ಮೈಸೂರು

ಸುನಿಲ್ ಬೋಸ್ ಗೆಲ್ಲಿಸುವ ಮೂಲಕ ಬಿಜೆಪಿಯ ಸುಳ್ಳುಗಳನ್ನು ಸೋಲಿಸಿ: ಸಿಎಂ ಸಿದ್ದರಾಮಯ್ಯ

ವರುಣಾ/ಮೈಸೂರು: ನನಗಿಂತ ಹೆಚ್ಚು ಲೀಡ್ ಕೊಟ್ಟು ಸುನಿಲ್ ಬೋಸ್ ಗೆಲ್ಲಿಸುವ ಮೂಲಕ ಬಿಜೆಪಿಯ ಸುಳ್ಳುಗಳನ್ನು ಸೋಲಿಸಿ. ಈ ಗೆಲುವಿನಿಂದ ನಾನು ಇನ್ನಷ್ಟು ಗಟ್ಟಿಯಾಗಿ ನನ್ನ ಶಕ್ತಿ ಹೆಚ್ಚುತ್ತದೆ. ಇದಕ್ಕೆ ನೀವು ಮುಂದಾಗಿ ಎಂದು ಸಿಎಂ ಸಿದ್ದರಾಮಯ್ಯ ಕರೆ ನೀಡಿದರು.

ವರುಣಾ ವಿಧಾನಸಭಾ ಕ್ಷೇತ್ರದ ಬಿಳಿಗೆರೆಯಲ್ಲಿ ನಡೆದ ಸಾರ್ವಜನಿಕ ಸಭೆಯನ್ನು ಉದ್ಘಾಟಿಸಿ ಸಿಎಂ ಸಿದ್ದರಾಮಯ್ಯ ಮಾತನಾಡಿದರು.

ನಮ್ಮ ಕಾಂಗ್ರೆಸ್ ಪಕ್ಷದ ಗ್ಯಾರಂಟಿಗಳಿಂದಾಗಿ ರಾಜ್ಯದಲ್ಲಿ ಹೆಣ್ಣುಮಕ್ಕಳ ಆರ್ಥಿಕ‌ ಸಾಮರ್ಥ್ಯ ಹೆಚ್ಚಿದೆ. ದುಡಿಯುವ ಅವಕಾಶವೂ ಹೆಚ್ಚಿದೆ. ಆದರೆ ಇದನ್ನು ವಿರೋಧಿಸುವ ಬಿಜೆಪಿಯ ಕಾರ್ಯಕರ್ತರೂ, ಬೆಂಬಲಿಗರೂ ನಮ್ಮ ಗ್ಯಾರಂಟಿ ಯೋಜನೆಗಳ ಫಾಲಾನುಭವಿಗಳಾಗಿದ್ದಾರೆ ಎಂದರು.

ನರೇಂದ್ರ ಮೋದಿ ನುಡಿದಂತೆ ನಡೆದಿದ್ದಾರಾ? ದೇಶದ ಜನರಿಗಾಗಿ ಏನೂ ಕಾರ್ಯಕ್ರಮ ರೂಪಿಸದೆ ಕೇವಲ ಅಚ್ಛೆ ದಿನ್ ಆಯೆಗಾ ಎಂದು ಡೈಲಾಗ್ ಹೊಡೆದರೆ ಸಾಕಾ? ಡೈಲಾಗ್ ನಿಂದ ಪೆಟ್ರೋಲ್, ಡೀಸೆಲ್, ಗ್ಯಾಸ್ ಬೆಲೆ , ರಸಗೊಬ್ಬರ ಬೆಲೆ ಕಡಿಮೆ ಆಗತ್ತಾ? ಬರೀ ಬಾಯಲ್ಲಿ ಡೈಲಾಗ್ ಹೊಡೆದರೆ ಜನರ ಬದುಕಿನ ಸಂಕಷ್ಟ ಕಡಿಮೆ ಆಗ್ತದಾ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಬರೀ 56 ಇಂಚಿನ ಖಾಲಿ ಎದೆ ಇದ್ದರೆ ಸಾಲದು. ಅದರೊಳಗೆ ಮಾತೃ ಹೃದಯ ಇರಬೇಕು. ಇಲ್ಲದಿದ್ದರೆ ಹೀಗೇ ಆಗೋದು. ಉದ್ಯೋಗ ಸೃಷ್ಟಿ‌ ಆಗೋದಿಲ್ಲ. ರೈತರ ಆದಾಯವೂ ದುಪ್ಪಟ್ಟಾಗುವುದಿಲ್ಲ ಎಂದು ಟೀಕಿಸಿದರು.

