ಮೈಸೂರು: ಚಾಮರಾಜನಗರ ಹಿಂದುಳಿದ ಜಿಲ್ಲೆ ಎಂಬ ಹಣೆ ಪಟ್ಟಿ ಇರುವ ಹಿನ್ನೆಲೆಯಲ್ಲಿ ಅದನ್ನು ತೆಗೆದುಹಾಕಲು ವಿಶೇಷ ಯೋಜನೆ ರೂಪಿಸಿದ್ದು, ಜಿಲ್ಲೆಯ ಅಭಿವೃದ್ಧಿಗಾಗಿ ಸಿಎಂ ಬಳಿ 3 ಸಾವಿರ ಕೋಟಿ ರೂ. ಅನುದಾನ ನೀಡುವಂತೆ ಮನವಿ ಮಾಡಲಾಗಿದೆ ಎಂದು ಸಂಸದ ಸುನೀಲ್ ಬೋಸ್ ತಿಳಿಸಿದ್ದಾರೆ.
ಮೈಸೂರಿನಲ್ಲಿ ಇಂದು(ಫೆಬ್ರವರಿ.19) ಈ ಕುರಿತು ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ನಂಜುಂಡಪ್ಪ ವರದಿ ಪ್ರಕಾರ ಚಾಮರಾಜನಗರ ಜಿಲ್ಲೆ ಹಿಂದುಳಿದ ಜಿಲ್ಲೆ ಎಂದು ಘೋಷಣೆ ಆಗಿದೆ. ಅದರ ಅನುಗುಣವಾಗಿ ವಿಶೇಷ ಪ್ಯಾಕೇಜ್ಗಳನ್ನು ನೀಡುವ ಕೆಲಸ ಆಗುತ್ತಿಲ್ಲ. ನಾನು ಈಗಾಗಲೇ ಸಿಎಂ ಸಿದ್ದರಾಮಯ್ಯ ಅವರ ಗಮನಕ್ಕೆ ತಂದು ನನ್ನ ಕ್ಷೇತ್ರದ ವ್ಯಾಪ್ತಿಯಲ್ಲಿ ವ್ಯವಸಾಯ ಮಾಡದೆ ಬರಡು ಬಿದ್ದಿರುವ ಭೂಮಿಗಾಗಿ ವಿಶೇಷ ಯೋಜನೆ ರೂಪಿಸಿದ್ದೇವೆ ಎಂದರು.
ಇನ್ನು ಬರಡು ಭೂಮಿಯನ್ನು ವ್ಯವಸಾಯದತ್ತ ತರುವ ನಿರಾವರಿ ಯೋಜನೆಗೆ ಸುಮಾರು 3 ಸಾವಿರ ಕೋಟಿ ರೂ. ಪ್ರಾಜೆಕ್ಟ್ಗೆ ಮನವಿ ಮಾಡಿದ್ದೇನೆ. ಅಲ್ಲದೇ ಸರ್ಕಾರದಿಂದ ಹಂತ ಹಂತವಾಗಿ ಹಣ ಬಿಡುಗಡೆಗೊಳಿಸುವಂತೆ ಹೇಳಿದ್ದೇನೆ. ಹೀಗಾಗಿ ಅನುದಾನದ ಹಣದಿಂದ ಬರಡು ಭೂಮಿಗಳಿಗೆ ನೀರಾವರಿ ಒದಗಿಸಬಹುದು ಎಂದು ಹೇಳಿದರು.
ಈಗಾಗಲೇ ನೀರಾವರಿ ಸೌಲಭ್ಯ ಇಲ್ಲದೆ ಅಲ್ಲಿನ ನಾಲೆಗಳು ಪಾಳು ಬಿದ್ದಂತಿವೆ. ಆ ನಾಲೆಗಳ ಯೋಜನೆಗಳ ಬಗ್ಗೆ ಡಿಪಿಆರ್ ತಯಾರಾಗಿದೆ. ಈ ಯೋಜನೆಗಳಿಗೂ ಸಿಎಂ ಸಿದ್ದರಾಮಯ್ಯ ಅವರು ಅನುದಾನ ನೀಡುವ ವಿಶ್ವಾಸ ಇದೆ ಎಂದು ತಿಳಿಸಿದರು.
ಚೆನ್ನೈ : ಟಿವಿಕೆ ಮುಖ್ಯಸ್ಥ ಮತ್ತು ತಮಿಳುನಾಡು ಮುಖ್ಯಮಂತ್ರಿ ಸಿ.ಜೋಸೆಫ್ ವಿಜಯ್ ಭಾನುವಾರ ತಿರುಚಿರಾಪಳ್ಳಿ ಪೂರ್ವ ವಿಧಾನಸಭಾ ಕ್ಷೇತ್ರಕ್ಕೆ ರಾಜೀನಾಮೆ…
ಹುಣಸೂರು : ಬಿರುಗಾಳಿ ಮಳೆಗೆ ತಾಲ್ಲೂಕಿನ ಹನಗೋಡು ಹೋಬಳಿಯ ವದ್ಲಿ ಮನುಗನಹಳ್ಳಿಯಲ್ಲಿ ಮನೆಯ ಚಾವಣಿಗೆ ಹಾಕಿದ್ದ ಕಲ್ನಾರ್ ಶೀಟ್ ಹಾರಿಹೋಗಿದ್ದು,…
ಮೈಸೂರು : ಗಂಡನ ಮನೆಯಿಂದ ನವ ವಿವಾಹಿತೆ ರಾತ್ರೋ ರಾತ್ರಿ ನಾಪತ್ತೆಯಾಗಿರುವುದಾಗಿ ಮೈಸೂರಿನ ನರಸಿಂಹರಾಜ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.…
ಚೆನ್ನೈ : ತಮಿಳುನಾಡಿನ ರಾಜಕೀಯ ಇತಿಹಾಸದಲ್ಲಿ 60 ವರ್ಷಗಳ ದ್ರಾವಿಡ ಯುಗಕ್ಕೆ ತೆರೆ ಎಳೆದು, ಮೊದಲ ಬಾರಿಗೆ ಸಿನಿತಾರೆ-ರಾಜಕಾರಣಿ ಸಿ.ಜೋಸೆಫ್…
ಕೆ.ಆರ್.ನಗರ : ಹಣದಾಸಗೆ ವೃದ್ದೆಯನ್ನು ಕೊಲೆಗೈದು ಶೌಚಾಲಯದ ಯುಜಿಡಿ ಗುಂಡಿಯಲ್ಲಿ ಹೂತು ಹಾಕಿರುವ ಘಟನೆ ತಾಲೂಕಿನ ತಿಪ್ಪೂರು ಗ್ರಾಮದಲ್ಲಿ ನಡೆದಿದೆ.…
ಕೋಲ್ಕತ್ತಾ : ಪಶ್ಚಿಮ ಬಂಗಾಳದಲ್ಲಿ 15 ವರ್ಷಗಳ ಟಿಎಂಸಿ ಆಡಳಿತಕ್ಕೆ ತೆರೆ ಎಳೆದು ಐತಿಹಾಸಿಕ ಗೆಲುವು ಸಾಧಿಸಿರುವ ಬಿಜೆಪಿ, ಮೇ…