ ಕಾರ್ಯಕರ್ತನನ್ನು ಪೊಲೀಸರು ಬಂಧಿಸಿದ್ದಾರೆ.…
ಸರ್ಕಾರದ ಯಾವುದೇ ಯೋಜನೆ, ಕಾರ್ಯಕ್ರಮ, ಸವಲತ್ತು ಮೊದಲು ದಲಿತ, ದಮನಿತ, ಶೋಷಿತ ವರ್ಗಕ್ಕೆ ತಲುಪಬೇಕು. ಅವರು ಸಾಮಾಜಿಕವಾಗಿ, ಆರ್ಥಿಕವಾಗಿ ಮೇಲೆ…