ಮುಂದಿನ ಜನ್ಮದಲ್ಲಿ ಮುಸ್ಲೀಮನಾಗಿ ಹುಟ್ಟುತ್ತೇನೆ ಎಂದವರು ದೇವೇಗೌಡರು. ನರೇಂದ್ರ ಮೋದಿಯವರು ಮತ್ತೆ ಪ್ರಧಾನಿಯಾದರೆ ದೇಶಬಿಟ್ಟು ಹೋಗುತ್ತೇನೆ ಎಂದವರೂ ಇದೇ ದೇವೇಗೌಡರು. ಈಗ ತಮಗೂ ನರೇಂದ್ರ ಮೋದಿಯವರಿಗೂ ಅವಿನಾಭಾವ ಸಂಬಂಧ ಇದೆ ಎನ್ನುತ್ತಿದ್ದಾರೆ. ಯಾಕಿಷ್ಟು ಈ ನಾಟಕ ದೇವೇಗೌಡರೇ, ನೀವು ಹೇಳಿದ್ದನ್ನು ನೆನಪಿಸಿದರೆ ಅದು ಗರ್ವ ಹೇಗಾಗುತ್ತದೆ ಎಂದು ಪ್ರಶ್ನಿಸಿದರು.

ನಾನು ಮೊದಲ ಬಾರಿ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದೇ ಬಸವ ಜಯಂತಿ ದಿನ. ಎರಡನೇ ಬಾರಿ ಸಿಎಂ ಆಗಿ ಬಸವಣ್ಣನವರನ್ನು ಸಾಂಸ್ಕೃತಿಕ ನಾಯಕ ಎಂದು ಘೋಷಿಸಿದೆವು. ಬಸವಣ್ಣನವರು ಲಿಂಗಾಯತ ಧರ್ಮ‌ ಸ್ಥಾಪಿಸಿ ಮನುಷ್ಯ ಧರ್ಮದ ಏಳಿಗೆಗೆ ಮುಂದಾದರು. ಬಸವಾದಿ ಶರಣರು ಒಂದು ಜಾತಿ-ಧರ್ಮಕ್ಕೆ ಸೇರಿದವರಲ್ಲ. ನಾವು ಬಸವಾದಿ ಶರಣರ ಆಶಯದಂತೆ ಕಾಯಕ ಮತ್ತು ದಾಸೋಹ ಮೌಲ್ಯದಲ್ಲಿ ಕಾರ್ಯಕ್ರಮಗಳನ್ನು ರೂಪಿಸುತ್ತಿದ್ದೇವೆ ಎಂದರು.

ವರುಣಾ ನನ್ನ ಪಾಲಿಗೆ ಅದೃಷ್ಟದ ಕ್ಷೇತ್ರ. ನಿಮ್ಮಿಂದ ಎರಡು ಬಾರಿ ಮುಖ್ಯಮಂತ್ರಿಯಾದೆ ಎಂದು ಇದೇ ಸಂದರ್ಭದಲ್ಲಿ ಮುಖ್ಯಮಂತ್ರಿ ಸಿಎಂ ಸಿದ್ದರಾಮಯ್ಯ ಅವರು ಕೃತಜ್ಞತೆಯ ಸಲ್ಲಿಸಿದರು.

ಸಮಾಜ ಕಲ್ಯಾಣ ಸಚಿವ ಹೆಚ್.ಸಿ‌.ಮಹದೇವಪ್ಪ, ಪಶು ಸಂಗೋಪನಾ ಸಚಿವ ಕೆ.ವೆಂಕಟೇಶ್, ಶಾಸಕರಾದ ಅನಿಲ್ ಚಿಕ್ಕಮಾದು, ದರ್ಶನ್ ದ್ರುವನಾರಾಯಣ್ ಸೇರಿ ಚಾಮರಾಜನಗರ ಮತ್ತು ಮೈಸೂರು ಜಿಲ್ಲೆಯ ಶಾಸಕರುಗಳು ಉಪಸ್ಥಿತರಿದ್ದರು.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಸಾರಿಗೆ ನೌಕರರ ಒತ್ತಡಕ್ಕೆ ಮಣಿದ ಸರ್ಕಾರ : ವೇತನ ಪರಿಷ್ಕರಣೆಗೆ ಒಪ್ಪಿದೆ ; ರದ್ದಾಗುತ್ತಾ ಮುಷ್ಕರ?

ಬೆಂಗಳೂರು : ರಾಜ್ಯ ಸರ್ಕಾರವು ರಾಜ್ಯ ಸಾರಿಗೆ ನಿಗಮಗಳ (KSRTC, BMTC, NWKRTC, KKRTC) ಸಿಬ್ಬಂದಿಗೆ 26 ತಿಂಗಳ ಬಾಕಿ…

4 hours ago

ಮಹಾರಾಷ್ಟ್ರ | ಮುಸ್ಲಿಮರಿಗೆ ನೀಡಲಾಗಿದ್ದ ಶೇ.5ಮೀಸಲಾತಿ ರದ್ದು

ಮುಂಬೈ : ಮಹಾರಾಷ್ಟ್ರದ ಮಹಾಯುತಿ ಸರ್ಕಾರವು ಉದ್ಯೋಗ ಮತ್ತು ಶಿಕ್ಷಣ ಕ್ಷೇತ್ರದಲ್ಲಿ ಮುಸ್ಲಿಂ ಸಮುದಾಯಕ್ಕೆ ನೀಡಲಾಗಿದ್ದ ಶೇಕಡಾ 5ರಷ್ಟು ಮೀಸಲಾತಿಯನ್ನು…

4 hours ago

ಮೈಸೂರು | ಹೀಲಿಯಂ ಅನಿಲ ಬಲೂನ್‌ ನಿಷೇಧ ; ಕಮಿಷನರ್‌ ಆದೇಶ

ಮೈಸೂರು : ಇತ್ತೀಚಿಗೆ ನಗರದ ಅರಮನೆ ಸಮೀಪದಲ್ಲಿ ಸಂಭವಿಸಿದ ಹೀಲಿಯಂ ಸಿಲಿಂಡರ್ ಸ್ಪೋಟ ಘಟನೆಗೆ ಸಂಬಂಧಿದಂತೆ, ಸಾರ್ವಜನಿಕ ಶಾಂತಿ, ಸುರಕ್ಷತೆ…

5 hours ago

ನಮೀಬಿಯಾ ವಿರುದ್ಧ ಗೆಲುವು : ಸೂಪರ್‌ 8 ಸುತ್ತಿಗೆ ಎಂಟ್ರಿ ಕೊಟ್ಟ ಪಾಕಿಸ್ತಾನ

ಕೊಲಂಬೊ : ಐಸಿಸಿ ಪುರುಷರ ಟಿ20 ವರ್ಲ್ಡ್ ಕಪ್ 2026ರಲ್ಲಿ ಪಾಕಿಸ್ತಾನ ತಂಡವು ತನ್ನ ಕೊನೆಯ ಲೀಗ್ ಪಂದ್ಯದಲ್ಲಿ ನಮೀಬಿಯಾವನ್ನು…

5 hours ago

ಸೇನಾ ವಿಚಾರ ಪ್ರಸ್ತಾಪಿಸಿದ ರಾಹುಲ್‌ ಗಾಂಧಿ: ಲೋಕಸಭೆಯಲ್ಲಿ ಗದ್ದಲ, ಕೋಲಾಹಲ

ನವದೆಹಲಿ: ಎಂ.ಎಂ.ನರವಣೆ ಅವರ ಅಪ್ರಕಟಿತ ಪುಸ್ತಕದ ಕುರಿತು ನಿಯತಕಾಲಿಕೆಯೊಂದರಲ್ಲಿ ಪ್ರಕಟವಾದ ಲೇಖನದ ಪ್ರತಿಯನ್ನು ರಾಹುಲ್‌ ಗಾಂಧಿ ಸದನದಲ್ಲಿ ಪ್ರದರ್ಶಿಸಿದರು. ಈ…

5 hours ago

ಭಾರತದಲ್ಲಿ ಎಐ ಪ್ರಯಾಣ ಅಸಾಧಾರಣವಾಗಿರಲಿದೆ : ಗೂಗಲ್‌ ಸಿಇಒ ಸುಂದರ್‌ ಪಿಚೈ

ಹೊಸದಿಲ್ಲಿ : ಗೂಗಲ್ ಸಿಇಒ ಸುಂದರ್ ಪಿಚೈ ಅವರು ಭಾರತದ ಕೃತಕ ಬುದ್ಧಿಮತ್ತೆ (AI) ಪ್ರಯಾಣವು "ಅಸಾಧಾರಣ" ಆಗಿರುವುದಾಗಿ ಹೇಳಿದ್ದಾರೆ.…

5 hours ago